Homeಮುಖಪುಟಪೊಲೀಸರ ಮೇಲಿಲ್ಲ ವಿಶ್ವಾಸ: ಸ್ವ-ಸುರಕ್ಷತಾ ವ್ಯವಸ್ಥೆ ಮೊರೆ ಹೋದ ರೈತರು

ಪೊಲೀಸರ ಮೇಲಿಲ್ಲ ವಿಶ್ವಾಸ: ಸ್ವ-ಸುರಕ್ಷತಾ ವ್ಯವಸ್ಥೆ ಮೊರೆ ಹೋದ ರೈತರು

- Advertisement -
- Advertisement -

ಶನಿವಾರ ಸಾಯಂಕಾಲ 4.30ರ ಸಮಯ. ‘ಮತ್ತೆ ದಾಂಧಲೆಕೋರರ ದಂಡು ದೊಡ್ಡ ಸಂಖ್ಯೆಯಲ್ಲಿ ಹೊರಗೆ ಜಮಾವಣೆ ಆಗುತ್ತಿದೆ’ ಎಂಬ ಸಣ್ಣ ಅನುಮಾನದ ಸಂದೇಶ ಬಂದ ನಿಮಿಷಗಳಲ್ಲಿ ಲಾಠಿಗಳನ್ನು ಹಿಡಿದ ಹತ್ತಾರು ರೈತ ಸ್ವಯಂಸೇವಕರು ಬ್ಯಾರಿಕೇಡ್ ಬಳಿ ಹಾಜರಾಗಿದ್ದರು.

ಇದು ಬಿಕೆಯು ನಡೆಸಿತ್ತಿರುವ ಪ್ರತಿಭಟನಾ ಸ್ಥಳದಲ್ಲಿ ಕಂಡು ಬಂದ ಹೊಸ ಬೆಳವಣಿಗೆ. ಶುಕ್ರವಾರ ಸಿಂಘು ಗಡಿಯ ದೆಹಲಿ ಭಾಗದ ಒಂದು ಜಾಗದಲ್ಲಿ ಬಿಜೆಪಿ ಕಾರ್ಯಕರ್ತರ ಗುಂಪೊಂದು ದಾಂಧಲೆ ನಡೆಸಲು ಯತ್ನಿಸಿದ ನಂತರ, ಪೊಲೀಸರ ಮೇಲೆ ವಿಶ್ವಾಸ ಕಳೆದುಕೊಂಡಿರುವ ರೈತರು ತಮ್ಮದೇ ಸುರಕ್ಷತಾ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.
ಬಿಜೆಪಿ-ಆರ್‌ಎಸ್‌ಎಸ್ ಗೂಂಡಾಗಳು ತಮ್ಮ ಹೋರಾಟ ನಾಶ ಮಾಡಲು ಹವಣಿಸುತ್ತಿದ್ದಾರೆ ಎಂಬ ಭಾವನೆ ರೈತರಲ್ಲಿದೆ.

ಸಿಂಘು ಗಡಿಯ ಒಂದು ಭಾಗದಲ್ಲಿ ಸಣ್ಣ ಹಿಂಸಾಚಾರದ ನಂತರ, ಯಾವುದೇ ಅಹಿತಕರ ಘಟನೆಯನ್ನು ತಡೆಗಟ್ಟಲು ಮತ್ತು “ರಾಜಕೀಯ ಏಜೆಂಟರಿಗೆ” ಮತ್ತೆ ಹಿಂಸಾಚಾರವನ್ನು ಪ್ರಚೋದಿಸಲು ಅವಕಾಶ ಸಿಗದಂತೆ ನೋಡಿಕೊಳ್ಳಲು ರೈತರು “ಆಂತರಿಕ ಭದ್ರತೆ” ಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ.

