Homeಮುಖಪುಟಪೊಲೀಸರ ಮೇಲಿಲ್ಲ ವಿಶ್ವಾಸ: ಸ್ವ-ಸುರಕ್ಷತಾ ವ್ಯವಸ್ಥೆ ಮೊರೆ ಹೋದ ರೈತರು

ಪೊಲೀಸರ ಮೇಲಿಲ್ಲ ವಿಶ್ವಾಸ: ಸ್ವ-ಸುರಕ್ಷತಾ ವ್ಯವಸ್ಥೆ ಮೊರೆ ಹೋದ ರೈತರು

- Advertisement -
- Advertisement -

ಶನಿವಾರ ಸಾಯಂಕಾಲ 4.30ರ ಸಮಯ. ‘ಮತ್ತೆ ದಾಂಧಲೆಕೋರರ ದಂಡು ದೊಡ್ಡ ಸಂಖ್ಯೆಯಲ್ಲಿ ಹೊರಗೆ ಜಮಾವಣೆ ಆಗುತ್ತಿದೆ’ ಎಂಬ ಸಣ್ಣ ಅನುಮಾನದ ಸಂದೇಶ ಬಂದ ನಿಮಿಷಗಳಲ್ಲಿ ಲಾಠಿಗಳನ್ನು ಹಿಡಿದ ಹತ್ತಾರು ರೈತ ಸ್ವಯಂಸೇವಕರು ಬ್ಯಾರಿಕೇಡ್ ಬಳಿ ಹಾಜರಾಗಿದ್ದರು.

ಇದು ಬಿಕೆಯು ನಡೆಸಿತ್ತಿರುವ ಪ್ರತಿಭಟನಾ ಸ್ಥಳದಲ್ಲಿ ಕಂಡು ಬಂದ ಹೊಸ ಬೆಳವಣಿಗೆ. ಶುಕ್ರವಾರ ಸಿಂಘು ಗಡಿಯ ದೆಹಲಿ ಭಾಗದ ಒಂದು ಜಾಗದಲ್ಲಿ ಬಿಜೆಪಿ ಕಾರ್ಯಕರ್ತರ ಗುಂಪೊಂದು ದಾಂಧಲೆ ನಡೆಸಲು ಯತ್ನಿಸಿದ ನಂತರ, ಪೊಲೀಸರ ಮೇಲೆ ವಿಶ್ವಾಸ ಕಳೆದುಕೊಂಡಿರುವ ರೈತರು ತಮ್ಮದೇ ಸುರಕ್ಷತಾ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.
ಬಿಜೆಪಿ-ಆರ್‌ಎಸ್‌ಎಸ್ ಗೂಂಡಾಗಳು ತಮ್ಮ ಹೋರಾಟ ನಾಶ ಮಾಡಲು ಹವಣಿಸುತ್ತಿದ್ದಾರೆ ಎಂಬ ಭಾವನೆ ರೈತರಲ್ಲಿದೆ.

ಸಿಂಘು ಗಡಿಯ ಒಂದು ಭಾಗದಲ್ಲಿ ಸಣ್ಣ ಹಿಂಸಾಚಾರದ ನಂತರ, ಯಾವುದೇ ಅಹಿತಕರ ಘಟನೆಯನ್ನು ತಡೆಗಟ್ಟಲು ಮತ್ತು “ರಾಜಕೀಯ ಏಜೆಂಟರಿಗೆ” ಮತ್ತೆ ಹಿಂಸಾಚಾರವನ್ನು ಪ್ರಚೋದಿಸಲು ಅವಕಾಶ ಸಿಗದಂತೆ ನೋಡಿಕೊಳ್ಳಲು ರೈತರು “ಆಂತರಿಕ ಭದ್ರತೆ” ಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ.

