Homeಮುಖಪುಟಯಾವುದೇ ಶಿಕ್ಷೆಯಾಗಿಲ್ಲ, ಜಾಮೀನೂ ಇಲ್ಲ: ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ಶರ್ಜೀಲ್ ಇಮಾಂ

ಯಾವುದೇ ಶಿಕ್ಷೆಯಾಗಿಲ್ಲ, ಜಾಮೀನೂ ಇಲ್ಲ: ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ಶರ್ಜೀಲ್ ಇಮಾಂ

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು)ದ ಐಐಟಿ ಪದವೀಧರ, ಪಿಹೆಚ್‌ಡಿ ಸಂಶೋಧನಾ ವಿದ್ಯಾರ್ಥಿ ಶರ್ಜೀಲ್‌ ಇಮಾಂ ಜೈಲು ಸೇರಿ ಜನವರಿ 28,2024ಕ್ಕೆ ನಾಲ್ಕು ವರ್ಷ ಭರ್ತಿಯಾಗಿದೆ.

ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ, ದೆಹಲಿ ಮತ್ತು ಉತ್ತರ ಪ್ರದೇಶಗಳ ಪೊಲೀಸರು ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಮಾಡಿದ್ದ ಭಾಷಣಗಳಿಗಾಗಿ ಶರ್ಜೀಲ್ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಿದ ಬಳಿಕ 2020ರಲ್ಲಿ ಅವರನ್ನು ಬಂಧಿಸಲಾಗಿತ್ತು. ಶರ್ಜೀಲ್‌ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಅಡಿ ಕೂಡ ಆರೋಪಗಳನ್ನು ಹೊರಿಸಲಾಗಿದೆ. ದೆಹಲಿ ಗಲಭೆಗಳ ಸಂದರ್ಭ ವ್ಯಾಪಕ ಪಿತೂರಿ ನಡೆಸಿದ ಪ್ರಕರಣದಲ್ಲಿಯೂ ಅವರನ್ನು ಇತ್ತೀಚೆಗೆ ಆರೋಪಿಯನ್ನಾಗಿ ಹೆಸರಿಸಲಾಗಿದೆ.

ಯಾವುದೇ ಪ್ರಕರಣದಲ್ಲಿ ಶಿಕ್ಷೆಯಾಗದಿದ್ದರೂ ಶರ್ಜೀಲ್‌ ಇಮಾಂ ಕಳೆದ ನಾಲ್ಕು ವರ್ಷಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ಅವರ ವಿರುದ್ಧದ ಒಟ್ಟು ಎಂಟು ಪ್ರಕರಣಗಳ ಪೈಕಿ ಐದರಲ್ಲಿ ಜಾಮೀನು ದೊರೆತಿದೆ. ಒಂದು ಪ್ರಕರಣದಲ್ಲಿ ಎಂದಿಗೂ ಪೊಲೀಸರು ಬಂಧಿಸಿಲ್ಲ. ಇನ್ನು ಅವರ ವಿರುದ್ಧದ ಯುಎಪಿಎ ಪ್ರಕರಣಗಳು ಮಾತ್ರ ಬಾಕಿ ಉಳಿದಿವೆ.

ನಾಲ್ಕು ವರ್ಷಗಳಲ್ಲಿ ಶರ್ಜೀಲ್ ಅವರ ಜಾಮೀನು ಅರ್ಜಿಗಳು ದೆಹಲಿಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿವೆ. ಕಳೆದ ವರ್ಷ ಸಲ್ಲಿಸಲಾದ ಒಂದು ಅರ್ಜಿಯಲ್ಲಿ, ಯುಎಪಿಎ ಸೆಕ್ಷನ್ 13 ರ ಅಡಿಯಲ್ಲಿ ಗರಿಷ್ಠ ಶಿಕ್ಷೆಯ ಅರ್ಧಕ್ಕಿಂತ ಹೆಚ್ಚು (ಏಳು ವರ್ಷಗಳು) ಪೂರ್ಣಗೊಳಿಸಿದ್ದೇನೆ. ಈ ಆಧಾರದ ಮೇಲೆ ತಕ್ಷಣ ನನಗೆ ಜಾಮೀನು ನೀಡಿ ಎಂದು ಶರ್ಜೀಲ್‌ ಕೋರಿದ್ದರು.

