Homeಮುಖಪುಟಯಾವುದೇ ಶಿಕ್ಷೆಯಾಗಿಲ್ಲ, ಜಾಮೀನೂ ಇಲ್ಲ: ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ಶರ್ಜೀಲ್ ಇಮಾಂ

ಯಾವುದೇ ಶಿಕ್ಷೆಯಾಗಿಲ್ಲ, ಜಾಮೀನೂ ಇಲ್ಲ: ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ಶರ್ಜೀಲ್ ಇಮಾಂ

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು)ದ ಐಐಟಿ ಪದವೀಧರ, ಪಿಹೆಚ್‌ಡಿ ಸಂಶೋಧನಾ ವಿದ್ಯಾರ್ಥಿ ಶರ್ಜೀಲ್‌ ಇಮಾಂ ಜೈಲು ಸೇರಿ ಜನವರಿ 28,2024ಕ್ಕೆ ನಾಲ್ಕು ವರ್ಷ ಭರ್ತಿಯಾಗಿದೆ.

ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ, ದೆಹಲಿ ಮತ್ತು ಉತ್ತರ ಪ್ರದೇಶಗಳ ಪೊಲೀಸರು ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಮಾಡಿದ್ದ ಭಾಷಣಗಳಿಗಾಗಿ ಶರ್ಜೀಲ್ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಿದ ಬಳಿಕ 2020ರಲ್ಲಿ ಅವರನ್ನು ಬಂಧಿಸಲಾಗಿತ್ತು. ಶರ್ಜೀಲ್‌ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಅಡಿ ಕೂಡ ಆರೋಪಗಳನ್ನು ಹೊರಿಸಲಾಗಿದೆ. ದೆಹಲಿ ಗಲಭೆಗಳ ಸಂದರ್ಭ ವ್ಯಾಪಕ ಪಿತೂರಿ ನಡೆಸಿದ ಪ್ರಕರಣದಲ್ಲಿಯೂ ಅವರನ್ನು ಇತ್ತೀಚೆಗೆ ಆರೋಪಿಯನ್ನಾಗಿ ಹೆಸರಿಸಲಾಗಿದೆ.

ಯಾವುದೇ ಪ್ರಕರಣದಲ್ಲಿ ಶಿಕ್ಷೆಯಾಗದಿದ್ದರೂ ಶರ್ಜೀಲ್‌ ಇಮಾಂ ಕಳೆದ ನಾಲ್ಕು ವರ್ಷಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ಅವರ ವಿರುದ್ಧದ ಒಟ್ಟು ಎಂಟು ಪ್ರಕರಣಗಳ ಪೈಕಿ ಐದರಲ್ಲಿ ಜಾಮೀನು ದೊರೆತಿದೆ. ಒಂದು ಪ್ರಕರಣದಲ್ಲಿ ಎಂದಿಗೂ ಪೊಲೀಸರು ಬಂಧಿಸಿಲ್ಲ. ಇನ್ನು ಅವರ ವಿರುದ್ಧದ ಯುಎಪಿಎ ಪ್ರಕರಣಗಳು ಮಾತ್ರ ಬಾಕಿ ಉಳಿದಿವೆ.

ನಾಲ್ಕು ವರ್ಷಗಳಲ್ಲಿ ಶರ್ಜೀಲ್ ಅವರ ಜಾಮೀನು ಅರ್ಜಿಗಳು ದೆಹಲಿಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿವೆ. ಕಳೆದ ವರ್ಷ ಸಲ್ಲಿಸಲಾದ ಒಂದು ಅರ್ಜಿಯಲ್ಲಿ, ಯುಎಪಿಎ ಸೆಕ್ಷನ್ 13 ರ ಅಡಿಯಲ್ಲಿ ಗರಿಷ್ಠ ಶಿಕ್ಷೆಯ ಅರ್ಧಕ್ಕಿಂತ ಹೆಚ್ಚು (ಏಳು ವರ್ಷಗಳು) ಪೂರ್ಣಗೊಳಿಸಿದ್ದೇನೆ. ಈ ಆಧಾರದ ಮೇಲೆ ತಕ್ಷಣ ನನಗೆ ಜಾಮೀನು ನೀಡಿ ಎಂದು ಶರ್ಜೀಲ್‌ ಕೋರಿದ್ದರು.

