Homeಕರ್ನಾಟಕಪಾವಗಡ ತಾಲೂಕಿನಲ್ಲಿ ಅಭಿವೃದ್ಧಿ ಮರೀಚಿಕೆ: ಕೊರಕಲು ಬಿದ್ದ ರಸ್ತೆಗಳ ದುರಸ್ತಿಗೆ ಆಗ್ರಹ

ಪಾವಗಡ ತಾಲೂಕಿನಲ್ಲಿ ಅಭಿವೃದ್ಧಿ ಮರೀಚಿಕೆ: ಕೊರಕಲು ಬಿದ್ದ ರಸ್ತೆಗಳ ದುರಸ್ತಿಗೆ ಆಗ್ರಹ

- Advertisement -
- Advertisement -

ಪಾವಗಡ ರಾಜ್ಯದ ಅತೀ ಹಿಂದುಳಿದ ತಾಲೂಕುಗಳಲ್ಲಿ ಒಂದು. ತುಮಕೂರು ಜಿಲ್ಲೆಯ ಉತ್ತರದ ಗಡಿ ಪಾವಗಡ. ಮೂರು ಕಡೆಯೂ ಆಂಧ್ರಪ್ರದೇಶದ ಗಡಿಗಳಿಂದ ಸುತ್ತುವರೆದಿರುವ ಪಾವಗಡ ಅಭಿವೃದ್ಧಿಯನ್ನೇನೂ ಕಂಡಿಲ್ಲ. ಜಿಲ್ಲೆಯಲ್ಲಿ ಅತ್ಯಂತ ನಿರ್ಲಕ್ಷಿತ ತಾಲೂಕು ಇದು. ಯಾರಿಗೂ ಬೇಡವಾದ ಕೂಸಿನಂತೆ. ಎಲ್ಲಾ ತಾಲೂಕುಗಳಿಗೆ ಹೇಮಾವತಿ ನೀರು ಕುಡಿಯಲು ಪೂರೈಕೆಯಾಗುತ್ತಿದ್ದರೆ ಈ ತಾಲೂಕಿಗೆ ಯಾವ ಮೂಲದಿಂದಲೂ ನೀರು ಇಲ್ಲ. ನೀರಾವರಿ ಸೌಲಭ್ಯವಿಲ್ಲ. ಮಳೆಯಾಶ್ರಿತ ಬೆಳೆಯೂ ಅಷ್ಟಕ್ಕಷ್ಟೇ. ಅಭಿವೃದ್ಧಿ ಮೂಲೆಗೆ ಸೇರಿದೆ. ಕೊರಕಲು ಬಿದ್ದ ರಸ್ತೆಗಳೇ ಇದಕ್ಕೆ ಸಾಕ್ಷಿಯಾಗಿ ನಿಂತಿವೆ.

