Homeಮುಖಪುಟಹಲಾಲ್ ಉತ್ಪನ್ನಗಳ ಮಾರಾಟ ನಿಷೇಧದ ಕುರಿತು ನಿರ್ಧಾರ ತೆಗೆದುಕೊಂಡಿಲ್ಲ: ಅಮಿತ್‌ ಶಾ

ಹಲಾಲ್ ಉತ್ಪನ್ನಗಳ ಮಾರಾಟ ನಿಷೇಧದ ಕುರಿತು ನಿರ್ಧಾರ ತೆಗೆದುಕೊಂಡಿಲ್ಲ: ಅಮಿತ್‌ ಶಾ

- Advertisement -
- Advertisement -

ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವ ಯಾವುದೇ ನಿರ್ಧಾರವನ್ನು ಕೇಂದ್ರ ಸರಕಾರ ತೆಗೆದುಕೊಂಡಿಲ್ಲ ಎಂದು ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಹೈದರಾಬಾದ್‌ನಲ್ಲಿ ಮಾದ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕೇಂದ್ರ ಸರ್ಕಾರವು ಹಲಾಲ್‌ ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವ ಯಾವುದೇ ನಿರ್ಧಾರವನ್ನು ಇನ್ನೂ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ತೆಲಂಗಾಣದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಉದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಬಿಆರ್‌ಎಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಸಂವಿಧಾನವು ಯಾರಿಗೂ ವಿಶೇಷ ಕೊಡುಗೆ ನೀಡಲು ಅವಕಾಶ ನೀಡುವುದಿಲ್ಲ. ಧಾರ್ಮಿಕ ಮೀಸಲಾತಿಯನ್ನು ಕೆಸಿಆರ್ ನೀಡಿದ್ದಾರೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ. ನಾವು ಧಾರ್ಮಿಕ ಅಲ್ಪಸಂಖ್ಯಾತರಿಗೆ 4% ಕೋಟಾವನ್ನು ಕೊನೆಗೊಳಿಸುತ್ತೇವೆ ಮತ್ತು ಅದನ್ನು ಪರಿಶಿಷ್ಟ ಪಂಗಡಗಳು, ಪರಿಶಿಷ್ಟ ಜಾತಿಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ನೀಡುತ್ತೇವೆ ಎಂದು ಹೇಳಿದ್ದಾರೆ.

ಕಳೆದವಾರವಷ್ಟೇ ಉತ್ತರಪ್ರದೇಶದಲ್ಲಿ ಹಲಾಲ್‌ ಟ್ಯಾಗ್  ಹೊಂದಿರುವ ಉತ್ಪನ್ನಗಳನ್ನು ನಿಷೇಧಿಸಿ ಉತ್ತರಪ್ರದೇಶ ಸರಕಾರ ಆದೇಶವನ್ನು ನೀಡಿತ್ತು. ಹಲಾಲ್ ಪ್ರಮಾಣೀಕರಣದೊಂದಿಗೆ ಆಹಾರ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸಿತ್ತು. ಆದರೆ ರಫ್ತಿಗಾಗಿ ತಯಾರಿಸಿದ ಉತ್ಪನ್ನಗಳಿಗೆ ನಿರ್ಬಂಧ ಅನ್ವಯವಾಗುವುದಿಲ್ಲ ಎಂದು ಹೇಳಲಾಗಿತ್ತು.

ಉತ್ತರಪ್ರದೇಶದೊಳಗೆ ಹಲಾಲ್ ಪ್ರಮಾಣೀಕೃತ ಔಷಧಗಳು, ವೈದ್ಯಕೀಯ ಸಾಧನಗಳು ಮತ್ತು ಸೌಂದರ್ಯವರ್ಧಕಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಖರೀದಿ ಮತ್ತು ಮಾರಾಟದಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಅಧಿಕೃತ ಆದೇಶ ತಿಳಿಸಿತ್ತು.

