Homeಮುಖಪುಟಪೊಲೀಸರ ಮೇಲಿಲ್ಲ ವಿಶ್ವಾಸ: ಸ್ವ-ಸುರಕ್ಷತಾ ವ್ಯವಸ್ಥೆ ಮೊರೆ ಹೋದ ರೈತರು

ಪೊಲೀಸರ ಮೇಲಿಲ್ಲ ವಿಶ್ವಾಸ: ಸ್ವ-ಸುರಕ್ಷತಾ ವ್ಯವಸ್ಥೆ ಮೊರೆ ಹೋದ ರೈತರು

- Advertisement -
- Advertisement -

ಶನಿವಾರ ಸಾಯಂಕಾಲ 4.30ರ ಸಮಯ. ‘ಮತ್ತೆ ದಾಂಧಲೆಕೋರರ ದಂಡು ದೊಡ್ಡ ಸಂಖ್ಯೆಯಲ್ಲಿ ಹೊರಗೆ ಜಮಾವಣೆ ಆಗುತ್ತಿದೆ’ ಎಂಬ ಸಣ್ಣ ಅನುಮಾನದ ಸಂದೇಶ ಬಂದ ನಿಮಿಷಗಳಲ್ಲಿ ಲಾಠಿಗಳನ್ನು ಹಿಡಿದ ಹತ್ತಾರು ರೈತ ಸ್ವಯಂಸೇವಕರು ಬ್ಯಾರಿಕೇಡ್ ಬಳಿ ಹಾಜರಾಗಿದ್ದರು.

ಇದು ಬಿಕೆಯು ನಡೆಸಿತ್ತಿರುವ ಪ್ರತಿಭಟನಾ ಸ್ಥಳದಲ್ಲಿ ಕಂಡು ಬಂದ ಹೊಸ ಬೆಳವಣಿಗೆ. ಶುಕ್ರವಾರ ಸಿಂಘು ಗಡಿಯ ದೆಹಲಿ ಭಾಗದ ಒಂದು ಜಾಗದಲ್ಲಿ ಬಿಜೆಪಿ ಕಾರ್ಯಕರ್ತರ ಗುಂಪೊಂದು ದಾಂಧಲೆ ನಡೆಸಲು ಯತ್ನಿಸಿದ ನಂತರ, ಪೊಲೀಸರ ಮೇಲೆ ವಿಶ್ವಾಸ ಕಳೆದುಕೊಂಡಿರುವ ರೈತರು ತಮ್ಮದೇ ಸುರಕ್ಷತಾ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.
ಬಿಜೆಪಿ-ಆರ್‌ಎಸ್‌ಎಸ್ ಗೂಂಡಾಗಳು ತಮ್ಮ ಹೋರಾಟ ನಾಶ ಮಾಡಲು ಹವಣಿಸುತ್ತಿದ್ದಾರೆ ಎಂಬ ಭಾವನೆ ರೈತರಲ್ಲಿದೆ.

ಸಿಂಘು ಗಡಿಯ ಒಂದು ಭಾಗದಲ್ಲಿ ಸಣ್ಣ ಹಿಂಸಾಚಾರದ ನಂತರ, ಯಾವುದೇ ಅಹಿತಕರ ಘಟನೆಯನ್ನು ತಡೆಗಟ್ಟಲು ಮತ್ತು “ರಾಜಕೀಯ ಏಜೆಂಟರಿಗೆ” ಮತ್ತೆ ಹಿಂಸಾಚಾರವನ್ನು ಪ್ರಚೋದಿಸಲು ಅವಕಾಶ ಸಿಗದಂತೆ ನೋಡಿಕೊಳ್ಳಲು ರೈತರು “ಆಂತರಿಕ ಭದ್ರತೆ” ಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ.

