Homeದಲಿತ್ ಫೈಲ್ಸ್ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

- Advertisement -
- Advertisement -

ಭಾರತೀಯ ಮಾಧ್ಯಮಗಳಲ್ಲಿ ಸುಮಾರು 90 ಪ್ರತಿಶತದಷ್ಟು ನಾಯಕತ್ವದ ಸ್ಥಾನಗಳನ್ನು ಮೇಲ್ಜಾತಿ ಗುಂಪುಗಳು ಆಕ್ರಮಿಸಿಕೊಂಡಿವೆ. ಒಬ್ಬನೇ ಒಬ್ಬ ದಲಿತ ಅಥವಾ ಆದಿವಾಸಿಯು ಭಾರತೀಯ ಮುಖ್ಯವಾಹಿನಿ ಮಾಧ್ಯಮವನ್ನು ಮುನ್ನಡೆಸುತ್ತಿಲ್ಲ ಎಂದು ಹೊಸ ವರದಿಯೊಂದು ಬಹಿರಂಗಪಡಿಸಿದೆ.

“ನಮ್ಮ ಕಥೆಗಳನ್ನು ಯಾರು ಹೇಳುತ್ತಾರೆ ಎಂಬುದು ಮುಖ್ಯ: ಭಾರತೀಯ ಮಾಧ್ಯಮದಲ್ಲಿ ಅಂಚಿನಲ್ಲಿರುವ ಜಾತಿ ಗುಂಪುಗಳ ಪ್ರಾತಿನಿಧ್ಯ” ಎಂಬ ವಿಷಯದ ಕುರಿತು ಎರಡನೇ ಆವೃತ್ತಿಯ ವರದಿಯನ್ನು ‘ಆಕ್ಸ್‌ಫ್ಯಾಮ್ ಇಂಡಿಯಾ-ನ್ಯೂಸ್‌ಲಾಂಡ್ರಿ’ ಬಿಡುಗಡೆ ಮಾಡಿದ್ದು ಆತಂಕಕಾರಿ ಸಂಗತಿಗಳು ಹೊರಬಿದ್ದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವರದಿಯ ಎರಡನೇ ಆವೃತ್ತಿ ಹಲವಾರು ಕಟು ಸತ್ಯಗಳನ್ನು ಹೊರಗೆಳೆದಿದೆ. ಮುಖ್ಯವಾಹಿನಿ ಮುದ್ರಣ, ಟಿವಿ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ಸುಮಾರು 90 ಪ್ರತಿಶತ ನಾಯಕತ್ವ ಸ್ಥಾನಗಳನ್ನು ಪರಿಶಿಷ್ಟ ಜಾತಿಯಿಲ್ಲದ ಸಾಮಾನ್ಯ ಜಾತಿ ಗುಂಪುಗಳು ಆಕ್ರಮಿಸಿಕೊಂಡಿವೆ ಎಂದು ವರದಿಯು ಬಹಿರಂಗಪಡಿಸಿದೆ.

ದಕ್ಷಿಣ ಏಷ್ಯಾದ ಅತಿದೊಡ್ಡ ಸುದ್ದಿ ಮಾಧ್ಯಮ ವೇದಿಕೆಯಾದ ‘ದಿ ಮೀಡಿಯಾ ರಂಬಲ್‌’ನಲ್ಲಿ ಬಿಡುಗಡೆಯಾದ ವರದಿಯ ಪ್ರಕಾರ, “ಹಿಂದಿ ಮತ್ತು ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟವಾಗುವ 5 ಲೇಖನಗಳಲ್ಲಿ 3 ಲೇಖನಗಳನ್ನು ಸಾಮಾನ್ಯ ಜಾತಿ ಲೇಖಕರು ಬರೆದರೆ, ಕಟ್ಟಕಡೆಯ ಜಾತಿಗಳು (SC, ST ಅಥವಾ OBC) ಕೇವಲ 1 ಲೇಖನವನ್ನಷ್ಟೇ ಬರೆಯುತ್ತಿವೆ.”

