Homeಕರೋನಾ ತಲ್ಲಣ2022ರ ವರೆಗೆ ಕೊರೊನಾ ವ್ಯಾಕ್ಸಿನ್ ಸಿಗಲ್ಲ: ಏಮ್ಸ್ ನಿರ್ದೇಶಕ ಡಾ. ಗುಲೇರಿಯಾ

2022ರ ವರೆಗೆ ಕೊರೊನಾ ವ್ಯಾಕ್ಸಿನ್ ಸಿಗಲ್ಲ: ಏಮ್ಸ್ ನಿರ್ದೇಶಕ ಡಾ. ಗುಲೇರಿಯಾ

ಕೊರೊನಾ ಸೋಂಕು ವ್ಯಾಕ್ಸಿನೇಷನ್ ಮೂಲಕ "ಕಣ್ಮರೆಯಾಗುವುದಿಲ್ಲ" ಎಂದು ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಲಸಿಕೆಗಾಗಿ ಜನ ಸಾಮಾನ್ಯರು 2022ರ ವರೆಗೆ ಕಾಯಬೇಕಾಗುತ್ತದೆ ಎಂದು ದೇಶದ ಕೊರೊನಾವೈರಸ್ ನಿರ್ವಹಣೆಯ ರಾಷ್ಟ್ರೀಯ ಟಾಸ್ಕ್‌ಫೋರ್ಸ್ ಸದಸ್ಯರೂ ಆಗಿರುವ ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.

ಕೊರೊನಾವೈರಸ್ ಲಸಿಕೆ ಭಾರತೀಯ ಮಾರುಕಟ್ಟೆಗಳಲ್ಲಿ ಸುಲಭವಾಗಿ ಲಭ್ಯವಾಗಲು “ಒಂದು ವರ್ಷಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ” ಎಂದು ಏಮ್ಸ್ ನಿರ್ದೇಶಕರು ತಿಳಿಸಿದ್ದಾರೆ.

ಸಿಎನ್‌ಎನ್-ನ್ಯೂಸ್ 18ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ರಂದೀಪ್ ಗುಲೇರಿಯಾ, ಸಾಮಾನ್ಯ ಜನರಿಗೆ ಲಸಿಕೆ ದೊರೆಯಲು “ಒಂದು ವರ್ಷಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ” ಎಂದು ಹೇಳಿದರು. “ನಮ್ಮ ದೇಶದಲ್ಲಿ ಜನಸಂಖ್ಯೆ ದೊಡ್ಡದಾಗಿದೆ. ಫ್ಲೂ ಲಸಿಕೆಯಂತೆ ಈ ಲಸಿಕೆಯನ್ನು ಮಾರುಕಟ್ಟೆಯಿಂದ ಹೇಗೆ ಖರೀದಿಸಬಹುದು ಮತ್ತು ಅದನ್ನು ಹೇಗೆ ತೆಗೆದುಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳಲು ನಮಗೆ ಸಮಯ ಬೇಕು” ಎಂದು ರಂದೀಪ್ ಗುಲೇರಿಯಾ ಹೇಳಿದ್ದಾರೆ.

ಕೊರೊನಾ ವೈರಸ್ ಲಸಿಕೆ ಲಭ್ಯವಾದ ನಂತರ ಭಾರತಕ್ಕೆ ಎದುರಾಗುವ ಸವಾಲುಗಳ ಬಗ್ಗೆ ಮಾತನಾಡಿರುವ ಏಮ್ಸ್ ನಿರ್ದೇಶಕರು, ಲಸಿಕೆ ವಿತರಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಲಸಿಕೆ ದೇಶದ ಪ್ರತಿಯೊಂದು ಭಾಗವನ್ನು ತಲುಪುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದೊಡ್ಡ ದೇಶದಲ್ಲಿ ಹೆಚ್ಚಿನ ಜನಸಂಖ್ಯೆ ಹೊಂದಿರುವ ದೇಶದಲ್ಲಿ ರಿಮೋಟ್ ಪ್ರದೇಶಗಳಿಗೆ ತಲುಪಿಸುವುದು ಕೂಡ ಒಂದು ಸವಾಲು’ ಎಂದಿದ್ದಾರೆ.

