Homeಮುಖಪುಟಪ್ರಮಾಣಪತ್ರವಿಲ್ಲದೆ ಕೊರೊನಿಲ್ ಮಾರಾಟಕ್ಕೆ ಅವಕಾಶವಿಲ್ಲ: ಮಹಾರಾಷ್ಟ್ರ ಗೃಹ ಸಚಿವರು

ಪ್ರಮಾಣಪತ್ರವಿಲ್ಲದೆ ಕೊರೊನಿಲ್ ಮಾರಾಟಕ್ಕೆ ಅವಕಾಶವಿಲ್ಲ: ಮಹಾರಾಷ್ಟ್ರ ಗೃಹ ಸಚಿವರು

- Advertisement -
- Advertisement -

“ಸರಿಯಾದ ಪ್ರಮಾಣಪತ್ರ ಇಲ್ಲದೆ ಪತಂಜಲಿಯ ಕೊರೊನಿಲ್ ಮಾತ್ರೆಗಳನ್ನು ರಾಜ್ಯದಲ್ಲಿ ಮಾರಾಟ ಮಾಡಲು ಅನುಮತಿಸುವುದಿಲ್ಲ” ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಹೇಳಿದ್ದಾರೆ.

ಕೊರೊನಿಲ್ ಮಾತ್ರೆಗಳಿಗೆ WHO ಪ್ರಮಾಣೀಕರಣ ನೀಡಿದೆ ಎಂಬುದು ಸುಳ್ಳು ಎಂದಿರುವ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಆಘಾತ ವ್ಯಕ್ತಪಡಿಸಿದೆ. ಇದಾದ ಒಂದು ದಿನದ ನಂತರ ಅನಿಲ್ ದೇಶ್ಮುಖ್ ಈ ಹೇಳಿಕೆ ನೀಡಿದ್ದಾರೆ.

ಕೊರೊನಾ ವಿರುದ್ಧ ಹೋರಾಡುವಲ್ಲಿ ಇದು ಪರಿಣಾಮಕಾರಿ ಎಂದು ಬಾಬಾ ರಾಮ್‌ದೇವ್ ಹೇಳಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಅವರ ಉಪಸ್ಥಿತಿಯಲ್ಲಿ ಈ ಔಷಧಿಯನ್ನು ಬಿಡುಗಡೆ ಮಾಡಲಾಯಿತು.

ಶುಕ್ರವಾರ, ರಾಮದೇವ್ ಅವರು ಪತಂಜಲಿ ಉತ್ಪನ್ನ ಕೊರೊನಿಲ್ ಅನ್ನು ಆರೋಗ್ಯ ಸಚಿವ ಹಷ್‌ವರ್ಧನ್ ಮತ್ತು ಮತ್ತೊಬ್ಬ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸಮ್ಮುಖದಲ್ಲಿ ಬಿಡುಗಡೆ ಮಾಡಿದ್ದರು. ಈ ಮೂವರ ಹಿಂದಿರುವ ದೊಡ್ಡ ಪೋಸ್ಟರ್‌ನಲ್ಲಿ “ಔಷಧಿಯು CoPP ಮತ್ತು WHO- ಜಿಎಂಪಿ ಪ್ರಮಾಣೀಕರಿಸಲ್ಪಟ್ಟಿದೆ ಎಂದು ಬರೆಯಲ್ಪಟ್ಟಿತ್ತು. ಅಂದರೆ ಇದು ಔಷಧೀಯ ಉತ್ಪನ್ನದ ಪ್ರಮಾಣಪತ್ರವನ್ನು (CoPP) ಹೊಂದಿದೆ ಮತ್ತು ಇದನ್ನು ವಿಶ್ವ ಆರೋಗ್ಯ ಸಂಸ್ಥೆಯ ಉತ್ತಮ ಉತ್ಪಾದನಾ ಪ್ರಾಕ್ಟೀಸಸ್ (ಜಿಎಂಪಿ) ಗುರುತಿಸಿದೆ ಎಂದರ್ಥ.

ಈ ಎರಡೂ ಮಾನದಂಡಗಳು ಔಷಧೀಯ ಉತ್ಪನ್ನಗಳಲ್ಲಿ ಗುಣಮಟ್ಟದ ಭರವಸೆಯನ್ನು ಬಹುಪಾಲು ವ್ಯಾಖ್ಯಾನಿಸುತ್ತವೆ.

