Homeಮುಖಪುಟವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಇಲ್ಲ: ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ

ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಇಲ್ಲ: ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ

- Advertisement -
- Advertisement -

ಮಾಜಿ ಮುಖ್ಯಮಂತ್ರಿ, ಹಾಲಿ ವಿಪಕ್ಷ ನಾಯಕರಾದ ಸಿದ್ದರಾಮಯ್ಯನವರ ವಿರುದ್ಧ ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂಬ ವದಂತಿಗಳಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತೆರೆ ಎಳೆದಿದ್ದಾರೆ. ತಮ್ಮ ಪುತ್ರ ವಿಜಯೇಂದ್ರ ಶಿಕಾರಿಪುರದಲ್ಲಿ ಮಾತ್ರ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ಪುತ್ರ ಬಿ.ವೈ. ವಿಜಯೇಂದ್ರ ಶಿಕಾರಿಪುರ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುತ್ತಾನೆ. ವರುಣ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧಿಸಬೇಕೆಂದು ಒತ್ತಡ ಇದೆ. ಆದರೆ ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುವುದಿಲ್ಲ. ನನ್ನ ಕ್ಷೇತ್ರ ಶಿಕಾರಿಪುರದಲ್ಲೇ ಸ್ಪರ್ಧಿಸಬೇಕು ಎಂದು ಸೂಚಿಸಿದ್ದೇನೆ. ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ವರುಣ ಕ್ಷೇತ್ರಕ್ಕೆ ಸಿದ್ದರಾಮಯ್ಯನವರ ಹೆಸರನ್ನು ಘೋಷಿಸಲಾಗಿದೆ. ಆ ನಂತರ ಅವರ ಎದುರು ಪ್ರಬಲ ಅಭ್ಯರ್ಥಿ ಹಾಕಲು ವಿಜಯೇಂದ್ರ ಹೆಸರು ಕ್ಷೇತ್ರದಲ್ಲಿ ತೇಲಿಬಂದಿತ್ತು. ಸಿದ್ದರಾಮಯ್ಯನವರು ವರುಣದಲ್ಲಿಯೇ ಹೆಚ್ಚಿನ ಸಮಯ ಕಳೆದು ರಾಜ್ಯದ ಇತರೆಡೆ ಪ್ರಚಾರದಲ್ಲಿ ಭಾಗವಹಿಸದಂತೆ ತಡೆಯಲು ಅಮಿತ್ ಶಾ ಹೆಣೆದ ಪ್ಲಾನ್ ಇದು ಎನ್ನಲಾಗಿತ್ತು.

ಇದುವರೆಗೂ ವಿಜಯೇಂದ್ರರನ್ನು ಎಂಎಲ್‌ಸಿ ಮಾಡಲು ಬಿಜೆಪಿ ಹೈಕಮಾಂಡ್ ಒಪ್ಪಿಲ್ಲ. ಇನ್ನು ಶಿಕಾರಿಪುರದ ಟಿಕೆಟ್ ಸಹ ಫೈನಲ್ ಮಾಡಿಲ್ಲ. ಇದು ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎನ್ನುವ ವಾದಕ್ಕೆ ಪುಷ್ಟಿ ಕೊಡುವಂತಿದೆ. ಇದೇ ಸಂದರ್ಭದಲ್ಲಿ ವಿಜಯೇಂದ್ರರಿಗೆ ಶಿಕಾರಿಪುರದಲ್ಲಿ ಟಿಕೆಟ್ ತಪ್ಪಿಸಿ, ವರುಣದಲ್ಲಿ ತಂದು ನಿಲ್ಲಿಸುವ ಆಲೋಚನೆಯನ್ನು ಅಮಿತ್ ಶಾ ಮಾಡಿದ್ದಾರೆ ಎನ್ನಲಾಗುತ್ತಿತ್ತು. ಒಂದು ವೇಳೆ ವಿಜಯೇಂದ್ರ ಅವರು ಗೆದ್ದರೆ, ಸಿದ್ದರಾಮಯ್ಯನವರನ್ನು ಸೋಲಿಸಿದ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ; ಸೋತರೆ ಇತ್ತ ಶಿಕಾರಿಪುರವೂ ಇಲ್ಲವಾಗುತ್ತದೆ. ಅವರು ಪಕ್ಷದಲ್ಲಿ ಬೆಳೆಯುವುದು ಇಲ್ಲ ಎನ್ನಲಾಗುತ್ತಿತ್ತು. ಅದಕ್ಕೆ ಬಿ.ಎಸ್ ಯಡಿಯೂರಪ್ಪನವರು ಆಸ್ಪದ ನೀಡಿಲ್ಲ.

