Homeದಲಿತ್ ಫೈಲ್ಸ್ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

- Advertisement -
- Advertisement -

ಭಾರತೀಯ ಮಾಧ್ಯಮಗಳಲ್ಲಿ ಸುಮಾರು 90 ಪ್ರತಿಶತದಷ್ಟು ನಾಯಕತ್ವದ ಸ್ಥಾನಗಳನ್ನು ಮೇಲ್ಜಾತಿ ಗುಂಪುಗಳು ಆಕ್ರಮಿಸಿಕೊಂಡಿವೆ. ಒಬ್ಬನೇ ಒಬ್ಬ ದಲಿತ ಅಥವಾ ಆದಿವಾಸಿಯು ಭಾರತೀಯ ಮುಖ್ಯವಾಹಿನಿ ಮಾಧ್ಯಮವನ್ನು ಮುನ್ನಡೆಸುತ್ತಿಲ್ಲ ಎಂದು ಹೊಸ ವರದಿಯೊಂದು ಬಹಿರಂಗಪಡಿಸಿದೆ.

“ನಮ್ಮ ಕಥೆಗಳನ್ನು ಯಾರು ಹೇಳುತ್ತಾರೆ ಎಂಬುದು ಮುಖ್ಯ: ಭಾರತೀಯ ಮಾಧ್ಯಮದಲ್ಲಿ ಅಂಚಿನಲ್ಲಿರುವ ಜಾತಿ ಗುಂಪುಗಳ ಪ್ರಾತಿನಿಧ್ಯ” ಎಂಬ ವಿಷಯದ ಕುರಿತು ಎರಡನೇ ಆವೃತ್ತಿಯ ವರದಿಯನ್ನು ‘ಆಕ್ಸ್‌ಫ್ಯಾಮ್ ಇಂಡಿಯಾ-ನ್ಯೂಸ್‌ಲಾಂಡ್ರಿ’ ಬಿಡುಗಡೆ ಮಾಡಿದ್ದು ಆತಂಕಕಾರಿ ಸಂಗತಿಗಳು ಹೊರಬಿದ್ದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವರದಿಯ ಎರಡನೇ ಆವೃತ್ತಿ ಹಲವಾರು ಕಟು ಸತ್ಯಗಳನ್ನು ಹೊರಗೆಳೆದಿದೆ. ಮುಖ್ಯವಾಹಿನಿ ಮುದ್ರಣ, ಟಿವಿ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ಸುಮಾರು 90 ಪ್ರತಿಶತ ನಾಯಕತ್ವ ಸ್ಥಾನಗಳನ್ನು ಪರಿಶಿಷ್ಟ ಜಾತಿಯಿಲ್ಲದ ಸಾಮಾನ್ಯ ಜಾತಿ ಗುಂಪುಗಳು ಆಕ್ರಮಿಸಿಕೊಂಡಿವೆ ಎಂದು ವರದಿಯು ಬಹಿರಂಗಪಡಿಸಿದೆ.

ದಕ್ಷಿಣ ಏಷ್ಯಾದ ಅತಿದೊಡ್ಡ ಸುದ್ದಿ ಮಾಧ್ಯಮ ವೇದಿಕೆಯಾದ ‘ದಿ ಮೀಡಿಯಾ ರಂಬಲ್‌’ನಲ್ಲಿ ಬಿಡುಗಡೆಯಾದ ವರದಿಯ ಪ್ರಕಾರ, “ಹಿಂದಿ ಮತ್ತು ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟವಾಗುವ 5 ಲೇಖನಗಳಲ್ಲಿ 3 ಲೇಖನಗಳನ್ನು ಸಾಮಾನ್ಯ ಜಾತಿ ಲೇಖಕರು ಬರೆದರೆ, ಕಟ್ಟಕಡೆಯ ಜಾತಿಗಳು (SC, ST ಅಥವಾ OBC) ಕೇವಲ 1 ಲೇಖನವನ್ನಷ್ಟೇ ಬರೆಯುತ್ತಿವೆ.”