‘ಸ್ಥಳೀಯರ’ ಹೆಸರಿನಲ್ಲಿ ಶುಕ್ರವಾರ ಮೂರು ಹಂತಗಳ ಪೊಲೀಸ್ ಭದ್ರತಾ ಬ್ಯಾರಿಕೇಡ್‌ಗಳನ್ನು ದಾಟಿ ಬಂದು ದುಷ್ಕರ್ಮಿಗಳು ದಾಂಧಲೆ ಮಾಡಿದ ನಂತರ ರೈತರಿಗೆ ಪೊಲೀಸರ ಬಗ್ಗೆ ವಿಶ್ವಾಸವೇ ಹೋಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ದಾಂಧಲೆ ನಡೆದಿದೆ ಎಂದು ರೈತರು ಆರೋಪಿಸುತ್ತಿದ್ದಾರೆ.

‘ನೌಜವಾನ್ ಭಾರತ್ ಸಭಾ ಅಧ್ಯಕ್ಷ ರೂಪಿಂದರ್ ಸಿಂಗ್, “ನಾವು ಮುಖ್ಯ ವೇದಿಕೆಯ ಬಳಿ ಭದ್ರತಾ ಕೊಠಡಿಯನ್ನು ಸ್ಥಾಪಿಸಿದ್ದೇವೆ, ಎಲ್ಲಾ ಸಮಯದಲ್ಲೂ 10 ಜನರು ಅಲ್ಲಿರುತ್ತಾರೆ. ನಾವು ಸ್ವಯಂಸೇವಕರ ಮೂಲಕ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಹೆಚ್ಚಿನ ತಪಾಸಣೆಯ ನಂತರ ಕಡಿಮೆ ಜನರಿಗೆ ವೇದಿಕೆಯ ಬಳಿ ಅವಕಾಶ ನೀಡಲಾಗುತ್ತಿದೆ. ಎಂತಹ ಸಮಯದಲ್ಲೂ ಅಹಿತಕರ ಪರಿಸ್ಥಿತಿ ಸಮಯದಲ್ಲೂ ಪರಿಸ್ಥಿತಿ ನಿಯಂತ್ರಿಸಲು ಯುವ ಘಟಕಗಳಿಗೆ ಸ್ಟ್ಯಾಂಡ್‌ಬೈನಲ್ಲಿ ಉಳಿಯುವಂತೆ ತಿಳಿಸಲಾಗಿದೆ. ನಮ್ಮ ಮೇಲೆ ಪ್ರತಿಭಟನೆ ನಡೆಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಅವಕಾಶ ನೀಡುವುದಿಲ್ಲ’ ಎಂದರು.

ಶನಿವಾರ, ಹೆಚ್ಚಿನ ಸ್ವಯಂಸೇವಕರು ಉದ್ದನೆಯ ಕಟ್ಟಿಗೆ ಮತ್ತು ಬಿದಿರಿನ ಕೋಲುಗಳೊಂದಿಗೆ ತಿರುಗಾಡುತ್ತಿದ್ದರು.. ರೈತರ ಪ್ರಕಾರ, ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ, ರಾತ್ರಿ 8 ರಿಂದ ಬೆಳಿಗ್ಗೆ 8 ರವರೆಗೆ ಎರಡು ಪಾಳಿಯಲ್ಲಿ ಸ್ವಯಂಸೇವಕರು, ಕೆಲಸ ಮಾಡುತ್ತಿದ್ದಾರೆ. ರಾತ್ರಿ ವೇಳೆಯೂ ಪಹರೆ ಕಾಯುತ್ತಾರೆ. ಪ್ರಮುಖ ಪ್ರವೇಶ-ನಿರ್ಗಮನ ಸ್ಥಳಗಳಲ್ಲಿ ಬೀಡುಬಿಟ್ಟಿದ್ದಾರೆ. ಪರಿಶೀಲನೆ ನಡೆಸಲು ಕನಿಷ್ಠ ಐದು ಮಂದಿ ಪ್ರತಿಭಟನೆಯ ಮುಖ್ಯ ಪ್ರವೇಶ ಕೇಂದ್ರದಲ್ಲಿ ನಿಲ್ಲುತ್ತಾರೆ. ವೇದಿಕೆ ಸಮಿತಿಯು ಭಾಷಣಗಳನ್ನು ನಿರ್ವಹಿಸುತ್ತಿದ್ದರೆ, 25 ಜನರ ಹೆಚ್ಚುವರಿ ತಂಡವು ಹತ್ತಿರದಲ್ಲೇ ಜಾಗರೂಕತೆಯನ್ನು ಕಾಯ್ದುಕೊಳ್ಳುತ್ತದೆ.