ಸಿದ್ದರಾಮಯ್ಯನವರ ವಿರುದ್ಧದ ಹೋರಾಟ ಇದೇ ಮೊದಲಲ್ಲ

ರಾಜ್ಯದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿರುವ ಸಿದ್ದರಾಮಯ್ಯನವರನ್ನು ಸೋಲಿಸಲು ಪ್ರತಿ ಚುನಾವಣೆಯಲ್ಲಿ ತಂತ್ರ ರೂಪಿಸಲಾಗುತ್ತಿದೆ. 2013ರಲ್ಲಿಯೂ ಸಹ ಇದೇ ನಡೆದಿತ್ತು. ಕೆಜೆಪಿಯಿಂದ ಸ್ಪರ್ಧಿಸಿದ್ದ ಕಾಪು ಸಿದ್ದಲಿಂಗಸ್ವಾಮಿ ಚುನಾವಣೆಗೂ ಮುನ್ನವೇ ಸಿದ್ದರಾಮಯ್ಯನವರನ್ನು ಸೋಲಿಸಿಯೇ ಬಿಟ್ಟೆ ಎಂಬಂತೆ ವರ್ತಿಸಿದ್ದರು. ಆದರೆ ಫಲಿತಾಂಶ ಬಂದಾಗ ಅವರು 54,744 ಮತಗಳನ್ನು ಪಡೆದರಷ್ಟೇ. 84,385 ಮತಗಳನ್ನು ಪಡೆದ ಸಿದ್ದರಾಮಯ್ಯ 29,641 ಮತಗಳ ಬೃಹತ್‌‌ ಅಂತರದಲ್ಲಿ ಗೆದ್ದು ರಾಜ್ಯದ ಮುಖ್ಯಮಂತ್ರಿಯೂ ಆದರು.

2018ರ ಚುನಾವಣೆಯಲ್ಲಿ ಯತೀಂದ್ರ ಅವರ ವಿರುದ್ಧವಾಗಿ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧಿಸುತ್ತಾರೆಂಬುದು ಭಾರೀ ಪ್ರಚಾರ ಪಡೆಯಿತು. ಲಿಂಗಾಯತರು ಅತಿ ಹೆಚ್ಚಿರುವುದರಿಂದ ಹೈವೋಲ್ಟೇಜ್‌ ಕ್ಷೇತ್ರವಾಗಿ ವರುಣ ಮಾರ್ಪಟ್ಟಿತು. ಆದರೆ ಅಂತಿಮ ಕ್ಷಣಗಳಲ್ಲಿ ವಿಜಯೇಂದ್ರ ಅವರನ್ನು ಕಣಕ್ಕೆ ಇಳಿಸುವ ನಿರ್ಧಾರವನ್ನು ಬಿಜೆಪಿ ಕೈಬಿಟ್ಟಿತು. ತೋಟದಪ್ಪ ಬಸವರಾಜು ಎಂಬವರು ಬಿಜೆಪಿಯಿಂದ ಸ್ಪರ್ಧಿಸಿದರು. ಹೀಗಾಗಿ 96,435 ಮತಗಳನ್ನು ಪಡೆದ ಯತೀಂದ್ರ ಅವರು 58,616 ಅಂತರದಲ್ಲಿ ಭಾರೀ ಗೆಲುವನ್ನು ಪಡೆದರು. ಅಷ್ಟಾಗಿಯೂ ಟಿ.ಬಸವರಾಜು 37,819 ಮತಗಳನ್ನು ಪಡೆದಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿಯವರನ್ನು ಸಂಸತ್ತಿನಿಂದ ಅನರ್ಹಗೊಳಿಸಿದ ಪ್ರಕರಣ; ಹತ್ತು ಗಂಭೀರ ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...