Homeಮುಖಪುಟವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಇಲ್ಲ: ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ

ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಇಲ್ಲ: ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ

- Advertisement -
- Advertisement -

ಮಾಜಿ ಮುಖ್ಯಮಂತ್ರಿ, ಹಾಲಿ ವಿಪಕ್ಷ ನಾಯಕರಾದ ಸಿದ್ದರಾಮಯ್ಯನವರ ವಿರುದ್ಧ ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂಬ ವದಂತಿಗಳಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತೆರೆ ಎಳೆದಿದ್ದಾರೆ. ತಮ್ಮ ಪುತ್ರ ವಿಜಯೇಂದ್ರ ಶಿಕಾರಿಪುರದಲ್ಲಿ ಮಾತ್ರ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ಪುತ್ರ ಬಿ.ವೈ. ವಿಜಯೇಂದ್ರ ಶಿಕಾರಿಪುರ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುತ್ತಾನೆ. ವರುಣ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧಿಸಬೇಕೆಂದು ಒತ್ತಡ ಇದೆ. ಆದರೆ ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುವುದಿಲ್ಲ. ನನ್ನ ಕ್ಷೇತ್ರ ಶಿಕಾರಿಪುರದಲ್ಲೇ ಸ್ಪರ್ಧಿಸಬೇಕು ಎಂದು ಸೂಚಿಸಿದ್ದೇನೆ. ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ವರುಣ ಕ್ಷೇತ್ರಕ್ಕೆ ಸಿದ್ದರಾಮಯ್ಯನವರ ಹೆಸರನ್ನು ಘೋಷಿಸಲಾಗಿದೆ. ಆ ನಂತರ ಅವರ ಎದುರು ಪ್ರಬಲ ಅಭ್ಯರ್ಥಿ ಹಾಕಲು ವಿಜಯೇಂದ್ರ ಹೆಸರು ಕ್ಷೇತ್ರದಲ್ಲಿ ತೇಲಿಬಂದಿತ್ತು. ಸಿದ್ದರಾಮಯ್ಯನವರು ವರುಣದಲ್ಲಿಯೇ ಹೆಚ್ಚಿನ ಸಮಯ ಕಳೆದು ರಾಜ್ಯದ ಇತರೆಡೆ ಪ್ರಚಾರದಲ್ಲಿ ಭಾಗವಹಿಸದಂತೆ ತಡೆಯಲು ಅಮಿತ್ ಶಾ ಹೆಣೆದ ಪ್ಲಾನ್ ಇದು ಎನ್ನಲಾಗಿತ್ತು.

ಇದುವರೆಗೂ ವಿಜಯೇಂದ್ರರನ್ನು ಎಂಎಲ್‌ಸಿ ಮಾಡಲು ಬಿಜೆಪಿ ಹೈಕಮಾಂಡ್ ಒಪ್ಪಿಲ್ಲ. ಇನ್ನು ಶಿಕಾರಿಪುರದ ಟಿಕೆಟ್ ಸಹ ಫೈನಲ್ ಮಾಡಿಲ್ಲ. ಇದು ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎನ್ನುವ ವಾದಕ್ಕೆ ಪುಷ್ಟಿ ಕೊಡುವಂತಿದೆ. ಇದೇ ಸಂದರ್ಭದಲ್ಲಿ ವಿಜಯೇಂದ್ರರಿಗೆ ಶಿಕಾರಿಪುರದಲ್ಲಿ ಟಿಕೆಟ್ ತಪ್ಪಿಸಿ, ವರುಣದಲ್ಲಿ ತಂದು ನಿಲ್ಲಿಸುವ ಆಲೋಚನೆಯನ್ನು ಅಮಿತ್ ಶಾ ಮಾಡಿದ್ದಾರೆ ಎನ್ನಲಾಗುತ್ತಿತ್ತು. ಒಂದು ವೇಳೆ ವಿಜಯೇಂದ್ರ ಅವರು ಗೆದ್ದರೆ, ಸಿದ್ದರಾಮಯ್ಯನವರನ್ನು ಸೋಲಿಸಿದ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ; ಸೋತರೆ ಇತ್ತ ಶಿಕಾರಿಪುರವೂ ಇಲ್ಲವಾಗುತ್ತದೆ. ಅವರು ಪಕ್ಷದಲ್ಲಿ ಬೆಳೆಯುವುದು ಇಲ್ಲ ಎನ್ನಲಾಗುತ್ತಿತ್ತು. ಅದಕ್ಕೆ ಬಿ.ಎಸ್ ಯಡಿಯೂರಪ್ಪನವರು ಆಸ್ಪದ ನೀಡಿಲ್ಲ.