“ಅವನ ಜೀವನದ ನಾಲ್ಕು ವರ್ಷಗಳು ವ್ಯರ್ಥವಾಯಿತು. ಹೊರಗಿದ್ದರೆ ಹೆಚ್ಚು ಓದಬಹುದಿತ್ತು, ಸಂಶೋಧನೆ ಮಾಡಬಹುದಿತ್ತು. ಅವನು ಇನ್ನೂ ಪಿಹೆಚ್‌ಡಿ ಪೂರ್ಣಗೊಳಿಸಿಲ್ಲ. ಆದರೆ, ಅವನ ಮನೋಬಲ ಕಡಿಮೆಯಾಗಿಲ್ಲ. ಅವನು ನಗುತ್ತಲೇ ಇರುತ್ತಾನೆ ಮತ್ತು ನಮ್ಮ ತಾಯಿಗೆ ಭರವಸೆಯನ್ನು ನೀಡುತ್ತಿರುತ್ತಾನೆ” ಎಂದು ಅವರ ಕಿರಿಯ ಸಹೋದರ ಮುಝಮ್ಮಿಲ್ ತಿಳಿಸಿದ್ದಾಗಿ ದಿ ವೈರ್‌ ವರದಿ ಮಾಡಿದೆ.

“ಜೈಲಿನಲ್ಲಿರುವ ಯಾವುದೇ ಕೈದಿಯ ಕುಟುಂಬಕ್ಕೆ ಸ್ಥಿರತೆಯ ಭಾವನೆ ಕಳೆದುಹೋಗುತ್ತದೆ. ನಮ್ಮ ತಾಯಿಗೆ ನಾವಿಬ್ಬರೇ ಮಕ್ಕಳು. ಆ ಸ್ಥಿರತೆಯ ಭಾವನೆಯು ಕಳೆದ ಬಳಿಕ ಒಂದು ರೀತಿಯಲ್ಲಿ ನಮ್ಮ ಜೀವನವು ಸ್ಥಗಿತಗೊಂಡಿದೆ” ಎಂದು ಮುಝಮ್ಮಿಲ್ ಹೇಳಿದ್ದಾರೆ.

ಬಂಧನದ ನಾಲ್ಕು ವರ್ಷಗಳಲ್ಲಿ ದೆಹಲಿ ಉಚ್ಚ ನ್ಯಾಯಾಲಯವು ಶರ್ಜೀಲ್‌ ಅವರ ಜಾಮೀನು ಅರ್ಜಿಯನ್ನು 46 ಸಲ ವಿಚಾರಣೆಗೆ ಪಟ್ಟಿ ಮಾಡಿತ್ತು. ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದಿನ ತಿಂಗಳಿನಿಂದ ಹೊಸದಾಗಿ ನಡೆಸಲು ಸಜ್ಜಾಗಿದೆ. ಮೊದಲ ಎಫ್‌ಐಆರ್‌ ಅಡಿಯಲ್ಲಿ ಶರ್ಜೀಲ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನೂ ದಿಲ್ಲಿಯ ಕೆಳ ನ್ಯಾಯಾಲಯವು ಮುಂದಿನ ತಿಂಗಳು ಹೊಸದಾಗಿ ಆರಂಭಿಸಲಿದೆ. ಈ ಎಫ್‌ಐಆರ್‌ ಅಡಿ ಶರ್ಜೀಲ್‌ ಅವರ ಭಾಷಣಗಳಿಗೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು.

ಶರ್ಜೀಲ್ ಬಂಧನವಾದಾಗ ಜಾಮೀನು ಸಿಗಲು ಬಹುಶಃ ಎರಡು ವರ್ಷ ಹೋಗಬಹುದು ಎಂದು ನಾವು ಭಾವಿಸಿದ್ದೆವು. ಆದರೆ, ಇಷ್ಟೊಂದು ವರ್ಷಗಳ ಕಾಲ ಎಳೆಯುತ್ತದೆ ಎಂದು ನಾವು ಭಾವಿಸಿರಲಿಲ್ಲ. ಈಶಾನ್ಯ ದೆಹಲಿ ಗಲಭೆಗಳು ಶರ್ಜೀಲ್ ಬಂಧನದ ಬಳಿಕ ನಡೆದಿದ್ದವು. ಆದರೂ, ವಿನಾಕಾರಣ ಆತನನ್ನು ಆ ಪ್ರಕರಣದಲ್ಲಿ ಸಿಲುಕಿಸಲಾಗಿದೆ” ಎಂದು ಸಹೋದರ ಮುಝಮ್ಮಿಲ್ ಹೇಳಿದ್ದಾರೆ.

