Homeಕರ್ನಾಟಕಪಾವಗಡ ತಾಲೂಕಿನಲ್ಲಿ ಅಭಿವೃದ್ಧಿ ಮರೀಚಿಕೆ: ಕೊರಕಲು ಬಿದ್ದ ರಸ್ತೆಗಳ ದುರಸ್ತಿಗೆ ಆಗ್ರಹ

ಪಾವಗಡ ತಾಲೂಕಿನಲ್ಲಿ ಅಭಿವೃದ್ಧಿ ಮರೀಚಿಕೆ: ಕೊರಕಲು ಬಿದ್ದ ರಸ್ತೆಗಳ ದುರಸ್ತಿಗೆ ಆಗ್ರಹ

- Advertisement -
- Advertisement -

ಪಾವಗಡ ರಾಜ್ಯದ ಅತೀ ಹಿಂದುಳಿದ ತಾಲೂಕುಗಳಲ್ಲಿ ಒಂದು. ತುಮಕೂರು ಜಿಲ್ಲೆಯ ಉತ್ತರದ ಗಡಿ ಪಾವಗಡ. ಮೂರು ಕಡೆಯೂ ಆಂಧ್ರಪ್ರದೇಶದ ಗಡಿಗಳಿಂದ ಸುತ್ತುವರೆದಿರುವ ಪಾವಗಡ ಅಭಿವೃದ್ಧಿಯನ್ನೇನೂ ಕಂಡಿಲ್ಲ. ಜಿಲ್ಲೆಯಲ್ಲಿ ಅತ್ಯಂತ ನಿರ್ಲಕ್ಷಿತ ತಾಲೂಕು ಇದು. ಯಾರಿಗೂ ಬೇಡವಾದ ಕೂಸಿನಂತೆ. ಎಲ್ಲಾ ತಾಲೂಕುಗಳಿಗೆ ಹೇಮಾವತಿ ನೀರು ಕುಡಿಯಲು ಪೂರೈಕೆಯಾಗುತ್ತಿದ್ದರೆ ಈ ತಾಲೂಕಿಗೆ ಯಾವ ಮೂಲದಿಂದಲೂ ನೀರು ಇಲ್ಲ. ನೀರಾವರಿ ಸೌಲಭ್ಯವಿಲ್ಲ. ಮಳೆಯಾಶ್ರಿತ ಬೆಳೆಯೂ ಅಷ್ಟಕ್ಕಷ್ಟೇ. ಅಭಿವೃದ್ಧಿ ಮೂಲೆಗೆ ಸೇರಿದೆ. ಕೊರಕಲು ಬಿದ್ದ ರಸ್ತೆಗಳೇ ಇದಕ್ಕೆ ಸಾಕ್ಷಿಯಾಗಿ ನಿಂತಿವೆ.