ಸಿದ್ದರಾಮಯ್ಯನವರ ವಿರುದ್ಧದ ಹೋರಾಟ ಇದೇ ಮೊದಲಲ್ಲ

ರಾಜ್ಯದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿರುವ ಸಿದ್ದರಾಮಯ್ಯನವರನ್ನು ಸೋಲಿಸಲು ಪ್ರತಿ ಚುನಾವಣೆಯಲ್ಲಿ ತಂತ್ರ ರೂಪಿಸಲಾಗುತ್ತಿದೆ. 2013ರಲ್ಲಿಯೂ ಸಹ ಇದೇ ನಡೆದಿತ್ತು. ಕೆಜೆಪಿಯಿಂದ ಸ್ಪರ್ಧಿಸಿದ್ದ ಕಾಪು ಸಿದ್ದಲಿಂಗಸ್ವಾಮಿ ಚುನಾವಣೆಗೂ ಮುನ್ನವೇ ಸಿದ್ದರಾಮಯ್ಯನವರನ್ನು ಸೋಲಿಸಿಯೇ ಬಿಟ್ಟೆ ಎಂಬಂತೆ ವರ್ತಿಸಿದ್ದರು. ಆದರೆ ಫಲಿತಾಂಶ ಬಂದಾಗ ಅವರು 54,744 ಮತಗಳನ್ನು ಪಡೆದರಷ್ಟೇ. 84,385 ಮತಗಳನ್ನು ಪಡೆದ ಸಿದ್ದರಾಮಯ್ಯ 29,641 ಮತಗಳ ಬೃಹತ್‌‌ ಅಂತರದಲ್ಲಿ ಗೆದ್ದು ರಾಜ್ಯದ ಮುಖ್ಯಮಂತ್ರಿಯೂ ಆದರು.

2018ರ ಚುನಾವಣೆಯಲ್ಲಿ ಯತೀಂದ್ರ ಅವರ ವಿರುದ್ಧವಾಗಿ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧಿಸುತ್ತಾರೆಂಬುದು ಭಾರೀ ಪ್ರಚಾರ ಪಡೆಯಿತು. ಲಿಂಗಾಯತರು ಅತಿ ಹೆಚ್ಚಿರುವುದರಿಂದ ಹೈವೋಲ್ಟೇಜ್‌ ಕ್ಷೇತ್ರವಾಗಿ ವರುಣ ಮಾರ್ಪಟ್ಟಿತು. ಆದರೆ ಅಂತಿಮ ಕ್ಷಣಗಳಲ್ಲಿ ವಿಜಯೇಂದ್ರ ಅವರನ್ನು ಕಣಕ್ಕೆ ಇಳಿಸುವ ನಿರ್ಧಾರವನ್ನು ಬಿಜೆಪಿ ಕೈಬಿಟ್ಟಿತು. ತೋಟದಪ್ಪ ಬಸವರಾಜು ಎಂಬವರು ಬಿಜೆಪಿಯಿಂದ ಸ್ಪರ್ಧಿಸಿದರು. ಹೀಗಾಗಿ 96,435 ಮತಗಳನ್ನು ಪಡೆದ ಯತೀಂದ್ರ ಅವರು 58,616 ಅಂತರದಲ್ಲಿ ಭಾರೀ ಗೆಲುವನ್ನು ಪಡೆದರು. ಅಷ್ಟಾಗಿಯೂ ಟಿ.ಬಸವರಾಜು 37,819 ಮತಗಳನ್ನು ಪಡೆದಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿಯವರನ್ನು ಸಂಸತ್ತಿನಿಂದ ಅನರ್ಹಗೊಳಿಸಿದ ಪ್ರಕರಣ; ಹತ್ತು ಗಂಭೀರ ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...