Homeದಲಿತ್ ಫೈಲ್ಸ್ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

- Advertisement -
- Advertisement -

ಭಾರತೀಯ ಮಾಧ್ಯಮಗಳಲ್ಲಿ ಸುಮಾರು 90 ಪ್ರತಿಶತದಷ್ಟು ನಾಯಕತ್ವದ ಸ್ಥಾನಗಳನ್ನು ಮೇಲ್ಜಾತಿ ಗುಂಪುಗಳು ಆಕ್ರಮಿಸಿಕೊಂಡಿವೆ. ಒಬ್ಬನೇ ಒಬ್ಬ ದಲಿತ ಅಥವಾ ಆದಿವಾಸಿಯು ಭಾರತೀಯ ಮುಖ್ಯವಾಹಿನಿ ಮಾಧ್ಯಮವನ್ನು ಮುನ್ನಡೆಸುತ್ತಿಲ್ಲ ಎಂದು ಹೊಸ ವರದಿಯೊಂದು ಬಹಿರಂಗಪಡಿಸಿದೆ.

“ನಮ್ಮ ಕಥೆಗಳನ್ನು ಯಾರು ಹೇಳುತ್ತಾರೆ ಎಂಬುದು ಮುಖ್ಯ: ಭಾರತೀಯ ಮಾಧ್ಯಮದಲ್ಲಿ ಅಂಚಿನಲ್ಲಿರುವ ಜಾತಿ ಗುಂಪುಗಳ ಪ್ರಾತಿನಿಧ್ಯ” ಎಂಬ ವಿಷಯದ ಕುರಿತು ಎರಡನೇ ಆವೃತ್ತಿಯ ವರದಿಯನ್ನು ‘ಆಕ್ಸ್‌ಫ್ಯಾಮ್ ಇಂಡಿಯಾ-ನ್ಯೂಸ್‌ಲಾಂಡ್ರಿ’ ಬಿಡುಗಡೆ ಮಾಡಿದ್ದು ಆತಂಕಕಾರಿ ಸಂಗತಿಗಳು ಹೊರಬಿದ್ದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವರದಿಯ ಎರಡನೇ ಆವೃತ್ತಿ ಹಲವಾರು ಕಟು ಸತ್ಯಗಳನ್ನು ಹೊರಗೆಳೆದಿದೆ. ಮುಖ್ಯವಾಹಿನಿ ಮುದ್ರಣ, ಟಿವಿ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ಸುಮಾರು 90 ಪ್ರತಿಶತ ನಾಯಕತ್ವ ಸ್ಥಾನಗಳನ್ನು ಪರಿಶಿಷ್ಟ ಜಾತಿಯಿಲ್ಲದ ಸಾಮಾನ್ಯ ಜಾತಿ ಗುಂಪುಗಳು ಆಕ್ರಮಿಸಿಕೊಂಡಿವೆ ಎಂದು ವರದಿಯು ಬಹಿರಂಗಪಡಿಸಿದೆ.

ದಕ್ಷಿಣ ಏಷ್ಯಾದ ಅತಿದೊಡ್ಡ ಸುದ್ದಿ ಮಾಧ್ಯಮ ವೇದಿಕೆಯಾದ ‘ದಿ ಮೀಡಿಯಾ ರಂಬಲ್‌’ನಲ್ಲಿ ಬಿಡುಗಡೆಯಾದ ವರದಿಯ ಪ್ರಕಾರ, “ಹಿಂದಿ ಮತ್ತು ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟವಾಗುವ 5 ಲೇಖನಗಳಲ್ಲಿ 3 ಲೇಖನಗಳನ್ನು ಸಾಮಾನ್ಯ ಜಾತಿ ಲೇಖಕರು ಬರೆದರೆ, ಕಟ್ಟಕಡೆಯ ಜಾತಿಗಳು (SC, ST ಅಥವಾ OBC) ಕೇವಲ 1 ಲೇಖನವನ್ನಷ್ಟೇ ಬರೆಯುತ್ತಿವೆ.”

