Homeದಲಿತ್ ಫೈಲ್ಸ್ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

- Advertisement -
- Advertisement -

ಭಾರತೀಯ ಮಾಧ್ಯಮಗಳಲ್ಲಿ ಸುಮಾರು 90 ಪ್ರತಿಶತದಷ್ಟು ನಾಯಕತ್ವದ ಸ್ಥಾನಗಳನ್ನು ಮೇಲ್ಜಾತಿ ಗುಂಪುಗಳು ಆಕ್ರಮಿಸಿಕೊಂಡಿವೆ. ಒಬ್ಬನೇ ಒಬ್ಬ ದಲಿತ ಅಥವಾ ಆದಿವಾಸಿಯು ಭಾರತೀಯ ಮುಖ್ಯವಾಹಿನಿ ಮಾಧ್ಯಮವನ್ನು ಮುನ್ನಡೆಸುತ್ತಿಲ್ಲ ಎಂದು ಹೊಸ ವರದಿಯೊಂದು ಬಹಿರಂಗಪಡಿಸಿದೆ.

“ನಮ್ಮ ಕಥೆಗಳನ್ನು ಯಾರು ಹೇಳುತ್ತಾರೆ ಎಂಬುದು ಮುಖ್ಯ: ಭಾರತೀಯ ಮಾಧ್ಯಮದಲ್ಲಿ ಅಂಚಿನಲ್ಲಿರುವ ಜಾತಿ ಗುಂಪುಗಳ ಪ್ರಾತಿನಿಧ್ಯ” ಎಂಬ ವಿಷಯದ ಕುರಿತು ಎರಡನೇ ಆವೃತ್ತಿಯ ವರದಿಯನ್ನು ‘ಆಕ್ಸ್‌ಫ್ಯಾಮ್ ಇಂಡಿಯಾ-ನ್ಯೂಸ್‌ಲಾಂಡ್ರಿ’ ಬಿಡುಗಡೆ ಮಾಡಿದ್ದು ಆತಂಕಕಾರಿ ಸಂಗತಿಗಳು ಹೊರಬಿದ್ದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವರದಿಯ ಎರಡನೇ ಆವೃತ್ತಿ ಹಲವಾರು ಕಟು ಸತ್ಯಗಳನ್ನು ಹೊರಗೆಳೆದಿದೆ. ಮುಖ್ಯವಾಹಿನಿ ಮುದ್ರಣ, ಟಿವಿ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ಸುಮಾರು 90 ಪ್ರತಿಶತ ನಾಯಕತ್ವ ಸ್ಥಾನಗಳನ್ನು ಪರಿಶಿಷ್ಟ ಜಾತಿಯಿಲ್ಲದ ಸಾಮಾನ್ಯ ಜಾತಿ ಗುಂಪುಗಳು ಆಕ್ರಮಿಸಿಕೊಂಡಿವೆ ಎಂದು ವರದಿಯು ಬಹಿರಂಗಪಡಿಸಿದೆ.

ದಕ್ಷಿಣ ಏಷ್ಯಾದ ಅತಿದೊಡ್ಡ ಸುದ್ದಿ ಮಾಧ್ಯಮ ವೇದಿಕೆಯಾದ ‘ದಿ ಮೀಡಿಯಾ ರಂಬಲ್‌’ನಲ್ಲಿ ಬಿಡುಗಡೆಯಾದ ವರದಿಯ ಪ್ರಕಾರ, “ಹಿಂದಿ ಮತ್ತು ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟವಾಗುವ 5 ಲೇಖನಗಳಲ್ಲಿ 3 ಲೇಖನಗಳನ್ನು ಸಾಮಾನ್ಯ ಜಾತಿ ಲೇಖಕರು ಬರೆದರೆ, ಕಟ್ಟಕಡೆಯ ಜಾತಿಗಳು (SC, ST ಅಥವಾ OBC) ಕೇವಲ 1 ಲೇಖನವನ್ನಷ್ಟೇ ಬರೆಯುತ್ತಿವೆ.”

