Homeಮುಖಪುಟರಾಷ್ಟ್ರವ್ಯಾಪಿ NRC ಜಾರಿ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಗೃಹ ಸಚಿವಾಲಯ

ರಾಷ್ಟ್ರವ್ಯಾಪಿ NRC ಜಾರಿ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಗೃಹ ಸಚಿವಾಲಯ

ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತು ಸೇರಿದಂತೆ ಅನೇಕ ವೇದಿಕೆಗಳಲ್ಲಿ, ಅನೇಕ ಸಲ ’ಕೇಂದ್ರವು ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಜಾರಿಗೆ ತರಲಿದೆ’ ಎಂದು ಘೋಷಿಸಿದ್ದರು.

- Advertisement -
- Advertisement -

ಕಾಂಗ್ರೆಸ್ ಸಂಸದ ಆನಂದ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿ ಗೃಹ ಸಚಿವಾಲಯವನ್ನು ಪ್ರಶ್ನಿಸಿತ್ತು.
ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯ ಪ್ರಶ್ನೆಗೆ ಪ್ರತಿಕ್ರಿಯೆಯಾಗಿ, ದೇಶಾದ್ಯಂತ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಕುರಿತು ಇನ್ನೂ ನಿರ್ಧಾರಕ್ಕೆ ಬಂದಿಲ್ಲ ಎಂದು ಗೃಹ ಸಚಿವಾಲಯ ತಿಳಿಸಿದೆ.

ಮುಂಬರುವ ಜನಗಣತಿ ಪ್ರಕ್ರಿಯೆ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ನವೀಕರಣದ ಬಗೆಗಿನ ಸಮಿತಿಯ ಆತಂಕಗಳಿಗೆ ಪ್ರತಿಕ್ರಿಯಿಸಿದ ಗೃಹ ಸಚಿವಾಲಯ (ಎಂಎಚ್‌ಎ), “ಜನಗಣತಿಯಲ್ಲಿ ಸಂಗ್ರಹಿಸಲಾದ ಎಲ್ಲಾ ವೈಯಕ್ತಿಕ ಮಟ್ಟದ ಮಾಹಿತಿಯು ಗೌಪ್ಯವಾಗಿರುತ್ತದೆ. ಜನಗಣತಿಯಲ್ಲಿ, ಆಡಳಿತಾತ್ಮಕ ಹಂತಗಳಲ್ಲಿ ಒಟ್ಟು ಡೇಟಾವನ್ನು ಮಾತ್ರ ಬಿಡುಗಡೆ ಮಾಡಲಾಗುತ್ತದೆ. ಹಿಂದಿನ ಜನಗಣತಿಗಳಂತೆ, ಜನಗಣತಿ 2021 ಅನ್ನು ಯಶಸ್ವಿಯಾಗಿ ನಡೆಸಲು ಮತ್ತು ಪೂರ್ಣಗೊಳಿಸಲು ಸಾರ್ವಜನಿಕರಲ್ಲಿ ಸರಿಯಾದ ಜಾಗೃತಿ ಮೂಡಿಸಲು ವ್ಯಾಪಕ ಪ್ರಚಾರ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ದೇಶಾದ್ಯಂತ ಯಶಸ್ವಿಯಾಗಿ ನಡೆಸಿದ ಪೂರ್ವ ಪರೀಕ್ಷೆಯಲ್ಲಿ ಎನ್‌ಪಿಆರ್ ಜೊತೆಗೆ ಜನಗಣತಿಯ ಪ್ರಶ್ನಾವಳಿಗಳನ್ನು ಪರೀಕ್ಷಿಸಲಾಗಿದೆ. ಎನ್‌ಆರ್‌ಸಿ ರಚಿಸಲು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಸರ್ಕಾರ ಕಾಲಕಾಲಕ್ಕೆ ಸ್ಪಷ್ಟಪಡಿಸಿದೆ” ಎಂದು ಎಂಎಚ್‌ಎ ವಿವರಿಸಿದೆ.

ಇದನ್ನೂ ಓದಿ: ಜನವರಿಯಿಂದಲೆ ಸಿಎಎ ಜಾರಿಯಾಗುವ ಸಾಧ್ಯತೆ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ಕಾಂಗ್ರೆಸ್ ಸಂಸದ ಆನಂದ್ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಎಂಎಚ್‌ಎಯನ್ನು ಪ್ರಶ್ನಿಸಿತ್ತು. ಕೇಂದ್ರ ಸರ್ಕಾರವು ರಾಷ್ಟ್ರವ್ಯಾಪಿ ಎನ್‌ಆರ್‌ಸಿ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳನ್ನು ನೀಡುತ್ತಿರುವುದರಿಂದ ಎನ್‌ಪಿಆರ್ ಮತ್ತು ಜನಗಣತಿಗೆ ಸಂಬಂಧಿಸಿದಂತೆ ಸಾಕಷ್ಟು ಅಸಮಾಧಾನ ಮತ್ತು ಭಯವಿದೆ ಎಂದು ಸಮಿತಿ ಹೇಳಿತು.

ಎನ್‌ಪಿಆರ್ ಬಗ್ಗೆ ಎಲ್ಲಾ ರಾಜ್ಯಗಳಿಗೆ ಸಂಕ್ಷಿಪ್ತವಾಗಿ ತಿಳಿಸಬೇಕು ಮತ್ತು ಸರಿಯಾಗಿ ಮಾತನಾಡಬೇಕು ಎಂದು ಸಮಿತಿ ಹೇಳಿದೆ.

ವಿರೋಧಪಕ್ಷಗಳ ಆಡಳಿತವಿರುವ ಹಲವಾರು ರಾಜ್ಯಗಳು ಈ ಹಿಂದೆ ಎನ್‌ಪಿಆರ್ ಅನ್ನು ಕಾರ್ಯಗತಗೊಳಿಸುವುದಿಲ್ಲ ಎಂದು ಹೇಳಿದ್ದವು. “ಇದನ್ನು ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಕಾರ್ಯಗತಗೊಳಿಸಲು ಬಳಸಲಾಗುವುದು ಮತ್ತು ಪೌರತ್ವ (ತಿದ್ದುಪಡಿ) ಕಾಯ್ದೆಯೊಂದಿಗೆ ಅದನ್ನು ಸೇರಿಸಿ, ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಸಲು ಬಳಸಲಾಗುತ್ತದೆ” ಎಂಬ ಆತಂಕವನ್ನು ಆ ರಾಜ್ಯಗಳು ವ್ಯಕ್ತಪಡಿಸಿದ್ದನ್ನು ಸಮಿತಿ ಉಲ್ಲೇಖಿಸಿತು.

ಇದನ್ನೂ ಓದಿ: ಸಿಎಎ ಶೀಘ್ರವೇ ಜಾರಿ; ಕೊರೊನಾ ಕಾರಣದಿಂದ ವಿಳಂಬವಾಗಿತ್ತು: ಜೆ.ಪಿ.ನಡ್ಡಾ

2019 ರ ಕೊನೆಯಲ್ಲಿ ಮತ್ತು 2020 ರ ಆರಂಭದಲ್ಲಿ ಸಿಎಎ-ಎನ್‌ಆರ್‌ಸಿ-ಎನ್‌ಪಿಆರ್ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆದಾಗ, ರಾಷ್ಟ್ರವ್ಯಾಪಿ ಎನ್‌ಆರ್‌ಸಿ ಪ್ರಕ್ರಿಯೆಯ ಪೂರ್ವ ತಯ್ಯಾರಿ ಆಗಲೇ ಆರಂಭಗೊಂಡಿದೆ ಎಂದು ಒಮ್ಮೆ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಹಿಂದಕ್ಕೆ ಹೆಜ್ಜೆ ಇಡಬೇಕಾಯಿತು. ನಂತರ ಸರ್ಕಾರವು ಎನ್‌ಆರ್‌ಸಿ ಯೋಜನೆಗೆ ಎಂದಿಗೂ ಅಂತಿಮ ಅನುಮತಿ ನೀಡಿಲ್ಲ ಎಂದು ಹೇಳಿಕೊಂಡಿತ್ತು. ಅದು ಇನ್ನೂ ಚರ್ಚೆಯಲ್ಲಿದೆ (ಈಗ ಎಂಎಚ್‌ಎ ಹೇಳಿರುವಂತೆ) ಎಂದು ಸರ್ಕಾರ ಹೇಳಿತ್ತು.

ಅದಕ್ಕೂ ಮೊದಲು, ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತು ಸೇರಿದಂತೆ ಅನೇಕ ವೇದಿಕೆಗಳಲ್ಲಿ, ಅನೇಕ ಸಲ ’ಕೇಂದ್ರವು ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಜಾರಿಗೆ ತರಲಿದೆ’ ಎಂದು ಘೋಷಿಸಿದ್ದರು.

ರಾಜಕೀಯ ರ್‍ಯಾಲಿಗಳು, ಪತ್ರಿಕಾಗೋಷ್ಠಿಗಳು ಮತ್ತು ಸಂದರ್ಶನಗಳಲ್ಲಿ ತಮ್ಮ ಸಾರ್ವಜನಿಕ ಘೋಷಣೆಗಳ ಹೊರತಾಗಿ, ರಾಷ್ಟ್ರೀಯ ಮಟ್ಟದಲ್ಲಿ ಎಲ್ಲ ರಾಜ್ಯಗಳಲ್ಲೂ (ಅಸ್ಸಾಂನಲ್ಲಿ ಎರಡನೇ ಬಾರಿ) ಎನ್‌ಆರ್‌ಸಿ ಪ್ರಕ್ರಿಯೆ ನಡೆಸುವ ಸರ್ಕಾರದ ನಿರ್ಧಾರವನ್ನು 2019 ರ ನವೆಂಬರ್ 20 ರಂದು ರಾಜ್ಯಸಭೆಗೆ ಕೇಂದ್ರ ಗೃಹ ಸಚಿವರು ತಿಳಿಸಿದ್ದರು.


ಇದನ್ನೂ ಓದಿ: ಸಿಎಎ ವಿರೋಧಿ ಪ್ರತಿಭಟನಕಾರರ ಬಂಧನ: ಆತಂಕ ವ್ಯಕ್ತಪಡಿಸಿದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...