Homeಮುಖಪುಟವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಇಲ್ಲ: ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ

ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಇಲ್ಲ: ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ

- Advertisement -
- Advertisement -

ಮಾಜಿ ಮುಖ್ಯಮಂತ್ರಿ, ಹಾಲಿ ವಿಪಕ್ಷ ನಾಯಕರಾದ ಸಿದ್ದರಾಮಯ್ಯನವರ ವಿರುದ್ಧ ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂಬ ವದಂತಿಗಳಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತೆರೆ ಎಳೆದಿದ್ದಾರೆ. ತಮ್ಮ ಪುತ್ರ ವಿಜಯೇಂದ್ರ ಶಿಕಾರಿಪುರದಲ್ಲಿ ಮಾತ್ರ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ಪುತ್ರ ಬಿ.ವೈ. ವಿಜಯೇಂದ್ರ ಶಿಕಾರಿಪುರ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುತ್ತಾನೆ. ವರುಣ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧಿಸಬೇಕೆಂದು ಒತ್ತಡ ಇದೆ. ಆದರೆ ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುವುದಿಲ್ಲ. ನನ್ನ ಕ್ಷೇತ್ರ ಶಿಕಾರಿಪುರದಲ್ಲೇ ಸ್ಪರ್ಧಿಸಬೇಕು ಎಂದು ಸೂಚಿಸಿದ್ದೇನೆ. ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ವರುಣ ಕ್ಷೇತ್ರಕ್ಕೆ ಸಿದ್ದರಾಮಯ್ಯನವರ ಹೆಸರನ್ನು ಘೋಷಿಸಲಾಗಿದೆ. ಆ ನಂತರ ಅವರ ಎದುರು ಪ್ರಬಲ ಅಭ್ಯರ್ಥಿ ಹಾಕಲು ವಿಜಯೇಂದ್ರ ಹೆಸರು ಕ್ಷೇತ್ರದಲ್ಲಿ ತೇಲಿಬಂದಿತ್ತು. ಸಿದ್ದರಾಮಯ್ಯನವರು ವರುಣದಲ್ಲಿಯೇ ಹೆಚ್ಚಿನ ಸಮಯ ಕಳೆದು ರಾಜ್ಯದ ಇತರೆಡೆ ಪ್ರಚಾರದಲ್ಲಿ ಭಾಗವಹಿಸದಂತೆ ತಡೆಯಲು ಅಮಿತ್ ಶಾ ಹೆಣೆದ ಪ್ಲಾನ್ ಇದು ಎನ್ನಲಾಗಿತ್ತು.

ಇದುವರೆಗೂ ವಿಜಯೇಂದ್ರರನ್ನು ಎಂಎಲ್‌ಸಿ ಮಾಡಲು ಬಿಜೆಪಿ ಹೈಕಮಾಂಡ್ ಒಪ್ಪಿಲ್ಲ. ಇನ್ನು ಶಿಕಾರಿಪುರದ ಟಿಕೆಟ್ ಸಹ ಫೈನಲ್ ಮಾಡಿಲ್ಲ. ಇದು ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎನ್ನುವ ವಾದಕ್ಕೆ ಪುಷ್ಟಿ ಕೊಡುವಂತಿದೆ. ಇದೇ ಸಂದರ್ಭದಲ್ಲಿ ವಿಜಯೇಂದ್ರರಿಗೆ ಶಿಕಾರಿಪುರದಲ್ಲಿ ಟಿಕೆಟ್ ತಪ್ಪಿಸಿ, ವರುಣದಲ್ಲಿ ತಂದು ನಿಲ್ಲಿಸುವ ಆಲೋಚನೆಯನ್ನು ಅಮಿತ್ ಶಾ ಮಾಡಿದ್ದಾರೆ ಎನ್ನಲಾಗುತ್ತಿತ್ತು. ಒಂದು ವೇಳೆ ವಿಜಯೇಂದ್ರ ಅವರು ಗೆದ್ದರೆ, ಸಿದ್ದರಾಮಯ್ಯನವರನ್ನು ಸೋಲಿಸಿದ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ; ಸೋತರೆ ಇತ್ತ ಶಿಕಾರಿಪುರವೂ ಇಲ್ಲವಾಗುತ್ತದೆ. ಅವರು ಪಕ್ಷದಲ್ಲಿ ಬೆಳೆಯುವುದು ಇಲ್ಲ ಎನ್ನಲಾಗುತ್ತಿತ್ತು. ಅದಕ್ಕೆ ಬಿ.ಎಸ್ ಯಡಿಯೂರಪ್ಪನವರು ಆಸ್ಪದ ನೀಡಿಲ್ಲ.

