Homeಕರೋನಾ ತಲ್ಲಣ2022ರ ವರೆಗೆ ಕೊರೊನಾ ವ್ಯಾಕ್ಸಿನ್ ಸಿಗಲ್ಲ: ಏಮ್ಸ್ ನಿರ್ದೇಶಕ ಡಾ. ಗುಲೇರಿಯಾ

2022ರ ವರೆಗೆ ಕೊರೊನಾ ವ್ಯಾಕ್ಸಿನ್ ಸಿಗಲ್ಲ: ಏಮ್ಸ್ ನಿರ್ದೇಶಕ ಡಾ. ಗುಲೇರಿಯಾ

ಕೊರೊನಾ ಸೋಂಕು ವ್ಯಾಕ್ಸಿನೇಷನ್ ಮೂಲಕ "ಕಣ್ಮರೆಯಾಗುವುದಿಲ್ಲ" ಎಂದು ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಲಸಿಕೆಗಾಗಿ ಜನ ಸಾಮಾನ್ಯರು 2022ರ ವರೆಗೆ ಕಾಯಬೇಕಾಗುತ್ತದೆ ಎಂದು ದೇಶದ ಕೊರೊನಾವೈರಸ್ ನಿರ್ವಹಣೆಯ ರಾಷ್ಟ್ರೀಯ ಟಾಸ್ಕ್‌ಫೋರ್ಸ್ ಸದಸ್ಯರೂ ಆಗಿರುವ ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.

ಕೊರೊನಾವೈರಸ್ ಲಸಿಕೆ ಭಾರತೀಯ ಮಾರುಕಟ್ಟೆಗಳಲ್ಲಿ ಸುಲಭವಾಗಿ ಲಭ್ಯವಾಗಲು “ಒಂದು ವರ್ಷಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ” ಎಂದು ಏಮ್ಸ್ ನಿರ್ದೇಶಕರು ತಿಳಿಸಿದ್ದಾರೆ.

ಸಿಎನ್‌ಎನ್-ನ್ಯೂಸ್ 18ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ರಂದೀಪ್ ಗುಲೇರಿಯಾ, ಸಾಮಾನ್ಯ ಜನರಿಗೆ ಲಸಿಕೆ ದೊರೆಯಲು “ಒಂದು ವರ್ಷಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ” ಎಂದು ಹೇಳಿದರು. “ನಮ್ಮ ದೇಶದಲ್ಲಿ ಜನಸಂಖ್ಯೆ ದೊಡ್ಡದಾಗಿದೆ. ಫ್ಲೂ ಲಸಿಕೆಯಂತೆ ಈ ಲಸಿಕೆಯನ್ನು ಮಾರುಕಟ್ಟೆಯಿಂದ ಹೇಗೆ ಖರೀದಿಸಬಹುದು ಮತ್ತು ಅದನ್ನು ಹೇಗೆ ತೆಗೆದುಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳಲು ನಮಗೆ ಸಮಯ ಬೇಕು” ಎಂದು ರಂದೀಪ್ ಗುಲೇರಿಯಾ ಹೇಳಿದ್ದಾರೆ.

ಕೊರೊನಾ ವೈರಸ್ ಲಸಿಕೆ ಲಭ್ಯವಾದ ನಂತರ ಭಾರತಕ್ಕೆ ಎದುರಾಗುವ ಸವಾಲುಗಳ ಬಗ್ಗೆ ಮಾತನಾಡಿರುವ ಏಮ್ಸ್ ನಿರ್ದೇಶಕರು, ಲಸಿಕೆ ವಿತರಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಲಸಿಕೆ ದೇಶದ ಪ್ರತಿಯೊಂದು ಭಾಗವನ್ನು ತಲುಪುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದೊಡ್ಡ ದೇಶದಲ್ಲಿ ಹೆಚ್ಚಿನ ಜನಸಂಖ್ಯೆ ಹೊಂದಿರುವ ದೇಶದಲ್ಲಿ ರಿಮೋಟ್ ಪ್ರದೇಶಗಳಿಗೆ ತಲುಪಿಸುವುದು ಕೂಡ ಒಂದು ಸವಾಲು’ ಎಂದಿದ್ದಾರೆ.