‘ಸ್ಥಳೀಯರ’ ಹೆಸರಿನಲ್ಲಿ ಶುಕ್ರವಾರ ಮೂರು ಹಂತಗಳ ಪೊಲೀಸ್ ಭದ್ರತಾ ಬ್ಯಾರಿಕೇಡ್‌ಗಳನ್ನು ದಾಟಿ ಬಂದು ದುಷ್ಕರ್ಮಿಗಳು ದಾಂಧಲೆ ಮಾಡಿದ ನಂತರ ರೈತರಿಗೆ ಪೊಲೀಸರ ಬಗ್ಗೆ ವಿಶ್ವಾಸವೇ ಹೋಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ದಾಂಧಲೆ ನಡೆದಿದೆ ಎಂದು ರೈತರು ಆರೋಪಿಸುತ್ತಿದ್ದಾರೆ.

‘ನೌಜವಾನ್ ಭಾರತ್ ಸಭಾ ಅಧ್ಯಕ್ಷ ರೂಪಿಂದರ್ ಸಿಂಗ್, “ನಾವು ಮುಖ್ಯ ವೇದಿಕೆಯ ಬಳಿ ಭದ್ರತಾ ಕೊಠಡಿಯನ್ನು ಸ್ಥಾಪಿಸಿದ್ದೇವೆ, ಎಲ್ಲಾ ಸಮಯದಲ್ಲೂ 10 ಜನರು ಅಲ್ಲಿರುತ್ತಾರೆ. ನಾವು ಸ್ವಯಂಸೇವಕರ ಮೂಲಕ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಹೆಚ್ಚಿನ ತಪಾಸಣೆಯ ನಂತರ ಕಡಿಮೆ ಜನರಿಗೆ ವೇದಿಕೆಯ ಬಳಿ ಅವಕಾಶ ನೀಡಲಾಗುತ್ತಿದೆ. ಎಂತಹ ಸಮಯದಲ್ಲೂ ಅಹಿತಕರ ಪರಿಸ್ಥಿತಿ ಸಮಯದಲ್ಲೂ ಪರಿಸ್ಥಿತಿ ನಿಯಂತ್ರಿಸಲು ಯುವ ಘಟಕಗಳಿಗೆ ಸ್ಟ್ಯಾಂಡ್‌ಬೈನಲ್ಲಿ ಉಳಿಯುವಂತೆ ತಿಳಿಸಲಾಗಿದೆ. ನಮ್ಮ ಮೇಲೆ ಪ್ರತಿಭಟನೆ ನಡೆಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಅವಕಾಶ ನೀಡುವುದಿಲ್ಲ’ ಎಂದರು.

ಶನಿವಾರ, ಹೆಚ್ಚಿನ ಸ್ವಯಂಸೇವಕರು ಉದ್ದನೆಯ ಕಟ್ಟಿಗೆ ಮತ್ತು ಬಿದಿರಿನ ಕೋಲುಗಳೊಂದಿಗೆ ತಿರುಗಾಡುತ್ತಿದ್ದರು.. ರೈತರ ಪ್ರಕಾರ, ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ, ರಾತ್ರಿ 8 ರಿಂದ ಬೆಳಿಗ್ಗೆ 8 ರವರೆಗೆ ಎರಡು ಪಾಳಿಯಲ್ಲಿ ಸ್ವಯಂಸೇವಕರು, ಕೆಲಸ ಮಾಡುತ್ತಿದ್ದಾರೆ. ರಾತ್ರಿ ವೇಳೆಯೂ ಪಹರೆ ಕಾಯುತ್ತಾರೆ. ಪ್ರಮುಖ ಪ್ರವೇಶ-ನಿರ್ಗಮನ ಸ್ಥಳಗಳಲ್ಲಿ ಬೀಡುಬಿಟ್ಟಿದ್ದಾರೆ. ಪರಿಶೀಲನೆ ನಡೆಸಲು ಕನಿಷ್ಠ ಐದು ಮಂದಿ ಪ್ರತಿಭಟನೆಯ ಮುಖ್ಯ ಪ್ರವೇಶ ಕೇಂದ್ರದಲ್ಲಿ ನಿಲ್ಲುತ್ತಾರೆ. ವೇದಿಕೆ ಸಮಿತಿಯು ಭಾಷಣಗಳನ್ನು ನಿರ್ವಹಿಸುತ್ತಿದ್ದರೆ, 25 ಜನರ ಹೆಚ್ಚುವರಿ ತಂಡವು ಹತ್ತಿರದಲ್ಲೇ ಜಾಗರೂಕತೆಯನ್ನು ಕಾಯ್ದುಕೊಳ್ಳುತ್ತದೆ.