ಪತ್ರಿಕೆಗಳು, ಟಿವಿ ಸುದ್ದಿ ವಾಹಿನಿಗಳು, ಸುದ್ದಿ ವೆಬ್‌ಸೈಟ್‌ಗಳು, ನಿಯತಕಾಲಿಕೆಗಳು ಸೇರಿದಂತೆ 121 ಸುದ್ದಿಮನೆಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ. ಇವುಗಳ ನಾಯಕತ್ವ ಸ್ಥಾನಗಳಲ್ಲಿ (ಸಂಪಾದಕ-ಮುಖ್ಯ, ವ್ಯವಸ್ಥಾಪಕ ಸಂಪಾದಕ, ಕಾರ್ಯನಿರ್ವಾಹಕ ಸಂಪಾದಕ, ಬ್ಯೂರೋ ಮುಖ್ಯಸ್ಥ, ಇನ್‌ಪುಟ್/ಔಟ್‌ಪುಟ್ ಸಂಪಾದಕ) 106 ಸಂಸ್ಥೆಗಳು ಬಲಾಢ್ಯ ಜಾತಿಗಳಿಂದ ಆಕ್ರಮಿಸಿಕೊಂಡಿವೆ.

ಐದು ಸಂಸ್ಥೆಗಳಲ್ಲಿ ಇತರೆ ಹಿಂದುಳಿದ ವರ್ಗಗಳು, ಆರರಲ್ಲಿ ಅಲ್ಪಸಂಖ್ಯಾತ ಸಮುದಾಯಗಳು ಇವೆ. ನಾಲ್ಕು ಸಂಸ್ಥೆಗಳ ಸ್ಥಿತಿ ಗುರುತಿಸಲಾಗಿಲ್ಲ. ಡಿಬೇಟ್‌ ನಡೆಸುವವರ ಪೈಕಿ ಪ್ರತಿ ನಾಲ್ಕು ಆಂಕರ್‌ಗಳಲ್ಲಿ ಮೂವರು ಮೇಲ್ಜಾತಿಯವರು. ಹಿಂದಿ ಚಾನೆಲ್‌ಗಳ ಒಟ್ಟು 40 ಮತ್ತು ಇಂಗ್ಲಿಷ್ ಚಾನೆಲ್‌ಗಳ 47 ಆಂಕರ್‌ಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಅವರಲ್ಲಿ ಒಬ್ಬರೂ ದಲಿತ, ಆದಿವಾಸಿ ಅಥವಾ ಒಬಿಸಿ ಇಲ್ಲ.

“ಸುದ್ದಿ ವಾಹಿನಿಗಳು ತಮ್ಮ ಪ್ರೈಮ್‌ಟೈಮ್ ಚರ್ಚಾ ಕಾರ್ಯಕ್ರಮಗಳಲ್ಲಿ ಶೇಕಡಾ 70ರಷ್ಟು ಮೇಲ್ಜಾತಿಗಳ ಪ್ಯಾನೆಲಿಸ್ಟ್‌ಗಳನ್ನು ಹೊಂದಿರುತ್ತವೆ. ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟವಾಗುವ ಒಟ್ಟು ಲೇಖನಗಳಲ್ಲಿ ದಲಿತರು ಮತ್ತು ಆದಿವಾಸಿಗಳು ಶೇಕಡಾ 5ಕ್ಕಿಂತ ಹೆಚ್ಚು ಬರೆಯುವುದಿಲ್ಲ. ಹಿಂದಿ ಪತ್ರಿಕೆಗಳು ಸ್ವಲ್ಪ ಉತ್ತಮವಾಗಿವೆ. ಸುಮಾರು 10 ಪ್ರತಿಶತದಷ್ಟು ದಲಿತ ಲೇಖಕರು ಬರೆಯುತ್ತಾರೆ” ಎಂಬುದನ್ನು ವರದಿ ಉಲ್ಲೇಖಿಸಿದೆ.

