Homeಮುಖಪುಟಪೊಲೀಸರ ಮೇಲಿಲ್ಲ ವಿಶ್ವಾಸ: ಸ್ವ-ಸುರಕ್ಷತಾ ವ್ಯವಸ್ಥೆ ಮೊರೆ ಹೋದ ರೈತರು

ಪೊಲೀಸರ ಮೇಲಿಲ್ಲ ವಿಶ್ವಾಸ: ಸ್ವ-ಸುರಕ್ಷತಾ ವ್ಯವಸ್ಥೆ ಮೊರೆ ಹೋದ ರೈತರು

- Advertisement -
- Advertisement -

ಶನಿವಾರ ಸಾಯಂಕಾಲ 4.30ರ ಸಮಯ. ‘ಮತ್ತೆ ದಾಂಧಲೆಕೋರರ ದಂಡು ದೊಡ್ಡ ಸಂಖ್ಯೆಯಲ್ಲಿ ಹೊರಗೆ ಜಮಾವಣೆ ಆಗುತ್ತಿದೆ’ ಎಂಬ ಸಣ್ಣ ಅನುಮಾನದ ಸಂದೇಶ ಬಂದ ನಿಮಿಷಗಳಲ್ಲಿ ಲಾಠಿಗಳನ್ನು ಹಿಡಿದ ಹತ್ತಾರು ರೈತ ಸ್ವಯಂಸೇವಕರು ಬ್ಯಾರಿಕೇಡ್ ಬಳಿ ಹಾಜರಾಗಿದ್ದರು.

ಇದು ಬಿಕೆಯು ನಡೆಸಿತ್ತಿರುವ ಪ್ರತಿಭಟನಾ ಸ್ಥಳದಲ್ಲಿ ಕಂಡು ಬಂದ ಹೊಸ ಬೆಳವಣಿಗೆ. ಶುಕ್ರವಾರ ಸಿಂಘು ಗಡಿಯ ದೆಹಲಿ ಭಾಗದ ಒಂದು ಜಾಗದಲ್ಲಿ ಬಿಜೆಪಿ ಕಾರ್ಯಕರ್ತರ ಗುಂಪೊಂದು ದಾಂಧಲೆ ನಡೆಸಲು ಯತ್ನಿಸಿದ ನಂತರ, ಪೊಲೀಸರ ಮೇಲೆ ವಿಶ್ವಾಸ ಕಳೆದುಕೊಂಡಿರುವ ರೈತರು ತಮ್ಮದೇ ಸುರಕ್ಷತಾ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.
ಬಿಜೆಪಿ-ಆರ್‌ಎಸ್‌ಎಸ್ ಗೂಂಡಾಗಳು ತಮ್ಮ ಹೋರಾಟ ನಾಶ ಮಾಡಲು ಹವಣಿಸುತ್ತಿದ್ದಾರೆ ಎಂಬ ಭಾವನೆ ರೈತರಲ್ಲಿದೆ.

ಸಿಂಘು ಗಡಿಯ ಒಂದು ಭಾಗದಲ್ಲಿ ಸಣ್ಣ ಹಿಂಸಾಚಾರದ ನಂತರ, ಯಾವುದೇ ಅಹಿತಕರ ಘಟನೆಯನ್ನು ತಡೆಗಟ್ಟಲು ಮತ್ತು “ರಾಜಕೀಯ ಏಜೆಂಟರಿಗೆ” ಮತ್ತೆ ಹಿಂಸಾಚಾರವನ್ನು ಪ್ರಚೋದಿಸಲು ಅವಕಾಶ ಸಿಗದಂತೆ ನೋಡಿಕೊಳ್ಳಲು ರೈತರು “ಆಂತರಿಕ ಭದ್ರತೆ” ಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ.