ಹಲ್ಲುಗಳನ್ನು ನೋಡಿದರೆ ಸಾಕು ಇವರು ಪಾವಗಡದವರು ಎಂದು ಗುರುತಿಸಲಾಗುತ್ತಿದೆ. ಅಷ್ಟು ಪ್ರಸಿದ್ದಿ ಪಾವಗಡ. ಪ್ಲೋರೈಡ್ ನೀರು ಇಲ್ಲಿನ ಜನರನ್ನು ಜೀವಂತ ಶವಗಳನ್ನಾಗಿ ಮಾಡಿದೆ. ಇಂತೆಂಬ ಪಾಳು ನೆಲದಲ್ಲಿ ರಸ್ತೆಗಳೂ ಟಾರು ಕಂಡಿಲ್ಲ. ಕಿತ್ತುಹೋದ ರಸ್ತೆಗಳಲ್ಲೇ ವಾಹನ-ಜನ ಸಂಚಾರ ಸಾಗಿದೆ. ಜನರ ಗೋಳನ್ನು ಕೇಳೋರೇ ಇಲ್ಲ. ಜನಪ್ರತಿನಿಧಿಗಳು ಮೇಲ್ಜಾತಿಯವರ ಮರ್ಜಿಯಲ್ಲಿ ಕೆಲಸ ನಿರ್ವಹಿಸಬೇಕಾಗಿ ಬಂದಿದೆ.
ಪಾವಗಡ ಪ್ರದೇಶ ಡಾ.ನಂಜುಂಡಪ್ಪ ವರದಿ ಪ್ರಕಾರ ಅತೀ ಹಿಂದುಳಿದ ತಾಲೂಕು. ಅಭಿವೃದ್ಧಿಯನ್ನೇ ಕಾಣದ ಈ ತಾಲೂಕನ್ನು 370 ಜೆ ಕಲಂ ಅಡಿ ತಂದು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕಿತ್ತು. ಆದರೆ ಅದಾಗಲೇ ಇಲ್ಲ. ಜನಪ್ರನಿಧಿಗಳು ಬಂದ ಅನುದಾನದಲ್ಲಿ ಜೇಬು ಭರ್ತಿ ಮಾಡಿಕೊಳ್ಳುವುದು ಹೇಗೆ ಎಂದು ಚಿಂತಿಸಿದರು. ಕೋಟ್ಯಂತರ ಅನುದಾನ ಬಂದರೂ ಅದು ಎಲ್ಲಿ ಹೋಯಿತು ಎಂಬುದು ಮಾತ್ರ ನಿಗೂಢ. ಆದರೆ ದಾಖಲೆಗಳಲ್ಲಿ ಮಾತ್ರ ಹಣ ಖರ್ಚು ಮಾಡಲಾಗಿದೆ. ಅಭಿವೃದ್ಧಿ ಕಡತಗಳಲ್ಲಿ ಮಾತ್ರ ರಸ್ತೆಗಳು ಆಗಿವೆ ಎಂಬುದನ್ನು ಸಾರುತ್ತವೆ.

ಪಾವಗಡಕ್ಕೆ ಕೂಗಳತೆ ದೂರದಲ್ಲಿರುವ ವೆಂಕಟಾಪುರ ಗ್ರಾಮ ಪಂಚಾಯ್ತಿ ಕೇಂದ್ರ. ರಸ್ತೆಯನ್ನು ನೋಡಿದರೆ ಯಡಿಯೂರು ಸಿದ್ದಲಿಂಗೇಶ್ವರನೇ ಮೆಚ್ಚಬೇಕು. ವೆಂಕಟಾಪುರ-ಮಡಕಶಿರಾ ರಸ್ತೆ ಟಾರು ಕಂಡು ದಶಕವೇ ಕಳೆದಿದೆ. ಟಾರು ಕಿತ್ತುಹೋಗಿರುವುದರಿಂದ ಜಲ್ಲಿಯೇ ರಸ್ತೆಯ ಮೇಲಿದೆ. ಗುಂಡಿಗಳಿಂದ ಕೂಡಿರುವ ಈ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಸಂಚಾರ ಮಾಡುವುದೇ ದುಸ್ಥರವಾಗಿದೆ. ವೆಂಕಟಾಪುರದಿಂದ ಮಡಕಶಿರಾಕ್ಕೆ ನಿತ್ಯವೂ ನೂರಾರು ಜನರು ಪ್ರಯಾಣಿಸುತ್ತಾರೆ. ದಿನಸಿ, ಪೆಟ್ರೋಲ್, ಡಿಸೆಲ್, ತರಕಾರಿ ತರುವುದು ಅಲ್ಲಿಂದಲೇ. ಪಾವಗಡಕ್ಕೆ ಬರಬೇಕೆಂದರೆ ನಾಲ್ಕೈದು ಕಿಲೋ ಮೀಟರ್ ಹೆಚ್ಚು ದಾರಿ ಕ್ರಮಿಸಬೇಕು. ಹಾಗಾಗಿ ವೆಂಕಟಾಪುರ ಗ್ರಾಮಸ್ಥರು ಮಡಕಶಿರಾಕ್ಕೆ ಹೋಗಿ ಬರುವುದೇ ಹೆಚ್ಚು. ಎಕ್ಕೆದ್ದು ಹೋಗಿರುವ ರಸ್ತೆಯಲ್ಲಿ ರಾಜಕಾರಣಿಗಳಿಗೆ ಹಿಡಿಶಾಪ ಹಾಕುತ್ತಲೇ ದಾರಿ ಸವೆಸುವುದು ಮಾಮೂಲಿನ ಸಂಗತಿ.