‘ಸ್ಥಳೀಯರ’ ಹೆಸರಿನಲ್ಲಿ ಶುಕ್ರವಾರ ಮೂರು ಹಂತಗಳ ಪೊಲೀಸ್ ಭದ್ರತಾ ಬ್ಯಾರಿಕೇಡ್‌ಗಳನ್ನು ದಾಟಿ ಬಂದು ದುಷ್ಕರ್ಮಿಗಳು ದಾಂಧಲೆ ಮಾಡಿದ ನಂತರ ರೈತರಿಗೆ ಪೊಲೀಸರ ಬಗ್ಗೆ ವಿಶ್ವಾಸವೇ ಹೋಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ದಾಂಧಲೆ ನಡೆದಿದೆ ಎಂದು ರೈತರು ಆರೋಪಿಸುತ್ತಿದ್ದಾರೆ.

‘ನೌಜವಾನ್ ಭಾರತ್ ಸಭಾ ಅಧ್ಯಕ್ಷ ರೂಪಿಂದರ್ ಸಿಂಗ್, “ನಾವು ಮುಖ್ಯ ವೇದಿಕೆಯ ಬಳಿ ಭದ್ರತಾ ಕೊಠಡಿಯನ್ನು ಸ್ಥಾಪಿಸಿದ್ದೇವೆ, ಎಲ್ಲಾ ಸಮಯದಲ್ಲೂ 10 ಜನರು ಅಲ್ಲಿರುತ್ತಾರೆ. ನಾವು ಸ್ವಯಂಸೇವಕರ ಮೂಲಕ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಹೆಚ್ಚಿನ ತಪಾಸಣೆಯ ನಂತರ ಕಡಿಮೆ ಜನರಿಗೆ ವೇದಿಕೆಯ ಬಳಿ ಅವಕಾಶ ನೀಡಲಾಗುತ್ತಿದೆ. ಎಂತಹ ಸಮಯದಲ್ಲೂ ಅಹಿತಕರ ಪರಿಸ್ಥಿತಿ ಸಮಯದಲ್ಲೂ ಪರಿಸ್ಥಿತಿ ನಿಯಂತ್ರಿಸಲು ಯುವ ಘಟಕಗಳಿಗೆ ಸ್ಟ್ಯಾಂಡ್‌ಬೈನಲ್ಲಿ ಉಳಿಯುವಂತೆ ತಿಳಿಸಲಾಗಿದೆ. ನಮ್ಮ ಮೇಲೆ ಪ್ರತಿಭಟನೆ ನಡೆಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಅವಕಾಶ ನೀಡುವುದಿಲ್ಲ’ ಎಂದರು.

ಶನಿವಾರ, ಹೆಚ್ಚಿನ ಸ್ವಯಂಸೇವಕರು ಉದ್ದನೆಯ ಕಟ್ಟಿಗೆ ಮತ್ತು ಬಿದಿರಿನ ಕೋಲುಗಳೊಂದಿಗೆ ತಿರುಗಾಡುತ್ತಿದ್ದರು.. ರೈತರ ಪ್ರಕಾರ, ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ, ರಾತ್ರಿ 8 ರಿಂದ ಬೆಳಿಗ್ಗೆ 8 ರವರೆಗೆ ಎರಡು ಪಾಳಿಯಲ್ಲಿ ಸ್ವಯಂಸೇವಕರು, ಕೆಲಸ ಮಾಡುತ್ತಿದ್ದಾರೆ. ರಾತ್ರಿ ವೇಳೆಯೂ ಪಹರೆ ಕಾಯುತ್ತಾರೆ. ಪ್ರಮುಖ ಪ್ರವೇಶ-ನಿರ್ಗಮನ ಸ್ಥಳಗಳಲ್ಲಿ ಬೀಡುಬಿಟ್ಟಿದ್ದಾರೆ. ಪರಿಶೀಲನೆ ನಡೆಸಲು ಕನಿಷ್ಠ ಐದು ಮಂದಿ ಪ್ರತಿಭಟನೆಯ ಮುಖ್ಯ ಪ್ರವೇಶ ಕೇಂದ್ರದಲ್ಲಿ ನಿಲ್ಲುತ್ತಾರೆ. ವೇದಿಕೆ ಸಮಿತಿಯು ಭಾಷಣಗಳನ್ನು ನಿರ್ವಹಿಸುತ್ತಿದ್ದರೆ, 25 ಜನರ ಹೆಚ್ಚುವರಿ ತಂಡವು ಹತ್ತಿರದಲ್ಲೇ ಜಾಗರೂಕತೆಯನ್ನು ಕಾಯ್ದುಕೊಳ್ಳುತ್ತದೆ.