‘ಸ್ಥಳೀಯರ’ ಹೆಸರಿನಲ್ಲಿ ಶುಕ್ರವಾರ ಮೂರು ಹಂತಗಳ ಪೊಲೀಸ್ ಭದ್ರತಾ ಬ್ಯಾರಿಕೇಡ್‌ಗಳನ್ನು ದಾಟಿ ಬಂದು ದುಷ್ಕರ್ಮಿಗಳು ದಾಂಧಲೆ ಮಾಡಿದ ನಂತರ ರೈತರಿಗೆ ಪೊಲೀಸರ ಬಗ್ಗೆ ವಿಶ್ವಾಸವೇ ಹೋಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ದಾಂಧಲೆ ನಡೆದಿದೆ ಎಂದು ರೈತರು ಆರೋಪಿಸುತ್ತಿದ್ದಾರೆ.

‘ನೌಜವಾನ್ ಭಾರತ್ ಸಭಾ ಅಧ್ಯಕ್ಷ ರೂಪಿಂದರ್ ಸಿಂಗ್, “ನಾವು ಮುಖ್ಯ ವೇದಿಕೆಯ ಬಳಿ ಭದ್ರತಾ ಕೊಠಡಿಯನ್ನು ಸ್ಥಾಪಿಸಿದ್ದೇವೆ, ಎಲ್ಲಾ ಸಮಯದಲ್ಲೂ 10 ಜನರು ಅಲ್ಲಿರುತ್ತಾರೆ. ನಾವು ಸ್ವಯಂಸೇವಕರ ಮೂಲಕ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಹೆಚ್ಚಿನ ತಪಾಸಣೆಯ ನಂತರ ಕಡಿಮೆ ಜನರಿಗೆ ವೇದಿಕೆಯ ಬಳಿ ಅವಕಾಶ ನೀಡಲಾಗುತ್ತಿದೆ. ಎಂತಹ ಸಮಯದಲ್ಲೂ ಅಹಿತಕರ ಪರಿಸ್ಥಿತಿ ಸಮಯದಲ್ಲೂ ಪರಿಸ್ಥಿತಿ ನಿಯಂತ್ರಿಸಲು ಯುವ ಘಟಕಗಳಿಗೆ ಸ್ಟ್ಯಾಂಡ್‌ಬೈನಲ್ಲಿ ಉಳಿಯುವಂತೆ ತಿಳಿಸಲಾಗಿದೆ. ನಮ್ಮ ಮೇಲೆ ಪ್ರತಿಭಟನೆ ನಡೆಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಅವಕಾಶ ನೀಡುವುದಿಲ್ಲ’ ಎಂದರು.

ಶನಿವಾರ, ಹೆಚ್ಚಿನ ಸ್ವಯಂಸೇವಕರು ಉದ್ದನೆಯ ಕಟ್ಟಿಗೆ ಮತ್ತು ಬಿದಿರಿನ ಕೋಲುಗಳೊಂದಿಗೆ ತಿರುಗಾಡುತ್ತಿದ್ದರು.. ರೈತರ ಪ್ರಕಾರ, ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ, ರಾತ್ರಿ 8 ರಿಂದ ಬೆಳಿಗ್ಗೆ 8 ರವರೆಗೆ ಎರಡು ಪಾಳಿಯಲ್ಲಿ ಸ್ವಯಂಸೇವಕರು, ಕೆಲಸ ಮಾಡುತ್ತಿದ್ದಾರೆ. ರಾತ್ರಿ ವೇಳೆಯೂ ಪಹರೆ ಕಾಯುತ್ತಾರೆ. ಪ್ರಮುಖ ಪ್ರವೇಶ-ನಿರ್ಗಮನ ಸ್ಥಳಗಳಲ್ಲಿ ಬೀಡುಬಿಟ್ಟಿದ್ದಾರೆ. ಪರಿಶೀಲನೆ ನಡೆಸಲು ಕನಿಷ್ಠ ಐದು ಮಂದಿ ಪ್ರತಿಭಟನೆಯ ಮುಖ್ಯ ಪ್ರವೇಶ ಕೇಂದ್ರದಲ್ಲಿ ನಿಲ್ಲುತ್ತಾರೆ. ವೇದಿಕೆ ಸಮಿತಿಯು ಭಾಷಣಗಳನ್ನು ನಿರ್ವಹಿಸುತ್ತಿದ್ದರೆ, 25 ಜನರ ಹೆಚ್ಚುವರಿ ತಂಡವು ಹತ್ತಿರದಲ್ಲೇ ಜಾಗರೂಕತೆಯನ್ನು ಕಾಯ್ದುಕೊಳ್ಳುತ್ತದೆ.