ಮುಖ್ಯ ವೇದಿಕೆ ಪಕ್ಕದಲ್ಲಿರುವ ಮತ್ತೊಂದು ಟ್ರಾಲಿಯಲ್ಲಿ 10-15 ಸ್ವಯಂಸೇವಕರು ಇದ್ದಾರೆ, ಅವರನ್ನು ಯಾವಾಗಲಾದರೂ ಸಹಾಯಕ್ಕಾಗಿ ಕರೆಯಬಹುದು. ಪ್ರತಿಭಟನಾ ಸ್ಥಳದೊಳಗೆ, ಮೂರು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. “ಬೆದರಿಕೆ” ಸಂಭವಿಸಿದಾಗ ಸ್ವಯಂಸೇವಕರನ್ನು ತಕ್ಷಣವೇ ಎಚ್ಚರಿಸಲು ಎಲ್ಲ ಪ್ರತಿಭಟನಾಕಾರರಿಗೆ ಸಂದೇಶವನ್ನು ಕಳುಹಿಸಲಾಗಿದೆ.
‘ಕನಿಷ್ಠ 1,500 ಜನರು 24 ತಾಸು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ನಾವು ಮೊದಲ ದಿನದಿಂದ ಶಾಂತಿಯುತವಾಗಿದ್ದೇವೆ. ಆದರೂ ಎಷ್ಟೋ ದುಷ್ಟ ಜನರು ಪ್ರತಿಭಟನಾ ಸ್ಥಳ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಗ ನಮ್ಮನ್ನು ರಕ್ಷಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ… ” ಎಂದು ರೂಪಿಂದರ್ ಹೇಳಿದರು.

‘ಶುಕ್ರವಾರದ ಘಟನೆಯ ನಂತರ ಹೆಚ್ಚಿನ ಜಾಗರೂಕತೆ ಅಗತ್ಯ ಎನಿಸಿದೆ’ ಎಂದು ಪಂಜಾಬ್‌ನ ಮೊಗಾ ಜಿಲ್ಲೆಯ ಅಮರ್‌ಜೀತ್ ಸಿಂಗ್ ಹೇಳಿದರು. ರೈತರಿಗೆ ಪೊಲೀಸ್ ಪಡೆಗಳ ಬಗ್ಗೆ ಅಪನಂಬಿಕೆ ಇದೆ. “ನಿನ್ನೆ, ಪೊಲೀಸರು ನಿಂತು ಏನಾಯಿತು ಎಂದು ವೀಕ್ಷಿಸಿದರು. ನಾವು ಅವರನ್ನು ಮತ್ತು ಅವರ ಬ್ಯಾರಿಕೇಡ್‌ಗಳನ್ನು ಅವಲಂಬಿಸಲಾಗುವುದಿಲ್ಲ. ವದಂತಿಗಳಿಗೆ ಯಾರೂ ಬಲಿಯಾಗಬಾರದು ಮತ್ತು ಆತ್ಮರಕ್ಷಣೆಗಾಗಿ ಹೊರತುಪಡಿಸಿ ಅನಗತ್ಯವಾಗಿ ಕ್ರಿಯೆಗೆ ಇಳಿಯಬಾರದು ಎಂದು ಎಲ್ಲರಿಗೂ ಸ್ಪಷ್ಟಪಡಿಸಲಾಗಿದೆ. ನಮ್ಮ ಪ್ರತಿಭಟನೆಯನ್ನು ಹಿಂಸಾತ್ಮಕವಾಗಿ ಚಿತ್ರಿಸಬೇಕೆಂದು ನಾವು ಬಯಸುವುದಿಲ್ಲ” ಎಂದು ಹರಿಯಾಣದ ಅಂಬಾಲಾದ ಸುರಿಂದರ್ ಸಿಂಗ್ ಹೇಳಿದರು, ಅವರು ಮೊದಲಿನಿಂದಲೂ ಪ್ರತಿಭಟನೆಯಲ್ಲಿದ್ದಾರೆ.