ಯುಎಪಿಎ ಪ್ರಕರಣದಲ್ಲಿ ತಕ್ಷಣ ಜಾಮೀನು ಕೋರಿ ಶರ್ಜೀಲ್ ಅರ್ಜಿ ಸಲ್ಲಿಸಿ ನಾಲ್ಕು ತಿಂಗಳುಗಳು ಕಳೆದಿವೆ. ಅವರು ಅರ್ಧಕ್ಕೂ ಹೆಚ್ಚಿನ ಶಿಕ್ಷೆಯ ಅವಧಿಯನ್ನು ಪೂರ್ಣಗೊಳಿಸಿರುವುದರಿಂದ ಶಾಸನಬದ್ಧ ಜಾಮೀನಿಗೆ ಅರ್ಹರಾಗಿದ್ದಾರೆ. ಆದರೂ, ಅವರಿಗೆ ಈವರೆಗೆ ಜಾಮೀನು ಮಂಜೂರಾಗಿಲ್ಲ. ಅರ್ಜಿಯ ವಿಚಾರಣೆಯನ್ನು ನಡೆಸುತ್ತಿದ್ದ ನ್ಯಾಯಾಧೀಶರು ಕಳೆದ ಡಿಸೆಂಬರ್‌ನಲ್ಲಿ ವರ್ಗಾವಣೆಗೊಂಡಿದ್ದಾರೆ. ಈಗ ಇನ್ನೋರ್ವ ನ್ಯಾಯಾಧೀಶರ ಎದುರು ಫೆ.7ಕ್ಕೆ ವಿಷಯವನ್ನು ಪಟ್ಟಿ ಮಾಡಲಾಗಿದೆ. ಅವರು ಹೊಸದಾಗಿ ಅದನ್ನು ಪರಿಗಣಿಸಿ ಬಳಿಕ ಆದೇಶವನ್ನು ಹೊರಡಿಸಲಿದ್ದಾರೆ ಎಂದು ಶರ್ಜೀಲ್ ಪರ ವಕೀಲ ಇಬ್ರಾಹಿಂ ತಿಳಿಸಿದ್ದಾರೆ.

ಇತ್ತೀಚಿನ ವರದಿ ಪ್ರಕಾರ, ದೇಶದ್ರೋಹ ಪ್ರಕರಣದಲ್ಲಿ ಶರ್ಜೀಲ್‌ ಇಮಾಮ್ ಅವರ ಶಾಸನಬದ್ಧ ಜಾಮೀನು ಅರ್ಜಿಯನ್ನು ಫೆಬ್ರವರಿ 17 ರೊಳಗೆ ನಿರ್ಧರಿಸುವಂತೆ ದೆಹಲಿ ಹೈಕೋರ್ಟ್ (ಜ.31) ಮಂಗಳವಾರ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಮತ್ತು ಮನೋಜ್ ಜೈನ್ ಅವರ ಪೀಠವು ಫೆಬ್ರವರಿ 7 ರಂದು ಮುಂದಿನ ವಿಚಾರಣೆಯ ನಂತರ 10 ದಿನಗಳಲ್ಲಿ ಶರ್ಜೀಲ್‌ ಅವರ ಮನವಿಯ ತೀರ್ಪು ಪ್ರಕಟಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.

