Homeಮುಖಪುಟರಾಷ್ಟ್ರವ್ಯಾಪಿ NRC ಜಾರಿ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಗೃಹ ಸಚಿವಾಲಯ

ರಾಷ್ಟ್ರವ್ಯಾಪಿ NRC ಜಾರಿ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಗೃಹ ಸಚಿವಾಲಯ

ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತು ಸೇರಿದಂತೆ ಅನೇಕ ವೇದಿಕೆಗಳಲ್ಲಿ, ಅನೇಕ ಸಲ ’ಕೇಂದ್ರವು ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಜಾರಿಗೆ ತರಲಿದೆ’ ಎಂದು ಘೋಷಿಸಿದ್ದರು.

- Advertisement -
- Advertisement -

ಕಾಂಗ್ರೆಸ್ ಸಂಸದ ಆನಂದ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿ ಗೃಹ ಸಚಿವಾಲಯವನ್ನು ಪ್ರಶ್ನಿಸಿತ್ತು.
ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯ ಪ್ರಶ್ನೆಗೆ ಪ್ರತಿಕ್ರಿಯೆಯಾಗಿ, ದೇಶಾದ್ಯಂತ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಕುರಿತು ಇನ್ನೂ ನಿರ್ಧಾರಕ್ಕೆ ಬಂದಿಲ್ಲ ಎಂದು ಗೃಹ ಸಚಿವಾಲಯ ತಿಳಿಸಿದೆ.

ಮುಂಬರುವ ಜನಗಣತಿ ಪ್ರಕ್ರಿಯೆ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ನವೀಕರಣದ ಬಗೆಗಿನ ಸಮಿತಿಯ ಆತಂಕಗಳಿಗೆ ಪ್ರತಿಕ್ರಿಯಿಸಿದ ಗೃಹ ಸಚಿವಾಲಯ (ಎಂಎಚ್‌ಎ), “ಜನಗಣತಿಯಲ್ಲಿ ಸಂಗ್ರಹಿಸಲಾದ ಎಲ್ಲಾ ವೈಯಕ್ತಿಕ ಮಟ್ಟದ ಮಾಹಿತಿಯು ಗೌಪ್ಯವಾಗಿರುತ್ತದೆ. ಜನಗಣತಿಯಲ್ಲಿ, ಆಡಳಿತಾತ್ಮಕ ಹಂತಗಳಲ್ಲಿ ಒಟ್ಟು ಡೇಟಾವನ್ನು ಮಾತ್ರ ಬಿಡುಗಡೆ ಮಾಡಲಾಗುತ್ತದೆ. ಹಿಂದಿನ ಜನಗಣತಿಗಳಂತೆ, ಜನಗಣತಿ 2021 ಅನ್ನು ಯಶಸ್ವಿಯಾಗಿ ನಡೆಸಲು ಮತ್ತು ಪೂರ್ಣಗೊಳಿಸಲು ಸಾರ್ವಜನಿಕರಲ್ಲಿ ಸರಿಯಾದ ಜಾಗೃತಿ ಮೂಡಿಸಲು ವ್ಯಾಪಕ ಪ್ರಚಾರ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ದೇಶಾದ್ಯಂತ ಯಶಸ್ವಿಯಾಗಿ ನಡೆಸಿದ ಪೂರ್ವ ಪರೀಕ್ಷೆಯಲ್ಲಿ ಎನ್‌ಪಿಆರ್ ಜೊತೆಗೆ ಜನಗಣತಿಯ ಪ್ರಶ್ನಾವಳಿಗಳನ್ನು ಪರೀಕ್ಷಿಸಲಾಗಿದೆ. ಎನ್‌ಆರ್‌ಸಿ ರಚಿಸಲು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಸರ್ಕಾರ ಕಾಲಕಾಲಕ್ಕೆ ಸ್ಪಷ್ಟಪಡಿಸಿದೆ” ಎಂದು ಎಂಎಚ್‌ಎ ವಿವರಿಸಿದೆ.

ಇದನ್ನೂ ಓದಿ: ಜನವರಿಯಿಂದಲೆ ಸಿಎಎ ಜಾರಿಯಾಗುವ ಸಾಧ್ಯತೆ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ಕಾಂಗ್ರೆಸ್ ಸಂಸದ ಆನಂದ್ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಎಂಎಚ್‌ಎಯನ್ನು ಪ್ರಶ್ನಿಸಿತ್ತು. ಕೇಂದ್ರ ಸರ್ಕಾರವು ರಾಷ್ಟ್ರವ್ಯಾಪಿ ಎನ್‌ಆರ್‌ಸಿ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳನ್ನು ನೀಡುತ್ತಿರುವುದರಿಂದ ಎನ್‌ಪಿಆರ್ ಮತ್ತು ಜನಗಣತಿಗೆ ಸಂಬಂಧಿಸಿದಂತೆ ಸಾಕಷ್ಟು ಅಸಮಾಧಾನ ಮತ್ತು ಭಯವಿದೆ ಎಂದು ಸಮಿತಿ ಹೇಳಿತು.