ಪತ್ರಿಕೆಗಳು, ಟಿವಿ ಸುದ್ದಿ ವಾಹಿನಿಗಳು, ಸುದ್ದಿ ವೆಬ್‌ಸೈಟ್‌ಗಳು, ನಿಯತಕಾಲಿಕೆಗಳು ಸೇರಿದಂತೆ 121 ಸುದ್ದಿಮನೆಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ. ಇವುಗಳ ನಾಯಕತ್ವ ಸ್ಥಾನಗಳಲ್ಲಿ (ಸಂಪಾದಕ-ಮುಖ್ಯ, ವ್ಯವಸ್ಥಾಪಕ ಸಂಪಾದಕ, ಕಾರ್ಯನಿರ್ವಾಹಕ ಸಂಪಾದಕ, ಬ್ಯೂರೋ ಮುಖ್ಯಸ್ಥ, ಇನ್‌ಪುಟ್/ಔಟ್‌ಪುಟ್ ಸಂಪಾದಕ) 106 ಸಂಸ್ಥೆಗಳು ಬಲಾಢ್ಯ ಜಾತಿಗಳಿಂದ ಆಕ್ರಮಿಸಿಕೊಂಡಿವೆ.

ಐದು ಸಂಸ್ಥೆಗಳಲ್ಲಿ ಇತರೆ ಹಿಂದುಳಿದ ವರ್ಗಗಳು, ಆರರಲ್ಲಿ ಅಲ್ಪಸಂಖ್ಯಾತ ಸಮುದಾಯಗಳು ಇವೆ. ನಾಲ್ಕು ಸಂಸ್ಥೆಗಳ ಸ್ಥಿತಿ ಗುರುತಿಸಲಾಗಿಲ್ಲ. ಡಿಬೇಟ್‌ ನಡೆಸುವವರ ಪೈಕಿ ಪ್ರತಿ ನಾಲ್ಕು ಆಂಕರ್‌ಗಳಲ್ಲಿ ಮೂವರು ಮೇಲ್ಜಾತಿಯವರು. ಹಿಂದಿ ಚಾನೆಲ್‌ಗಳ ಒಟ್ಟು 40 ಮತ್ತು ಇಂಗ್ಲಿಷ್ ಚಾನೆಲ್‌ಗಳ 47 ಆಂಕರ್‌ಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಅವರಲ್ಲಿ ಒಬ್ಬರೂ ದಲಿತ, ಆದಿವಾಸಿ ಅಥವಾ ಒಬಿಸಿ ಇಲ್ಲ.

“ಸುದ್ದಿ ವಾಹಿನಿಗಳು ತಮ್ಮ ಪ್ರೈಮ್‌ಟೈಮ್ ಚರ್ಚಾ ಕಾರ್ಯಕ್ರಮಗಳಲ್ಲಿ ಶೇಕಡಾ 70ರಷ್ಟು ಮೇಲ್ಜಾತಿಗಳ ಪ್ಯಾನೆಲಿಸ್ಟ್‌ಗಳನ್ನು ಹೊಂದಿರುತ್ತವೆ. ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟವಾಗುವ ಒಟ್ಟು ಲೇಖನಗಳಲ್ಲಿ ದಲಿತರು ಮತ್ತು ಆದಿವಾಸಿಗಳು ಶೇಕಡಾ 5ಕ್ಕಿಂತ ಹೆಚ್ಚು ಬರೆಯುವುದಿಲ್ಲ. ಹಿಂದಿ ಪತ್ರಿಕೆಗಳು ಸ್ವಲ್ಪ ಉತ್ತಮವಾಗಿವೆ. ಸುಮಾರು 10 ಪ್ರತಿಶತದಷ್ಟು ದಲಿತ ಲೇಖಕರು ಬರೆಯುತ್ತಾರೆ” ಎಂಬುದನ್ನು ವರದಿ ಉಲ್ಲೇಖಿಸಿದೆ.