ಶರ್ಜೀಲ್ ಸಲ್ಲಿಸಿರುವ ಜಾಮೀನು ಅರ್ಜಿಗಳನ್ನು ಇತ್ಯರ್ಥಗೊಳಿಸುವಲ್ಲಿ ನ್ಯಾಯಾಂಗದಿಂದ ತುಂಬ ವಿಳಂಬವಾಗಿದೆ. ಇದು ದುರಂತ. ಯಾವುದೇ ಜಾಮೀನು ಅರ್ಜಿಯು ಎರಡು ವರ್ಷಕ್ಕಿಂತ ಹೆಚ್ಚು ಅವಧಿಗೆ ಬಾಕಿಯಾಗಬಾರದು. ಆರೋಪಿಯು ಜಾಮೀನಿಗೆ ಅರ್ಹನಲ್ಲ ಎಂದು ನೀವು ಭಾವಿಸಿದ್ದರೆ ಅರ್ಜಿಯನ್ನು ವಜಾಗೊಳಿಸಿ, ಆಗ ಆರೋಪಿಯು ಸರ್ವೋಚ್ಚ ನ್ಯಾಯಾಲಯದಲ್ಲಿ ಅಥವಾ ಮೇಲಿನ ನ್ಯಾಯಾಲಯದಲ್ಲಿ ತನ್ನ ಅದೃಷ್ಟವನ್ನು ಪರೀಕ್ಷಿಸಬಹುದು. ಆದರೆ ಜಾಮೀನು ಅರ್ಜಿಯನ್ನು ಇಷ್ಟೊಂದು ದೀರ್ಘಕಾಲ ಬಾಕಿಯಿರಿಸುವುದು ಕ್ರಿಮಿನಲ್ ನ್ಯಾಯಶಾಸ್ತ್ರದಿಂದ ಎಲ್ಲ ನೀರೀಕ್ಷೆಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ ಇಬ್ರಾಹಿಂ, ನ್ಯಾಯಾಂಗವು ಸರ್ಕಾದ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದೆ ಎನ್ನುವುದನ್ನು ಈ ವಿಳಂಬಗಳು ತೋರಿಸುತ್ತಿವೆ ಎಂದಿದ್ದಾರೆ.

ಉಮರ್‌ ಖಾಲಿದ್ ಅವರಂತೆ ಇತರ ರಾಜಕೀಯ ಕೈದಿಗಳಂತೆ ಶರ್ಜೀಲ್‌ಗೆ ನಾಗರಿಕ ಸಮಾಜದ ಗುಂಪುಗಳು ಮತ್ತು ಪ್ರಮುಖ ರಾಜಕೀಯ ಕಾರ್ಯಕರ್ತರಿಂದ ಬೆಂಬಲ ದೊರೆತಿಲ್ಲ. ಜೈಲಿನಲ್ಲಿ ಶರ್ಜೀಲ್ ಕಾನೂನನ್ನು ಅಧ್ಯಯನ ಮಾಡಲು ಕಾನೂನು ಪುಸ್ತಕಗಳನ್ನು ಓದುತ್ತಿದ್ದಾನೆ. ಕಾನೂನು ಸಹಾಯ ಸಿಗದ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಸಹಾಯ ಮಾಡಲು ಅವನು ಪ್ರಯತ್ನಿಸುತ್ತಿದ್ದಾನೆ ಎಂದು ಮುಝಮ್ಮಿಲ್ ಹೇಳಿದ್ದಾರೆ.

“ಒಂದು ದಿನ ಅವನು ಹೊರಬರುತ್ತಾನೆ ಎಂದು ಭರವಸೆ ಇಡುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ.ಅವನದ ಜೀವನದ ಅಮೂಲ್ಯ ವರ್ಷಗಳು ವ್ಯರ್ಥವಾಗುತ್ತಿವೆ ಅಷ್ಟೇ. ಅವರು ಜಾಮೀನು ಮುಂದೂಡುತ್ತಲೇ ಇರಬಹುದು. ಆದರೆ, ಎಷ್ಟು ದಿನ ಜೈಲಿನಲ್ಲಿ ಇಡುತ್ತಾರೆ? ‘ಹರ್ ಉರೂಜ್ ಕಾ ಝವಾಲ್ ದೇಖನಾ ಹೋತಾ ಹೈ (ಪ್ರತಿಯೊಂದು ಏರಿಕೆಗೂ ಪತನವಿದೆ) ಎಂಬ ಗಾದೆಯಂತೆ ಇದು ನಮಗೂ ಅವರಿಗೂ ನಿಜವಾಗಲಿದೆ’ಎಂದು ಮುಝಮ್ಮಿಲ್ ಬೇಸರ ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಕೇರಳ: ರಂಜಿತ್‌ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...