ಪತ್ರಿಕೆಗಳು, ಟಿವಿ ಸುದ್ದಿ ವಾಹಿನಿಗಳು, ಸುದ್ದಿ ವೆಬ್‌ಸೈಟ್‌ಗಳು, ನಿಯತಕಾಲಿಕೆಗಳು ಸೇರಿದಂತೆ 121 ಸುದ್ದಿಮನೆಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ. ಇವುಗಳ ನಾಯಕತ್ವ ಸ್ಥಾನಗಳಲ್ಲಿ (ಸಂಪಾದಕ-ಮುಖ್ಯ, ವ್ಯವಸ್ಥಾಪಕ ಸಂಪಾದಕ, ಕಾರ್ಯನಿರ್ವಾಹಕ ಸಂಪಾದಕ, ಬ್ಯೂರೋ ಮುಖ್ಯಸ್ಥ, ಇನ್‌ಪುಟ್/ಔಟ್‌ಪುಟ್ ಸಂಪಾದಕ) 106 ಸಂಸ್ಥೆಗಳು ಬಲಾಢ್ಯ ಜಾತಿಗಳಿಂದ ಆಕ್ರಮಿಸಿಕೊಂಡಿವೆ.

ಐದು ಸಂಸ್ಥೆಗಳಲ್ಲಿ ಇತರೆ ಹಿಂದುಳಿದ ವರ್ಗಗಳು, ಆರರಲ್ಲಿ ಅಲ್ಪಸಂಖ್ಯಾತ ಸಮುದಾಯಗಳು ಇವೆ. ನಾಲ್ಕು ಸಂಸ್ಥೆಗಳ ಸ್ಥಿತಿ ಗುರುತಿಸಲಾಗಿಲ್ಲ. ಡಿಬೇಟ್‌ ನಡೆಸುವವರ ಪೈಕಿ ಪ್ರತಿ ನಾಲ್ಕು ಆಂಕರ್‌ಗಳಲ್ಲಿ ಮೂವರು ಮೇಲ್ಜಾತಿಯವರು. ಹಿಂದಿ ಚಾನೆಲ್‌ಗಳ ಒಟ್ಟು 40 ಮತ್ತು ಇಂಗ್ಲಿಷ್ ಚಾನೆಲ್‌ಗಳ 47 ಆಂಕರ್‌ಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಅವರಲ್ಲಿ ಒಬ್ಬರೂ ದಲಿತ, ಆದಿವಾಸಿ ಅಥವಾ ಒಬಿಸಿ ಇಲ್ಲ.

“ಸುದ್ದಿ ವಾಹಿನಿಗಳು ತಮ್ಮ ಪ್ರೈಮ್‌ಟೈಮ್ ಚರ್ಚಾ ಕಾರ್ಯಕ್ರಮಗಳಲ್ಲಿ ಶೇಕಡಾ 70ರಷ್ಟು ಮೇಲ್ಜಾತಿಗಳ ಪ್ಯಾನೆಲಿಸ್ಟ್‌ಗಳನ್ನು ಹೊಂದಿರುತ್ತವೆ. ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟವಾಗುವ ಒಟ್ಟು ಲೇಖನಗಳಲ್ಲಿ ದಲಿತರು ಮತ್ತು ಆದಿವಾಸಿಗಳು ಶೇಕಡಾ 5ಕ್ಕಿಂತ ಹೆಚ್ಚು ಬರೆಯುವುದಿಲ್ಲ. ಹಿಂದಿ ಪತ್ರಿಕೆಗಳು ಸ್ವಲ್ಪ ಉತ್ತಮವಾಗಿವೆ. ಸುಮಾರು 10 ಪ್ರತಿಶತದಷ್ಟು ದಲಿತ ಲೇಖಕರು ಬರೆಯುತ್ತಾರೆ” ಎಂಬುದನ್ನು ವರದಿ ಉಲ್ಲೇಖಿಸಿದೆ.