ಮುಖ್ಯ ವೇದಿಕೆ ಪಕ್ಕದಲ್ಲಿರುವ ಮತ್ತೊಂದು ಟ್ರಾಲಿಯಲ್ಲಿ 10-15 ಸ್ವಯಂಸೇವಕರು ಇದ್ದಾರೆ, ಅವರನ್ನು ಯಾವಾಗಲಾದರೂ ಸಹಾಯಕ್ಕಾಗಿ ಕರೆಯಬಹುದು. ಪ್ರತಿಭಟನಾ ಸ್ಥಳದೊಳಗೆ, ಮೂರು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. “ಬೆದರಿಕೆ” ಸಂಭವಿಸಿದಾಗ ಸ್ವಯಂಸೇವಕರನ್ನು ತಕ್ಷಣವೇ ಎಚ್ಚರಿಸಲು ಎಲ್ಲ ಪ್ರತಿಭಟನಾಕಾರರಿಗೆ ಸಂದೇಶವನ್ನು ಕಳುಹಿಸಲಾಗಿದೆ.
‘ಕನಿಷ್ಠ 1,500 ಜನರು 24 ತಾಸು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ನಾವು ಮೊದಲ ದಿನದಿಂದ ಶಾಂತಿಯುತವಾಗಿದ್ದೇವೆ. ಆದರೂ ಎಷ್ಟೋ ದುಷ್ಟ ಜನರು ಪ್ರತಿಭಟನಾ ಸ್ಥಳ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಗ ನಮ್ಮನ್ನು ರಕ್ಷಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ… ” ಎಂದು ರೂಪಿಂದರ್ ಹೇಳಿದರು.

‘ಶುಕ್ರವಾರದ ಘಟನೆಯ ನಂತರ ಹೆಚ್ಚಿನ ಜಾಗರೂಕತೆ ಅಗತ್ಯ ಎನಿಸಿದೆ’ ಎಂದು ಪಂಜಾಬ್‌ನ ಮೊಗಾ ಜಿಲ್ಲೆಯ ಅಮರ್‌ಜೀತ್ ಸಿಂಗ್ ಹೇಳಿದರು. ರೈತರಿಗೆ ಪೊಲೀಸ್ ಪಡೆಗಳ ಬಗ್ಗೆ ಅಪನಂಬಿಕೆ ಇದೆ. “ನಿನ್ನೆ, ಪೊಲೀಸರು ನಿಂತು ಏನಾಯಿತು ಎಂದು ವೀಕ್ಷಿಸಿದರು. ನಾವು ಅವರನ್ನು ಮತ್ತು ಅವರ ಬ್ಯಾರಿಕೇಡ್‌ಗಳನ್ನು ಅವಲಂಬಿಸಲಾಗುವುದಿಲ್ಲ. ವದಂತಿಗಳಿಗೆ ಯಾರೂ ಬಲಿಯಾಗಬಾರದು ಮತ್ತು ಆತ್ಮರಕ್ಷಣೆಗಾಗಿ ಹೊರತುಪಡಿಸಿ ಅನಗತ್ಯವಾಗಿ ಕ್ರಿಯೆಗೆ ಇಳಿಯಬಾರದು ಎಂದು ಎಲ್ಲರಿಗೂ ಸ್ಪಷ್ಟಪಡಿಸಲಾಗಿದೆ. ನಮ್ಮ ಪ್ರತಿಭಟನೆಯನ್ನು ಹಿಂಸಾತ್ಮಕವಾಗಿ ಚಿತ್ರಿಸಬೇಕೆಂದು ನಾವು ಬಯಸುವುದಿಲ್ಲ” ಎಂದು ಹರಿಯಾಣದ ಅಂಬಾಲಾದ ಸುರಿಂದರ್ ಸಿಂಗ್ ಹೇಳಿದರು, ಅವರು ಮೊದಲಿನಿಂದಲೂ ಪ್ರತಿಭಟನೆಯಲ್ಲಿದ್ದಾರೆ.