ಮುಖ್ಯ ವೇದಿಕೆ ಪಕ್ಕದಲ್ಲಿರುವ ಮತ್ತೊಂದು ಟ್ರಾಲಿಯಲ್ಲಿ 10-15 ಸ್ವಯಂಸೇವಕರು ಇದ್ದಾರೆ, ಅವರನ್ನು ಯಾವಾಗಲಾದರೂ ಸಹಾಯಕ್ಕಾಗಿ ಕರೆಯಬಹುದು. ಪ್ರತಿಭಟನಾ ಸ್ಥಳದೊಳಗೆ, ಮೂರು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. “ಬೆದರಿಕೆ” ಸಂಭವಿಸಿದಾಗ ಸ್ವಯಂಸೇವಕರನ್ನು ತಕ್ಷಣವೇ ಎಚ್ಚರಿಸಲು ಎಲ್ಲ ಪ್ರತಿಭಟನಾಕಾರರಿಗೆ ಸಂದೇಶವನ್ನು ಕಳುಹಿಸಲಾಗಿದೆ.
‘ಕನಿಷ್ಠ 1,500 ಜನರು 24 ತಾಸು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ನಾವು ಮೊದಲ ದಿನದಿಂದ ಶಾಂತಿಯುತವಾಗಿದ್ದೇವೆ. ಆದರೂ ಎಷ್ಟೋ ದುಷ್ಟ ಜನರು ಪ್ರತಿಭಟನಾ ಸ್ಥಳ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಗ ನಮ್ಮನ್ನು ರಕ್ಷಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ… ” ಎಂದು ರೂಪಿಂದರ್ ಹೇಳಿದರು.

‘ಶುಕ್ರವಾರದ ಘಟನೆಯ ನಂತರ ಹೆಚ್ಚಿನ ಜಾಗರೂಕತೆ ಅಗತ್ಯ ಎನಿಸಿದೆ’ ಎಂದು ಪಂಜಾಬ್‌ನ ಮೊಗಾ ಜಿಲ್ಲೆಯ ಅಮರ್‌ಜೀತ್ ಸಿಂಗ್ ಹೇಳಿದರು. ರೈತರಿಗೆ ಪೊಲೀಸ್ ಪಡೆಗಳ ಬಗ್ಗೆ ಅಪನಂಬಿಕೆ ಇದೆ. “ನಿನ್ನೆ, ಪೊಲೀಸರು ನಿಂತು ಏನಾಯಿತು ಎಂದು ವೀಕ್ಷಿಸಿದರು. ನಾವು ಅವರನ್ನು ಮತ್ತು ಅವರ ಬ್ಯಾರಿಕೇಡ್‌ಗಳನ್ನು ಅವಲಂಬಿಸಲಾಗುವುದಿಲ್ಲ. ವದಂತಿಗಳಿಗೆ ಯಾರೂ ಬಲಿಯಾಗಬಾರದು ಮತ್ತು ಆತ್ಮರಕ್ಷಣೆಗಾಗಿ ಹೊರತುಪಡಿಸಿ ಅನಗತ್ಯವಾಗಿ ಕ್ರಿಯೆಗೆ ಇಳಿಯಬಾರದು ಎಂದು ಎಲ್ಲರಿಗೂ ಸ್ಪಷ್ಟಪಡಿಸಲಾಗಿದೆ. ನಮ್ಮ ಪ್ರತಿಭಟನೆಯನ್ನು ಹಿಂಸಾತ್ಮಕವಾಗಿ ಚಿತ್ರಿಸಬೇಕೆಂದು ನಾವು ಬಯಸುವುದಿಲ್ಲ” ಎಂದು ಹರಿಯಾಣದ ಅಂಬಾಲಾದ ಸುರಿಂದರ್ ಸಿಂಗ್ ಹೇಳಿದರು, ಅವರು ಮೊದಲಿನಿಂದಲೂ ಪ್ರತಿಭಟನೆಯಲ್ಲಿದ್ದಾರೆ.