ಮುಖ್ಯ ವೇದಿಕೆ ಪಕ್ಕದಲ್ಲಿರುವ ಮತ್ತೊಂದು ಟ್ರಾಲಿಯಲ್ಲಿ 10-15 ಸ್ವಯಂಸೇವಕರು ಇದ್ದಾರೆ, ಅವರನ್ನು ಯಾವಾಗಲಾದರೂ ಸಹಾಯಕ್ಕಾಗಿ ಕರೆಯಬಹುದು. ಪ್ರತಿಭಟನಾ ಸ್ಥಳದೊಳಗೆ, ಮೂರು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. “ಬೆದರಿಕೆ” ಸಂಭವಿಸಿದಾಗ ಸ್ವಯಂಸೇವಕರನ್ನು ತಕ್ಷಣವೇ ಎಚ್ಚರಿಸಲು ಎಲ್ಲ ಪ್ರತಿಭಟನಾಕಾರರಿಗೆ ಸಂದೇಶವನ್ನು ಕಳುಹಿಸಲಾಗಿದೆ.
‘ಕನಿಷ್ಠ 1,500 ಜನರು 24 ತಾಸು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ನಾವು ಮೊದಲ ದಿನದಿಂದ ಶಾಂತಿಯುತವಾಗಿದ್ದೇವೆ. ಆದರೂ ಎಷ್ಟೋ ದುಷ್ಟ ಜನರು ಪ್ರತಿಭಟನಾ ಸ್ಥಳ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಗ ನಮ್ಮನ್ನು ರಕ್ಷಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ… ” ಎಂದು ರೂಪಿಂದರ್ ಹೇಳಿದರು.

‘ಶುಕ್ರವಾರದ ಘಟನೆಯ ನಂತರ ಹೆಚ್ಚಿನ ಜಾಗರೂಕತೆ ಅಗತ್ಯ ಎನಿಸಿದೆ’ ಎಂದು ಪಂಜಾಬ್‌ನ ಮೊಗಾ ಜಿಲ್ಲೆಯ ಅಮರ್‌ಜೀತ್ ಸಿಂಗ್ ಹೇಳಿದರು. ರೈತರಿಗೆ ಪೊಲೀಸ್ ಪಡೆಗಳ ಬಗ್ಗೆ ಅಪನಂಬಿಕೆ ಇದೆ. “ನಿನ್ನೆ, ಪೊಲೀಸರು ನಿಂತು ಏನಾಯಿತು ಎಂದು ವೀಕ್ಷಿಸಿದರು. ನಾವು ಅವರನ್ನು ಮತ್ತು ಅವರ ಬ್ಯಾರಿಕೇಡ್‌ಗಳನ್ನು ಅವಲಂಬಿಸಲಾಗುವುದಿಲ್ಲ. ವದಂತಿಗಳಿಗೆ ಯಾರೂ ಬಲಿಯಾಗಬಾರದು ಮತ್ತು ಆತ್ಮರಕ್ಷಣೆಗಾಗಿ ಹೊರತುಪಡಿಸಿ ಅನಗತ್ಯವಾಗಿ ಕ್ರಿಯೆಗೆ ಇಳಿಯಬಾರದು ಎಂದು ಎಲ್ಲರಿಗೂ ಸ್ಪಷ್ಟಪಡಿಸಲಾಗಿದೆ. ನಮ್ಮ ಪ್ರತಿಭಟನೆಯನ್ನು ಹಿಂಸಾತ್ಮಕವಾಗಿ ಚಿತ್ರಿಸಬೇಕೆಂದು ನಾವು ಬಯಸುವುದಿಲ್ಲ” ಎಂದು ಹರಿಯಾಣದ ಅಂಬಾಲಾದ ಸುರಿಂದರ್ ಸಿಂಗ್ ಹೇಳಿದರು, ಅವರು ಮೊದಲಿನಿಂದಲೂ ಪ್ರತಿಭಟನೆಯಲ್ಲಿದ್ದಾರೆ.