ಹರಿಯಾಣದ ಕೈತಾಲ್‌ನ ಜ್ವಾರ್ಮಾಲ್, “ನಾವು ನಮ್ಮ ಪ್ರತಿಭಟನಾ ಸ್ಥಳವನ್ನು ಸುರಕ್ಷಿತವಾಗಿಡಲು ಬಯಸುತ್ತೇವೆ; ನಾವು ಯಾವುದೇ ಹಿಂಸಾಚಾರವನ್ನು ಬಯಸುವುದಿಲ್ಲ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರು ಒಳನುಸುಳುತ್ತಿದ್ದಾರೆ ಮತ್ತು ಜನರನ್ನು ಕೆರಳಿಸುತ್ತಿದ್ದಾರೆ. ಇದನ್ನು ತಡೆಯುತ್ತೇವೆ” ಎಂದರು. ರೈತರ ವೇಷದಲ್ಲಿ ಬಿಜೆಪಿ-ಆರ್‌ಎಸ್‌ಎಸ್‌ಗಳು ಸೇರಿಕೊಂಡು ರೈತರ ತಲೆ ಕೆಡಿಸುವ ಯತ್ನ ಮಾಡುತ್ತಿದ್ದಾರೆ ಎಂಬ ಸಂದೇಹದ ಕಾರಣ ಒಳಬರುವವರನ್ನು ಯಾರು ಎಂದು ಖಚಿತಪಡಿಸಿಕೊಂಡೇ ಒಳಕ್ಕೆ ಬಿಡಲಾಗುತ್ತಿದೆ.

ವೇದಿಕೆಯಿಂದ ಮಾತನಾಡಿದ ಬಿಕೆಯು ನಾಯಕ ಗುರ್ನಮ್ ಸಿಂಗ್ ಚಾದುನಿ ಶುಕ್ರವಾರದ ದಾಳಿಯ ಬಗ್ಗೆ ಸರ್ಕಾರಕ್ಕೆ “ಎಚ್ಚರಿಕೆ” ಕಳುಹಿಸಿದ್ದಾರೆ. “ಅವರು ಈ ಗೂಂಡಾಗಿರಿ ಬಿಡಬೇಕೆಂದು ನಾನು ಈ ಸರ್ಕಾರವನ್ನು ಎಚ್ಚರಿಸಲು ಬಯಸುತ್ತೇನೆ. ಇಲ್ಲಿಗೆ ಬಂದು ದಂಗಾ (ಗಲಭೆ) ಮಾಡುವವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ”ಎಂದರು.

ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ದಬ್ಬಾಳಿಕೆ ನಡೆದರೂ ಈಗ ಹಿಂತಿರುಗುವುದಿಲ್ಲ. “ಪೊಲೀಸರು ನಮ್ಮ ಮೇಲೆ ಮುಗಿಬಿದ್ದರೆ, ಅದು ರಾತ್ರಿ ಅಥವಾ ಬೆಳಿಗ್ಗೆ ಆಗಿರಲಿ, ನಾವು ಬಿಡುವುದಿಲ್ಲ, ನಾವು ಇಲ್ಲೇ ಸಾಯುತ್ತೇವೆ” ಎಂದು ಅವರು ಹೇಳಿದರು. ರೈತರು ಪ್ರತಿಭಟನೆಯನ್ನು ಶಾಂತಿಯುತವಾಗಿ ಮುಂದುವರಿಸಬೇಕು ಎಂದು ಪುನರುಚ್ಚರಿಸಿದರು.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಸರ್ಕಾರದೊಂದಿಗೆ ಮಾತುಕತೆಯ ಬಾಗಿಲು ಮುಚ್ಚುವ ಪ್ರಶ್ನೆಯೇ ಇಲ್ಲ: ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...