Homeಮುಖಪುಟಎನ್‌ಆರ್‌ಸಿಯನ್ನು ದೇಶದಾದ್ಯಂತ ಜಾರಿಗೆ ನಿರ್ಧರಿಸಿಲ್ಲ: ಕೇಂದ್ರ ಸರ್ಕಾರ

ಎನ್‌ಆರ್‌ಸಿಯನ್ನು ದೇಶದಾದ್ಯಂತ ಜಾರಿಗೆ ನಿರ್ಧರಿಸಿಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಯನ್ನು ರಾಷ್ಟ್ರವ್ಯಾಪಿ ನಡೆಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಕೇಂದ್ರ ಬುಧವಾರ ತಿಳಿಸಿದೆ. ದೇಶಾದ್ಯಂತ ಎನ್‌ಆರ್‌ಸಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಯಾವುದೇ ಯೋಜನೆ ಇದೆಯೇ ಎಂಬ ಪ್ರಶ್ನೆಗೆ ಕೇಂದ್ರ ಸಚಿವ ನಿತ್ಯಾನಂದ ರೈ ರಾಜ್ಯಸಭೆಯಲ್ಲಿ ಉತ್ತರಿಸಿದರು.

“ಎನ್‌ಆರ್‌ಸಿಯನ್ನು ರಾಷ್ಟ್ರ ಮಟ್ಟದಲ್ಲಿ ಸಿದ್ಧಪಡಿಸಲು ಸರ್ಕಾವು ಇಲ್ಲಿಯವರೆಗೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ” ಎಂದು ನಿತ್ಯಾನಂದ ರೈ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು 2019 ರ ಆಗಸ್ಟ್ 31 ರಂದು ಅಸ್ಸಾಂನಲ್ಲಿ ಎನ್‌ಆರ್‌‌ಸಿ ವರದಿಯನ್ನು ಬಿಡುಗಡೆಗೊಳಿಸಿದಾಗ ಒಟ್ಟು 3,30,27,661 ಅರ್ಜಿದಾರರಲ್ಲಿ 19.06 ಲಕ್ಷ ಜನರನ್ನು ಹೊರಗಿಡಲಾಗಿತ್ತು. ಇದು ಭಾರತದಾದ್ಯಂತ ಭಾರತದಾದ್ಯಂತ ಭಾರಿ ವಿವಾದ ಸೃಷ್ಟಿಸಿತ್ತು.

ಇದನ್ನೂ ಓದಿ: ಬಾಡಿಗೆದಾರನ ಮೇಲೆ ಹಲ್ಲೆ ನಡೆಸಿ ಹಣ ದರೋಡೆ ಮಾಡಿದ ಬಿಜೆಪಿ ನಾಯಕಿ

ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ನಿತ್ಯಾನಂದ ರೈ, ಪೌರತ್ವ ಕಾಯ್ದೆ-1955 ಮತ್ತು ಭಾರತೀಯ ನಾಗರಿಕರ ರಾಷ್ಟ್ರೀಯ ನೋಂದಣಿ ಅಡಿಯಲ್ಲಿ ಬಂಧನ ಕೇಂದ್ರಗಳನ್ನು ಒದಗಿಸಲು ಅವಕಾಶವಿಲ್ಲ ಎಂದು ಹೇಳಿದ್ದಾರೆ.

“ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿದ ವಿದೇಶಿ ಪ್ರಜೆಗಳನ್ನು ತಕ್ಷಣ ಜೈಲಿನಿಂದ ಬಿಡುಗಡೆ ಮಾಡಬೇಕು. ಅವರ ಗಡೀಪಾರು ಮಾಡುವವರೆಗೂ ಅವರನ್ನು ಚಲನೆಯನ್ನು ನಿರ್ಬಂಧಿಸಿದ ಸೂಕ್ತ ಸ್ಥಳದಲ್ಲಿ ಇಡಬೇಕು ಎಂದು ಫೆಬ್ರವರಿ 28, 2012 ರಂದು ಸುಪ್ರೀಂ ಕೋರ್ಟ್ನಿ ರ್ದೇಶನ ನೀಡಿದೆ ಎಂದು ಹೇಳಿದ್ದಾರೆ.

ಆ ನಿರ್ದೇಶನವನ್ನು ಅನುಸರಿಸಿ, ಸುಪ್ರೀಂಕೋರ್ಟ್‌ನ ನಿರ್ದೇಶನಗಳನ್ನು ಪಾಲಿಸುವಂತೆ ಗೃಹ ಸಚಿವಾಲಯವು ಮಾರ್ಚ್ 7, 2012 ರಂದು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಆಡಳಿತಗಳಿಗೆ ಸೂಚನೆಗಳನ್ನು ನೀಡಿತು ಎದು ಅವರು ಹೇಳಿದ್ದಾರೆ.

ಅಕ್ರಮ ವಲಸಿಗರು ಮತ್ತು ವಿದೇಶಿಯರನ್ನು ಬಂಧಿಸಲು ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿದ ಆಡಳಿತಗಳು ಬಂಧನ ಕೇಂದ್ರಗಳನ್ನು ಸ್ಥಾಪಿಸಿವೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಮತ ನೀಡಿದರೆ ‘ಜೈ ಸಿಯಾ ರಾಂ’ ಎನ್ನಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...