ಹರಿಯಾಣದ ಕೈತಾಲ್‌ನ ಜ್ವಾರ್ಮಾಲ್, “ನಾವು ನಮ್ಮ ಪ್ರತಿಭಟನಾ ಸ್ಥಳವನ್ನು ಸುರಕ್ಷಿತವಾಗಿಡಲು ಬಯಸುತ್ತೇವೆ; ನಾವು ಯಾವುದೇ ಹಿಂಸಾಚಾರವನ್ನು ಬಯಸುವುದಿಲ್ಲ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರು ಒಳನುಸುಳುತ್ತಿದ್ದಾರೆ ಮತ್ತು ಜನರನ್ನು ಕೆರಳಿಸುತ್ತಿದ್ದಾರೆ. ಇದನ್ನು ತಡೆಯುತ್ತೇವೆ” ಎಂದರು. ರೈತರ ವೇಷದಲ್ಲಿ ಬಿಜೆಪಿ-ಆರ್‌ಎಸ್‌ಎಸ್‌ಗಳು ಸೇರಿಕೊಂಡು ರೈತರ ತಲೆ ಕೆಡಿಸುವ ಯತ್ನ ಮಾಡುತ್ತಿದ್ದಾರೆ ಎಂಬ ಸಂದೇಹದ ಕಾರಣ ಒಳಬರುವವರನ್ನು ಯಾರು ಎಂದು ಖಚಿತಪಡಿಸಿಕೊಂಡೇ ಒಳಕ್ಕೆ ಬಿಡಲಾಗುತ್ತಿದೆ.

ವೇದಿಕೆಯಿಂದ ಮಾತನಾಡಿದ ಬಿಕೆಯು ನಾಯಕ ಗುರ್ನಮ್ ಸಿಂಗ್ ಚಾದುನಿ ಶುಕ್ರವಾರದ ದಾಳಿಯ ಬಗ್ಗೆ ಸರ್ಕಾರಕ್ಕೆ “ಎಚ್ಚರಿಕೆ” ಕಳುಹಿಸಿದ್ದಾರೆ. “ಅವರು ಈ ಗೂಂಡಾಗಿರಿ ಬಿಡಬೇಕೆಂದು ನಾನು ಈ ಸರ್ಕಾರವನ್ನು ಎಚ್ಚರಿಸಲು ಬಯಸುತ್ತೇನೆ. ಇಲ್ಲಿಗೆ ಬಂದು ದಂಗಾ (ಗಲಭೆ) ಮಾಡುವವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ”ಎಂದರು.

ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ದಬ್ಬಾಳಿಕೆ ನಡೆದರೂ ಈಗ ಹಿಂತಿರುಗುವುದಿಲ್ಲ. “ಪೊಲೀಸರು ನಮ್ಮ ಮೇಲೆ ಮುಗಿಬಿದ್ದರೆ, ಅದು ರಾತ್ರಿ ಅಥವಾ ಬೆಳಿಗ್ಗೆ ಆಗಿರಲಿ, ನಾವು ಬಿಡುವುದಿಲ್ಲ, ನಾವು ಇಲ್ಲೇ ಸಾಯುತ್ತೇವೆ” ಎಂದು ಅವರು ಹೇಳಿದರು. ರೈತರು ಪ್ರತಿಭಟನೆಯನ್ನು ಶಾಂತಿಯುತವಾಗಿ ಮುಂದುವರಿಸಬೇಕು ಎಂದು ಪುನರುಚ್ಚರಿಸಿದರು.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಸರ್ಕಾರದೊಂದಿಗೆ ಮಾತುಕತೆಯ ಬಾಗಿಲು ಮುಚ್ಚುವ ಪ್ರಶ್ನೆಯೇ ಇಲ್ಲ: ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...