Homeಮುಖಪುಟರಾಷ್ಟ್ರವ್ಯಾಪಿ NRC ಜಾರಿ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಗೃಹ ಸಚಿವಾಲಯ

ರಾಷ್ಟ್ರವ್ಯಾಪಿ NRC ಜಾರಿ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಗೃಹ ಸಚಿವಾಲಯ

ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತು ಸೇರಿದಂತೆ ಅನೇಕ ವೇದಿಕೆಗಳಲ್ಲಿ, ಅನೇಕ ಸಲ ’ಕೇಂದ್ರವು ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಜಾರಿಗೆ ತರಲಿದೆ’ ಎಂದು ಘೋಷಿಸಿದ್ದರು.

- Advertisement -
- Advertisement -

ಕಾಂಗ್ರೆಸ್ ಸಂಸದ ಆನಂದ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿ ಗೃಹ ಸಚಿವಾಲಯವನ್ನು ಪ್ರಶ್ನಿಸಿತ್ತು.
ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯ ಪ್ರಶ್ನೆಗೆ ಪ್ರತಿಕ್ರಿಯೆಯಾಗಿ, ದೇಶಾದ್ಯಂತ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಕುರಿತು ಇನ್ನೂ ನಿರ್ಧಾರಕ್ಕೆ ಬಂದಿಲ್ಲ ಎಂದು ಗೃಹ ಸಚಿವಾಲಯ ತಿಳಿಸಿದೆ.

ಮುಂಬರುವ ಜನಗಣತಿ ಪ್ರಕ್ರಿಯೆ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ನವೀಕರಣದ ಬಗೆಗಿನ ಸಮಿತಿಯ ಆತಂಕಗಳಿಗೆ ಪ್ರತಿಕ್ರಿಯಿಸಿದ ಗೃಹ ಸಚಿವಾಲಯ (ಎಂಎಚ್‌ಎ), “ಜನಗಣತಿಯಲ್ಲಿ ಸಂಗ್ರಹಿಸಲಾದ ಎಲ್ಲಾ ವೈಯಕ್ತಿಕ ಮಟ್ಟದ ಮಾಹಿತಿಯು ಗೌಪ್ಯವಾಗಿರುತ್ತದೆ. ಜನಗಣತಿಯಲ್ಲಿ, ಆಡಳಿತಾತ್ಮಕ ಹಂತಗಳಲ್ಲಿ ಒಟ್ಟು ಡೇಟಾವನ್ನು ಮಾತ್ರ ಬಿಡುಗಡೆ ಮಾಡಲಾಗುತ್ತದೆ. ಹಿಂದಿನ ಜನಗಣತಿಗಳಂತೆ, ಜನಗಣತಿ 2021 ಅನ್ನು ಯಶಸ್ವಿಯಾಗಿ ನಡೆಸಲು ಮತ್ತು ಪೂರ್ಣಗೊಳಿಸಲು ಸಾರ್ವಜನಿಕರಲ್ಲಿ ಸರಿಯಾದ ಜಾಗೃತಿ ಮೂಡಿಸಲು ವ್ಯಾಪಕ ಪ್ರಚಾರ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ದೇಶಾದ್ಯಂತ ಯಶಸ್ವಿಯಾಗಿ ನಡೆಸಿದ ಪೂರ್ವ ಪರೀಕ್ಷೆಯಲ್ಲಿ ಎನ್‌ಪಿಆರ್ ಜೊತೆಗೆ ಜನಗಣತಿಯ ಪ್ರಶ್ನಾವಳಿಗಳನ್ನು ಪರೀಕ್ಷಿಸಲಾಗಿದೆ. ಎನ್‌ಆರ್‌ಸಿ ರಚಿಸಲು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಸರ್ಕಾರ ಕಾಲಕಾಲಕ್ಕೆ ಸ್ಪಷ್ಟಪಡಿಸಿದೆ” ಎಂದು ಎಂಎಚ್‌ಎ ವಿವರಿಸಿದೆ.

ಇದನ್ನೂ ಓದಿ: ಜನವರಿಯಿಂದಲೆ ಸಿಎಎ ಜಾರಿಯಾಗುವ ಸಾಧ್ಯತೆ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ಕಾಂಗ್ರೆಸ್ ಸಂಸದ ಆನಂದ್ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಎಂಎಚ್‌ಎಯನ್ನು ಪ್ರಶ್ನಿಸಿತ್ತು. ಕೇಂದ್ರ ಸರ್ಕಾರವು ರಾಷ್ಟ್ರವ್ಯಾಪಿ ಎನ್‌ಆರ್‌ಸಿ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳನ್ನು ನೀಡುತ್ತಿರುವುದರಿಂದ ಎನ್‌ಪಿಆರ್ ಮತ್ತು ಜನಗಣತಿಗೆ ಸಂಬಂಧಿಸಿದಂತೆ ಸಾಕಷ್ಟು ಅಸಮಾಧಾನ ಮತ್ತು ಭಯವಿದೆ ಎಂದು ಸಮಿತಿ ಹೇಳಿತು.

