Homeಮುಖಪುಟಪೊಲೀಸರ ಮೇಲಿಲ್ಲ ವಿಶ್ವಾಸ: ಸ್ವ-ಸುರಕ್ಷತಾ ವ್ಯವಸ್ಥೆ ಮೊರೆ ಹೋದ ರೈತರು

ಪೊಲೀಸರ ಮೇಲಿಲ್ಲ ವಿಶ್ವಾಸ: ಸ್ವ-ಸುರಕ್ಷತಾ ವ್ಯವಸ್ಥೆ ಮೊರೆ ಹೋದ ರೈತರು

- Advertisement -
- Advertisement -

ಶನಿವಾರ ಸಾಯಂಕಾಲ 4.30ರ ಸಮಯ. ‘ಮತ್ತೆ ದಾಂಧಲೆಕೋರರ ದಂಡು ದೊಡ್ಡ ಸಂಖ್ಯೆಯಲ್ಲಿ ಹೊರಗೆ ಜಮಾವಣೆ ಆಗುತ್ತಿದೆ’ ಎಂಬ ಸಣ್ಣ ಅನುಮಾನದ ಸಂದೇಶ ಬಂದ ನಿಮಿಷಗಳಲ್ಲಿ ಲಾಠಿಗಳನ್ನು ಹಿಡಿದ ಹತ್ತಾರು ರೈತ ಸ್ವಯಂಸೇವಕರು ಬ್ಯಾರಿಕೇಡ್ ಬಳಿ ಹಾಜರಾಗಿದ್ದರು.

ಇದು ಬಿಕೆಯು ನಡೆಸಿತ್ತಿರುವ ಪ್ರತಿಭಟನಾ ಸ್ಥಳದಲ್ಲಿ ಕಂಡು ಬಂದ ಹೊಸ ಬೆಳವಣಿಗೆ. ಶುಕ್ರವಾರ ಸಿಂಘು ಗಡಿಯ ದೆಹಲಿ ಭಾಗದ ಒಂದು ಜಾಗದಲ್ಲಿ ಬಿಜೆಪಿ ಕಾರ್ಯಕರ್ತರ ಗುಂಪೊಂದು ದಾಂಧಲೆ ನಡೆಸಲು ಯತ್ನಿಸಿದ ನಂತರ, ಪೊಲೀಸರ ಮೇಲೆ ವಿಶ್ವಾಸ ಕಳೆದುಕೊಂಡಿರುವ ರೈತರು ತಮ್ಮದೇ ಸುರಕ್ಷತಾ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.
ಬಿಜೆಪಿ-ಆರ್‌ಎಸ್‌ಎಸ್ ಗೂಂಡಾಗಳು ತಮ್ಮ ಹೋರಾಟ ನಾಶ ಮಾಡಲು ಹವಣಿಸುತ್ತಿದ್ದಾರೆ ಎಂಬ ಭಾವನೆ ರೈತರಲ್ಲಿದೆ.

ಸಿಂಘು ಗಡಿಯ ಒಂದು ಭಾಗದಲ್ಲಿ ಸಣ್ಣ ಹಿಂಸಾಚಾರದ ನಂತರ, ಯಾವುದೇ ಅಹಿತಕರ ಘಟನೆಯನ್ನು ತಡೆಗಟ್ಟಲು ಮತ್ತು “ರಾಜಕೀಯ ಏಜೆಂಟರಿಗೆ” ಮತ್ತೆ ಹಿಂಸಾಚಾರವನ್ನು ಪ್ರಚೋದಿಸಲು ಅವಕಾಶ ಸಿಗದಂತೆ ನೋಡಿಕೊಳ್ಳಲು ರೈತರು “ಆಂತರಿಕ ಭದ್ರತೆ” ಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ.

‘ಸ್ಥಳೀಯರ’ ಹೆಸರಿನಲ್ಲಿ ಶುಕ್ರವಾರ ಮೂರು ಹಂತಗಳ ಪೊಲೀಸ್ ಭದ್ರತಾ ಬ್ಯಾರಿಕೇಡ್‌ಗಳನ್ನು ದಾಟಿ ಬಂದು ದುಷ್ಕರ್ಮಿಗಳು ದಾಂಧಲೆ ಮಾಡಿದ ನಂತರ ರೈತರಿಗೆ ಪೊಲೀಸರ ಬಗ್ಗೆ ವಿಶ್ವಾಸವೇ ಹೋಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ದಾಂಧಲೆ ನಡೆದಿದೆ ಎಂದು ರೈತರು ಆರೋಪಿಸುತ್ತಿದ್ದಾರೆ.

‘ನೌಜವಾನ್ ಭಾರತ್ ಸಭಾ ಅಧ್ಯಕ್ಷ ರೂಪಿಂದರ್ ಸಿಂಗ್, “ನಾವು ಮುಖ್ಯ ವೇದಿಕೆಯ ಬಳಿ ಭದ್ರತಾ ಕೊಠಡಿಯನ್ನು ಸ್ಥಾಪಿಸಿದ್ದೇವೆ, ಎಲ್ಲಾ ಸಮಯದಲ್ಲೂ 10 ಜನರು ಅಲ್ಲಿರುತ್ತಾರೆ. ನಾವು ಸ್ವಯಂಸೇವಕರ ಮೂಲಕ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಹೆಚ್ಚಿನ ತಪಾಸಣೆಯ ನಂತರ ಕಡಿಮೆ ಜನರಿಗೆ ವೇದಿಕೆಯ ಬಳಿ ಅವಕಾಶ ನೀಡಲಾಗುತ್ತಿದೆ. ಎಂತಹ ಸಮಯದಲ್ಲೂ ಅಹಿತಕರ ಪರಿಸ್ಥಿತಿ ಸಮಯದಲ್ಲೂ ಪರಿಸ್ಥಿತಿ ನಿಯಂತ್ರಿಸಲು ಯುವ ಘಟಕಗಳಿಗೆ ಸ್ಟ್ಯಾಂಡ್‌ಬೈನಲ್ಲಿ ಉಳಿಯುವಂತೆ ತಿಳಿಸಲಾಗಿದೆ. ನಮ್ಮ ಮೇಲೆ ಪ್ರತಿಭಟನೆ ನಡೆಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಅವಕಾಶ ನೀಡುವುದಿಲ್ಲ’ ಎಂದರು.

ಶನಿವಾರ, ಹೆಚ್ಚಿನ ಸ್ವಯಂಸೇವಕರು ಉದ್ದನೆಯ ಕಟ್ಟಿಗೆ ಮತ್ತು ಬಿದಿರಿನ ಕೋಲುಗಳೊಂದಿಗೆ ತಿರುಗಾಡುತ್ತಿದ್ದರು.. ರೈತರ ಪ್ರಕಾರ, ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ, ರಾತ್ರಿ 8 ರಿಂದ ಬೆಳಿಗ್ಗೆ 8 ರವರೆಗೆ ಎರಡು ಪಾಳಿಯಲ್ಲಿ ಸ್ವಯಂಸೇವಕರು, ಕೆಲಸ ಮಾಡುತ್ತಿದ್ದಾರೆ. ರಾತ್ರಿ ವೇಳೆಯೂ ಪಹರೆ ಕಾಯುತ್ತಾರೆ. ಪ್ರಮುಖ ಪ್ರವೇಶ-ನಿರ್ಗಮನ ಸ್ಥಳಗಳಲ್ಲಿ ಬೀಡುಬಿಟ್ಟಿದ್ದಾರೆ. ಪರಿಶೀಲನೆ ನಡೆಸಲು ಕನಿಷ್ಠ ಐದು ಮಂದಿ ಪ್ರತಿಭಟನೆಯ ಮುಖ್ಯ ಪ್ರವೇಶ ಕೇಂದ್ರದಲ್ಲಿ ನಿಲ್ಲುತ್ತಾರೆ. ವೇದಿಕೆ ಸಮಿತಿಯು ಭಾಷಣಗಳನ್ನು ನಿರ್ವಹಿಸುತ್ತಿದ್ದರೆ, 25 ಜನರ ಹೆಚ್ಚುವರಿ ತಂಡವು ಹತ್ತಿರದಲ್ಲೇ ಜಾಗರೂಕತೆಯನ್ನು ಕಾಯ್ದುಕೊಳ್ಳುತ್ತದೆ.

