Homeಕರೋನಾ ತಲ್ಲಣಅಸ್ಸಾಂನಲ್ಲಿ ಕೊರೊನಾ ಇಲ್ಲ, ಮಾಸ್ಕ್ ಬೇಡ ಹೇಳಿಕೆ ನೀಡಿ ಟ್ರೋಲ್ ಆದ ಬಿಜೆಪಿ ಸಚಿವ

ಅಸ್ಸಾಂನಲ್ಲಿ ಕೊರೊನಾ ಇಲ್ಲ, ಮಾಸ್ಕ್ ಬೇಡ ಹೇಳಿಕೆ ನೀಡಿ ಟ್ರೋಲ್ ಆದ ಬಿಜೆಪಿ ಸಚಿವ

- Advertisement -
- Advertisement -

ಅಸ್ಸಾಂ ಆರೋಗ್ಯ ಸಚಿವ ಮತ್ತು ಬಿಜೆಪಿಯ ಹಿರಿಯ ಮುಖಂಡ ಹಿಮಾಂತ ಬಿಸ್ವಾ ಶರ್ಮಾ ಅವರ “ಅಸ್ಸಾಂನಲ್ಲಿ ಕೊರೊನಾ ಇಲ್ಲ … (ಆದ್ದರಿಂದ) ಫೇಸ್ ಮಾಸ್ಕ್ ಧರಿಸುವ ಅಗತ್ಯವಿಲ್ಲ” ಎಂಬ ಹೇಳಿಕೆ ಸಾಕಷ್ಟು ಟ್ರೋಲ್‌ಗೆ ಒಳಗಾಗಿತ್ತು. ಇದಕ್ಕೆ ಗರಂ ಆಗಿರುವ ಸಚಿವರು ’ಗೇಲಿ ಮಾಡುವವರು ಅಸ್ಸಾಂಗೆ ಬಂದು ನೋಡಿ’ ಎಂದು ತಿರುಗೇಟು ನೀಡಿದ್ದಾರೆ.

ಶನಿವಾರ ಮಾತನಾಡಿದ್ದ ಆರೋಗ್ಯ ಸಚಿವ ಹಿಮಾಂತ ಬಿಸ್ವಾ ಶರ್ಮಾ, “ಅಸ್ಸಾಂನಲ್ಲಿ ಕೊರೊನಾ ಇಲ್ಲ, ಹಾಗಾಗಿ ಅಸ್ಸಾಂನಲ್ಲಿ ಈಗ ಫೇಸ್ ಮಾಸ್ಕ್ ಧರಿಸುವ ಅಗತ್ಯವಿಲ್ಲ. ಅಗತ್ಯವಿದ್ದರೆ ನಾನು ಜನರಿಗೆ ತಿಳಿಸುತ್ತೇನೆ” ಎಂದಿದ್ದರು. ಈ ಹೇಳಿಕೆ ಸಾಕಷ್ಟು ಗೇಲಿಗೆ ಒಳಗಾಗಿತ್ತು.

ಭಾನುವಾರ ಟ್ವೀಟ್ ಮಾಡಿರುವ ಆರೋಗ್ಯ ಸಚಿವ “ಫೇಸ್ ಮಾಸ್ಕ್ ಬಗ್ಗೆ ನನ್ನ ಹೇಳಿಕೆಯನ್ನು ಗೇಲಿ ಮಾಡುವವರು ಅಸ್ಸಾಂಗೆ ಬರಬೇಕು. ದೆಹಲಿ, ಕೇರಳ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಿಗೆ ಹೋಲಿಸಿದರೆ, ಆಥೀಕ ಚೇತರಿಕೆಯೊಂದಿಗೆ ನಾವು ಎಷ್ಟು ಕೊರೊನಾ ಪ್ರಕರಣಗಳನ್ನು ಹೊಂದಿದ್ದೇವೆ ಎಂಬುದನ್ನು ನೋಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎರಡೇ ಪದದ ಟ್ವೀಟ್: ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪ ಮಾಡಿದ ರಾಹುಲ್ ಗಾಂಧಿ

ಜೊತೆಗೆ “ನಾವು ಈ ವರ್ಷವೂ ಅದೇ ಉತ್ಸಾಹದಿಂದ ಬಿಹುವನ್ನು (ಅಸ್ಸಾಂನ ಹಬ್ಬ) ಆಚರಿಸುತ್ತೇವೆ” ಎಂದು ಹೇಳಿದ್ದಾರೆ.

ಆನ್‌ಲೈನ್ ಸುದ್ದಿ ವೆಬ್‌ಸೈಟ್ ದಿ ಲಾಲಾಂಟಾಪ್‌ದ ವರದಿಗಾರರಿಗೆ ನೀಡಿದ ಸಂದರ್ಶನದಲ್ಲಿ ಆರೋಗ್ಯ ಸಚಿವ ಹಿಮಾಂತ ಬಿಸ್ವಾ ಶರ್ಮಾ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂಬ ಹೇಳಿಕೆ ನೀಡಿದ್ದರು.

ದೇಶದಲ್ಲಿ ಗಣನೀಯವಾಗಿ ಎರುತ್ತಿರುವ ಕೊರೊನಾ ಪ್ರಕರಣಗಳಲ್ಲಿ ಅಸ್ಸಾಂನ ಪಾಲು ಅತ್ಯಲ್ಪ. ದಿನಕ್ಕೆ 68 ಹೊಸ ಪ್ರಕರಣಗಳು ಮತ್ತು ಯಾವುದೇ ಸಾವುಗಳು ಕಾಣಿಸಿಕೊಂಡಿಲ್ಲ. ಆದರೆ ವೈರಸ್ ಹರಡುತ್ತಿರುವ ಮಟ್ಟ ಅಪಾಯಕಾರಿಯಾಗಿದೆ ಎನ್ನಲಾಗಿದೆ. ಪಾಸಿಟಿವ್ ಪ್ರಕರಣಗಳ ಪ್ರಮಾಣವು ನಾಲ್ಕು ವಾರಗಳ ಹಿಂದೆ ಶೇಕಡಾ 2.2 ರಷ್ಟು ಇದ್ದದ್ದು, ಈಗ 7.1 ಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿರುವ ಕಾರಣ ದೇಶದಲ್ಲಿ ನಡೆಯುತ್ತಿರುವ ವ್ಯಾಕ್ಸಿನೇಷನ್ ಡ್ರೈವ್ ಸೇರಿದಂತೆ ಕೋವಿಡ್ ಸಂಬಂಧಿತ ವಿಷಯಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಕ್ಯಾಬಿನೆಟ್ ಕಾರ್ಯದರ್ಶಿ, ಪ್ರಧಾನಮಂತ್ರಿಯ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಕಾರ್ಯದರ್ಶಿ ಸೇರಿದಂತೆ ಎಲ್ಲ ಹಿರಿಯ ಅಧಿಕಾರಿಗಳು ಭಾಗವಹಿಸುತ್ತಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ಕೊರೊನಾ ಸೋಂಕು ಉಲ್ಬಣ: ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...