ಸುದ್ದಿ ವೆಬ್‌ಸೈಟ್‌ಗಳಲ್ಲಿ 72 ಪ್ರತಿಶತ ಲೇಖನಗಳನ್ನು ಮೇಲ್ಜಾತಿ ಜನರು ಬರೆದಿದ್ದಾರೆ. ಅಧ್ಯಯನಕ್ಕೆ ಒಳಪಡಿಸಲಾದ 12 ನಿಯತಕಾಲಿಕೆಗಳ ಕವರ್ ಪೇಜ್‌ನಲ್ಲಿ ಬಂದ 972 ಲೇಖನಗಳಲ್ಲಿ 10 ಮಾತ್ರ ಜಾತಿಗೆ ಸಂಬಂಧಿಸಿದ ವಿಷಯಗಳಾಗಿದ್ದವು.

ಆಕ್ಸ್‌ಫ್ಯಾಮ್ ಇಂಡಿಯಾದ ಸಿಇಒ ಅಮಿತಾಭ್ ಬೆಹರ್, “ಮೂರು ವರ್ಷಗಳಲ್ಲಿ ನಮ್ಮ ಎರಡನೇ ವರದಿಯನ್ನು ಬಿಡುಗಡೆ ಮಾಡಿದ್ದೇವೆ. ಭಾರತದಲ್ಲಿನ ಸುದ್ದಿಮನೆಗಳು ಕಟ್ಟಕಡೆಯ ಸಮುದಾಯಗಳನ್ನು ಒಳಗೊಳ್ಳುತ್ತಿಲ್ಲ ಎಂಬುದನ್ನು ವರದಿ ತೋರಿಸುತ್ತಲೇ ಇದೆ. ಈ ಎಲ್ಲಾ ವೇದಿಕೆಗಳಲ್ಲಿ ದಲಿತರು, ಆದಿವಾಸಿಗಳು ಮತ್ತು ಬಹುಜನರಿಗೆ ಅನುಕೂಲಕರ ವಾತಾವರಣವನ್ನು ನಿರ್ಮಿಸುವಲ್ಲಿ ಮಾಧ್ಯಮ ಸಂಸ್ಥೆಗಳ ನಾಯಕರು ವಿಫಲರಾಗುತ್ತಿದ್ದಾರೆ” ಎಂದು ವಿಷಾದಿಸಿದ್ದಾರೆ.

ದೇಶದ ಮಾಧ್ಯಮಗಳು ಕೇವಲ ತನ್ನ ಸುದ್ದಿ ಪ್ರಸಾರವಷ್ಟೇ ಅಲ್ಲದೇ ನೇಮಕಾತಿ ಪದ್ಧತಿಯಲ್ಲೂ ಸಮಾನತೆಯ ಸಾಂವಿಧಾನಿಕ ತತ್ವವನ್ನು ಎತ್ತಿಹಿಡಿಯಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ರಾಜಕಾರಣದಲ್ಲಿ ದಲಿತರನ್ನು ಒಡೆದು ಆಳುವುದು ಸುಲಭವೇ?

“ಮಾಧ್ಯಮ ಸಂಸ್ಥೆಗಳು ತಕ್ಷಣವೇ ನೇಮಕಾತಿ ರೀತಿಯಲ್ಲಿ ಗಮನಾರ್ಹವಾದ ಕೂಲಂಕಷ ಪರೀಕ್ಷೆಯನ್ನು ನಡೆಸಿಕೊಳ್ಳಬೇಕಿದೆ. ದೇಶಾದ್ಯಂತ ಸುದ್ದಿಮನೆಗಳು ಹೆಚ್ಚು ವೈವಿಧ್ಯಮಯವಾಗಿ, ಎಲ್ಲರನ್ನೂ ಒಳಗೊಳ್ಳುವುದನ್ನು ಖಚಿತಪಡಿಸಿಕೊಳ್ಳಬೇಕಿದೆ. ತಾರತಮ್ಯ ಮತ್ತು ಅನ್ಯಾಯವಿಲ್ಲದೆ ಭಾರತವನ್ನು ಕಟ್ಟಲು ಇದು ಅಗತ್ಯವಾಗಿದೆ” ಎಂದಿದ್ದಾರೆ ಬೆಹರ್‌.

