Homeಮುಖಪುಟಯಾವುದೇ ಶಿಕ್ಷೆಯಾಗಿಲ್ಲ, ಜಾಮೀನೂ ಇಲ್ಲ: ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ಶರ್ಜೀಲ್ ಇಮಾಂ

ಯಾವುದೇ ಶಿಕ್ಷೆಯಾಗಿಲ್ಲ, ಜಾಮೀನೂ ಇಲ್ಲ: ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ಶರ್ಜೀಲ್ ಇಮಾಂ

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು)ದ ಐಐಟಿ ಪದವೀಧರ, ಪಿಹೆಚ್‌ಡಿ ಸಂಶೋಧನಾ ವಿದ್ಯಾರ್ಥಿ ಶರ್ಜೀಲ್‌ ಇಮಾಂ ಜೈಲು ಸೇರಿ ಜನವರಿ 28,2024ಕ್ಕೆ ನಾಲ್ಕು ವರ್ಷ ಭರ್ತಿಯಾಗಿದೆ.

ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ, ದೆಹಲಿ ಮತ್ತು ಉತ್ತರ ಪ್ರದೇಶಗಳ ಪೊಲೀಸರು ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಮಾಡಿದ್ದ ಭಾಷಣಗಳಿಗಾಗಿ ಶರ್ಜೀಲ್ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಿದ ಬಳಿಕ 2020ರಲ್ಲಿ ಅವರನ್ನು ಬಂಧಿಸಲಾಗಿತ್ತು. ಶರ್ಜೀಲ್‌ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಅಡಿ ಕೂಡ ಆರೋಪಗಳನ್ನು ಹೊರಿಸಲಾಗಿದೆ. ದೆಹಲಿ ಗಲಭೆಗಳ ಸಂದರ್ಭ ವ್ಯಾಪಕ ಪಿತೂರಿ ನಡೆಸಿದ ಪ್ರಕರಣದಲ್ಲಿಯೂ ಅವರನ್ನು ಇತ್ತೀಚೆಗೆ ಆರೋಪಿಯನ್ನಾಗಿ ಹೆಸರಿಸಲಾಗಿದೆ.

ಯಾವುದೇ ಪ್ರಕರಣದಲ್ಲಿ ಶಿಕ್ಷೆಯಾಗದಿದ್ದರೂ ಶರ್ಜೀಲ್‌ ಇಮಾಂ ಕಳೆದ ನಾಲ್ಕು ವರ್ಷಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ಅವರ ವಿರುದ್ಧದ ಒಟ್ಟು ಎಂಟು ಪ್ರಕರಣಗಳ ಪೈಕಿ ಐದರಲ್ಲಿ ಜಾಮೀನು ದೊರೆತಿದೆ. ಒಂದು ಪ್ರಕರಣದಲ್ಲಿ ಎಂದಿಗೂ ಪೊಲೀಸರು ಬಂಧಿಸಿಲ್ಲ. ಇನ್ನು ಅವರ ವಿರುದ್ಧದ ಯುಎಪಿಎ ಪ್ರಕರಣಗಳು ಮಾತ್ರ ಬಾಕಿ ಉಳಿದಿವೆ.

ನಾಲ್ಕು ವರ್ಷಗಳಲ್ಲಿ ಶರ್ಜೀಲ್ ಅವರ ಜಾಮೀನು ಅರ್ಜಿಗಳು ದೆಹಲಿಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿವೆ. ಕಳೆದ ವರ್ಷ ಸಲ್ಲಿಸಲಾದ ಒಂದು ಅರ್ಜಿಯಲ್ಲಿ, ಯುಎಪಿಎ ಸೆಕ್ಷನ್ 13 ರ ಅಡಿಯಲ್ಲಿ ಗರಿಷ್ಠ ಶಿಕ್ಷೆಯ ಅರ್ಧಕ್ಕಿಂತ ಹೆಚ್ಚು (ಏಳು ವರ್ಷಗಳು) ಪೂರ್ಣಗೊಳಿಸಿದ್ದೇನೆ. ಈ ಆಧಾರದ ಮೇಲೆ ತಕ್ಷಣ ನನಗೆ ಜಾಮೀನು ನೀಡಿ ಎಂದು ಶರ್ಜೀಲ್‌ ಕೋರಿದ್ದರು.

