Homeಕರ್ನಾಟಕಪಾವಗಡ ತಾಲೂಕಿನಲ್ಲಿ ಅಭಿವೃದ್ಧಿ ಮರೀಚಿಕೆ: ಕೊರಕಲು ಬಿದ್ದ ರಸ್ತೆಗಳ ದುರಸ್ತಿಗೆ ಆಗ್ರಹ

ಪಾವಗಡ ತಾಲೂಕಿನಲ್ಲಿ ಅಭಿವೃದ್ಧಿ ಮರೀಚಿಕೆ: ಕೊರಕಲು ಬಿದ್ದ ರಸ್ತೆಗಳ ದುರಸ್ತಿಗೆ ಆಗ್ರಹ

- Advertisement -
- Advertisement -

ಪಾವಗಡ ರಾಜ್ಯದ ಅತೀ ಹಿಂದುಳಿದ ತಾಲೂಕುಗಳಲ್ಲಿ ಒಂದು. ತುಮಕೂರು ಜಿಲ್ಲೆಯ ಉತ್ತರದ ಗಡಿ ಪಾವಗಡ. ಮೂರು ಕಡೆಯೂ ಆಂಧ್ರಪ್ರದೇಶದ ಗಡಿಗಳಿಂದ ಸುತ್ತುವರೆದಿರುವ ಪಾವಗಡ ಅಭಿವೃದ್ಧಿಯನ್ನೇನೂ ಕಂಡಿಲ್ಲ. ಜಿಲ್ಲೆಯಲ್ಲಿ ಅತ್ಯಂತ ನಿರ್ಲಕ್ಷಿತ ತಾಲೂಕು ಇದು. ಯಾರಿಗೂ ಬೇಡವಾದ ಕೂಸಿನಂತೆ. ಎಲ್ಲಾ ತಾಲೂಕುಗಳಿಗೆ ಹೇಮಾವತಿ ನೀರು ಕುಡಿಯಲು ಪೂರೈಕೆಯಾಗುತ್ತಿದ್ದರೆ ಈ ತಾಲೂಕಿಗೆ ಯಾವ ಮೂಲದಿಂದಲೂ ನೀರು ಇಲ್ಲ. ನೀರಾವರಿ ಸೌಲಭ್ಯವಿಲ್ಲ. ಮಳೆಯಾಶ್ರಿತ ಬೆಳೆಯೂ ಅಷ್ಟಕ್ಕಷ್ಟೇ. ಅಭಿವೃದ್ಧಿ ಮೂಲೆಗೆ ಸೇರಿದೆ. ಕೊರಕಲು ಬಿದ್ದ ರಸ್ತೆಗಳೇ ಇದಕ್ಕೆ ಸಾಕ್ಷಿಯಾಗಿ ನಿಂತಿವೆ.

ಹಲ್ಲುಗಳನ್ನು ನೋಡಿದರೆ ಸಾಕು ಇವರು ಪಾವಗಡದವರು ಎಂದು ಗುರುತಿಸಲಾಗುತ್ತಿದೆ. ಅಷ್ಟು ಪ್ರಸಿದ್ದಿ ಪಾವಗಡ. ಪ್ಲೋರೈಡ್ ನೀರು ಇಲ್ಲಿನ ಜನರನ್ನು ಜೀವಂತ ಶವಗಳನ್ನಾಗಿ ಮಾಡಿದೆ. ಇಂತೆಂಬ ಪಾಳು ನೆಲದಲ್ಲಿ ರಸ್ತೆಗಳೂ ಟಾರು ಕಂಡಿಲ್ಲ. ಕಿತ್ತುಹೋದ ರಸ್ತೆಗಳಲ್ಲೇ ವಾಹನ-ಜನ ಸಂಚಾರ ಸಾಗಿದೆ. ಜನರ ಗೋಳನ್ನು ಕೇಳೋರೇ ಇಲ್ಲ. ಜನಪ್ರತಿನಿಧಿಗಳು ಮೇಲ್ಜಾತಿಯವರ ಮರ್ಜಿಯಲ್ಲಿ ಕೆಲಸ ನಿರ್ವಹಿಸಬೇಕಾಗಿ ಬಂದಿದೆ.
ಪಾವಗಡ ಪ್ರದೇಶ ಡಾ.ನಂಜುಂಡಪ್ಪ ವರದಿ ಪ್ರಕಾರ ಅತೀ ಹಿಂದುಳಿದ ತಾಲೂಕು. ಅಭಿವೃದ್ಧಿಯನ್ನೇ ಕಾಣದ ಈ ತಾಲೂಕನ್ನು 370 ಜೆ ಕಲಂ ಅಡಿ ತಂದು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕಿತ್ತು. ಆದರೆ ಅದಾಗಲೇ ಇಲ್ಲ. ಜನಪ್ರನಿಧಿಗಳು ಬಂದ ಅನುದಾನದಲ್ಲಿ ಜೇಬು ಭರ್ತಿ ಮಾಡಿಕೊಳ್ಳುವುದು ಹೇಗೆ ಎಂದು ಚಿಂತಿಸಿದರು. ಕೋಟ್ಯಂತರ ಅನುದಾನ ಬಂದರೂ ಅದು ಎಲ್ಲಿ ಹೋಯಿತು ಎಂಬುದು ಮಾತ್ರ ನಿಗೂಢ. ಆದರೆ ದಾಖಲೆಗಳಲ್ಲಿ ಮಾತ್ರ ಹಣ ಖರ್ಚು ಮಾಡಲಾಗಿದೆ. ಅಭಿವೃದ್ಧಿ ಕಡತಗಳಲ್ಲಿ ಮಾತ್ರ ರಸ್ತೆಗಳು ಆಗಿವೆ ಎಂಬುದನ್ನು ಸಾರುತ್ತವೆ.