ಎನ್‌ಪಿಆರ್ ಬಗ್ಗೆ ಎಲ್ಲಾ ರಾಜ್ಯಗಳಿಗೆ ಸಂಕ್ಷಿಪ್ತವಾಗಿ ತಿಳಿಸಬೇಕು ಮತ್ತು ಸರಿಯಾಗಿ ಮಾತನಾಡಬೇಕು ಎಂದು ಸಮಿತಿ ಹೇಳಿದೆ.

ವಿರೋಧಪಕ್ಷಗಳ ಆಡಳಿತವಿರುವ ಹಲವಾರು ರಾಜ್ಯಗಳು ಈ ಹಿಂದೆ ಎನ್‌ಪಿಆರ್ ಅನ್ನು ಕಾರ್ಯಗತಗೊಳಿಸುವುದಿಲ್ಲ ಎಂದು ಹೇಳಿದ್ದವು. “ಇದನ್ನು ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಕಾರ್ಯಗತಗೊಳಿಸಲು ಬಳಸಲಾಗುವುದು ಮತ್ತು ಪೌರತ್ವ (ತಿದ್ದುಪಡಿ) ಕಾಯ್ದೆಯೊಂದಿಗೆ ಅದನ್ನು ಸೇರಿಸಿ, ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಸಲು ಬಳಸಲಾಗುತ್ತದೆ” ಎಂಬ ಆತಂಕವನ್ನು ಆ ರಾಜ್ಯಗಳು ವ್ಯಕ್ತಪಡಿಸಿದ್ದನ್ನು ಸಮಿತಿ ಉಲ್ಲೇಖಿಸಿತು.

ಇದನ್ನೂ ಓದಿ: ಸಿಎಎ ಶೀಘ್ರವೇ ಜಾರಿ; ಕೊರೊನಾ ಕಾರಣದಿಂದ ವಿಳಂಬವಾಗಿತ್ತು: ಜೆ.ಪಿ.ನಡ್ಡಾ

2019 ರ ಕೊನೆಯಲ್ಲಿ ಮತ್ತು 2020 ರ ಆರಂಭದಲ್ಲಿ ಸಿಎಎ-ಎನ್‌ಆರ್‌ಸಿ-ಎನ್‌ಪಿಆರ್ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆದಾಗ, ರಾಷ್ಟ್ರವ್ಯಾಪಿ ಎನ್‌ಆರ್‌ಸಿ ಪ್ರಕ್ರಿಯೆಯ ಪೂರ್ವ ತಯ್ಯಾರಿ ಆಗಲೇ ಆರಂಭಗೊಂಡಿದೆ ಎಂದು ಒಮ್ಮೆ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಹಿಂದಕ್ಕೆ ಹೆಜ್ಜೆ ಇಡಬೇಕಾಯಿತು. ನಂತರ ಸರ್ಕಾರವು ಎನ್‌ಆರ್‌ಸಿ ಯೋಜನೆಗೆ ಎಂದಿಗೂ ಅಂತಿಮ ಅನುಮತಿ ನೀಡಿಲ್ಲ ಎಂದು ಹೇಳಿಕೊಂಡಿತ್ತು. ಅದು ಇನ್ನೂ ಚರ್ಚೆಯಲ್ಲಿದೆ (ಈಗ ಎಂಎಚ್‌ಎ ಹೇಳಿರುವಂತೆ) ಎಂದು ಸರ್ಕಾರ ಹೇಳಿತ್ತು.

ಅದಕ್ಕೂ ಮೊದಲು, ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತು ಸೇರಿದಂತೆ ಅನೇಕ ವೇದಿಕೆಗಳಲ್ಲಿ, ಅನೇಕ ಸಲ ’ಕೇಂದ್ರವು ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಜಾರಿಗೆ ತರಲಿದೆ’ ಎಂದು ಘೋಷಿಸಿದ್ದರು.

ರಾಜಕೀಯ ರ್‍ಯಾಲಿಗಳು, ಪತ್ರಿಕಾಗೋಷ್ಠಿಗಳು ಮತ್ತು ಸಂದರ್ಶನಗಳಲ್ಲಿ ತಮ್ಮ ಸಾರ್ವಜನಿಕ ಘೋಷಣೆಗಳ ಹೊರತಾಗಿ, ರಾಷ್ಟ್ರೀಯ ಮಟ್ಟದಲ್ಲಿ ಎಲ್ಲ ರಾಜ್ಯಗಳಲ್ಲೂ (ಅಸ್ಸಾಂನಲ್ಲಿ ಎರಡನೇ ಬಾರಿ) ಎನ್‌ಆರ್‌ಸಿ ಪ್ರಕ್ರಿಯೆ ನಡೆಸುವ ಸರ್ಕಾರದ ನಿರ್ಧಾರವನ್ನು 2019 ರ ನವೆಂಬರ್ 20 ರಂದು ರಾಜ್ಯಸಭೆಗೆ ಕೇಂದ್ರ ಗೃಹ ಸಚಿವರು ತಿಳಿಸಿದ್ದರು.


ಇದನ್ನೂ ಓದಿ: ಸಿಎಎ ವಿರೋಧಿ ಪ್ರತಿಭಟನಕಾರರ ಬಂಧನ: ಆತಂಕ ವ್ಯಕ್ತಪಡಿಸಿದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...