Homeಅಂತರಾಷ್ಟ್ರೀಯ8 ಭಾರತೀಯರಿಗೆ ಮರಣದಂಡನೆ: ಕತಾರ್ ದೊರೆ ಜೊತೆ ಮೋದಿ ವಿಷಯ ಪ್ರಸ್ತಾಪಿಸಿಲ್ಲ?

8 ಭಾರತೀಯರಿಗೆ ಮರಣದಂಡನೆ: ಕತಾರ್ ದೊರೆ ಜೊತೆ ಮೋದಿ ವಿಷಯ ಪ್ರಸ್ತಾಪಿಸಿಲ್ಲ?

- Advertisement -
- Advertisement -

ದುಬೈನಲ್ಲಿ ನಡೆದ ವಿಶ್ವಸಂಸ್ಥೆಯ ಕಾನ್ಫರೆನ್ಸ್ ಆಫ್ ಪಾರ್ಟೀಸ್ (ಸಿಒಪಿ-28)ರ ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯ ವೇಳೆ ಕತಾರ್‌ ದೊರೆ ಶೇಖ್ ತಮೀಮ್‌ ಬಿನ್ ಹಮದ್ ಅಲ್ ಥಾನಿ ಅವರನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ಈ ಕುರಿತು ಪ್ರಧಾನ ಮಂತ್ರಿಗಳ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿದೆ. ಆದರೆ ತಮ್ಮ ಭೇಟಿಯ ವೇಳೆ ಇತ್ತೀಚೆಗೆ ಕತಾರ್ ನ್ಯಾಯಾಲಯವು 8 ಭಾರತೀಯರಿಗೆ ಮರಣದಂಡನೆ ಶಿಕ್ಷೆ ವಿಧಿಸಿರುವ ಬಗ್ಗೆ ಮಾತುಕತೆ ನಡೆಸಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಕತಾರ್ ನ್ಯಾಯಾಲಯವು ಎಂಟು ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸಿದ ನಂತರ ಪ್ರಧಾನಿ ಮೋದಿ ಮತ್ತು ಕತಾರ್‌ನ ದೊರೆಯ ಜೊತೆಗಿನ ಮೊದಲ ಭೇಟಿ ಇದಾಗಿದೆ. ಆದರೆ ಪ್ರಧಾನಿ ತಮ್ಮ ಭೇಟಿ ವೇಳೆ ಕತಾರ್ ದೊರೆ ಜೊತೆ ಈ ವಿಷಯದ ಕುರಿತು ಮಾತುಕತೆಯನ್ನು ನಡೆಸಿದ್ದಾರೆಯೇ ಎಂಬುವುದನ್ನು ಸ್ಪಷ್ಟಪಡಿಸಿಲ್ಲ.

ಕಳೆದ ತಿಂಗಳು ಕತಾರ್‌ನ ನ್ಯಾಯಾಲಯವು ಕತಾರ್ ರಕ್ಷಣಾ ಸಿಬ್ಬಂದಿಗೆ ತರಬೇತಿ ನೀಡುವ ಒಮಾನಿ ಕಂಪನಿಯಿಂದ ನೇಮಕಗೊಂಡ ಎಂಟು ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿತು. ಭಾರತದ ಮಾಜಿ ನೌಕಾ ಅಧಿಕಾರಿಗಳ ವಿರುದ್ಧ ಬೇಹುಗಾರಿಕೆಯ ಆರೋಪ ಹೊರಿಸಲಾಗಿತ್ತು. ಕತಾರ್‌ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಕೂಡ ಸಲ್ಲಿಸಲಾಗಿದೆ. ಈ ಬಗ್ಗೆ ಒಂದು ಬಾರಿ ವಿಚಾರಣೆ ಕೂಡ ನಡೆದಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಿಒಪಿ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಿದ್ದರು. ಅಲ್ಲಿ ಅವರು ವಿವಿಧ ದೇಶಗಳ ನಾಯಕರನ್ನು ಭೇಟಿಯಾಗಿದ್ದಾರೆ. ಪ್ರಧಾನಿಯವರ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಫ್ರಾನ್ಸ್, ಇಸ್ರೇಲ್, ಮಾಲ್ಡೀವ್ಸ್, ಸ್ವೀಡನ್, ಸ್ವಿಟ್ಜರ್ಲೆಂಡ್ ಮತ್ತು ಉಜ್ಬೇಕಿಸ್ತಾನ್ ನಾಯಕರೊಂದಿಗಿನ ಮೋದಿ ಚರ್ಚೆ ಮಾಡುವ ಪೋಟೋಗಳನ್ನು ಹಂಚಿಕೊಳ್ಳಲಾಗಿದೆ.

