Homeಮುಖಪುಟಡಿಸಿಎಂ ಸ್ಥಾನ ಇಲ್ಲ, 29 ಜನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ: ಸಿಎಂ ಬೊಮ್ಮಾಯಿ

ಡಿಸಿಎಂ ಸ್ಥಾನ ಇಲ್ಲ, 29 ಜನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ: ಸಿಎಂ ಬೊಮ್ಮಾಯಿ

- Advertisement -
- Advertisement -

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿಯವರು ಇಂದು ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು, ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ ಈ ಬಾರಿ ಡಿಸಿಎಂ ಸ್ಥಾನ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, “ದೆಹಲಿಯಲ್ಲಿ ವರಿಷ್ಠರೊಂದಿಗೆ ಚರ್ಚೆಯಾಗಿದೆ. 29 ಜನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕುರಿತು ಪಟ್ಟಿಯನ್ನು ರಾಜ್ಯಭವನಕ್ಕೆ ಕಳಿಸಿದ್ದೇನೆ” ಎಂದಿದ್ದಾರೆ.

ನಮ್ಮ ಸಚಿವ ಸಂಪುಟದಲ್ಲಿ ಅನುಭವಿಗಳು ಮತ್ತು ಹೊಸಬರು ಸಹ ಇದ್ದಾರೆ. 8 ಲಿಂಗಾಯತ, 7 ಒಕ್ಕಲಿಗ, 7 ಒಬಿಸಿ, 3 ಪರಿಶಿಷ್ಟ ಜಾತಿ ಮತ್ತು 1 ಪರಿಶಿಷ್ಟ ಪಂಗಡ, 1 ಬ್ರಾಹ್ಮಣ, 1 ರೆಡ್ಡಿ ಸಮುದಾಯ ಮತ್ತು ಒಬ್ಬ ಮಹಿಳಾ ಶಾಸಕಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ನಮ್ಮ ನಾಯಕರಾದ ಬಿ.ಎಸ್ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಈ ಸಚಿವ ಸಂಪುಟ ರಚನೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಜೆ.ಪಿ ನಡ್ಡಾರವರು ಮತ್ತು ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ರವರು ಯಡಿಯೂರಪ್ಪನವರ ಮಗ ಬಿ.ವೈ ವಿಜೇಯೇಂದ್ರರವರ ಜೊತೆ ಮಾತನಾಡಿದ್ದಾರೆ. ಸಚಿವ ಸಂಪುಟದ ಪಟ್ಟಿಯಲ್ಲಿ ಬಿ.ವೈ ವಿಜೇಯೇಂದ್ರ ಹೆಸರು ಇಲ್ಲ ಎಂದು ಸಿಎಂ ತಿಳಿಸಿದ್ದಾರೆ.

ನಾನು ಸಿಎಂ ಆದ ಕೂಡಲೇ ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಿ ಪರಿಹಾರ ಘೋಷಿಸಿದ್ದೇನೆ. ರೈತ ಮಕ್ಕಳಿಗೆ 1 ಸಾವಿರ ಕೋಟಿ ರೂ ಮೀಸಲಿಟ್ಟು ಹೊಸ ಯೋಜನೆ ಸ್ಕಾಲರ್‌ ಶಿಪ್ ಯೋಜನೆ ಘೋಷಿಸಿದ್ದೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ರವರು ಹೊಸ ಸಚಿವ ಸಂಪುಟದಲ್ಲಿ ಇಲ್ಲ ಎಂಬುದು ತಿಳಿದುಬಂದಿದೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...