ಹಲ್ಲುಗಳನ್ನು ನೋಡಿದರೆ ಸಾಕು ಇವರು ಪಾವಗಡದವರು ಎಂದು ಗುರುತಿಸಲಾಗುತ್ತಿದೆ. ಅಷ್ಟು ಪ್ರಸಿದ್ದಿ ಪಾವಗಡ. ಪ್ಲೋರೈಡ್ ನೀರು ಇಲ್ಲಿನ ಜನರನ್ನು ಜೀವಂತ ಶವಗಳನ್ನಾಗಿ ಮಾಡಿದೆ. ಇಂತೆಂಬ ಪಾಳು ನೆಲದಲ್ಲಿ ರಸ್ತೆಗಳೂ ಟಾರು ಕಂಡಿಲ್ಲ. ಕಿತ್ತುಹೋದ ರಸ್ತೆಗಳಲ್ಲೇ ವಾಹನ-ಜನ ಸಂಚಾರ ಸಾಗಿದೆ. ಜನರ ಗೋಳನ್ನು ಕೇಳೋರೇ ಇಲ್ಲ. ಜನಪ್ರತಿನಿಧಿಗಳು ಮೇಲ್ಜಾತಿಯವರ ಮರ್ಜಿಯಲ್ಲಿ ಕೆಲಸ ನಿರ್ವಹಿಸಬೇಕಾಗಿ ಬಂದಿದೆ.
ಪಾವಗಡ ಪ್ರದೇಶ ಡಾ.ನಂಜುಂಡಪ್ಪ ವರದಿ ಪ್ರಕಾರ ಅತೀ ಹಿಂದುಳಿದ ತಾಲೂಕು. ಅಭಿವೃದ್ಧಿಯನ್ನೇ ಕಾಣದ ಈ ತಾಲೂಕನ್ನು 370 ಜೆ ಕಲಂ ಅಡಿ ತಂದು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕಿತ್ತು. ಆದರೆ ಅದಾಗಲೇ ಇಲ್ಲ. ಜನಪ್ರನಿಧಿಗಳು ಬಂದ ಅನುದಾನದಲ್ಲಿ ಜೇಬು ಭರ್ತಿ ಮಾಡಿಕೊಳ್ಳುವುದು ಹೇಗೆ ಎಂದು ಚಿಂತಿಸಿದರು. ಕೋಟ್ಯಂತರ ಅನುದಾನ ಬಂದರೂ ಅದು ಎಲ್ಲಿ ಹೋಯಿತು ಎಂಬುದು ಮಾತ್ರ ನಿಗೂಢ. ಆದರೆ ದಾಖಲೆಗಳಲ್ಲಿ ಮಾತ್ರ ಹಣ ಖರ್ಚು ಮಾಡಲಾಗಿದೆ. ಅಭಿವೃದ್ಧಿ ಕಡತಗಳಲ್ಲಿ ಮಾತ್ರ ರಸ್ತೆಗಳು ಆಗಿವೆ ಎಂಬುದನ್ನು ಸಾರುತ್ತವೆ.

ಪಾವಗಡಕ್ಕೆ ಕೂಗಳತೆ ದೂರದಲ್ಲಿರುವ ವೆಂಕಟಾಪುರ ಗ್ರಾಮ ಪಂಚಾಯ್ತಿ ಕೇಂದ್ರ. ರಸ್ತೆಯನ್ನು ನೋಡಿದರೆ ಯಡಿಯೂರು ಸಿದ್ದಲಿಂಗೇಶ್ವರನೇ ಮೆಚ್ಚಬೇಕು. ವೆಂಕಟಾಪುರ-ಮಡಕಶಿರಾ ರಸ್ತೆ ಟಾರು ಕಂಡು ದಶಕವೇ ಕಳೆದಿದೆ. ಟಾರು ಕಿತ್ತುಹೋಗಿರುವುದರಿಂದ ಜಲ್ಲಿಯೇ ರಸ್ತೆಯ ಮೇಲಿದೆ. ಗುಂಡಿಗಳಿಂದ ಕೂಡಿರುವ ಈ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಸಂಚಾರ ಮಾಡುವುದೇ ದುಸ್ಥರವಾಗಿದೆ. ವೆಂಕಟಾಪುರದಿಂದ ಮಡಕಶಿರಾಕ್ಕೆ ನಿತ್ಯವೂ ನೂರಾರು ಜನರು ಪ್ರಯಾಣಿಸುತ್ತಾರೆ. ದಿನಸಿ, ಪೆಟ್ರೋಲ್, ಡಿಸೆಲ್, ತರಕಾರಿ ತರುವುದು ಅಲ್ಲಿಂದಲೇ. ಪಾವಗಡಕ್ಕೆ ಬರಬೇಕೆಂದರೆ ನಾಲ್ಕೈದು ಕಿಲೋ ಮೀಟರ್ ಹೆಚ್ಚು ದಾರಿ ಕ್ರಮಿಸಬೇಕು. ಹಾಗಾಗಿ ವೆಂಕಟಾಪುರ ಗ್ರಾಮಸ್ಥರು ಮಡಕಶಿರಾಕ್ಕೆ ಹೋಗಿ ಬರುವುದೇ ಹೆಚ್ಚು. ಎಕ್ಕೆದ್ದು ಹೋಗಿರುವ ರಸ್ತೆಯಲ್ಲಿ ರಾಜಕಾರಣಿಗಳಿಗೆ ಹಿಡಿಶಾಪ ಹಾಕುತ್ತಲೇ ದಾರಿ ಸವೆಸುವುದು ಮಾಮೂಲಿನ ಸಂಗತಿ.