ಮೋದಿ ಅವರು ಕತಾರ್‌ನ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಮಾತನಾಡುತ್ತಿರುವುದು  ತೋರಿಸುವ ವೀಡಿಯೊ ಕ್ಲಿಪ್‌ನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿತ್ತು.

ಭಾರತದ ಪ್ರಧಾನ ಮಂತ್ರಿಗಳ ಅಧಿಕೃತ ಖಾತೆಯಲ್ಲಿCOP ಶೃಂಗಸಭೆ ನಡೆದ ಸುಮಾರು 24 ಗಂಟೆಗಳ ನಂತರ  ಕತಾರ್ ದೊರೆಯ ಜೊತೆ ಮಾತುಕತೆಯ ಕುರಿತು ಪೋಸ್ಟ್ ಮಾಡಲಾಗಿದೆ. ಪೋಸ್ಟ್‌ನಲ್ಲಿ ದ್ವಿಪಕ್ಷೀಯ ಪಾಲುದಾರಿಕೆಯ ಸಾಧ್ಯತೆ ಮತ್ತು ಕತಾರ್‌ನಲ್ಲಿರುವ ಭಾರತೀಯರ ಯೋಗಕ್ಷೇಮದ ಕುರಿತು ಸಕಾರಾತ್ಮಕ ಚರ್ಚೆ ನಡೆಸಿರುವುದಾಗಿ ಮೋದಿ ತಿಳಿಸಿದ್ದಾರೆ. ಆದರೆ ಮೋದಿ ಅವರು ಕತಾರ್‌ ದೊರೆಯೊಂದಿಗೆ ಎಂಟು ಭಾರತೀಯರ ಸಮಸ್ಯೆಯ ಕುರಿತು ಪ್ರಸ್ತಾಪಿಸಿದ್ದಾರೆಯೇ ಎಂಬುದಕ್ಕೆ ಯಾವುದೇ ದೃಢೀಕರಣವಿಲ್ಲ.

ಏನಿದು ಪ್ರಕರಣ?

ಕತಾರ್‌ನ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಏಜೆನ್ಸಿಗಳಿಗೆ ತರಬೇತಿ ನೀಡುವ ಖಾಸಗಿ ಸಂಸ್ಥೆಯಾದ ಅಲ್ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್‌ಗಾಗಿ ಕೆಲಸ ಮಾಡುತ್ತಿದ್ದ ಎಂಟು  ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಕಳೆದ ವರ್ಷದ ಆಗಸ್ಟ್‌ನಲ್ಲಿ ಕತಾರ್‌ ಪೊಲೀಸರು ಬಂಧಿಸಿದ್ದರು. ಬಂಧಿತರ ಮೇಲೆ ಬೇಹುಗಾರಿಕೆಯ ಆರೋಪವನ್ನು ಹೊರಿಸಲಾಗಿದೆ. ಈ 8 ಮಾಜಿ ಅಧಿಕಾರಿಗಳ ಜಾಮೀನು ಅರ್ಜಿಗಳನ್ನು ಹಲವಾರು ಬಾರಿ ತಿರಸ್ಕರಿಸಲಾಗಿದೆ ಮತ್ತು ಅವರ ಬಂಧನವನ್ನು ಕತಾರ್ ಅಧಿಕಾರಿಗಳು ವಿಸ್ತರಿಸಿದ್ದರು. ಬಂಧಿತ ಭಾರತೀಯರಲ್ಲಿ ನಿವೃತ್ತ ಕಮಾಂಡರ್ ಪೂರ್ಣೇಂದು ತಿವಾರಿ ಅವರು ಅಲ್ ದಹ್ರಾ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಸಿದ್ದ ಭಾರತದ ವಿದೇಶಾಂಗ ಸಚಿವಾಲಯ, ನಮಗೆ ಈ 8 ಜನರಿಗೆ ವಿಧಿಸಿರುವ ಶಿಕ್ಷೆಯ ವಿಚಾರವಾಗಿ ಪ್ರಾಥಮಿಕ ಮಾಹಿತಿ ಸಿಕ್ಕಿದೆ. ಮರಣದಂಡನೆ ವಿಧಿಸಲಾಗಿದೆ ಎಂಬುದನ್ನು ತಿಳಿದು ತೀವ್ರ ಆಘಾತವಾಗಿದೆ. ಇವರ ಕುಟುಂಬದ ಸದಸ್ಯರ ಜೊತೆ ಮತ್ತು ಕಾನೂನು ತಂಡದ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿತ್ತು.

ಇದನ್ನು ಓದಿ: ದುಂಡಾ ಜಾತಿ ಹಿಂಸಾಚಾರ: ದಲಿತರಿಗೆ ನ್ಯಾಯ ಒದಗಿಸಲು ವಿಫಲವಾಗಿದ್ದ ಬಿಜೆಪಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...