ಪತ್ರಿಕೆಗಳು, ಟಿವಿ ಸುದ್ದಿ ವಾಹಿನಿಗಳು, ಸುದ್ದಿ ವೆಬ್‌ಸೈಟ್‌ಗಳು, ನಿಯತಕಾಲಿಕೆಗಳು ಸೇರಿದಂತೆ 121 ಸುದ್ದಿಮನೆಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ. ಇವುಗಳ ನಾಯಕತ್ವ ಸ್ಥಾನಗಳಲ್ಲಿ (ಸಂಪಾದಕ-ಮುಖ್ಯ, ವ್ಯವಸ್ಥಾಪಕ ಸಂಪಾದಕ, ಕಾರ್ಯನಿರ್ವಾಹಕ ಸಂಪಾದಕ, ಬ್ಯೂರೋ ಮುಖ್ಯಸ್ಥ, ಇನ್‌ಪುಟ್/ಔಟ್‌ಪುಟ್ ಸಂಪಾದಕ) 106 ಸಂಸ್ಥೆಗಳು ಬಲಾಢ್ಯ ಜಾತಿಗಳಿಂದ ಆಕ್ರಮಿಸಿಕೊಂಡಿವೆ.

ಐದು ಸಂಸ್ಥೆಗಳಲ್ಲಿ ಇತರೆ ಹಿಂದುಳಿದ ವರ್ಗಗಳು, ಆರರಲ್ಲಿ ಅಲ್ಪಸಂಖ್ಯಾತ ಸಮುದಾಯಗಳು ಇವೆ. ನಾಲ್ಕು ಸಂಸ್ಥೆಗಳ ಸ್ಥಿತಿ ಗುರುತಿಸಲಾಗಿಲ್ಲ. ಡಿಬೇಟ್‌ ನಡೆಸುವವರ ಪೈಕಿ ಪ್ರತಿ ನಾಲ್ಕು ಆಂಕರ್‌ಗಳಲ್ಲಿ ಮೂವರು ಮೇಲ್ಜಾತಿಯವರು. ಹಿಂದಿ ಚಾನೆಲ್‌ಗಳ ಒಟ್ಟು 40 ಮತ್ತು ಇಂಗ್ಲಿಷ್ ಚಾನೆಲ್‌ಗಳ 47 ಆಂಕರ್‌ಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಅವರಲ್ಲಿ ಒಬ್ಬರೂ ದಲಿತ, ಆದಿವಾಸಿ ಅಥವಾ ಒಬಿಸಿ ಇಲ್ಲ.

“ಸುದ್ದಿ ವಾಹಿನಿಗಳು ತಮ್ಮ ಪ್ರೈಮ್‌ಟೈಮ್ ಚರ್ಚಾ ಕಾರ್ಯಕ್ರಮಗಳಲ್ಲಿ ಶೇಕಡಾ 70ರಷ್ಟು ಮೇಲ್ಜಾತಿಗಳ ಪ್ಯಾನೆಲಿಸ್ಟ್‌ಗಳನ್ನು ಹೊಂದಿರುತ್ತವೆ. ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟವಾಗುವ ಒಟ್ಟು ಲೇಖನಗಳಲ್ಲಿ ದಲಿತರು ಮತ್ತು ಆದಿವಾಸಿಗಳು ಶೇಕಡಾ 5ಕ್ಕಿಂತ ಹೆಚ್ಚು ಬರೆಯುವುದಿಲ್ಲ. ಹಿಂದಿ ಪತ್ರಿಕೆಗಳು ಸ್ವಲ್ಪ ಉತ್ತಮವಾಗಿವೆ. ಸುಮಾರು 10 ಪ್ರತಿಶತದಷ್ಟು ದಲಿತ ಲೇಖಕರು ಬರೆಯುತ್ತಾರೆ” ಎಂಬುದನ್ನು ವರದಿ ಉಲ್ಲೇಖಿಸಿದೆ.