ಎನ್‌ಪಿಆರ್ ಬಗ್ಗೆ ಎಲ್ಲಾ ರಾಜ್ಯಗಳಿಗೆ ಸಂಕ್ಷಿಪ್ತವಾಗಿ ತಿಳಿಸಬೇಕು ಮತ್ತು ಸರಿಯಾಗಿ ಮಾತನಾಡಬೇಕು ಎಂದು ಸಮಿತಿ ಹೇಳಿದೆ.

ವಿರೋಧಪಕ್ಷಗಳ ಆಡಳಿತವಿರುವ ಹಲವಾರು ರಾಜ್ಯಗಳು ಈ ಹಿಂದೆ ಎನ್‌ಪಿಆರ್ ಅನ್ನು ಕಾರ್ಯಗತಗೊಳಿಸುವುದಿಲ್ಲ ಎಂದು ಹೇಳಿದ್ದವು. “ಇದನ್ನು ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಕಾರ್ಯಗತಗೊಳಿಸಲು ಬಳಸಲಾಗುವುದು ಮತ್ತು ಪೌರತ್ವ (ತಿದ್ದುಪಡಿ) ಕಾಯ್ದೆಯೊಂದಿಗೆ ಅದನ್ನು ಸೇರಿಸಿ, ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಸಲು ಬಳಸಲಾಗುತ್ತದೆ” ಎಂಬ ಆತಂಕವನ್ನು ಆ ರಾಜ್ಯಗಳು ವ್ಯಕ್ತಪಡಿಸಿದ್ದನ್ನು ಸಮಿತಿ ಉಲ್ಲೇಖಿಸಿತು.

ಇದನ್ನೂ ಓದಿ: ಸಿಎಎ ಶೀಘ್ರವೇ ಜಾರಿ; ಕೊರೊನಾ ಕಾರಣದಿಂದ ವಿಳಂಬವಾಗಿತ್ತು: ಜೆ.ಪಿ.ನಡ್ಡಾ

2019 ರ ಕೊನೆಯಲ್ಲಿ ಮತ್ತು 2020 ರ ಆರಂಭದಲ್ಲಿ ಸಿಎಎ-ಎನ್‌ಆರ್‌ಸಿ-ಎನ್‌ಪಿಆರ್ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆದಾಗ, ರಾಷ್ಟ್ರವ್ಯಾಪಿ ಎನ್‌ಆರ್‌ಸಿ ಪ್ರಕ್ರಿಯೆಯ ಪೂರ್ವ ತಯ್ಯಾರಿ ಆಗಲೇ ಆರಂಭಗೊಂಡಿದೆ ಎಂದು ಒಮ್ಮೆ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಹಿಂದಕ್ಕೆ ಹೆಜ್ಜೆ ಇಡಬೇಕಾಯಿತು. ನಂತರ ಸರ್ಕಾರವು ಎನ್‌ಆರ್‌ಸಿ ಯೋಜನೆಗೆ ಎಂದಿಗೂ ಅಂತಿಮ ಅನುಮತಿ ನೀಡಿಲ್ಲ ಎಂದು ಹೇಳಿಕೊಂಡಿತ್ತು. ಅದು ಇನ್ನೂ ಚರ್ಚೆಯಲ್ಲಿದೆ (ಈಗ ಎಂಎಚ್‌ಎ ಹೇಳಿರುವಂತೆ) ಎಂದು ಸರ್ಕಾರ ಹೇಳಿತ್ತು.

ಅದಕ್ಕೂ ಮೊದಲು, ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತು ಸೇರಿದಂತೆ ಅನೇಕ ವೇದಿಕೆಗಳಲ್ಲಿ, ಅನೇಕ ಸಲ ’ಕೇಂದ್ರವು ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಜಾರಿಗೆ ತರಲಿದೆ’ ಎಂದು ಘೋಷಿಸಿದ್ದರು.

ರಾಜಕೀಯ ರ್‍ಯಾಲಿಗಳು, ಪತ್ರಿಕಾಗೋಷ್ಠಿಗಳು ಮತ್ತು ಸಂದರ್ಶನಗಳಲ್ಲಿ ತಮ್ಮ ಸಾರ್ವಜನಿಕ ಘೋಷಣೆಗಳ ಹೊರತಾಗಿ, ರಾಷ್ಟ್ರೀಯ ಮಟ್ಟದಲ್ಲಿ ಎಲ್ಲ ರಾಜ್ಯಗಳಲ್ಲೂ (ಅಸ್ಸಾಂನಲ್ಲಿ ಎರಡನೇ ಬಾರಿ) ಎನ್‌ಆರ್‌ಸಿ ಪ್ರಕ್ರಿಯೆ ನಡೆಸುವ ಸರ್ಕಾರದ ನಿರ್ಧಾರವನ್ನು 2019 ರ ನವೆಂಬರ್ 20 ರಂದು ರಾಜ್ಯಸಭೆಗೆ ಕೇಂದ್ರ ಗೃಹ ಸಚಿವರು ತಿಳಿಸಿದ್ದರು.


ಇದನ್ನೂ ಓದಿ: ಸಿಎಎ ವಿರೋಧಿ ಪ್ರತಿಭಟನಕಾರರ ಬಂಧನ: ಆತಂಕ ವ್ಯಕ್ತಪಡಿಸಿದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...