ಹರಿಯಾಣದ ಕೈತಾಲ್‌ನ ಜ್ವಾರ್ಮಾಲ್, “ನಾವು ನಮ್ಮ ಪ್ರತಿಭಟನಾ ಸ್ಥಳವನ್ನು ಸುರಕ್ಷಿತವಾಗಿಡಲು ಬಯಸುತ್ತೇವೆ; ನಾವು ಯಾವುದೇ ಹಿಂಸಾಚಾರವನ್ನು ಬಯಸುವುದಿಲ್ಲ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರು ಒಳನುಸುಳುತ್ತಿದ್ದಾರೆ ಮತ್ತು ಜನರನ್ನು ಕೆರಳಿಸುತ್ತಿದ್ದಾರೆ. ಇದನ್ನು ತಡೆಯುತ್ತೇವೆ” ಎಂದರು. ರೈತರ ವೇಷದಲ್ಲಿ ಬಿಜೆಪಿ-ಆರ್‌ಎಸ್‌ಎಸ್‌ಗಳು ಸೇರಿಕೊಂಡು ರೈತರ ತಲೆ ಕೆಡಿಸುವ ಯತ್ನ ಮಾಡುತ್ತಿದ್ದಾರೆ ಎಂಬ ಸಂದೇಹದ ಕಾರಣ ಒಳಬರುವವರನ್ನು ಯಾರು ಎಂದು ಖಚಿತಪಡಿಸಿಕೊಂಡೇ ಒಳಕ್ಕೆ ಬಿಡಲಾಗುತ್ತಿದೆ.

ವೇದಿಕೆಯಿಂದ ಮಾತನಾಡಿದ ಬಿಕೆಯು ನಾಯಕ ಗುರ್ನಮ್ ಸಿಂಗ್ ಚಾದುನಿ ಶುಕ್ರವಾರದ ದಾಳಿಯ ಬಗ್ಗೆ ಸರ್ಕಾರಕ್ಕೆ “ಎಚ್ಚರಿಕೆ” ಕಳುಹಿಸಿದ್ದಾರೆ. “ಅವರು ಈ ಗೂಂಡಾಗಿರಿ ಬಿಡಬೇಕೆಂದು ನಾನು ಈ ಸರ್ಕಾರವನ್ನು ಎಚ್ಚರಿಸಲು ಬಯಸುತ್ತೇನೆ. ಇಲ್ಲಿಗೆ ಬಂದು ದಂಗಾ (ಗಲಭೆ) ಮಾಡುವವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ”ಎಂದರು.

ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ದಬ್ಬಾಳಿಕೆ ನಡೆದರೂ ಈಗ ಹಿಂತಿರುಗುವುದಿಲ್ಲ. “ಪೊಲೀಸರು ನಮ್ಮ ಮೇಲೆ ಮುಗಿಬಿದ್ದರೆ, ಅದು ರಾತ್ರಿ ಅಥವಾ ಬೆಳಿಗ್ಗೆ ಆಗಿರಲಿ, ನಾವು ಬಿಡುವುದಿಲ್ಲ, ನಾವು ಇಲ್ಲೇ ಸಾಯುತ್ತೇವೆ” ಎಂದು ಅವರು ಹೇಳಿದರು. ರೈತರು ಪ್ರತಿಭಟನೆಯನ್ನು ಶಾಂತಿಯುತವಾಗಿ ಮುಂದುವರಿಸಬೇಕು ಎಂದು ಪುನರುಚ್ಚರಿಸಿದರು.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಸರ್ಕಾರದೊಂದಿಗೆ ಮಾತುಕತೆಯ ಬಾಗಿಲು ಮುಚ್ಚುವ ಪ್ರಶ್ನೆಯೇ ಇಲ್ಲ: ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...