ಮುಖ್ಯ ವೇದಿಕೆ ಪಕ್ಕದಲ್ಲಿರುವ ಮತ್ತೊಂದು ಟ್ರಾಲಿಯಲ್ಲಿ 10-15 ಸ್ವಯಂಸೇವಕರು ಇದ್ದಾರೆ, ಅವರನ್ನು ಯಾವಾಗಲಾದರೂ ಸಹಾಯಕ್ಕಾಗಿ ಕರೆಯಬಹುದು. ಪ್ರತಿಭಟನಾ ಸ್ಥಳದೊಳಗೆ, ಮೂರು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. “ಬೆದರಿಕೆ” ಸಂಭವಿಸಿದಾಗ ಸ್ವಯಂಸೇವಕರನ್ನು ತಕ್ಷಣವೇ ಎಚ್ಚರಿಸಲು ಎಲ್ಲ ಪ್ರತಿಭಟನಾಕಾರರಿಗೆ ಸಂದೇಶವನ್ನು ಕಳುಹಿಸಲಾಗಿದೆ.
‘ಕನಿಷ್ಠ 1,500 ಜನರು 24 ತಾಸು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ನಾವು ಮೊದಲ ದಿನದಿಂದ ಶಾಂತಿಯುತವಾಗಿದ್ದೇವೆ. ಆದರೂ ಎಷ್ಟೋ ದುಷ್ಟ ಜನರು ಪ್ರತಿಭಟನಾ ಸ್ಥಳ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಗ ನಮ್ಮನ್ನು ರಕ್ಷಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ… ” ಎಂದು ರೂಪಿಂದರ್ ಹೇಳಿದರು.

‘ಶುಕ್ರವಾರದ ಘಟನೆಯ ನಂತರ ಹೆಚ್ಚಿನ ಜಾಗರೂಕತೆ ಅಗತ್ಯ ಎನಿಸಿದೆ’ ಎಂದು ಪಂಜಾಬ್‌ನ ಮೊಗಾ ಜಿಲ್ಲೆಯ ಅಮರ್‌ಜೀತ್ ಸಿಂಗ್ ಹೇಳಿದರು. ರೈತರಿಗೆ ಪೊಲೀಸ್ ಪಡೆಗಳ ಬಗ್ಗೆ ಅಪನಂಬಿಕೆ ಇದೆ. “ನಿನ್ನೆ, ಪೊಲೀಸರು ನಿಂತು ಏನಾಯಿತು ಎಂದು ವೀಕ್ಷಿಸಿದರು. ನಾವು ಅವರನ್ನು ಮತ್ತು ಅವರ ಬ್ಯಾರಿಕೇಡ್‌ಗಳನ್ನು ಅವಲಂಬಿಸಲಾಗುವುದಿಲ್ಲ. ವದಂತಿಗಳಿಗೆ ಯಾರೂ ಬಲಿಯಾಗಬಾರದು ಮತ್ತು ಆತ್ಮರಕ್ಷಣೆಗಾಗಿ ಹೊರತುಪಡಿಸಿ ಅನಗತ್ಯವಾಗಿ ಕ್ರಿಯೆಗೆ ಇಳಿಯಬಾರದು ಎಂದು ಎಲ್ಲರಿಗೂ ಸ್ಪಷ್ಟಪಡಿಸಲಾಗಿದೆ. ನಮ್ಮ ಪ್ರತಿಭಟನೆಯನ್ನು ಹಿಂಸಾತ್ಮಕವಾಗಿ ಚಿತ್ರಿಸಬೇಕೆಂದು ನಾವು ಬಯಸುವುದಿಲ್ಲ” ಎಂದು ಹರಿಯಾಣದ ಅಂಬಾಲಾದ ಸುರಿಂದರ್ ಸಿಂಗ್ ಹೇಳಿದರು, ಅವರು ಮೊದಲಿನಿಂದಲೂ ಪ್ರತಿಭಟನೆಯಲ್ಲಿದ್ದಾರೆ.