ವರದಿಯು ಸುಮಾರು 43 ಭಾರತೀಯ ಮುದ್ರಣ, ಟಿವಿ ಮತ್ತು ಡಿಜಿಟಲ್ ಮಾಧ್ಯಮಗಳನ್ನು, ಅವುಗಳ ಕವರೇಜ್, ನಾಯಕತ್ವದ ಸಾಮಾಜಿಕ ಸ್ಥಾನಮಾನವನ್ನು, ಸಂಸ್ಥೆಗಳಿಂದ ನೇಮಕಗೊಂಡ ಪತ್ರಕರ್ತರ ಜಾತಿ ಹಿನ್ನೆಲೆಯನ್ನು ಅಧ್ಯಯನ ಮಾಡಿದೆ.

ಏಪ್ರಿಲ್ 2021 ಮತ್ತು ಮಾರ್ಚ್ 2022ರ ನಡುವೆ ನಡೆಸಲಾದ ಸಂಶೋಧನೆಯು ನಿಯತಕಾಲಿಕೆ ಮತ್ತು ದಿನಪತ್ರಿಕೆಗಳಲ್ಲಿ ಪ್ರಕಟವಾದ 20,000ಕ್ಕೂ ಹೆಚ್ಚು ಲೇಖನಗಳನ್ನು, 76 ಆಂಕರ್‌ಗಳು ಮತ್ತು 3,318 ಪ್ಯಾನೆಲಿಸ್ಟ್‌ಗಳ 2,075 ಪ್ರೈಮ್-ಟೈಮ್ ಚರ್ಚೆಗಳನ್ನು, 12 ತಿಂಗಳ ಆನ್‌ಲೈನ್ ಸುದ್ದಿ ವರದಿಗಳನ್ನು ವಿಶ್ಲೇಷಣೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂಬೇಡ್ಕರ್ ಅನುಯಾಯಿಗಳು ಅದವರು ಧರ್ಮ ದಲ್ಲಿ ಯು ಭಗವಾನ್ ಬುದ್ಧ ಧರ್ಮದಲ್ಲಿ ದಲಿತ ಸಂಘಟನೆಗಳು ಮತ್ತು ಆದಿವಾಸಿಗಳು ಅನುಸರಿಸುತ್ತಾ ದ್ಯಾನ ಓದು ಕೆಲಸ ಉದ್ಯೋಗ ಇತ್ಯಾದಿ ಯಲ್ಲಿ ಒಂದೇ ಮನಸ್ಸು ಒಂದೆ ಅಭಿಪ್ರಾಯ ಇರುತ್ತಿತ್ತು ಪರಿಶಿಷ್ಟ ಜಾತಿ ಅಭಿವೃದ್ಧಿ ಆಗುತ್ತಿತ್ತು ಒಗ್ಗಟ್ಟು ಬೇರುರಿ ಬೆಳೆದು ಫಲ ಕೋಡುತ್ತಿತ್ತು , ಮನುಸ್ಮೃತಿ ವಿರುದ್ಧ ಇರುವ ದಲಿತ ಸಂಘಟನೆಗಳು ಮತ್ತು ಪರಿಶಿಷ್ಟ ಜನಾಂಗದವರು ಮನೆಯಲ್ಲಿ ಹೆಂಗಸರು ಮಕ್ಕಳು ಮನುಸ್ಮೃತಿ ಸಂಸ್ಕೃತಿ ಒಪ್ಪಿಕೊಂಡು ಅದೆ ದೇವರೆಂದು ಅಸತ್ಯದ ದಾರಿಯಲ್ಲಿ ನೆಡೆಯುವಗ ಜಾತಿ ಅಭಿವೃದ್ಧಿ ಯ ಬದಲಿಗೆ ಗುಲಾಮರಾಗಿ ಇದ್ದಾರೆ ಅಂಬೇಡ್ಕರ್ ಇದೆಲ್ಲ ವಿರುದ್ಧ ಇದ್ದಾರು ಆದಿವಾಸಿ ದಲಿತರಿಗೆ ಸರಿಯಾದ ಸಂಘಟನೆಯ ಲಿಡರ್ ಮತ್ತು ಮಾರ್ಗದರ್ಶನ ದ ಕೋರತೆ ಇವತ್ತಿನ ಅವನತಿಗೆ ಕಾರಣ ಸರ್ಕಾರ ಎಷ್ಟೊಸಾಲ ಕೋಡುತ್ತಿದೆ ತೇಗೆದುಕೊಂಡ ದಲಿತ ಆದಿವಾಸಿಗಳ ಅಭಿವೃದ್ಧಿಗೆ ಬಳಸಲು ವಿಪಲ ಅದವರು ಒಬ್ಬರಿಗೊಬ್ಬರು ಏಕ ಮನಸ್ಸು ಇಲ್ಲಾ ಯಾರು ಚೈತನ್ಯ ದಲ್ಲಿ ಬೆಳೆಯಲಿಲ್ಲಾ ಬೆಳೆದವರು ಜಾತಿಯ ಅಭಿವೃದ್ಧಿ ಕಾಳಜಿ ವಯಿಸಲಿಲ್ಲಾ ಆದಿವಾಸಿ ದಲಿತರು ಅದಿವಾಸಿದಲಿತರನ್ನೆ ತುಳಿಯಲು ದಲಿತ ಜಾತಿಯನ್ನು ಬಳಸಿಕೊಂಡು ಅಟ್ಟಹಾಸ ದಿಂದ ಇದೆ ಮನುಸ್ಮೃತಿ ಸಂಸ್ಕೃತಿ ಜಾತಿ ಇದನ್ನು ಅಭಿವೃದ್ಧಿ ಪಡಿಸುತ್ತಿರುವುದು ಆದಿವಾಸಿ ದಲಿತ ಜಾತಿಗಳಿಗೆ ಇದೆ ಅಙ್ನಾನ ಇದನ್ನು ಗುರುತ್ತಿಸುವುದರಲ್ಲಿ ಸಂಘಟನೆಯ ಕಾರ್ಯಕರ್ತರು ವಿಫಲವೆ ಕಾರಣ ಸಂಘಟನೆಯ ಆರ್ಥಿಕ ಅಭಿವೃದ್ಧಿ ಮಾರ್ಗ ತಿಳಿಯದೆ ಇರುವ ಅಙ್ನಾನವೆ ಕಾರಣ.ನಾವು ಮಾಂಸಾಹಾರಿಗಳು ಅಗಿರುವುದರಿಂದ ಮಾಂಸಾಹಾರಿಗಳ ಧರ್ಮ ಮಾರ್ಗದಲ್ಲಿ ನೆಡೆದರೆ ಮಾತ್ರ ಅಭಿವೃದ್ಧಿ ಭಗವಾನ್ ಬುದ್ಧ, ಅಮ್ಮ ಭಗವಾನ್, ಕ್ರೈಸ್ತ ಮುಸ್ಲಿಂ ಇಂತವುಗಳ ಅನುಸರಿಸಿ ನೆಡೆದರೆ ಮಾತ್ರ ಅಭಿವೃದ್ಧಿ ಮತ್ತು ಎಕತ್ವ.ಜೀವ ಇರುವ ದೇವ,ನ್ನು ಆರಾಧಿಸಿ (ಮನುಸ್ಮೃತಿಯ ಸಂಸ್ಕೃತಿ ಬಿಡಿ ತುಳಿಯುತ್ತಾರೆ ಜಾತಿ ಧರ್ಮ ಹೆಸರಲ್ಲಿ ಗುಲಾಮರಾಗಿ ಬೇಡಿ)

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...