ಸುದ್ದಿ ವೆಬ್‌ಸೈಟ್‌ಗಳಲ್ಲಿ 72 ಪ್ರತಿಶತ ಲೇಖನಗಳನ್ನು ಮೇಲ್ಜಾತಿ ಜನರು ಬರೆದಿದ್ದಾರೆ. ಅಧ್ಯಯನಕ್ಕೆ ಒಳಪಡಿಸಲಾದ 12 ನಿಯತಕಾಲಿಕೆಗಳ ಕವರ್ ಪೇಜ್‌ನಲ್ಲಿ ಬಂದ 972 ಲೇಖನಗಳಲ್ಲಿ 10 ಮಾತ್ರ ಜಾತಿಗೆ ಸಂಬಂಧಿಸಿದ ವಿಷಯಗಳಾಗಿದ್ದವು.

ಆಕ್ಸ್‌ಫ್ಯಾಮ್ ಇಂಡಿಯಾದ ಸಿಇಒ ಅಮಿತಾಭ್ ಬೆಹರ್, “ಮೂರು ವರ್ಷಗಳಲ್ಲಿ ನಮ್ಮ ಎರಡನೇ ವರದಿಯನ್ನು ಬಿಡುಗಡೆ ಮಾಡಿದ್ದೇವೆ. ಭಾರತದಲ್ಲಿನ ಸುದ್ದಿಮನೆಗಳು ಕಟ್ಟಕಡೆಯ ಸಮುದಾಯಗಳನ್ನು ಒಳಗೊಳ್ಳುತ್ತಿಲ್ಲ ಎಂಬುದನ್ನು ವರದಿ ತೋರಿಸುತ್ತಲೇ ಇದೆ. ಈ ಎಲ್ಲಾ ವೇದಿಕೆಗಳಲ್ಲಿ ದಲಿತರು, ಆದಿವಾಸಿಗಳು ಮತ್ತು ಬಹುಜನರಿಗೆ ಅನುಕೂಲಕರ ವಾತಾವರಣವನ್ನು ನಿರ್ಮಿಸುವಲ್ಲಿ ಮಾಧ್ಯಮ ಸಂಸ್ಥೆಗಳ ನಾಯಕರು ವಿಫಲರಾಗುತ್ತಿದ್ದಾರೆ” ಎಂದು ವಿಷಾದಿಸಿದ್ದಾರೆ.

ದೇಶದ ಮಾಧ್ಯಮಗಳು ಕೇವಲ ತನ್ನ ಸುದ್ದಿ ಪ್ರಸಾರವಷ್ಟೇ ಅಲ್ಲದೇ ನೇಮಕಾತಿ ಪದ್ಧತಿಯಲ್ಲೂ ಸಮಾನತೆಯ ಸಾಂವಿಧಾನಿಕ ತತ್ವವನ್ನು ಎತ್ತಿಹಿಡಿಯಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ರಾಜಕಾರಣದಲ್ಲಿ ದಲಿತರನ್ನು ಒಡೆದು ಆಳುವುದು ಸುಲಭವೇ?

“ಮಾಧ್ಯಮ ಸಂಸ್ಥೆಗಳು ತಕ್ಷಣವೇ ನೇಮಕಾತಿ ರೀತಿಯಲ್ಲಿ ಗಮನಾರ್ಹವಾದ ಕೂಲಂಕಷ ಪರೀಕ್ಷೆಯನ್ನು ನಡೆಸಿಕೊಳ್ಳಬೇಕಿದೆ. ದೇಶಾದ್ಯಂತ ಸುದ್ದಿಮನೆಗಳು ಹೆಚ್ಚು ವೈವಿಧ್ಯಮಯವಾಗಿ, ಎಲ್ಲರನ್ನೂ ಒಳಗೊಳ್ಳುವುದನ್ನು ಖಚಿತಪಡಿಸಿಕೊಳ್ಳಬೇಕಿದೆ. ತಾರತಮ್ಯ ಮತ್ತು ಅನ್ಯಾಯವಿಲ್ಲದೆ ಭಾರತವನ್ನು ಕಟ್ಟಲು ಇದು ಅಗತ್ಯವಾಗಿದೆ” ಎಂದಿದ್ದಾರೆ ಬೆಹರ್‌.