“ಅವನ ಜೀವನದ ನಾಲ್ಕು ವರ್ಷಗಳು ವ್ಯರ್ಥವಾಯಿತು. ಹೊರಗಿದ್ದರೆ ಹೆಚ್ಚು ಓದಬಹುದಿತ್ತು, ಸಂಶೋಧನೆ ಮಾಡಬಹುದಿತ್ತು. ಅವನು ಇನ್ನೂ ಪಿಹೆಚ್‌ಡಿ ಪೂರ್ಣಗೊಳಿಸಿಲ್ಲ. ಆದರೆ, ಅವನ ಮನೋಬಲ ಕಡಿಮೆಯಾಗಿಲ್ಲ. ಅವನು ನಗುತ್ತಲೇ ಇರುತ್ತಾನೆ ಮತ್ತು ನಮ್ಮ ತಾಯಿಗೆ ಭರವಸೆಯನ್ನು ನೀಡುತ್ತಿರುತ್ತಾನೆ” ಎಂದು ಅವರ ಕಿರಿಯ ಸಹೋದರ ಮುಝಮ್ಮಿಲ್ ತಿಳಿಸಿದ್ದಾಗಿ ದಿ ವೈರ್‌ ವರದಿ ಮಾಡಿದೆ.

“ಜೈಲಿನಲ್ಲಿರುವ ಯಾವುದೇ ಕೈದಿಯ ಕುಟುಂಬಕ್ಕೆ ಸ್ಥಿರತೆಯ ಭಾವನೆ ಕಳೆದುಹೋಗುತ್ತದೆ. ನಮ್ಮ ತಾಯಿಗೆ ನಾವಿಬ್ಬರೇ ಮಕ್ಕಳು. ಆ ಸ್ಥಿರತೆಯ ಭಾವನೆಯು ಕಳೆದ ಬಳಿಕ ಒಂದು ರೀತಿಯಲ್ಲಿ ನಮ್ಮ ಜೀವನವು ಸ್ಥಗಿತಗೊಂಡಿದೆ” ಎಂದು ಮುಝಮ್ಮಿಲ್ ಹೇಳಿದ್ದಾರೆ.

ಬಂಧನದ ನಾಲ್ಕು ವರ್ಷಗಳಲ್ಲಿ ದೆಹಲಿ ಉಚ್ಚ ನ್ಯಾಯಾಲಯವು ಶರ್ಜೀಲ್‌ ಅವರ ಜಾಮೀನು ಅರ್ಜಿಯನ್ನು 46 ಸಲ ವಿಚಾರಣೆಗೆ ಪಟ್ಟಿ ಮಾಡಿತ್ತು. ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದಿನ ತಿಂಗಳಿನಿಂದ ಹೊಸದಾಗಿ ನಡೆಸಲು ಸಜ್ಜಾಗಿದೆ. ಮೊದಲ ಎಫ್‌ಐಆರ್‌ ಅಡಿಯಲ್ಲಿ ಶರ್ಜೀಲ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನೂ ದಿಲ್ಲಿಯ ಕೆಳ ನ್ಯಾಯಾಲಯವು ಮುಂದಿನ ತಿಂಗಳು ಹೊಸದಾಗಿ ಆರಂಭಿಸಲಿದೆ. ಈ ಎಫ್‌ಐಆರ್‌ ಅಡಿ ಶರ್ಜೀಲ್‌ ಅವರ ಭಾಷಣಗಳಿಗೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು.

ಶರ್ಜೀಲ್ ಬಂಧನವಾದಾಗ ಜಾಮೀನು ಸಿಗಲು ಬಹುಶಃ ಎರಡು ವರ್ಷ ಹೋಗಬಹುದು ಎಂದು ನಾವು ಭಾವಿಸಿದ್ದೆವು. ಆದರೆ, ಇಷ್ಟೊಂದು ವರ್ಷಗಳ ಕಾಲ ಎಳೆಯುತ್ತದೆ ಎಂದು ನಾವು ಭಾವಿಸಿರಲಿಲ್ಲ. ಈಶಾನ್ಯ ದೆಹಲಿ ಗಲಭೆಗಳು ಶರ್ಜೀಲ್ ಬಂಧನದ ಬಳಿಕ ನಡೆದಿದ್ದವು. ಆದರೂ, ವಿನಾಕಾರಣ ಆತನನ್ನು ಆ ಪ್ರಕರಣದಲ್ಲಿ ಸಿಲುಕಿಸಲಾಗಿದೆ” ಎಂದು ಸಹೋದರ ಮುಝಮ್ಮಿಲ್ ಹೇಳಿದ್ದಾರೆ.