ಆಹಾರ ಉತ್ಪನ್ನಗಳ ಹಲಾಲ್ ಪ್ರಮಾಣೀಕರಣವು ಒಂದು ಸಮಾನಾಂತರ ವ್ಯವಸ್ಥೆಯಾಗಿದ್ದು ಅದು ಆಹಾರ ಪದಾರ್ಥಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಗೊಂದಲವನ್ನು ಸೃಷ್ಟಿಸುತ್ತದೆ ಮತ್ತು ಆಹಾರ ಕಾನೂನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆಯ ಸೆಕ್ಷನ್ 89ರ ಅಡಿಯಲ್ಲಿ ಸಮರ್ಥನೀಯವಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿತ್ತು.

ಇದರ ಬೆನ್ನಲ್ಲೇ ಬಿಹಾರದಲ್ಲಿ ಹಲಾಲ್ ಪ್ರಮಾಣಪತ್ರ ಹೊಂದಿರುವ ಉತ್ಪನ್ನಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸಿಎಂ ನಿತೀಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದರು. ಹಲಾಲ್ ಉತ್ಪನ್ನವನ್ನು ಜಿಹಾದ್ ಎಂದ ಗಿರಿರಾಜ್ ಸಿಂಗ್, ತುಕ್ಡೇ ತುಕ್ಡೇ ಗ್ಯಾಂಗ್‌ಗಳು ಬಿಹಾರದ ಎಲ್ಲಾ ಮೂಲೆ ಮೂಲೆಗಳಲ್ಲಿ ಹಲಾಲ್ ಪ್ರಾಮಾಣಿಕೃತ ಉತ್ಪನ್ನಗಳನ್ನು ಮಾರಾಟ ಮಾಡುತ್ತಿವೆ. ಹಲಾಲ್‌ ಉತ್ಪನ್ನಗಳನ್ನು ಹಿಂದೂ ಮಂತ್ರಗಳಂತೆ ಕುರಾನ್‌ ಮೂಲಕ ಪವಿತ್ರೀಕರಣಗೊಳಿಸಲಾಗುತ್ತದೆ. ಇದರಿಂದ ಸನಾತನ ಧರ್ಮ ಅಪಾಯದಲ್ಲಿದೆ. ಹಲಾಲ್‌ ಉತ್ಪನ್ನಗಳ ಮೂಲಕ ಶರಿಯಾ ಕಾನೂನು ಹೇರಲಾಗುತ್ತಿದೆ. ಅಲ್ಲದೆ ಇದು ಉಗ್ರವಾದಿಗಳೊಂದಿಗೆ ಸಂಪರ್ಕ ಹೊಂದಿದೆ ಎಂದು ಹೇಳಿದ್ದರು.

ಗಿರಿರಾಜ್‌ ಸಿಂಗ್‌ ಆರೋಪಕ್ಕೆ ಜೆಡಿಯು ನಾಯಕ ನೀರಜ್‌ ಕುಮಾರ್‌ ತಿರುಗೇಟು ಕೊಟ್ಟಿದ್ದು, ಬಿಜೆಪಿ ನಾಯಕರು ಹಿಂದೂ ಧರ್ಮದ ಪಾಲಕರಂತೆ ತಮ್ಮನ್ನು ತಾವು ಬಿಂಬಿಸಿಕೊಳ್ಳುತ್ತಾರೆ. ಆದರೆ ಅವರದ್ದೇ ಆಡಳಿತದ ಉತ್ತರ ಪ್ರದೇಶದಲ್ಲಿ ರಾಜ್ಯಗಳು ಗೋಮಾಂಸ ರಫ್ತಿನಲ್ಲಿ ಮುಂಚೂಣಿಯಲ್ಲಿದೆ. ಇವೆಲ್ಲವೂ ಅವರ ಬೂಟಾಟಿಕೆ ಎಂದು ಹೇಳಿದ್ದರು.

ಇದನ್ನು ಓದಿ: ಯುದ್ಧ ಭೀಕರತೆ: ಗಾಝಾದಲ್ಲಿ ಪತ್ರಕರ್ತರ ಹತ್ಯಾಕಾಂಡ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...