Homeಮುಖಪುಟಆಕ್ಸಿಜನ್ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ: ಡೇಟಾ ಇಲ್ಲದ್ದಕ್ಕೆ ರಾಜ್ಯಗಳೆ ಹೊಣೆ ಎಂದ ಕೇಂದ್ರ ಸರ್ಕಾರ!

ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ: ಡೇಟಾ ಇಲ್ಲದ್ದಕ್ಕೆ ರಾಜ್ಯಗಳೆ ಹೊಣೆ ಎಂದ ಕೇಂದ್ರ ಸರ್ಕಾರ!

- Advertisement -
- Advertisement -

ಈ ವರ್ಷದ ಏಪ್ರಿಲ್ ಆರಂಭದಲ್ಲಿ ಅಪ್ಪಳಿಸಿದ ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಆಕ್ಸಿಜನ್ ಸಿಗದೇ ಜನರು ಒದ್ದಾಡುತ್ತಿರುವ, ಪ್ರಾಣ ಬಿಟ್ಟ ಸಾವಿರಾರು ಪ್ರಕರಣಗಳು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದವು. ಆದರೆ ಆಕ್ಸಿಜನ್ ಕೊರತೆಯಿಂದಾದ ಸಾವುಗಳ ಯಾವುದೇ ವರದಿಯನ್ನು ರಾಜ್ಯಗಳು ನೀಡಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ವಾದಿಸಿದೆ.

ಆರೋಗ್ಯವು ರಾಜ್ಯಕ್ಕೆ ಸಂಬಂಧಿಸಿದ ವಿಷಯವಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಿರಂತರವಾಗಿ ಕೋವಿಡ್ ಪ್ರಕರಣಗಳ ಮತ್ತು ಸಾವುಗಳ ವರದಿಯನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತಿದೆ. ಆದರೆ ಆಕ್ಸಿಜನ್ ಕೊರತೆಯಿಂದ ಉಂಟಾದ ಕೋವಿಡ್ ಸಾವುಗಳ ಡೇಟವನ್ನು ನೀಡಿಲ್ಲ ಎಂದು ಕೇಂದ್ರ ಆರೋಗ್ಯ ಮಂತ್ರಿ ಭಾರತಿ ಪ್ರವೀಣ್ ಪವಾರ್ ರಾಜ್ಯಸಭೆಗೆ ಲಿಖಿತ ರೂಪದಲ್ಲಿ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ಚಾಮರಾಜನಗರ ದುರಂತಕ್ಕೆ ಆಮ್ಲಜನಕದ ಕೊರತೆ ಕಾರಣ: ಸಮಿತಿ ವರದಿ

ಆಕ್ಸಿಜನ್ ಕೊರತೆಯಿಂದ ರಸ್ತೆಯಲ್ಲಿ – ಆಸ್ಪತ್ರೆಯಲ್ಲಿ ಉಂಟಾದ ಕೋವಿಡ್‌ ಸಾವುಗಳೆಷ್ಟು ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ರಸ್ತೆಯಲ್ಲಾಗಲಿ, ಆಸ್ಪತ್ರೆಯಲ್ಲಾಗಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಹೇಳಿದ್ದಾರೆ.

ಆದರೆ ಮೊದಲನೇ ಅಲೆಗಿಂತ ಎರಡನೇ ಅಲೆಯಲ್ಲಿ ಹೆಚ್ಚಿನ ಆಕ್ಸಿಜನ್ ಬೇಡಿಕೆಯುಂಟಾಗಿತ್ತು. ಮೊದಲ ಅಲೆಯ 3,095 ಮೆಟ್ರಿಕ್ ಟನ್‌ ಬೇಡಿಕೆಗಿಂತ ಎರಡನೇ ಅಲೆಯಲ್ಲಿ ಸುಮಾರು 9000 ಮೆಟ್ರಿಕ್ ಟನ್ ಆಕ್ಸಿಜನ್ ಬೇಡಿಕೆಯಿತ್ತು. ಕೇಂದ್ರ ಸರ್ಕಾರ ಅದನ್ನು ರಾಜ್ಯಗಳಿಗೆ ಸಮಾನವಾಗಿ ಪೂರೈಸಲು ಕ್ರಮ ಕೈಗೊಂಡಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.