ಸುದ್ದಿ ವೆಬ್‌ಸೈಟ್‌ಗಳಲ್ಲಿ 72 ಪ್ರತಿಶತ ಲೇಖನಗಳನ್ನು ಮೇಲ್ಜಾತಿ ಜನರು ಬರೆದಿದ್ದಾರೆ. ಅಧ್ಯಯನಕ್ಕೆ ಒಳಪಡಿಸಲಾದ 12 ನಿಯತಕಾಲಿಕೆಗಳ ಕವರ್ ಪೇಜ್‌ನಲ್ಲಿ ಬಂದ 972 ಲೇಖನಗಳಲ್ಲಿ 10 ಮಾತ್ರ ಜಾತಿಗೆ ಸಂಬಂಧಿಸಿದ ವಿಷಯಗಳಾಗಿದ್ದವು.

ಆಕ್ಸ್‌ಫ್ಯಾಮ್ ಇಂಡಿಯಾದ ಸಿಇಒ ಅಮಿತಾಭ್ ಬೆಹರ್, “ಮೂರು ವರ್ಷಗಳಲ್ಲಿ ನಮ್ಮ ಎರಡನೇ ವರದಿಯನ್ನು ಬಿಡುಗಡೆ ಮಾಡಿದ್ದೇವೆ. ಭಾರತದಲ್ಲಿನ ಸುದ್ದಿಮನೆಗಳು ಕಟ್ಟಕಡೆಯ ಸಮುದಾಯಗಳನ್ನು ಒಳಗೊಳ್ಳುತ್ತಿಲ್ಲ ಎಂಬುದನ್ನು ವರದಿ ತೋರಿಸುತ್ತಲೇ ಇದೆ. ಈ ಎಲ್ಲಾ ವೇದಿಕೆಗಳಲ್ಲಿ ದಲಿತರು, ಆದಿವಾಸಿಗಳು ಮತ್ತು ಬಹುಜನರಿಗೆ ಅನುಕೂಲಕರ ವಾತಾವರಣವನ್ನು ನಿರ್ಮಿಸುವಲ್ಲಿ ಮಾಧ್ಯಮ ಸಂಸ್ಥೆಗಳ ನಾಯಕರು ವಿಫಲರಾಗುತ್ತಿದ್ದಾರೆ” ಎಂದು ವಿಷಾದಿಸಿದ್ದಾರೆ.

ದೇಶದ ಮಾಧ್ಯಮಗಳು ಕೇವಲ ತನ್ನ ಸುದ್ದಿ ಪ್ರಸಾರವಷ್ಟೇ ಅಲ್ಲದೇ ನೇಮಕಾತಿ ಪದ್ಧತಿಯಲ್ಲೂ ಸಮಾನತೆಯ ಸಾಂವಿಧಾನಿಕ ತತ್ವವನ್ನು ಎತ್ತಿಹಿಡಿಯಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ರಾಜಕಾರಣದಲ್ಲಿ ದಲಿತರನ್ನು ಒಡೆದು ಆಳುವುದು ಸುಲಭವೇ?

“ಮಾಧ್ಯಮ ಸಂಸ್ಥೆಗಳು ತಕ್ಷಣವೇ ನೇಮಕಾತಿ ರೀತಿಯಲ್ಲಿ ಗಮನಾರ್ಹವಾದ ಕೂಲಂಕಷ ಪರೀಕ್ಷೆಯನ್ನು ನಡೆಸಿಕೊಳ್ಳಬೇಕಿದೆ. ದೇಶಾದ್ಯಂತ ಸುದ್ದಿಮನೆಗಳು ಹೆಚ್ಚು ವೈವಿಧ್ಯಮಯವಾಗಿ, ಎಲ್ಲರನ್ನೂ ಒಳಗೊಳ್ಳುವುದನ್ನು ಖಚಿತಪಡಿಸಿಕೊಳ್ಳಬೇಕಿದೆ. ತಾರತಮ್ಯ ಮತ್ತು ಅನ್ಯಾಯವಿಲ್ಲದೆ ಭಾರತವನ್ನು ಕಟ್ಟಲು ಇದು ಅಗತ್ಯವಾಗಿದೆ” ಎಂದಿದ್ದಾರೆ ಬೆಹರ್‌.