ಹರಿಯಾಣದ ಕೈತಾಲ್‌ನ ಜ್ವಾರ್ಮಾಲ್, “ನಾವು ನಮ್ಮ ಪ್ರತಿಭಟನಾ ಸ್ಥಳವನ್ನು ಸುರಕ್ಷಿತವಾಗಿಡಲು ಬಯಸುತ್ತೇವೆ; ನಾವು ಯಾವುದೇ ಹಿಂಸಾಚಾರವನ್ನು ಬಯಸುವುದಿಲ್ಲ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರು ಒಳನುಸುಳುತ್ತಿದ್ದಾರೆ ಮತ್ತು ಜನರನ್ನು ಕೆರಳಿಸುತ್ತಿದ್ದಾರೆ. ಇದನ್ನು ತಡೆಯುತ್ತೇವೆ” ಎಂದರು. ರೈತರ ವೇಷದಲ್ಲಿ ಬಿಜೆಪಿ-ಆರ್‌ಎಸ್‌ಎಸ್‌ಗಳು ಸೇರಿಕೊಂಡು ರೈತರ ತಲೆ ಕೆಡಿಸುವ ಯತ್ನ ಮಾಡುತ್ತಿದ್ದಾರೆ ಎಂಬ ಸಂದೇಹದ ಕಾರಣ ಒಳಬರುವವರನ್ನು ಯಾರು ಎಂದು ಖಚಿತಪಡಿಸಿಕೊಂಡೇ ಒಳಕ್ಕೆ ಬಿಡಲಾಗುತ್ತಿದೆ.

ವೇದಿಕೆಯಿಂದ ಮಾತನಾಡಿದ ಬಿಕೆಯು ನಾಯಕ ಗುರ್ನಮ್ ಸಿಂಗ್ ಚಾದುನಿ ಶುಕ್ರವಾರದ ದಾಳಿಯ ಬಗ್ಗೆ ಸರ್ಕಾರಕ್ಕೆ “ಎಚ್ಚರಿಕೆ” ಕಳುಹಿಸಿದ್ದಾರೆ. “ಅವರು ಈ ಗೂಂಡಾಗಿರಿ ಬಿಡಬೇಕೆಂದು ನಾನು ಈ ಸರ್ಕಾರವನ್ನು ಎಚ್ಚರಿಸಲು ಬಯಸುತ್ತೇನೆ. ಇಲ್ಲಿಗೆ ಬಂದು ದಂಗಾ (ಗಲಭೆ) ಮಾಡುವವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ”ಎಂದರು.

ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ದಬ್ಬಾಳಿಕೆ ನಡೆದರೂ ಈಗ ಹಿಂತಿರುಗುವುದಿಲ್ಲ. “ಪೊಲೀಸರು ನಮ್ಮ ಮೇಲೆ ಮುಗಿಬಿದ್ದರೆ, ಅದು ರಾತ್ರಿ ಅಥವಾ ಬೆಳಿಗ್ಗೆ ಆಗಿರಲಿ, ನಾವು ಬಿಡುವುದಿಲ್ಲ, ನಾವು ಇಲ್ಲೇ ಸಾಯುತ್ತೇವೆ” ಎಂದು ಅವರು ಹೇಳಿದರು. ರೈತರು ಪ್ರತಿಭಟನೆಯನ್ನು ಶಾಂತಿಯುತವಾಗಿ ಮುಂದುವರಿಸಬೇಕು ಎಂದು ಪುನರುಚ್ಚರಿಸಿದರು.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಸರ್ಕಾರದೊಂದಿಗೆ ಮಾತುಕತೆಯ ಬಾಗಿಲು ಮುಚ್ಚುವ ಪ್ರಶ್ನೆಯೇ ಇಲ್ಲ: ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...