ಆಕ್ಸಿಜನ್ ಕೊರತೆಯಿಂದಾಗಿ ಗೋವಾದ ಆಸ್ಪತ್ರೆಯಲ್ಲಿ ಐದು ದಿನಗಳಲ್ಲಿ 80 ಸಾವು ಸಂಭವಿಸಿದ ವರದಿಯಾಗಿತ್ತು. ಕರ್ನಾಟಕದ ಚಾಮರಾಜನಗರದಲ್ಲಿ ಆಮ್ಲಜನಕ ಸಿಗದೇ 24 ಜನ, ಕೋಲಾರದಲ್ಲಿ ಹತ್ತಕ್ಕೂ ಹೆಚ್ಚು ಜನ ಮೃತ ಪಟ್ಟಿದ್ದಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಹೈದರಾಬಾದ್‌ನಲ್ಲಿ 11 ಜನ,  ದೆಹಲಿಯಲ್ಲಿ 21 ಜನ ಆಕ್ಸಿಜನ್ ಸಿಗದೇ ಪ್ರಾಣಬಿಟ್ಟರೆಂದು ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

“ಜನರು ಆಕ್ಸಿಜನ್ ಸಿಗದೇ ಕಾರಣ ತಮ್ಮ ಪ್ರೀತಿ ಪಾತ್ರರನ್ನು ಮತ್ತು ನೆರೆಹೊರೆಯವರನ್ನು ಕಳೆದುಕೊಂಡಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಆದರೆ ಇದು ಕಾಳಜಿಯಿಲ್ಲದ ಕುರುಡು ಸರ್ಕಾರ” ಎಂದು ಕಾಂಗ್ರೆಸ್ ವಕ್ತಾರ ಕೆ.ಸಿ ವೇಣುಗೋಪಾಲ್ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ಆರೋಗ್ಯ ಸಚಿವರು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಹಾಗಾಗಿ ಇದರ ವಿರುದ್ದ ಹಕ್ಕು ಚ್ಯುತಿ ಮಂಡಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಲೋಕಸಭೆಯಲ್ಲಿಯೂ ಸಹ ಕೇಂದ್ರ ಸಚಿವ ಮನ್ಸುಕ್ ಮಾಂಡವಿಯ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಕೋವಿಡ್ ಎರಡನೇ ಅಲೆಯ ಕೋವಿಡ್ ಸಾವುಗಳು ಮಾಹಿತಿ ನೀಡಬೇಕಿರುವುದು ರಾಜ್ಯಗಳ ಜವಾಬ್ದಾರಿ ಎಂದು ಆರೋಪಿಸಿದ್ದಾರೆ.

ಗಂಗೆಯಲ್ಲಿ ಹೆಣಗಳು ತೇಲಿ ಬಂದಿದ್ದು, ಸಾಮೂಹಿಕ ಶವಸಂಸ್ಕಾರದ ಚಿತ್ರಗಳು ವೈರಲ್ ಆಗಿದ್ದರಿಂದ ಕೋವಿಡ್ ಸಾವುಗಳ ಸಂಖ್ಯೆ ಹೆಚ್ಚಿರಬಹುದು ಎಂದು ಹೇಳಲಾಗುತ್ತಿದೆ. ಆದರೆ ಅದಕ್ಕಾಗಿ ಭಾರತ ಸರ್ಕಾರವನ್ನು, ಮೋದಿ ಸರ್ಕಾರವನ್ನು ದೂರವಂತಿಲ್ಲ. ನೋಂದಣಿ ಮಾಡುವವರು ಯಾರು? ಲೆಕ್ಕ ಹಾಕುವವರು ಯಾರು? ಇದೆಲ್ಲವನ್ನು ರಾಜ್ಯಗಳು ಮಾಡುತ್ತಿದ್ದರೂ ಅವರನ್ನು ಯಾರು ಕೇಳುವುದಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...