ಪಾವಗಡಕ್ಕೆ ಹೋಲಿಸಿದರೆ ಪೆಟ್ರೋಲ್, ಡಿಸೆಲ್ ಬೆಲೆ ಆಂದ್ರಪ್ರದೇಶದಲ್ಲಿ ಮೂರು ರೂಪಾಯಿ ಕಡಿಮೆ ಇದೆ. ಆ ಕಾರಣಕ್ಕಾಗಿಯೇ ದ್ವಿಚಕ್ರವಾಹನ ಸವಾರರು, ಟ್ಯಾಕ್ಟರ್ ಮಾಲಿಕರು, ಆಟೋಚಾಲಕರು ಮಡಕಶಿರಾಕ್ಕೆ ಬರುವುದು ರೂಢಿಯಲ್ಲಿದೆ. ರಸ್ತೆ ಕೆಟ್ಟು ಹೋಗಿದ್ದರೂ ಗ್ರಾಮ ಪಂಚಾಯ್ತಿ, ತಾಲೂಕು ಪಂಚಾಯ್ತಿ ಮತ್ತು ಜಿಲ್ಲಾ ಪಂಚಾಯ್ತಿ ಸದಸ್ಯರು, ಪಿಡಿಒ ಮತ್ತು ಇಲ್ಲಿನ ಶಾಸಕರು ತಲೆಗೆ ಹಾಕಿಕೊಂಡಿಲ್ಲ.

ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಲಾಗಿದೆ. ಇದಕ್ಕಾಗಿ 14 ಲಕ್ಷ ರೂ ಬಿಡುಗಡೆ ಆಗಿತ್ತು. ಆದರೆ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಪಿಡಿಒ ಶಾಮೀಲಾಗಿ ಹಣವನ್ನು ಲೂಟಿ ಮಾಡಿ ನೆಪಕ್ಕೆ ಮಾತ್ರ ಕಡಿಮೆ ನೀರು ತುಂಬುವ ಸಾಮರ್ಥ್ಯದ ನೀರಿನ ಟ್ಯಾಂಕ್ ನಿರ್ಮಾಣ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅದೂ ಕೂಡ ಕಳಪೆ ಕಾಮಗಾರಿಯಾಗಿದೆ. ಅಧಿಕಾರಿ ವರ್ಗ ಸ್ಮಾರ್ಟ್ ಆಗುತ್ತಿದೆಯೇ ಹೊರತು ರಸ್ತೆಗಳು ಮಾತ್ರ ಅಭಿವೃದ್ಧಿ ಕಾಣುತ್ತಿಲ್ಲ ಎಂದು ವೆಂಕಟಾಪುರದ ಯುವ ಮುಖಂಡ ಈ ಶಿವಣ್ಣ ದೂರಿದ್ದಾರೆ.

ವೆಂಕಟಾಪುರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವೂ ಇದೆ. 24X7 ಸೇವೆ ನೀಡಲಾಗುವುದು ಎಂಬ ಫಲಕ ಎದ್ದುಕಾಣುತ್ತದೆ. ಆದರೆ ಅದು ನೆಪಮಾತ್ರಕ್ಕೆ ಹಾಕಿರುವ ಫಲಕ. ಪ್ರಾಥಮಿಕ ಆರೋಗ್ಯ ಕೇಂದ್ರದ ಬಾಗಿಲು ತೆರೆಯುವುದೇ ಅಪರೂಪ. ವೈದ್ಯರು ಬರುವುದೇ ದುಸ್ಥರ. ಇಲ್ಲಿನ ಸಿಬ್ಬಂದಿ ಖಾಸಗಿ ಕ್ಲಿನಿಕ್  ವೈದ್ಯರೊಂದಿಗೆ ಶಾಮೀಲಾಗಿ ಆಸ್ಪತ್ರೆಗೆ ಬರುತ್ತಿಲ್ಲ. ಬಂದರೂ ಸರಿಯಾಗಿ ನೋಡುವುದಿಲ್ಲ. ಸರ್ಕಾರಿ ವೇತನ ಪಡೆಯುವ ವೈದ್ಯರು ಖಾಸಗಿ ವೈದ್ಯರಿಂದಲೂ ಮಾಮೂಲಿ ಸ್ವೀಕರಿಸುತ್ತಾರೆ. ಹಾಗಾಗಿ  ಖಾಸಗಿ ಕ್ಲಿನಿಕ್ ಗಳಲ್ಲಿ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಯಾರೂ ಇರುವುದಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕಸಬಾ ಹೋಬಳಿ ವ್ಯಾಪ್ತಿಯ ಗುಂಡಾರ್ಲಹಳ್ಳಿ-ವೀರ್ಲಗೊಂದಿ-ಕನ್ನಡಮೇಡಿ ರಸ್ತೆ ಕೆಟ್ಟು ಕೆರ ಹಿಡಿದಿದೆ. ಇರುವ ಒಂದೇ ಒಂದು ಬಸ್ ನಲ್ಲಿ ಕುಳಿತು ಪ್ರಯಾಣಿಸುತ್ತಿದ್ದರೆ ಹೊಟ್ಟೆಯೊಳಗಿನ ಹಿಟ್ಟು ಬಾಯಿಗೆ ಬರುತ್ತದೆ. ಕುಲುಕಾಟಕ್ಕೆ ಬಸ್ ನಲ್ಲಿ ಕುಳಿತವರು ಅತ್ತಿತ್ತ ವಾಲಾಡುವಂತಹ ಪರಿಸ್ಥಿತಿ ಇದೆ. ರಸ್ತೆಗೆ ಹಾಕಿದ್ದ ಜಲ್ಲಿ ಮೇಲೆದ್ದು ಸಂಚಾರಕ್ಕೆ ಕಿರಿಕಿರಿ ಉಂಟುಮಾಡುತ್ತದೆ. ದ್ವಿಚಕ್ರವಾಹನ, ಆಟೋಗಳಲ್ಲಿ ಹೋಗುವವರು ಅಧಿಕಾರಿಗಳು ಮತ್ತು ರಾಜಕಾರಣಿಗಳನ್ನು ಬಾಯಿಗೆ ಬಂದಂತೆ ಶಪಿಸುತ್ತಲೇ ಹೋಗುವುದು ಸಾಮಾನ್ಯ ವಾಗಿದೆ.

ಪಾವಗಡ ತಾಲೂಕಿನಲ್ಲಿ ನಾಲ್ಕು ಹೋಬಳಿಗಳಿದ್ದು ಕೆಲವು ಕಡೆ ಮಾತ್ರ ರಸ್ತೆಗಳು ಟಾರನ್ನು ಕಂಡಿವೆ. ಉಳಿದ ಕಡೆ ಸಾಕಷ್ಟು ಸಮಸ್ಯೆಗಳಿದ್ದರೂ ಅಧಿಕಾರಿಗಳು ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಬೇಜವಾಬ್ದಾರಿತನದ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ತಾಲೂಕಿನ ರಸ್ತೆಗಳನ್ನು ಅಬಿವೃದ್ಧಿಪಡಿಸಬೇಕು. ಶುದ್ದ ಕುಡಿಯುವ ನೀರನ್ನು ಎಲ್ಲಾ ಗ್ರಾಮಗಳಿಗೂ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...