ವರದಿಯು ಸುಮಾರು 43 ಭಾರತೀಯ ಮುದ್ರಣ, ಟಿವಿ ಮತ್ತು ಡಿಜಿಟಲ್ ಮಾಧ್ಯಮಗಳನ್ನು, ಅವುಗಳ ಕವರೇಜ್, ನಾಯಕತ್ವದ ಸಾಮಾಜಿಕ ಸ್ಥಾನಮಾನವನ್ನು, ಸಂಸ್ಥೆಗಳಿಂದ ನೇಮಕಗೊಂಡ ಪತ್ರಕರ್ತರ ಜಾತಿ ಹಿನ್ನೆಲೆಯನ್ನು ಅಧ್ಯಯನ ಮಾಡಿದೆ.

ಏಪ್ರಿಲ್ 2021 ಮತ್ತು ಮಾರ್ಚ್ 2022ರ ನಡುವೆ ನಡೆಸಲಾದ ಸಂಶೋಧನೆಯು ನಿಯತಕಾಲಿಕೆ ಮತ್ತು ದಿನಪತ್ರಿಕೆಗಳಲ್ಲಿ ಪ್ರಕಟವಾದ 20,000ಕ್ಕೂ ಹೆಚ್ಚು ಲೇಖನಗಳನ್ನು, 76 ಆಂಕರ್‌ಗಳು ಮತ್ತು 3,318 ಪ್ಯಾನೆಲಿಸ್ಟ್‌ಗಳ 2,075 ಪ್ರೈಮ್-ಟೈಮ್ ಚರ್ಚೆಗಳನ್ನು, 12 ತಿಂಗಳ ಆನ್‌ಲೈನ್ ಸುದ್ದಿ ವರದಿಗಳನ್ನು ವಿಶ್ಲೇಷಣೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂಬೇಡ್ಕರ್ ಅನುಯಾಯಿಗಳು ಅದವರು ಧರ್ಮ ದಲ್ಲಿ ಯು ಭಗವಾನ್ ಬುದ್ಧ ಧರ್ಮದಲ್ಲಿ ದಲಿತ ಸಂಘಟನೆಗಳು ಮತ್ತು ಆದಿವಾಸಿಗಳು ಅನುಸರಿಸುತ್ತಾ ದ್ಯಾನ ಓದು ಕೆಲಸ ಉದ್ಯೋಗ ಇತ್ಯಾದಿ ಯಲ್ಲಿ ಒಂದೇ ಮನಸ್ಸು ಒಂದೆ ಅಭಿಪ್ರಾಯ ಇರುತ್ತಿತ್ತು ಪರಿಶಿಷ್ಟ ಜಾತಿ ಅಭಿವೃದ್ಧಿ ಆಗುತ್ತಿತ್ತು ಒಗ್ಗಟ್ಟು ಬೇರುರಿ ಬೆಳೆದು ಫಲ ಕೋಡುತ್ತಿತ್ತು , ಮನುಸ್ಮೃತಿ ವಿರುದ್ಧ ಇರುವ ದಲಿತ ಸಂಘಟನೆಗಳು ಮತ್ತು ಪರಿಶಿಷ್ಟ ಜನಾಂಗದವರು ಮನೆಯಲ್ಲಿ ಹೆಂಗಸರು ಮಕ್ಕಳು ಮನುಸ್ಮೃತಿ ಸಂಸ್ಕೃತಿ ಒಪ್ಪಿಕೊಂಡು ಅದೆ ದೇವರೆಂದು ಅಸತ್ಯದ ದಾರಿಯಲ್ಲಿ ನೆಡೆಯುವಗ ಜಾತಿ ಅಭಿವೃದ್ಧಿ ಯ ಬದಲಿಗೆ ಗುಲಾಮರಾಗಿ ಇದ್ದಾರೆ ಅಂಬೇಡ್ಕರ್ ಇದೆಲ್ಲ ವಿರುದ್ಧ ಇದ್ದಾರು ಆದಿವಾಸಿ ದಲಿತರಿಗೆ ಸರಿಯಾದ ಸಂಘಟನೆಯ ಲಿಡರ್ ಮತ್ತು ಮಾರ್ಗದರ್ಶನ ದ ಕೋರತೆ ಇವತ್ತಿನ ಅವನತಿಗೆ ಕಾರಣ ಸರ್ಕಾರ ಎಷ್ಟೊಸಾಲ ಕೋಡುತ್ತಿದೆ ತೇಗೆದುಕೊಂಡ ದಲಿತ ಆದಿವಾಸಿಗಳ ಅಭಿವೃದ್ಧಿಗೆ ಬಳಸಲು ವಿಪಲ ಅದವರು ಒಬ್ಬರಿಗೊಬ್ಬರು ಏಕ ಮನಸ್ಸು ಇಲ್ಲಾ ಯಾರು ಚೈತನ್ಯ ದಲ್ಲಿ ಬೆಳೆಯಲಿಲ್ಲಾ ಬೆಳೆದವರು ಜಾತಿಯ ಅಭಿವೃದ್ಧಿ ಕಾಳಜಿ ವಯಿಸಲಿಲ್ಲಾ ಆದಿವಾಸಿ ದಲಿತರು ಅದಿವಾಸಿದಲಿತರನ್ನೆ ತುಳಿಯಲು ದಲಿತ ಜಾತಿಯನ್ನು ಬಳಸಿಕೊಂಡು ಅಟ್ಟಹಾಸ ದಿಂದ ಇದೆ ಮನುಸ್ಮೃತಿ ಸಂಸ್ಕೃತಿ ಜಾತಿ ಇದನ್ನು ಅಭಿವೃದ್ಧಿ ಪಡಿಸುತ್ತಿರುವುದು ಆದಿವಾಸಿ ದಲಿತ ಜಾತಿಗಳಿಗೆ ಇದೆ ಅಙ್ನಾನ ಇದನ್ನು ಗುರುತ್ತಿಸುವುದರಲ್ಲಿ ಸಂಘಟನೆಯ ಕಾರ್ಯಕರ್ತರು ವಿಫಲವೆ ಕಾರಣ ಸಂಘಟನೆಯ ಆರ್ಥಿಕ ಅಭಿವೃದ್ಧಿ ಮಾರ್ಗ ತಿಳಿಯದೆ ಇರುವ ಅಙ್ನಾನವೆ ಕಾರಣ.ನಾವು ಮಾಂಸಾಹಾರಿಗಳು ಅಗಿರುವುದರಿಂದ ಮಾಂಸಾಹಾರಿಗಳ ಧರ್ಮ ಮಾರ್ಗದಲ್ಲಿ ನೆಡೆದರೆ ಮಾತ್ರ ಅಭಿವೃದ್ಧಿ ಭಗವಾನ್ ಬುದ್ಧ, ಅಮ್ಮ ಭಗವಾನ್, ಕ್ರೈಸ್ತ ಮುಸ್ಲಿಂ ಇಂತವುಗಳ ಅನುಸರಿಸಿ ನೆಡೆದರೆ ಮಾತ್ರ ಅಭಿವೃದ್ಧಿ ಮತ್ತು ಎಕತ್ವ.ಜೀವ ಇರುವ ದೇವ,ನ್ನು ಆರಾಧಿಸಿ (ಮನುಸ್ಮೃತಿಯ ಸಂಸ್ಕೃತಿ ಬಿಡಿ ತುಳಿಯುತ್ತಾರೆ ಜಾತಿ ಧರ್ಮ ಹೆಸರಲ್ಲಿ ಗುಲಾಮರಾಗಿ ಬೇಡಿ)

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...