“ಅವನ ಜೀವನದ ನಾಲ್ಕು ವರ್ಷಗಳು ವ್ಯರ್ಥವಾಯಿತು. ಹೊರಗಿದ್ದರೆ ಹೆಚ್ಚು ಓದಬಹುದಿತ್ತು, ಸಂಶೋಧನೆ ಮಾಡಬಹುದಿತ್ತು. ಅವನು ಇನ್ನೂ ಪಿಹೆಚ್‌ಡಿ ಪೂರ್ಣಗೊಳಿಸಿಲ್ಲ. ಆದರೆ, ಅವನ ಮನೋಬಲ ಕಡಿಮೆಯಾಗಿಲ್ಲ. ಅವನು ನಗುತ್ತಲೇ ಇರುತ್ತಾನೆ ಮತ್ತು ನಮ್ಮ ತಾಯಿಗೆ ಭರವಸೆಯನ್ನು ನೀಡುತ್ತಿರುತ್ತಾನೆ” ಎಂದು ಅವರ ಕಿರಿಯ ಸಹೋದರ ಮುಝಮ್ಮಿಲ್ ತಿಳಿಸಿದ್ದಾಗಿ ದಿ ವೈರ್‌ ವರದಿ ಮಾಡಿದೆ.

“ಜೈಲಿನಲ್ಲಿರುವ ಯಾವುದೇ ಕೈದಿಯ ಕುಟುಂಬಕ್ಕೆ ಸ್ಥಿರತೆಯ ಭಾವನೆ ಕಳೆದುಹೋಗುತ್ತದೆ. ನಮ್ಮ ತಾಯಿಗೆ ನಾವಿಬ್ಬರೇ ಮಕ್ಕಳು. ಆ ಸ್ಥಿರತೆಯ ಭಾವನೆಯು ಕಳೆದ ಬಳಿಕ ಒಂದು ರೀತಿಯಲ್ಲಿ ನಮ್ಮ ಜೀವನವು ಸ್ಥಗಿತಗೊಂಡಿದೆ” ಎಂದು ಮುಝಮ್ಮಿಲ್ ಹೇಳಿದ್ದಾರೆ.

ಬಂಧನದ ನಾಲ್ಕು ವರ್ಷಗಳಲ್ಲಿ ದೆಹಲಿ ಉಚ್ಚ ನ್ಯಾಯಾಲಯವು ಶರ್ಜೀಲ್‌ ಅವರ ಜಾಮೀನು ಅರ್ಜಿಯನ್ನು 46 ಸಲ ವಿಚಾರಣೆಗೆ ಪಟ್ಟಿ ಮಾಡಿತ್ತು. ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದಿನ ತಿಂಗಳಿನಿಂದ ಹೊಸದಾಗಿ ನಡೆಸಲು ಸಜ್ಜಾಗಿದೆ. ಮೊದಲ ಎಫ್‌ಐಆರ್‌ ಅಡಿಯಲ್ಲಿ ಶರ್ಜೀಲ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನೂ ದಿಲ್ಲಿಯ ಕೆಳ ನ್ಯಾಯಾಲಯವು ಮುಂದಿನ ತಿಂಗಳು ಹೊಸದಾಗಿ ಆರಂಭಿಸಲಿದೆ. ಈ ಎಫ್‌ಐಆರ್‌ ಅಡಿ ಶರ್ಜೀಲ್‌ ಅವರ ಭಾಷಣಗಳಿಗೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು.

ಶರ್ಜೀಲ್ ಬಂಧನವಾದಾಗ ಜಾಮೀನು ಸಿಗಲು ಬಹುಶಃ ಎರಡು ವರ್ಷ ಹೋಗಬಹುದು ಎಂದು ನಾವು ಭಾವಿಸಿದ್ದೆವು. ಆದರೆ, ಇಷ್ಟೊಂದು ವರ್ಷಗಳ ಕಾಲ ಎಳೆಯುತ್ತದೆ ಎಂದು ನಾವು ಭಾವಿಸಿರಲಿಲ್ಲ. ಈಶಾನ್ಯ ದೆಹಲಿ ಗಲಭೆಗಳು ಶರ್ಜೀಲ್ ಬಂಧನದ ಬಳಿಕ ನಡೆದಿದ್ದವು. ಆದರೂ, ವಿನಾಕಾರಣ ಆತನನ್ನು ಆ ಪ್ರಕರಣದಲ್ಲಿ ಸಿಲುಕಿಸಲಾಗಿದೆ” ಎಂದು ಸಹೋದರ ಮುಝಮ್ಮಿಲ್ ಹೇಳಿದ್ದಾರೆ.