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

’ಎರಡನೆಯ ಸವಾಲು ಎಂದರೇ, ಈ ಲಸಿಕೆ ನಂತರ ಹೊರಬರುವ ಮತ್ತೊಂದು ಲಸಿಕೆಯ ಸ್ಥಾನೀಕರಣ ಮತ್ತು ಮೊದಲನೆಯದಕ್ಕಿಂತ ಇದು ಹೇಗೆ ಹೆಚ್ಚು ಪರಿಣಾಮಕಾರಿ ಎಂದು ಪರಿಗಣಿಸುವುದು’ ಎಂದು ಡಾ. ರಂದೀಪ್ ಗುಲೇರಿಯಾ ಹೇಳಿದರು.

“ನಾವು ಲಸಿಕೆ ವಿಚಾರದಲ್ಲಿ ಸಾಕಷ್ಟು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. ಎರಡನೇ ಲಸಿಕೆ  ಮೊದಲನೆಯದಕ್ಕಿಂತ ಹೆಚ್ಚು ಪರಿಣಾಮಕಾರಿ ಎಂದು ಕಂಡುಬಂದರೆ, ನಾವು ಅದನ್ನು ಹೇಗೆ ಸ್ಥಾನೀಕರಿಸುತ್ತೇವೆ? ನಾವು ಕೋರ್ಸ್ ತಿದ್ದುಪಡಿಯನ್ನು ಹೇಗೆ ಮಾಡುತ್ತೇವೆ? ಜೊತೆಗೆ ಲಸಿಕೆ ’ಎ’ ಯಾರಿಗೆ ಬೇಕು ಮತ್ತು ಲಸಿಕೆ ’ಬಿ’ ಯಾರಿಗೆ ಬೇಕು ಎಂದು ನಿರ್ಧರಿಸುವುದು ಹೇಗೆ? ಹೀಗೆ ಸಾಕಷ್ಟು ಗೊಂದಲಗಳಿವೆ” ಎಂದು ಏಮ್ಸ್ ನಿರ್ದೇಶಕರು ಹೇಳಿದರು.

ಏಮ್ಸ್ ನಿರ್ದೇಶಕರು ಮತ್ತೊಂದು ವಿಚಾರವನ್ನು ತಿಳಿಸಿದ್ದು, ಕೊರೊನಾ ಸೋಂಕು, ವ್ಯಾಕ್ಸಿನೇಷನ್ ಮೂಲಕ “ಕಣ್ಮರೆಯಾಗುವುದಿಲ್ಲ” ಎಂದು ರಂದೀಪ್ ಗುಲೇರಿಯಾ ತಿಳಿಸಿದ್ದಾರೆ.

ಏಮ್ಸ್ ನಿರ್ದೇಶಕರೇ ಕೊರೊನಾ ಲಸಿಕೆ ಬರಲು ಇನ್ನು ವರ್ಷಗಳು ಬೇಕು ಎನ್ನುತ್ತಿದ್ದರೇ ಇತ್ತ ರಾಜಕೀಯ ಪಕ್ಷಗಳು ಮಾತ್ರ ಉಚಿತ ಕೊರೊನಾ ಲಸಿಕೆ ಎಂಬ ಅಂಶ ಇಟ್ಟುಕೊಂಡು ರಾಜಕೀಯ ಮಾಡುತ್ತಿವೆ ಎಂದು ಸಾರ್ವಜನಿಕ ವಲಯದಲ್ಲಿ ಟೀಕೆಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಾಗಾದರೆ ಬಿಹಾರಕ್ಕೆ ಫ್ರೀ ತಲುಪಲು ಎಷ್ಟು ವರ್ಷ ಹಿಡಿಯಬಹುದು?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...