ಪಾವಗಡಕ್ಕೆ ಹೋಲಿಸಿದರೆ ಪೆಟ್ರೋಲ್, ಡಿಸೆಲ್ ಬೆಲೆ ಆಂದ್ರಪ್ರದೇಶದಲ್ಲಿ ಮೂರು ರೂಪಾಯಿ ಕಡಿಮೆ ಇದೆ. ಆ ಕಾರಣಕ್ಕಾಗಿಯೇ ದ್ವಿಚಕ್ರವಾಹನ ಸವಾರರು, ಟ್ಯಾಕ್ಟರ್ ಮಾಲಿಕರು, ಆಟೋಚಾಲಕರು ಮಡಕಶಿರಾಕ್ಕೆ ಬರುವುದು ರೂಢಿಯಲ್ಲಿದೆ. ರಸ್ತೆ ಕೆಟ್ಟು ಹೋಗಿದ್ದರೂ ಗ್ರಾಮ ಪಂಚಾಯ್ತಿ, ತಾಲೂಕು ಪಂಚಾಯ್ತಿ ಮತ್ತು ಜಿಲ್ಲಾ ಪಂಚಾಯ್ತಿ ಸದಸ್ಯರು, ಪಿಡಿಒ ಮತ್ತು ಇಲ್ಲಿನ ಶಾಸಕರು ತಲೆಗೆ ಹಾಕಿಕೊಂಡಿಲ್ಲ.

ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಲಾಗಿದೆ. ಇದಕ್ಕಾಗಿ 14 ಲಕ್ಷ ರೂ ಬಿಡುಗಡೆ ಆಗಿತ್ತು. ಆದರೆ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಪಿಡಿಒ ಶಾಮೀಲಾಗಿ ಹಣವನ್ನು ಲೂಟಿ ಮಾಡಿ ನೆಪಕ್ಕೆ ಮಾತ್ರ ಕಡಿಮೆ ನೀರು ತುಂಬುವ ಸಾಮರ್ಥ್ಯದ ನೀರಿನ ಟ್ಯಾಂಕ್ ನಿರ್ಮಾಣ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅದೂ ಕೂಡ ಕಳಪೆ ಕಾಮಗಾರಿಯಾಗಿದೆ. ಅಧಿಕಾರಿ ವರ್ಗ ಸ್ಮಾರ್ಟ್ ಆಗುತ್ತಿದೆಯೇ ಹೊರತು ರಸ್ತೆಗಳು ಮಾತ್ರ ಅಭಿವೃದ್ಧಿ ಕಾಣುತ್ತಿಲ್ಲ ಎಂದು ವೆಂಕಟಾಪುರದ ಯುವ ಮುಖಂಡ ಈ ಶಿವಣ್ಣ ದೂರಿದ್ದಾರೆ.

ವೆಂಕಟಾಪುರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವೂ ಇದೆ. 24X7 ಸೇವೆ ನೀಡಲಾಗುವುದು ಎಂಬ ಫಲಕ ಎದ್ದುಕಾಣುತ್ತದೆ. ಆದರೆ ಅದು ನೆಪಮಾತ್ರಕ್ಕೆ ಹಾಕಿರುವ ಫಲಕ. ಪ್ರಾಥಮಿಕ ಆರೋಗ್ಯ ಕೇಂದ್ರದ ಬಾಗಿಲು ತೆರೆಯುವುದೇ ಅಪರೂಪ. ವೈದ್ಯರು ಬರುವುದೇ ದುಸ್ಥರ. ಇಲ್ಲಿನ ಸಿಬ್ಬಂದಿ ಖಾಸಗಿ ಕ್ಲಿನಿಕ್  ವೈದ್ಯರೊಂದಿಗೆ ಶಾಮೀಲಾಗಿ ಆಸ್ಪತ್ರೆಗೆ ಬರುತ್ತಿಲ್ಲ. ಬಂದರೂ ಸರಿಯಾಗಿ ನೋಡುವುದಿಲ್ಲ. ಸರ್ಕಾರಿ ವೇತನ ಪಡೆಯುವ ವೈದ್ಯರು ಖಾಸಗಿ ವೈದ್ಯರಿಂದಲೂ ಮಾಮೂಲಿ ಸ್ವೀಕರಿಸುತ್ತಾರೆ. ಹಾಗಾಗಿ  ಖಾಸಗಿ ಕ್ಲಿನಿಕ್ ಗಳಲ್ಲಿ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಯಾರೂ ಇರುವುದಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕಸಬಾ ಹೋಬಳಿ ವ್ಯಾಪ್ತಿಯ ಗುಂಡಾರ್ಲಹಳ್ಳಿ-ವೀರ್ಲಗೊಂದಿ-ಕನ್ನಡಮೇಡಿ ರಸ್ತೆ ಕೆಟ್ಟು ಕೆರ ಹಿಡಿದಿದೆ. ಇರುವ ಒಂದೇ ಒಂದು ಬಸ್ ನಲ್ಲಿ ಕುಳಿತು ಪ್ರಯಾಣಿಸುತ್ತಿದ್ದರೆ ಹೊಟ್ಟೆಯೊಳಗಿನ ಹಿಟ್ಟು ಬಾಯಿಗೆ ಬರುತ್ತದೆ. ಕುಲುಕಾಟಕ್ಕೆ ಬಸ್ ನಲ್ಲಿ ಕುಳಿತವರು ಅತ್ತಿತ್ತ ವಾಲಾಡುವಂತಹ ಪರಿಸ್ಥಿತಿ ಇದೆ. ರಸ್ತೆಗೆ ಹಾಕಿದ್ದ ಜಲ್ಲಿ ಮೇಲೆದ್ದು ಸಂಚಾರಕ್ಕೆ ಕಿರಿಕಿರಿ ಉಂಟುಮಾಡುತ್ತದೆ. ದ್ವಿಚಕ್ರವಾಹನ, ಆಟೋಗಳಲ್ಲಿ ಹೋಗುವವರು ಅಧಿಕಾರಿಗಳು ಮತ್ತು ರಾಜಕಾರಣಿಗಳನ್ನು ಬಾಯಿಗೆ ಬಂದಂತೆ ಶಪಿಸುತ್ತಲೇ ಹೋಗುವುದು ಸಾಮಾನ್ಯ ವಾಗಿದೆ.

ಪಾವಗಡ ತಾಲೂಕಿನಲ್ಲಿ ನಾಲ್ಕು ಹೋಬಳಿಗಳಿದ್ದು ಕೆಲವು ಕಡೆ ಮಾತ್ರ ರಸ್ತೆಗಳು ಟಾರನ್ನು ಕಂಡಿವೆ. ಉಳಿದ ಕಡೆ ಸಾಕಷ್ಟು ಸಮಸ್ಯೆಗಳಿದ್ದರೂ ಅಧಿಕಾರಿಗಳು ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಬೇಜವಾಬ್ದಾರಿತನದ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ತಾಲೂಕಿನ ರಸ್ತೆಗಳನ್ನು ಅಬಿವೃದ್ಧಿಪಡಿಸಬೇಕು. ಶುದ್ದ ಕುಡಿಯುವ ನೀರನ್ನು ಎಲ್ಲಾ ಗ್ರಾಮಗಳಿಗೂ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...