ಹರಿಯಾಣದ ಕೈತಾಲ್‌ನ ಜ್ವಾರ್ಮಾಲ್, “ನಾವು ನಮ್ಮ ಪ್ರತಿಭಟನಾ ಸ್ಥಳವನ್ನು ಸುರಕ್ಷಿತವಾಗಿಡಲು ಬಯಸುತ್ತೇವೆ; ನಾವು ಯಾವುದೇ ಹಿಂಸಾಚಾರವನ್ನು ಬಯಸುವುದಿಲ್ಲ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರು ಒಳನುಸುಳುತ್ತಿದ್ದಾರೆ ಮತ್ತು ಜನರನ್ನು ಕೆರಳಿಸುತ್ತಿದ್ದಾರೆ. ಇದನ್ನು ತಡೆಯುತ್ತೇವೆ” ಎಂದರು. ರೈತರ ವೇಷದಲ್ಲಿ ಬಿಜೆಪಿ-ಆರ್‌ಎಸ್‌ಎಸ್‌ಗಳು ಸೇರಿಕೊಂಡು ರೈತರ ತಲೆ ಕೆಡಿಸುವ ಯತ್ನ ಮಾಡುತ್ತಿದ್ದಾರೆ ಎಂಬ ಸಂದೇಹದ ಕಾರಣ ಒಳಬರುವವರನ್ನು ಯಾರು ಎಂದು ಖಚಿತಪಡಿಸಿಕೊಂಡೇ ಒಳಕ್ಕೆ ಬಿಡಲಾಗುತ್ತಿದೆ.

ವೇದಿಕೆಯಿಂದ ಮಾತನಾಡಿದ ಬಿಕೆಯು ನಾಯಕ ಗುರ್ನಮ್ ಸಿಂಗ್ ಚಾದುನಿ ಶುಕ್ರವಾರದ ದಾಳಿಯ ಬಗ್ಗೆ ಸರ್ಕಾರಕ್ಕೆ “ಎಚ್ಚರಿಕೆ” ಕಳುಹಿಸಿದ್ದಾರೆ. “ಅವರು ಈ ಗೂಂಡಾಗಿರಿ ಬಿಡಬೇಕೆಂದು ನಾನು ಈ ಸರ್ಕಾರವನ್ನು ಎಚ್ಚರಿಸಲು ಬಯಸುತ್ತೇನೆ. ಇಲ್ಲಿಗೆ ಬಂದು ದಂಗಾ (ಗಲಭೆ) ಮಾಡುವವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ”ಎಂದರು.

ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ದಬ್ಬಾಳಿಕೆ ನಡೆದರೂ ಈಗ ಹಿಂತಿರುಗುವುದಿಲ್ಲ. “ಪೊಲೀಸರು ನಮ್ಮ ಮೇಲೆ ಮುಗಿಬಿದ್ದರೆ, ಅದು ರಾತ್ರಿ ಅಥವಾ ಬೆಳಿಗ್ಗೆ ಆಗಿರಲಿ, ನಾವು ಬಿಡುವುದಿಲ್ಲ, ನಾವು ಇಲ್ಲೇ ಸಾಯುತ್ತೇವೆ” ಎಂದು ಅವರು ಹೇಳಿದರು. ರೈತರು ಪ್ರತಿಭಟನೆಯನ್ನು ಶಾಂತಿಯುತವಾಗಿ ಮುಂದುವರಿಸಬೇಕು ಎಂದು ಪುನರುಚ್ಚರಿಸಿದರು.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಸರ್ಕಾರದೊಂದಿಗೆ ಮಾತುಕತೆಯ ಬಾಗಿಲು ಮುಚ್ಚುವ ಪ್ರಶ್ನೆಯೇ ಇಲ್ಲ: ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...