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

’ಎರಡನೆಯ ಸವಾಲು ಎಂದರೇ, ಈ ಲಸಿಕೆ ನಂತರ ಹೊರಬರುವ ಮತ್ತೊಂದು ಲಸಿಕೆಯ ಸ್ಥಾನೀಕರಣ ಮತ್ತು ಮೊದಲನೆಯದಕ್ಕಿಂತ ಇದು ಹೇಗೆ ಹೆಚ್ಚು ಪರಿಣಾಮಕಾರಿ ಎಂದು ಪರಿಗಣಿಸುವುದು’ ಎಂದು ಡಾ. ರಂದೀಪ್ ಗುಲೇರಿಯಾ ಹೇಳಿದರು.

“ನಾವು ಲಸಿಕೆ ವಿಚಾರದಲ್ಲಿ ಸಾಕಷ್ಟು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. ಎರಡನೇ ಲಸಿಕೆ  ಮೊದಲನೆಯದಕ್ಕಿಂತ ಹೆಚ್ಚು ಪರಿಣಾಮಕಾರಿ ಎಂದು ಕಂಡುಬಂದರೆ, ನಾವು ಅದನ್ನು ಹೇಗೆ ಸ್ಥಾನೀಕರಿಸುತ್ತೇವೆ? ನಾವು ಕೋರ್ಸ್ ತಿದ್ದುಪಡಿಯನ್ನು ಹೇಗೆ ಮಾಡುತ್ತೇವೆ? ಜೊತೆಗೆ ಲಸಿಕೆ ’ಎ’ ಯಾರಿಗೆ ಬೇಕು ಮತ್ತು ಲಸಿಕೆ ’ಬಿ’ ಯಾರಿಗೆ ಬೇಕು ಎಂದು ನಿರ್ಧರಿಸುವುದು ಹೇಗೆ? ಹೀಗೆ ಸಾಕಷ್ಟು ಗೊಂದಲಗಳಿವೆ” ಎಂದು ಏಮ್ಸ್ ನಿರ್ದೇಶಕರು ಹೇಳಿದರು.

ಏಮ್ಸ್ ನಿರ್ದೇಶಕರು ಮತ್ತೊಂದು ವಿಚಾರವನ್ನು ತಿಳಿಸಿದ್ದು, ಕೊರೊನಾ ಸೋಂಕು, ವ್ಯಾಕ್ಸಿನೇಷನ್ ಮೂಲಕ “ಕಣ್ಮರೆಯಾಗುವುದಿಲ್ಲ” ಎಂದು ರಂದೀಪ್ ಗುಲೇರಿಯಾ ತಿಳಿಸಿದ್ದಾರೆ.

ಏಮ್ಸ್ ನಿರ್ದೇಶಕರೇ ಕೊರೊನಾ ಲಸಿಕೆ ಬರಲು ಇನ್ನು ವರ್ಷಗಳು ಬೇಕು ಎನ್ನುತ್ತಿದ್ದರೇ ಇತ್ತ ರಾಜಕೀಯ ಪಕ್ಷಗಳು ಮಾತ್ರ ಉಚಿತ ಕೊರೊನಾ ಲಸಿಕೆ ಎಂಬ ಅಂಶ ಇಟ್ಟುಕೊಂಡು ರಾಜಕೀಯ ಮಾಡುತ್ತಿವೆ ಎಂದು ಸಾರ್ವಜನಿಕ ವಲಯದಲ್ಲಿ ಟೀಕೆಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಾಗಾದರೆ ಬಿಹಾರಕ್ಕೆ ಫ್ರೀ ತಲುಪಲು ಎಷ್ಟು ವರ್ಷ ಹಿಡಿಯಬಹುದು?

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...