ಯುಎಪಿಎ ಪ್ರಕರಣದಲ್ಲಿ ತಕ್ಷಣ ಜಾಮೀನು ಕೋರಿ ಶರ್ಜೀಲ್ ಅರ್ಜಿ ಸಲ್ಲಿಸಿ ನಾಲ್ಕು ತಿಂಗಳುಗಳು ಕಳೆದಿವೆ. ಅವರು ಅರ್ಧಕ್ಕೂ ಹೆಚ್ಚಿನ ಶಿಕ್ಷೆಯ ಅವಧಿಯನ್ನು ಪೂರ್ಣಗೊಳಿಸಿರುವುದರಿಂದ ಶಾಸನಬದ್ಧ ಜಾಮೀನಿಗೆ ಅರ್ಹರಾಗಿದ್ದಾರೆ. ಆದರೂ, ಅವರಿಗೆ ಈವರೆಗೆ ಜಾಮೀನು ಮಂಜೂರಾಗಿಲ್ಲ. ಅರ್ಜಿಯ ವಿಚಾರಣೆಯನ್ನು ನಡೆಸುತ್ತಿದ್ದ ನ್ಯಾಯಾಧೀಶರು ಕಳೆದ ಡಿಸೆಂಬರ್‌ನಲ್ಲಿ ವರ್ಗಾವಣೆಗೊಂಡಿದ್ದಾರೆ. ಈಗ ಇನ್ನೋರ್ವ ನ್ಯಾಯಾಧೀಶರ ಎದುರು ಫೆ.7ಕ್ಕೆ ವಿಷಯವನ್ನು ಪಟ್ಟಿ ಮಾಡಲಾಗಿದೆ. ಅವರು ಹೊಸದಾಗಿ ಅದನ್ನು ಪರಿಗಣಿಸಿ ಬಳಿಕ ಆದೇಶವನ್ನು ಹೊರಡಿಸಲಿದ್ದಾರೆ ಎಂದು ಶರ್ಜೀಲ್ ಪರ ವಕೀಲ ಇಬ್ರಾಹಿಂ ತಿಳಿಸಿದ್ದಾರೆ.

ಇತ್ತೀಚಿನ ವರದಿ ಪ್ರಕಾರ, ದೇಶದ್ರೋಹ ಪ್ರಕರಣದಲ್ಲಿ ಶರ್ಜೀಲ್‌ ಇಮಾಮ್ ಅವರ ಶಾಸನಬದ್ಧ ಜಾಮೀನು ಅರ್ಜಿಯನ್ನು ಫೆಬ್ರವರಿ 17 ರೊಳಗೆ ನಿರ್ಧರಿಸುವಂತೆ ದೆಹಲಿ ಹೈಕೋರ್ಟ್ (ಜ.31) ಮಂಗಳವಾರ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಮತ್ತು ಮನೋಜ್ ಜೈನ್ ಅವರ ಪೀಠವು ಫೆಬ್ರವರಿ 7 ರಂದು ಮುಂದಿನ ವಿಚಾರಣೆಯ ನಂತರ 10 ದಿನಗಳಲ್ಲಿ ಶರ್ಜೀಲ್‌ ಅವರ ಮನವಿಯ ತೀರ್ಪು ಪ್ರಕಟಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.

