Homeಮುಖಪುಟರಾಷ್ಟ್ರವ್ಯಾಪಿ NRC ಜಾರಿ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಗೃಹ ಸಚಿವಾಲಯ

ರಾಷ್ಟ್ರವ್ಯಾಪಿ NRC ಜಾರಿ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಗೃಹ ಸಚಿವಾಲಯ

ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತು ಸೇರಿದಂತೆ ಅನೇಕ ವೇದಿಕೆಗಳಲ್ಲಿ, ಅನೇಕ ಸಲ ’ಕೇಂದ್ರವು ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಜಾರಿಗೆ ತರಲಿದೆ’ ಎಂದು ಘೋಷಿಸಿದ್ದರು.

- Advertisement -
- Advertisement -

ಕಾಂಗ್ರೆಸ್ ಸಂಸದ ಆನಂದ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿ ಗೃಹ ಸಚಿವಾಲಯವನ್ನು ಪ್ರಶ್ನಿಸಿತ್ತು.
ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯ ಪ್ರಶ್ನೆಗೆ ಪ್ರತಿಕ್ರಿಯೆಯಾಗಿ, ದೇಶಾದ್ಯಂತ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಕುರಿತು ಇನ್ನೂ ನಿರ್ಧಾರಕ್ಕೆ ಬಂದಿಲ್ಲ ಎಂದು ಗೃಹ ಸಚಿವಾಲಯ ತಿಳಿಸಿದೆ.

ಮುಂಬರುವ ಜನಗಣತಿ ಪ್ರಕ್ರಿಯೆ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ನವೀಕರಣದ ಬಗೆಗಿನ ಸಮಿತಿಯ ಆತಂಕಗಳಿಗೆ ಪ್ರತಿಕ್ರಿಯಿಸಿದ ಗೃಹ ಸಚಿವಾಲಯ (ಎಂಎಚ್‌ಎ), “ಜನಗಣತಿಯಲ್ಲಿ ಸಂಗ್ರಹಿಸಲಾದ ಎಲ್ಲಾ ವೈಯಕ್ತಿಕ ಮಟ್ಟದ ಮಾಹಿತಿಯು ಗೌಪ್ಯವಾಗಿರುತ್ತದೆ. ಜನಗಣತಿಯಲ್ಲಿ, ಆಡಳಿತಾತ್ಮಕ ಹಂತಗಳಲ್ಲಿ ಒಟ್ಟು ಡೇಟಾವನ್ನು ಮಾತ್ರ ಬಿಡುಗಡೆ ಮಾಡಲಾಗುತ್ತದೆ. ಹಿಂದಿನ ಜನಗಣತಿಗಳಂತೆ, ಜನಗಣತಿ 2021 ಅನ್ನು ಯಶಸ್ವಿಯಾಗಿ ನಡೆಸಲು ಮತ್ತು ಪೂರ್ಣಗೊಳಿಸಲು ಸಾರ್ವಜನಿಕರಲ್ಲಿ ಸರಿಯಾದ ಜಾಗೃತಿ ಮೂಡಿಸಲು ವ್ಯಾಪಕ ಪ್ರಚಾರ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ದೇಶಾದ್ಯಂತ ಯಶಸ್ವಿಯಾಗಿ ನಡೆಸಿದ ಪೂರ್ವ ಪರೀಕ್ಷೆಯಲ್ಲಿ ಎನ್‌ಪಿಆರ್ ಜೊತೆಗೆ ಜನಗಣತಿಯ ಪ್ರಶ್ನಾವಳಿಗಳನ್ನು ಪರೀಕ್ಷಿಸಲಾಗಿದೆ. ಎನ್‌ಆರ್‌ಸಿ ರಚಿಸಲು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಸರ್ಕಾರ ಕಾಲಕಾಲಕ್ಕೆ ಸ್ಪಷ್ಟಪಡಿಸಿದೆ” ಎಂದು ಎಂಎಚ್‌ಎ ವಿವರಿಸಿದೆ.

ಇದನ್ನೂ ಓದಿ: ಜನವರಿಯಿಂದಲೆ ಸಿಎಎ ಜಾರಿಯಾಗುವ ಸಾಧ್ಯತೆ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ಕಾಂಗ್ರೆಸ್ ಸಂಸದ ಆನಂದ್ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಎಂಎಚ್‌ಎಯನ್ನು ಪ್ರಶ್ನಿಸಿತ್ತು. ಕೇಂದ್ರ ಸರ್ಕಾರವು ರಾಷ್ಟ್ರವ್ಯಾಪಿ ಎನ್‌ಆರ್‌ಸಿ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳನ್ನು ನೀಡುತ್ತಿರುವುದರಿಂದ ಎನ್‌ಪಿಆರ್ ಮತ್ತು ಜನಗಣತಿಗೆ ಸಂಬಂಧಿಸಿದಂತೆ ಸಾಕಷ್ಟು ಅಸಮಾಧಾನ ಮತ್ತು ಭಯವಿದೆ ಎಂದು ಸಮಿತಿ ಹೇಳಿತು.

ಎನ್‌ಪಿಆರ್ ಬಗ್ಗೆ ಎಲ್ಲಾ ರಾಜ್ಯಗಳಿಗೆ ಸಂಕ್ಷಿಪ್ತವಾಗಿ ತಿಳಿಸಬೇಕು ಮತ್ತು ಸರಿಯಾಗಿ ಮಾತನಾಡಬೇಕು ಎಂದು ಸಮಿತಿ ಹೇಳಿದೆ.

ವಿರೋಧಪಕ್ಷಗಳ ಆಡಳಿತವಿರುವ ಹಲವಾರು ರಾಜ್ಯಗಳು ಈ ಹಿಂದೆ ಎನ್‌ಪಿಆರ್ ಅನ್ನು ಕಾರ್ಯಗತಗೊಳಿಸುವುದಿಲ್ಲ ಎಂದು ಹೇಳಿದ್ದವು. “ಇದನ್ನು ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಕಾರ್ಯಗತಗೊಳಿಸಲು ಬಳಸಲಾಗುವುದು ಮತ್ತು ಪೌರತ್ವ (ತಿದ್ದುಪಡಿ) ಕಾಯ್ದೆಯೊಂದಿಗೆ ಅದನ್ನು ಸೇರಿಸಿ, ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಸಲು ಬಳಸಲಾಗುತ್ತದೆ” ಎಂಬ ಆತಂಕವನ್ನು ಆ ರಾಜ್ಯಗಳು ವ್ಯಕ್ತಪಡಿಸಿದ್ದನ್ನು ಸಮಿತಿ ಉಲ್ಲೇಖಿಸಿತು.

ಇದನ್ನೂ ಓದಿ: ಸಿಎಎ ಶೀಘ್ರವೇ ಜಾರಿ; ಕೊರೊನಾ ಕಾರಣದಿಂದ ವಿಳಂಬವಾಗಿತ್ತು: ಜೆ.ಪಿ.ನಡ್ಡಾ

2019 ರ ಕೊನೆಯಲ್ಲಿ ಮತ್ತು 2020 ರ ಆರಂಭದಲ್ಲಿ ಸಿಎಎ-ಎನ್‌ಆರ್‌ಸಿ-ಎನ್‌ಪಿಆರ್ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆದಾಗ, ರಾಷ್ಟ್ರವ್ಯಾಪಿ ಎನ್‌ಆರ್‌ಸಿ ಪ್ರಕ್ರಿಯೆಯ ಪೂರ್ವ ತಯ್ಯಾರಿ ಆಗಲೇ ಆರಂಭಗೊಂಡಿದೆ ಎಂದು ಒಮ್ಮೆ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಹಿಂದಕ್ಕೆ ಹೆಜ್ಜೆ ಇಡಬೇಕಾಯಿತು. ನಂತರ ಸರ್ಕಾರವು ಎನ್‌ಆರ್‌ಸಿ ಯೋಜನೆಗೆ ಎಂದಿಗೂ ಅಂತಿಮ ಅನುಮತಿ ನೀಡಿಲ್ಲ ಎಂದು ಹೇಳಿಕೊಂಡಿತ್ತು. ಅದು ಇನ್ನೂ ಚರ್ಚೆಯಲ್ಲಿದೆ (ಈಗ ಎಂಎಚ್‌ಎ ಹೇಳಿರುವಂತೆ) ಎಂದು ಸರ್ಕಾರ ಹೇಳಿತ್ತು.

ಅದಕ್ಕೂ ಮೊದಲು, ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತು ಸೇರಿದಂತೆ ಅನೇಕ ವೇದಿಕೆಗಳಲ್ಲಿ, ಅನೇಕ ಸಲ ’ಕೇಂದ್ರವು ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಜಾರಿಗೆ ತರಲಿದೆ’ ಎಂದು ಘೋಷಿಸಿದ್ದರು.

ರಾಜಕೀಯ ರ್‍ಯಾಲಿಗಳು, ಪತ್ರಿಕಾಗೋಷ್ಠಿಗಳು ಮತ್ತು ಸಂದರ್ಶನಗಳಲ್ಲಿ ತಮ್ಮ ಸಾರ್ವಜನಿಕ ಘೋಷಣೆಗಳ ಹೊರತಾಗಿ, ರಾಷ್ಟ್ರೀಯ ಮಟ್ಟದಲ್ಲಿ ಎಲ್ಲ ರಾಜ್ಯಗಳಲ್ಲೂ (ಅಸ್ಸಾಂನಲ್ಲಿ ಎರಡನೇ ಬಾರಿ) ಎನ್‌ಆರ್‌ಸಿ ಪ್ರಕ್ರಿಯೆ ನಡೆಸುವ ಸರ್ಕಾರದ ನಿರ್ಧಾರವನ್ನು 2019 ರ ನವೆಂಬರ್ 20 ರಂದು ರಾಜ್ಯಸಭೆಗೆ ಕೇಂದ್ರ ಗೃಹ ಸಚಿವರು ತಿಳಿಸಿದ್ದರು.


ಇದನ್ನೂ ಓದಿ: ಸಿಎಎ ವಿರೋಧಿ ಪ್ರತಿಭಟನಕಾರರ ಬಂಧನ: ಆತಂಕ ವ್ಯಕ್ತಪಡಿಸಿದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...