ಇದನ್ನೂ ಓದಿ: ಸುಳ್ಳು ಹೇಳಿದ ಬಾಬಾ ರಾಮ್‌ದೇವ್! – ಪತಂಜಲಿ ಕೊರೊನಿಲ್ ಕುರಿತು ಐಎಂಎ ಆಕ್ರೋಶ

ಈ ಕುರಿತು ಟ್ವೀಟ್ ಮಾಡಿರುವ ದೇಶ್ಮುಖ್ ಯಾರನ್ನೂ ಹೆಸರಿಸದೆ, ‘ಹಿರಿಯ ಕೇಂದ್ರ ಸಚಿವರು ಔಷಧಿಯನ್ನು ಅನುಮೋದಿಸಿದ್ದಾರೆ’ ಎಂದು ಕಾಲೆಳೆದಿದ್ದಾರೆ.

ಆದರೆ, ಕೊವಿಡ್-19 ಗೆ ಚಿಕಿತ್ಸೆ ನೀಡಲು ಅಥವಾ ತಡೆಗಟ್ಟಲು ಯಾವುದೇ ಸಾಂಪ್ರದಾಯಿಕ ಔಷಧಿಯನ್ನು ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ ಎಂದು ಡಬ್ಲೂಎಚ್‌ಒ ಟ್ವೀಟ್‌ನಲ್ಲಿ ಸ್ಪಷ್ಟಪಡಿಸಿದೆ. #COVID19 ಚಿಕಿತ್ಸೆಗಾಗಿ ಯಾವುದೇ ಸಾಂಪ್ರದಾಯಿಕ ಔಷಧದ ಪರಿಣಾಮಕಾರಿತ್ವವನ್ನು WHO ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ” ಎಂದು WHO ಆಗ್ನೇಯ ಏಷ್ಯ ಟ್ವೀಟ್ ಮಾಡಿದೆ.

ಕಳೆದ ವರ್ಷ, ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ಲಸಿಕೆಗಳು ಇನ್ನೂ ಪ್ರಯೋಗದ ಹಂತದಲ್ಲಿದ್ದವು, ಕೊರೊನಿಲ್ ಕೊರೊನಾವೈರಸ್ ವಿರುದ್ಧ ಬಲವಾದ ರಕ್ಷಣೆ ನೀಡಬಹುದೆಂದು ಪತಂಜಲಿ ಆಯುರ್ವೇದ ಹೇಳಿಕೊಂಡಿತ್ತು. ಅದರ ಸಮರ್ಥನೆಗಳ ಬಗ್ಗೆ ದೊಡ್ಡ ವಿವಾದದ ನಂತರ, ಆಯುಷ್ ಸಚಿವಾಲಯವು ಕೊರೊನಿಲ್ ಅನ್ನು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಾಧನವಾಗಿ ಮಾತ್ರ ಮಾರಾಟ ಮಾಡಬಹುದೆಂದು ಹೇಳಿತ್ತು.

ಪತಂಜಲಿ ಆಯುರ್ವೇದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು WHO ಟ್ವೀಟ್‌ಗೆ ಸ್ವಲ್ಪ ಮೊದಲು ಸ್ಪಷ್ಟನೆ ನೀಡಿದ್ದರು.

“ಕೊರೊನಿಲ್‌ಗೆ WHO ಜಿಎಂಪಿ ಕಂಪ್ಲೈಂಟ್ CoPP ಪ್ರಮಾಣಪತ್ರವನ್ನು ಭಾರತ ಸರ್ಕಾರದ ಡಿಸಿಜಿಐ ನೀಡಿದೆ. WHO ಯಾವುದೇ ಔಷಧಿಗಳನ್ನು ಅನುಮೋದಿಸುವುದಿಲ್ಲ ಅಥವಾ ನಿರಾಕರಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಜನರಿಗೆ ಉತ್ತಮ, ಆರೋಗ್ಯಕರ ಭವಿಷ್ಯವನ್ನು ನಿರ್ಮಿಸಲು WHO ಕೆಲಸ ಮಾಡುತ್ತದೆ ಎಂದು ಬಾಲಕೃಷ್ಣ ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...