ಶರ್ಜೀಲ್ ಸಲ್ಲಿಸಿರುವ ಜಾಮೀನು ಅರ್ಜಿಗಳನ್ನು ಇತ್ಯರ್ಥಗೊಳಿಸುವಲ್ಲಿ ನ್ಯಾಯಾಂಗದಿಂದ ತುಂಬ ವಿಳಂಬವಾಗಿದೆ. ಇದು ದುರಂತ. ಯಾವುದೇ ಜಾಮೀನು ಅರ್ಜಿಯು ಎರಡು ವರ್ಷಕ್ಕಿಂತ ಹೆಚ್ಚು ಅವಧಿಗೆ ಬಾಕಿಯಾಗಬಾರದು. ಆರೋಪಿಯು ಜಾಮೀನಿಗೆ ಅರ್ಹನಲ್ಲ ಎಂದು ನೀವು ಭಾವಿಸಿದ್ದರೆ ಅರ್ಜಿಯನ್ನು ವಜಾಗೊಳಿಸಿ, ಆಗ ಆರೋಪಿಯು ಸರ್ವೋಚ್ಚ ನ್ಯಾಯಾಲಯದಲ್ಲಿ ಅಥವಾ ಮೇಲಿನ ನ್ಯಾಯಾಲಯದಲ್ಲಿ ತನ್ನ ಅದೃಷ್ಟವನ್ನು ಪರೀಕ್ಷಿಸಬಹುದು. ಆದರೆ ಜಾಮೀನು ಅರ್ಜಿಯನ್ನು ಇಷ್ಟೊಂದು ದೀರ್ಘಕಾಲ ಬಾಕಿಯಿರಿಸುವುದು ಕ್ರಿಮಿನಲ್ ನ್ಯಾಯಶಾಸ್ತ್ರದಿಂದ ಎಲ್ಲ ನೀರೀಕ್ಷೆಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ ಇಬ್ರಾಹಿಂ, ನ್ಯಾಯಾಂಗವು ಸರ್ಕಾದ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದೆ ಎನ್ನುವುದನ್ನು ಈ ವಿಳಂಬಗಳು ತೋರಿಸುತ್ತಿವೆ ಎಂದಿದ್ದಾರೆ.

ಉಮರ್‌ ಖಾಲಿದ್ ಅವರಂತೆ ಇತರ ರಾಜಕೀಯ ಕೈದಿಗಳಂತೆ ಶರ್ಜೀಲ್‌ಗೆ ನಾಗರಿಕ ಸಮಾಜದ ಗುಂಪುಗಳು ಮತ್ತು ಪ್ರಮುಖ ರಾಜಕೀಯ ಕಾರ್ಯಕರ್ತರಿಂದ ಬೆಂಬಲ ದೊರೆತಿಲ್ಲ. ಜೈಲಿನಲ್ಲಿ ಶರ್ಜೀಲ್ ಕಾನೂನನ್ನು ಅಧ್ಯಯನ ಮಾಡಲು ಕಾನೂನು ಪುಸ್ತಕಗಳನ್ನು ಓದುತ್ತಿದ್ದಾನೆ. ಕಾನೂನು ಸಹಾಯ ಸಿಗದ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಸಹಾಯ ಮಾಡಲು ಅವನು ಪ್ರಯತ್ನಿಸುತ್ತಿದ್ದಾನೆ ಎಂದು ಮುಝಮ್ಮಿಲ್ ಹೇಳಿದ್ದಾರೆ.

“ಒಂದು ದಿನ ಅವನು ಹೊರಬರುತ್ತಾನೆ ಎಂದು ಭರವಸೆ ಇಡುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ.ಅವನದ ಜೀವನದ ಅಮೂಲ್ಯ ವರ್ಷಗಳು ವ್ಯರ್ಥವಾಗುತ್ತಿವೆ ಅಷ್ಟೇ. ಅವರು ಜಾಮೀನು ಮುಂದೂಡುತ್ತಲೇ ಇರಬಹುದು. ಆದರೆ, ಎಷ್ಟು ದಿನ ಜೈಲಿನಲ್ಲಿ ಇಡುತ್ತಾರೆ? ‘ಹರ್ ಉರೂಜ್ ಕಾ ಝವಾಲ್ ದೇಖನಾ ಹೋತಾ ಹೈ (ಪ್ರತಿಯೊಂದು ಏರಿಕೆಗೂ ಪತನವಿದೆ) ಎಂಬ ಗಾದೆಯಂತೆ ಇದು ನಮಗೂ ಅವರಿಗೂ ನಿಜವಾಗಲಿದೆ’ಎಂದು ಮುಝಮ್ಮಿಲ್ ಬೇಸರ ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಕೇರಳ: ರಂಜಿತ್‌ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...