ವರದಿಯು ಸುಮಾರು 43 ಭಾರತೀಯ ಮುದ್ರಣ, ಟಿವಿ ಮತ್ತು ಡಿಜಿಟಲ್ ಮಾಧ್ಯಮಗಳನ್ನು, ಅವುಗಳ ಕವರೇಜ್, ನಾಯಕತ್ವದ ಸಾಮಾಜಿಕ ಸ್ಥಾನಮಾನವನ್ನು, ಸಂಸ್ಥೆಗಳಿಂದ ನೇಮಕಗೊಂಡ ಪತ್ರಕರ್ತರ ಜಾತಿ ಹಿನ್ನೆಲೆಯನ್ನು ಅಧ್ಯಯನ ಮಾಡಿದೆ.

ಏಪ್ರಿಲ್ 2021 ಮತ್ತು ಮಾರ್ಚ್ 2022ರ ನಡುವೆ ನಡೆಸಲಾದ ಸಂಶೋಧನೆಯು ನಿಯತಕಾಲಿಕೆ ಮತ್ತು ದಿನಪತ್ರಿಕೆಗಳಲ್ಲಿ ಪ್ರಕಟವಾದ 20,000ಕ್ಕೂ ಹೆಚ್ಚು ಲೇಖನಗಳನ್ನು, 76 ಆಂಕರ್‌ಗಳು ಮತ್ತು 3,318 ಪ್ಯಾನೆಲಿಸ್ಟ್‌ಗಳ 2,075 ಪ್ರೈಮ್-ಟೈಮ್ ಚರ್ಚೆಗಳನ್ನು, 12 ತಿಂಗಳ ಆನ್‌ಲೈನ್ ಸುದ್ದಿ ವರದಿಗಳನ್ನು ವಿಶ್ಲೇಷಣೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂಬೇಡ್ಕರ್ ಅನುಯಾಯಿಗಳು ಅದವರು ಧರ್ಮ ದಲ್ಲಿ ಯು ಭಗವಾನ್ ಬುದ್ಧ ಧರ್ಮದಲ್ಲಿ ದಲಿತ ಸಂಘಟನೆಗಳು ಮತ್ತು ಆದಿವಾಸಿಗಳು ಅನುಸರಿಸುತ್ತಾ ದ್ಯಾನ ಓದು ಕೆಲಸ ಉದ್ಯೋಗ ಇತ್ಯಾದಿ ಯಲ್ಲಿ ಒಂದೇ ಮನಸ್ಸು ಒಂದೆ ಅಭಿಪ್ರಾಯ ಇರುತ್ತಿತ್ತು ಪರಿಶಿಷ್ಟ ಜಾತಿ ಅಭಿವೃದ್ಧಿ ಆಗುತ್ತಿತ್ತು ಒಗ್ಗಟ್ಟು ಬೇರುರಿ ಬೆಳೆದು ಫಲ ಕೋಡುತ್ತಿತ್ತು , ಮನುಸ್ಮೃತಿ ವಿರುದ್ಧ ಇರುವ ದಲಿತ ಸಂಘಟನೆಗಳು ಮತ್ತು ಪರಿಶಿಷ್ಟ ಜನಾಂಗದವರು ಮನೆಯಲ್ಲಿ ಹೆಂಗಸರು ಮಕ್ಕಳು ಮನುಸ್ಮೃತಿ ಸಂಸ್ಕೃತಿ ಒಪ್ಪಿಕೊಂಡು ಅದೆ ದೇವರೆಂದು ಅಸತ್ಯದ ದಾರಿಯಲ್ಲಿ ನೆಡೆಯುವಗ ಜಾತಿ ಅಭಿವೃದ್ಧಿ ಯ ಬದಲಿಗೆ ಗುಲಾಮರಾಗಿ ಇದ್ದಾರೆ ಅಂಬೇಡ್ಕರ್ ಇದೆಲ್ಲ ವಿರುದ್ಧ ಇದ್ದಾರು ಆದಿವಾಸಿ ದಲಿತರಿಗೆ ಸರಿಯಾದ ಸಂಘಟನೆಯ ಲಿಡರ್ ಮತ್ತು ಮಾರ್ಗದರ್ಶನ ದ ಕೋರತೆ ಇವತ್ತಿನ ಅವನತಿಗೆ ಕಾರಣ ಸರ್ಕಾರ ಎಷ್ಟೊಸಾಲ ಕೋಡುತ್ತಿದೆ ತೇಗೆದುಕೊಂಡ ದಲಿತ ಆದಿವಾಸಿಗಳ ಅಭಿವೃದ್ಧಿಗೆ ಬಳಸಲು ವಿಪಲ ಅದವರು ಒಬ್ಬರಿಗೊಬ್ಬರು ಏಕ ಮನಸ್ಸು ಇಲ್ಲಾ ಯಾರು ಚೈತನ್ಯ ದಲ್ಲಿ ಬೆಳೆಯಲಿಲ್ಲಾ ಬೆಳೆದವರು ಜಾತಿಯ ಅಭಿವೃದ್ಧಿ ಕಾಳಜಿ ವಯಿಸಲಿಲ್ಲಾ ಆದಿವಾಸಿ ದಲಿತರು ಅದಿವಾಸಿದಲಿತರನ್ನೆ ತುಳಿಯಲು ದಲಿತ ಜಾತಿಯನ್ನು ಬಳಸಿಕೊಂಡು ಅಟ್ಟಹಾಸ ದಿಂದ ಇದೆ ಮನುಸ್ಮೃತಿ ಸಂಸ್ಕೃತಿ ಜಾತಿ ಇದನ್ನು ಅಭಿವೃದ್ಧಿ ಪಡಿಸುತ್ತಿರುವುದು ಆದಿವಾಸಿ ದಲಿತ ಜಾತಿಗಳಿಗೆ ಇದೆ ಅಙ್ನಾನ ಇದನ್ನು ಗುರುತ್ತಿಸುವುದರಲ್ಲಿ ಸಂಘಟನೆಯ ಕಾರ್ಯಕರ್ತರು ವಿಫಲವೆ ಕಾರಣ ಸಂಘಟನೆಯ ಆರ್ಥಿಕ ಅಭಿವೃದ್ಧಿ ಮಾರ್ಗ ತಿಳಿಯದೆ ಇರುವ ಅಙ್ನಾನವೆ ಕಾರಣ.ನಾವು ಮಾಂಸಾಹಾರಿಗಳು ಅಗಿರುವುದರಿಂದ ಮಾಂಸಾಹಾರಿಗಳ ಧರ್ಮ ಮಾರ್ಗದಲ್ಲಿ ನೆಡೆದರೆ ಮಾತ್ರ ಅಭಿವೃದ್ಧಿ ಭಗವಾನ್ ಬುದ್ಧ, ಅಮ್ಮ ಭಗವಾನ್, ಕ್ರೈಸ್ತ ಮುಸ್ಲಿಂ ಇಂತವುಗಳ ಅನುಸರಿಸಿ ನೆಡೆದರೆ ಮಾತ್ರ ಅಭಿವೃದ್ಧಿ ಮತ್ತು ಎಕತ್ವ.ಜೀವ ಇರುವ ದೇವ,ನ್ನು ಆರಾಧಿಸಿ (ಮನುಸ್ಮೃತಿಯ ಸಂಸ್ಕೃತಿ ಬಿಡಿ ತುಳಿಯುತ್ತಾರೆ ಜಾತಿ ಧರ್ಮ ಹೆಸರಲ್ಲಿ ಗುಲಾಮರಾಗಿ ಬೇಡಿ)

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...