ಸಿದ್ದರಾಮಯ್ಯನವರ ವಿರುದ್ಧದ ಹೋರಾಟ ಇದೇ ಮೊದಲಲ್ಲ

ರಾಜ್ಯದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿರುವ ಸಿದ್ದರಾಮಯ್ಯನವರನ್ನು ಸೋಲಿಸಲು ಪ್ರತಿ ಚುನಾವಣೆಯಲ್ಲಿ ತಂತ್ರ ರೂಪಿಸಲಾಗುತ್ತಿದೆ. 2013ರಲ್ಲಿಯೂ ಸಹ ಇದೇ ನಡೆದಿತ್ತು. ಕೆಜೆಪಿಯಿಂದ ಸ್ಪರ್ಧಿಸಿದ್ದ ಕಾಪು ಸಿದ್ದಲಿಂಗಸ್ವಾಮಿ ಚುನಾವಣೆಗೂ ಮುನ್ನವೇ ಸಿದ್ದರಾಮಯ್ಯನವರನ್ನು ಸೋಲಿಸಿಯೇ ಬಿಟ್ಟೆ ಎಂಬಂತೆ ವರ್ತಿಸಿದ್ದರು. ಆದರೆ ಫಲಿತಾಂಶ ಬಂದಾಗ ಅವರು 54,744 ಮತಗಳನ್ನು ಪಡೆದರಷ್ಟೇ. 84,385 ಮತಗಳನ್ನು ಪಡೆದ ಸಿದ್ದರಾಮಯ್ಯ 29,641 ಮತಗಳ ಬೃಹತ್‌‌ ಅಂತರದಲ್ಲಿ ಗೆದ್ದು ರಾಜ್ಯದ ಮುಖ್ಯಮಂತ್ರಿಯೂ ಆದರು.

2018ರ ಚುನಾವಣೆಯಲ್ಲಿ ಯತೀಂದ್ರ ಅವರ ವಿರುದ್ಧವಾಗಿ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧಿಸುತ್ತಾರೆಂಬುದು ಭಾರೀ ಪ್ರಚಾರ ಪಡೆಯಿತು. ಲಿಂಗಾಯತರು ಅತಿ ಹೆಚ್ಚಿರುವುದರಿಂದ ಹೈವೋಲ್ಟೇಜ್‌ ಕ್ಷೇತ್ರವಾಗಿ ವರುಣ ಮಾರ್ಪಟ್ಟಿತು. ಆದರೆ ಅಂತಿಮ ಕ್ಷಣಗಳಲ್ಲಿ ವಿಜಯೇಂದ್ರ ಅವರನ್ನು ಕಣಕ್ಕೆ ಇಳಿಸುವ ನಿರ್ಧಾರವನ್ನು ಬಿಜೆಪಿ ಕೈಬಿಟ್ಟಿತು. ತೋಟದಪ್ಪ ಬಸವರಾಜು ಎಂಬವರು ಬಿಜೆಪಿಯಿಂದ ಸ್ಪರ್ಧಿಸಿದರು. ಹೀಗಾಗಿ 96,435 ಮತಗಳನ್ನು ಪಡೆದ ಯತೀಂದ್ರ ಅವರು 58,616 ಅಂತರದಲ್ಲಿ ಭಾರೀ ಗೆಲುವನ್ನು ಪಡೆದರು. ಅಷ್ಟಾಗಿಯೂ ಟಿ.ಬಸವರಾಜು 37,819 ಮತಗಳನ್ನು ಪಡೆದಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿಯವರನ್ನು ಸಂಸತ್ತಿನಿಂದ ಅನರ್ಹಗೊಳಿಸಿದ ಪ್ರಕರಣ; ಹತ್ತು ಗಂಭೀರ ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...