ಯುಎಪಿಎ ಪ್ರಕರಣದಲ್ಲಿ ತಕ್ಷಣ ಜಾಮೀನು ಕೋರಿ ಶರ್ಜೀಲ್ ಅರ್ಜಿ ಸಲ್ಲಿಸಿ ನಾಲ್ಕು ತಿಂಗಳುಗಳು ಕಳೆದಿವೆ. ಅವರು ಅರ್ಧಕ್ಕೂ ಹೆಚ್ಚಿನ ಶಿಕ್ಷೆಯ ಅವಧಿಯನ್ನು ಪೂರ್ಣಗೊಳಿಸಿರುವುದರಿಂದ ಶಾಸನಬದ್ಧ ಜಾಮೀನಿಗೆ ಅರ್ಹರಾಗಿದ್ದಾರೆ. ಆದರೂ, ಅವರಿಗೆ ಈವರೆಗೆ ಜಾಮೀನು ಮಂಜೂರಾಗಿಲ್ಲ. ಅರ್ಜಿಯ ವಿಚಾರಣೆಯನ್ನು ನಡೆಸುತ್ತಿದ್ದ ನ್ಯಾಯಾಧೀಶರು ಕಳೆದ ಡಿಸೆಂಬರ್‌ನಲ್ಲಿ ವರ್ಗಾವಣೆಗೊಂಡಿದ್ದಾರೆ. ಈಗ ಇನ್ನೋರ್ವ ನ್ಯಾಯಾಧೀಶರ ಎದುರು ಫೆ.7ಕ್ಕೆ ವಿಷಯವನ್ನು ಪಟ್ಟಿ ಮಾಡಲಾಗಿದೆ. ಅವರು ಹೊಸದಾಗಿ ಅದನ್ನು ಪರಿಗಣಿಸಿ ಬಳಿಕ ಆದೇಶವನ್ನು ಹೊರಡಿಸಲಿದ್ದಾರೆ ಎಂದು ಶರ್ಜೀಲ್ ಪರ ವಕೀಲ ಇಬ್ರಾಹಿಂ ತಿಳಿಸಿದ್ದಾರೆ.

ಇತ್ತೀಚಿನ ವರದಿ ಪ್ರಕಾರ, ದೇಶದ್ರೋಹ ಪ್ರಕರಣದಲ್ಲಿ ಶರ್ಜೀಲ್‌ ಇಮಾಮ್ ಅವರ ಶಾಸನಬದ್ಧ ಜಾಮೀನು ಅರ್ಜಿಯನ್ನು ಫೆಬ್ರವರಿ 17 ರೊಳಗೆ ನಿರ್ಧರಿಸುವಂತೆ ದೆಹಲಿ ಹೈಕೋರ್ಟ್ (ಜ.31) ಮಂಗಳವಾರ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಮತ್ತು ಮನೋಜ್ ಜೈನ್ ಅವರ ಪೀಠವು ಫೆಬ್ರವರಿ 7 ರಂದು ಮುಂದಿನ ವಿಚಾರಣೆಯ ನಂತರ 10 ದಿನಗಳಲ್ಲಿ ಶರ್ಜೀಲ್‌ ಅವರ ಮನವಿಯ ತೀರ್ಪು ಪ್ರಕಟಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.