ಸುದ್ದಿ ವೆಬ್‌ಸೈಟ್‌ಗಳಲ್ಲಿ 72 ಪ್ರತಿಶತ ಲೇಖನಗಳನ್ನು ಮೇಲ್ಜಾತಿ ಜನರು ಬರೆದಿದ್ದಾರೆ. ಅಧ್ಯಯನಕ್ಕೆ ಒಳಪಡಿಸಲಾದ 12 ನಿಯತಕಾಲಿಕೆಗಳ ಕವರ್ ಪೇಜ್‌ನಲ್ಲಿ ಬಂದ 972 ಲೇಖನಗಳಲ್ಲಿ 10 ಮಾತ್ರ ಜಾತಿಗೆ ಸಂಬಂಧಿಸಿದ ವಿಷಯಗಳಾಗಿದ್ದವು.

ಆಕ್ಸ್‌ಫ್ಯಾಮ್ ಇಂಡಿಯಾದ ಸಿಇಒ ಅಮಿತಾಭ್ ಬೆಹರ್, “ಮೂರು ವರ್ಷಗಳಲ್ಲಿ ನಮ್ಮ ಎರಡನೇ ವರದಿಯನ್ನು ಬಿಡುಗಡೆ ಮಾಡಿದ್ದೇವೆ. ಭಾರತದಲ್ಲಿನ ಸುದ್ದಿಮನೆಗಳು ಕಟ್ಟಕಡೆಯ ಸಮುದಾಯಗಳನ್ನು ಒಳಗೊಳ್ಳುತ್ತಿಲ್ಲ ಎಂಬುದನ್ನು ವರದಿ ತೋರಿಸುತ್ತಲೇ ಇದೆ. ಈ ಎಲ್ಲಾ ವೇದಿಕೆಗಳಲ್ಲಿ ದಲಿತರು, ಆದಿವಾಸಿಗಳು ಮತ್ತು ಬಹುಜನರಿಗೆ ಅನುಕೂಲಕರ ವಾತಾವರಣವನ್ನು ನಿರ್ಮಿಸುವಲ್ಲಿ ಮಾಧ್ಯಮ ಸಂಸ್ಥೆಗಳ ನಾಯಕರು ವಿಫಲರಾಗುತ್ತಿದ್ದಾರೆ” ಎಂದು ವಿಷಾದಿಸಿದ್ದಾರೆ.

ದೇಶದ ಮಾಧ್ಯಮಗಳು ಕೇವಲ ತನ್ನ ಸುದ್ದಿ ಪ್ರಸಾರವಷ್ಟೇ ಅಲ್ಲದೇ ನೇಮಕಾತಿ ಪದ್ಧತಿಯಲ್ಲೂ ಸಮಾನತೆಯ ಸಾಂವಿಧಾನಿಕ ತತ್ವವನ್ನು ಎತ್ತಿಹಿಡಿಯಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ರಾಜಕಾರಣದಲ್ಲಿ ದಲಿತರನ್ನು ಒಡೆದು ಆಳುವುದು ಸುಲಭವೇ?

“ಮಾಧ್ಯಮ ಸಂಸ್ಥೆಗಳು ತಕ್ಷಣವೇ ನೇಮಕಾತಿ ರೀತಿಯಲ್ಲಿ ಗಮನಾರ್ಹವಾದ ಕೂಲಂಕಷ ಪರೀಕ್ಷೆಯನ್ನು ನಡೆಸಿಕೊಳ್ಳಬೇಕಿದೆ. ದೇಶಾದ್ಯಂತ ಸುದ್ದಿಮನೆಗಳು ಹೆಚ್ಚು ವೈವಿಧ್ಯಮಯವಾಗಿ, ಎಲ್ಲರನ್ನೂ ಒಳಗೊಳ್ಳುವುದನ್ನು ಖಚಿತಪಡಿಸಿಕೊಳ್ಳಬೇಕಿದೆ. ತಾರತಮ್ಯ ಮತ್ತು ಅನ್ಯಾಯವಿಲ್ಲದೆ ಭಾರತವನ್ನು ಕಟ್ಟಲು ಇದು ಅಗತ್ಯವಾಗಿದೆ” ಎಂದಿದ್ದಾರೆ ಬೆಹರ್‌.

ವರದಿಯು ಸುಮಾರು 43 ಭಾರತೀಯ ಮುದ್ರಣ, ಟಿವಿ ಮತ್ತು ಡಿಜಿಟಲ್ ಮಾಧ್ಯಮಗಳನ್ನು, ಅವುಗಳ ಕವರೇಜ್, ನಾಯಕತ್ವದ ಸಾಮಾಜಿಕ ಸ್ಥಾನಮಾನವನ್ನು, ಸಂಸ್ಥೆಗಳಿಂದ ನೇಮಕಗೊಂಡ ಪತ್ರಕರ್ತರ ಜಾತಿ ಹಿನ್ನೆಲೆಯನ್ನು ಅಧ್ಯಯನ ಮಾಡಿದೆ.

ಏಪ್ರಿಲ್ 2021 ಮತ್ತು ಮಾರ್ಚ್ 2022ರ ನಡುವೆ ನಡೆಸಲಾದ ಸಂಶೋಧನೆಯು ನಿಯತಕಾಲಿಕೆ ಮತ್ತು ದಿನಪತ್ರಿಕೆಗಳಲ್ಲಿ ಪ್ರಕಟವಾದ 20,000ಕ್ಕೂ ಹೆಚ್ಚು ಲೇಖನಗಳನ್ನು, 76 ಆಂಕರ್‌ಗಳು ಮತ್ತು 3,318 ಪ್ಯಾನೆಲಿಸ್ಟ್‌ಗಳ 2,075 ಪ್ರೈಮ್-ಟೈಮ್ ಚರ್ಚೆಗಳನ್ನು, 12 ತಿಂಗಳ ಆನ್‌ಲೈನ್ ಸುದ್ದಿ ವರದಿಗಳನ್ನು ವಿಶ್ಲೇಷಣೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂಬೇಡ್ಕರ್ ಅನುಯಾಯಿಗಳು ಅದವರು ಧರ್ಮ ದಲ್ಲಿ ಯು ಭಗವಾನ್ ಬುದ್ಧ ಧರ್ಮದಲ್ಲಿ ದಲಿತ ಸಂಘಟನೆಗಳು ಮತ್ತು ಆದಿವಾಸಿಗಳು ಅನುಸರಿಸುತ್ತಾ ದ್ಯಾನ ಓದು ಕೆಲಸ ಉದ್ಯೋಗ ಇತ್ಯಾದಿ ಯಲ್ಲಿ ಒಂದೇ ಮನಸ್ಸು ಒಂದೆ ಅಭಿಪ್ರಾಯ ಇರುತ್ತಿತ್ತು ಪರಿಶಿಷ್ಟ ಜಾತಿ ಅಭಿವೃದ್ಧಿ ಆಗುತ್ತಿತ್ತು ಒಗ್ಗಟ್ಟು ಬೇರುರಿ ಬೆಳೆದು ಫಲ ಕೋಡುತ್ತಿತ್ತು , ಮನುಸ್ಮೃತಿ ವಿರುದ್ಧ ಇರುವ ದಲಿತ ಸಂಘಟನೆಗಳು ಮತ್ತು ಪರಿಶಿಷ್ಟ ಜನಾಂಗದವರು ಮನೆಯಲ್ಲಿ ಹೆಂಗಸರು ಮಕ್ಕಳು ಮನುಸ್ಮೃತಿ ಸಂಸ್ಕೃತಿ ಒಪ್ಪಿಕೊಂಡು ಅದೆ ದೇವರೆಂದು ಅಸತ್ಯದ ದಾರಿಯಲ್ಲಿ ನೆಡೆಯುವಗ ಜಾತಿ ಅಭಿವೃದ್ಧಿ ಯ ಬದಲಿಗೆ ಗುಲಾಮರಾಗಿ ಇದ್ದಾರೆ ಅಂಬೇಡ್ಕರ್ ಇದೆಲ್ಲ ವಿರುದ್ಧ ಇದ್ದಾರು ಆದಿವಾಸಿ ದಲಿತರಿಗೆ ಸರಿಯಾದ ಸಂಘಟನೆಯ ಲಿಡರ್ ಮತ್ತು ಮಾರ್ಗದರ್ಶನ ದ ಕೋರತೆ ಇವತ್ತಿನ ಅವನತಿಗೆ ಕಾರಣ ಸರ್ಕಾರ ಎಷ್ಟೊಸಾಲ ಕೋಡುತ್ತಿದೆ ತೇಗೆದುಕೊಂಡ ದಲಿತ ಆದಿವಾಸಿಗಳ ಅಭಿವೃದ್ಧಿಗೆ ಬಳಸಲು ವಿಪಲ ಅದವರು ಒಬ್ಬರಿಗೊಬ್ಬರು ಏಕ ಮನಸ್ಸು ಇಲ್ಲಾ ಯಾರು ಚೈತನ್ಯ ದಲ್ಲಿ ಬೆಳೆಯಲಿಲ್ಲಾ ಬೆಳೆದವರು ಜಾತಿಯ ಅಭಿವೃದ್ಧಿ ಕಾಳಜಿ ವಯಿಸಲಿಲ್ಲಾ ಆದಿವಾಸಿ ದಲಿತರು ಅದಿವಾಸಿದಲಿತರನ್ನೆ ತುಳಿಯಲು ದಲಿತ ಜಾತಿಯನ್ನು ಬಳಸಿಕೊಂಡು ಅಟ್ಟಹಾಸ ದಿಂದ ಇದೆ ಮನುಸ್ಮೃತಿ ಸಂಸ್ಕೃತಿ ಜಾತಿ ಇದನ್ನು ಅಭಿವೃದ್ಧಿ ಪಡಿಸುತ್ತಿರುವುದು ಆದಿವಾಸಿ ದಲಿತ ಜಾತಿಗಳಿಗೆ ಇದೆ ಅಙ್ನಾನ ಇದನ್ನು ಗುರುತ್ತಿಸುವುದರಲ್ಲಿ ಸಂಘಟನೆಯ ಕಾರ್ಯಕರ್ತರು ವಿಫಲವೆ ಕಾರಣ ಸಂಘಟನೆಯ ಆರ್ಥಿಕ ಅಭಿವೃದ್ಧಿ ಮಾರ್ಗ ತಿಳಿಯದೆ ಇರುವ ಅಙ್ನಾನವೆ ಕಾರಣ.ನಾವು ಮಾಂಸಾಹಾರಿಗಳು ಅಗಿರುವುದರಿಂದ ಮಾಂಸಾಹಾರಿಗಳ ಧರ್ಮ ಮಾರ್ಗದಲ್ಲಿ ನೆಡೆದರೆ ಮಾತ್ರ ಅಭಿವೃದ್ಧಿ ಭಗವಾನ್ ಬುದ್ಧ, ಅಮ್ಮ ಭಗವಾನ್, ಕ್ರೈಸ್ತ ಮುಸ್ಲಿಂ ಇಂತವುಗಳ ಅನುಸರಿಸಿ ನೆಡೆದರೆ ಮಾತ್ರ ಅಭಿವೃದ್ಧಿ ಮತ್ತು ಎಕತ್ವ.ಜೀವ ಇರುವ ದೇವ,ನ್ನು ಆರಾಧಿಸಿ (ಮನುಸ್ಮೃತಿಯ ಸಂಸ್ಕೃತಿ ಬಿಡಿ ತುಳಿಯುತ್ತಾರೆ ಜಾತಿ ಧರ್ಮ ಹೆಸರಲ್ಲಿ ಗುಲಾಮರಾಗಿ ಬೇಡಿ)

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...