ಶರ್ಜೀಲ್ ಸಲ್ಲಿಸಿರುವ ಜಾಮೀನು ಅರ್ಜಿಗಳನ್ನು ಇತ್ಯರ್ಥಗೊಳಿಸುವಲ್ಲಿ ನ್ಯಾಯಾಂಗದಿಂದ ತುಂಬ ವಿಳಂಬವಾಗಿದೆ. ಇದು ದುರಂತ. ಯಾವುದೇ ಜಾಮೀನು ಅರ್ಜಿಯು ಎರಡು ವರ್ಷಕ್ಕಿಂತ ಹೆಚ್ಚು ಅವಧಿಗೆ ಬಾಕಿಯಾಗಬಾರದು. ಆರೋಪಿಯು ಜಾಮೀನಿಗೆ ಅರ್ಹನಲ್ಲ ಎಂದು ನೀವು ಭಾವಿಸಿದ್ದರೆ ಅರ್ಜಿಯನ್ನು ವಜಾಗೊಳಿಸಿ, ಆಗ ಆರೋಪಿಯು ಸರ್ವೋಚ್ಚ ನ್ಯಾಯಾಲಯದಲ್ಲಿ ಅಥವಾ ಮೇಲಿನ ನ್ಯಾಯಾಲಯದಲ್ಲಿ ತನ್ನ ಅದೃಷ್ಟವನ್ನು ಪರೀಕ್ಷಿಸಬಹುದು. ಆದರೆ ಜಾಮೀನು ಅರ್ಜಿಯನ್ನು ಇಷ್ಟೊಂದು ದೀರ್ಘಕಾಲ ಬಾಕಿಯಿರಿಸುವುದು ಕ್ರಿಮಿನಲ್ ನ್ಯಾಯಶಾಸ್ತ್ರದಿಂದ ಎಲ್ಲ ನೀರೀಕ್ಷೆಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ ಇಬ್ರಾಹಿಂ, ನ್ಯಾಯಾಂಗವು ಸರ್ಕಾದ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದೆ ಎನ್ನುವುದನ್ನು ಈ ವಿಳಂಬಗಳು ತೋರಿಸುತ್ತಿವೆ ಎಂದಿದ್ದಾರೆ.

ಉಮರ್‌ ಖಾಲಿದ್ ಅವರಂತೆ ಇತರ ರಾಜಕೀಯ ಕೈದಿಗಳಂತೆ ಶರ್ಜೀಲ್‌ಗೆ ನಾಗರಿಕ ಸಮಾಜದ ಗುಂಪುಗಳು ಮತ್ತು ಪ್ರಮುಖ ರಾಜಕೀಯ ಕಾರ್ಯಕರ್ತರಿಂದ ಬೆಂಬಲ ದೊರೆತಿಲ್ಲ. ಜೈಲಿನಲ್ಲಿ ಶರ್ಜೀಲ್ ಕಾನೂನನ್ನು ಅಧ್ಯಯನ ಮಾಡಲು ಕಾನೂನು ಪುಸ್ತಕಗಳನ್ನು ಓದುತ್ತಿದ್ದಾನೆ. ಕಾನೂನು ಸಹಾಯ ಸಿಗದ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಸಹಾಯ ಮಾಡಲು ಅವನು ಪ್ರಯತ್ನಿಸುತ್ತಿದ್ದಾನೆ ಎಂದು ಮುಝಮ್ಮಿಲ್ ಹೇಳಿದ್ದಾರೆ.

“ಒಂದು ದಿನ ಅವನು ಹೊರಬರುತ್ತಾನೆ ಎಂದು ಭರವಸೆ ಇಡುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ.ಅವನದ ಜೀವನದ ಅಮೂಲ್ಯ ವರ್ಷಗಳು ವ್ಯರ್ಥವಾಗುತ್ತಿವೆ ಅಷ್ಟೇ. ಅವರು ಜಾಮೀನು ಮುಂದೂಡುತ್ತಲೇ ಇರಬಹುದು. ಆದರೆ, ಎಷ್ಟು ದಿನ ಜೈಲಿನಲ್ಲಿ ಇಡುತ್ತಾರೆ? ‘ಹರ್ ಉರೂಜ್ ಕಾ ಝವಾಲ್ ದೇಖನಾ ಹೋತಾ ಹೈ (ಪ್ರತಿಯೊಂದು ಏರಿಕೆಗೂ ಪತನವಿದೆ) ಎಂಬ ಗಾದೆಯಂತೆ ಇದು ನಮಗೂ ಅವರಿಗೂ ನಿಜವಾಗಲಿದೆ’ಎಂದು ಮುಝಮ್ಮಿಲ್ ಬೇಸರ ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಕೇರಳ: ರಂಜಿತ್‌ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...