ಪಾವಗಡಕ್ಕೆ ಕೂಗಳತೆ ದೂರದಲ್ಲಿರುವ ವೆಂಕಟಾಪುರ ಗ್ರಾಮ ಪಂಚಾಯ್ತಿ ಕೇಂದ್ರ. ರಸ್ತೆಯನ್ನು ನೋಡಿದರೆ ಯಡಿಯೂರು ಸಿದ್ದಲಿಂಗೇಶ್ವರನೇ ಮೆಚ್ಚಬೇಕು. ವೆಂಕಟಾಪುರ-ಮಡಕಶಿರಾ ರಸ್ತೆ ಟಾರು ಕಂಡು ದಶಕವೇ ಕಳೆದಿದೆ. ಟಾರು ಕಿತ್ತುಹೋಗಿರುವುದರಿಂದ ಜಲ್ಲಿಯೇ ರಸ್ತೆಯ ಮೇಲಿದೆ. ಗುಂಡಿಗಳಿಂದ ಕೂಡಿರುವ ಈ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಸಂಚಾರ ಮಾಡುವುದೇ ದುಸ್ಥರವಾಗಿದೆ. ವೆಂಕಟಾಪುರದಿಂದ ಮಡಕಶಿರಾಕ್ಕೆ ನಿತ್ಯವೂ ನೂರಾರು ಜನರು ಪ್ರಯಾಣಿಸುತ್ತಾರೆ. ದಿನಸಿ, ಪೆಟ್ರೋಲ್, ಡಿಸೆಲ್, ತರಕಾರಿ ತರುವುದು ಅಲ್ಲಿಂದಲೇ. ಪಾವಗಡಕ್ಕೆ ಬರಬೇಕೆಂದರೆ ನಾಲ್ಕೈದು ಕಿಲೋ ಮೀಟರ್ ಹೆಚ್ಚು ದಾರಿ ಕ್ರಮಿಸಬೇಕು. ಹಾಗಾಗಿ ವೆಂಕಟಾಪುರ ಗ್ರಾಮಸ್ಥರು ಮಡಕಶಿರಾಕ್ಕೆ ಹೋಗಿ ಬರುವುದೇ ಹೆಚ್ಚು. ಎಕ್ಕೆದ್ದು ಹೋಗಿರುವ ರಸ್ತೆಯಲ್ಲಿ ರಾಜಕಾರಣಿಗಳಿಗೆ ಹಿಡಿಶಾಪ ಹಾಕುತ್ತಲೇ ದಾರಿ ಸವೆಸುವುದು ಮಾಮೂಲಿನ ಸಂಗತಿ.

ಪಾವಗಡಕ್ಕೆ ಹೋಲಿಸಿದರೆ ಪೆಟ್ರೋಲ್, ಡಿಸೆಲ್ ಬೆಲೆ ಆಂದ್ರಪ್ರದೇಶದಲ್ಲಿ ಮೂರು ರೂಪಾಯಿ ಕಡಿಮೆ ಇದೆ. ಆ ಕಾರಣಕ್ಕಾಗಿಯೇ ದ್ವಿಚಕ್ರವಾಹನ ಸವಾರರು, ಟ್ಯಾಕ್ಟರ್ ಮಾಲಿಕರು, ಆಟೋಚಾಲಕರು ಮಡಕಶಿರಾಕ್ಕೆ ಬರುವುದು ರೂಢಿಯಲ್ಲಿದೆ. ರಸ್ತೆ ಕೆಟ್ಟು ಹೋಗಿದ್ದರೂ ಗ್ರಾಮ ಪಂಚಾಯ್ತಿ, ತಾಲೂಕು ಪಂಚಾಯ್ತಿ ಮತ್ತು ಜಿಲ್ಲಾ ಪಂಚಾಯ್ತಿ ಸದಸ್ಯರು, ಪಿಡಿಒ ಮತ್ತು ಇಲ್ಲಿನ ಶಾಸಕರು ತಲೆಗೆ ಹಾಕಿಕೊಂಡಿಲ್ಲ.

ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಲಾಗಿದೆ. ಇದಕ್ಕಾಗಿ 14 ಲಕ್ಷ ರೂ ಬಿಡುಗಡೆ ಆಗಿತ್ತು. ಆದರೆ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಪಿಡಿಒ ಶಾಮೀಲಾಗಿ ಹಣವನ್ನು ಲೂಟಿ ಮಾಡಿ ನೆಪಕ್ಕೆ ಮಾತ್ರ ಕಡಿಮೆ ನೀರು ತುಂಬುವ ಸಾಮರ್ಥ್ಯದ ನೀರಿನ ಟ್ಯಾಂಕ್ ನಿರ್ಮಾಣ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅದೂ ಕೂಡ ಕಳಪೆ ಕಾಮಗಾರಿಯಾಗಿದೆ. ಅಧಿಕಾರಿ ವರ್ಗ ಸ್ಮಾರ್ಟ್ ಆಗುತ್ತಿದೆಯೇ ಹೊರತು ರಸ್ತೆಗಳು ಮಾತ್ರ ಅಭಿವೃದ್ಧಿ ಕಾಣುತ್ತಿಲ್ಲ ಎಂದು ವೆಂಕಟಾಪುರದ ಯುವ ಮುಖಂಡ ಈ ಶಿವಣ್ಣ ದೂರಿದ್ದಾರೆ.

ವೆಂಕಟಾಪುರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವೂ ಇದೆ. 24X7 ಸೇವೆ ನೀಡಲಾಗುವುದು ಎಂಬ ಫಲಕ ಎದ್ದುಕಾಣುತ್ತದೆ. ಆದರೆ ಅದು ನೆಪಮಾತ್ರಕ್ಕೆ ಹಾಕಿರುವ ಫಲಕ. ಪ್ರಾಥಮಿಕ ಆರೋಗ್ಯ ಕೇಂದ್ರದ ಬಾಗಿಲು ತೆರೆಯುವುದೇ ಅಪರೂಪ. ವೈದ್ಯರು ಬರುವುದೇ ದುಸ್ಥರ. ಇಲ್ಲಿನ ಸಿಬ್ಬಂದಿ ಖಾಸಗಿ ಕ್ಲಿನಿಕ್  ವೈದ್ಯರೊಂದಿಗೆ ಶಾಮೀಲಾಗಿ ಆಸ್ಪತ್ರೆಗೆ ಬರುತ್ತಿಲ್ಲ. ಬಂದರೂ ಸರಿಯಾಗಿ ನೋಡುವುದಿಲ್ಲ. ಸರ್ಕಾರಿ ವೇತನ ಪಡೆಯುವ ವೈದ್ಯರು ಖಾಸಗಿ ವೈದ್ಯರಿಂದಲೂ ಮಾಮೂಲಿ ಸ್ವೀಕರಿಸುತ್ತಾರೆ. ಹಾಗಾಗಿ  ಖಾಸಗಿ ಕ್ಲಿನಿಕ್ ಗಳಲ್ಲಿ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಯಾರೂ ಇರುವುದಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕಸಬಾ ಹೋಬಳಿ ವ್ಯಾಪ್ತಿಯ ಗುಂಡಾರ್ಲಹಳ್ಳಿ-ವೀರ್ಲಗೊಂದಿ-ಕನ್ನಡಮೇಡಿ ರಸ್ತೆ ಕೆಟ್ಟು ಕೆರ ಹಿಡಿದಿದೆ. ಇರುವ ಒಂದೇ ಒಂದು ಬಸ್ ನಲ್ಲಿ ಕುಳಿತು ಪ್ರಯಾಣಿಸುತ್ತಿದ್ದರೆ ಹೊಟ್ಟೆಯೊಳಗಿನ ಹಿಟ್ಟು ಬಾಯಿಗೆ ಬರುತ್ತದೆ. ಕುಲುಕಾಟಕ್ಕೆ ಬಸ್ ನಲ್ಲಿ ಕುಳಿತವರು ಅತ್ತಿತ್ತ ವಾಲಾಡುವಂತಹ ಪರಿಸ್ಥಿತಿ ಇದೆ. ರಸ್ತೆಗೆ ಹಾಕಿದ್ದ ಜಲ್ಲಿ ಮೇಲೆದ್ದು ಸಂಚಾರಕ್ಕೆ ಕಿರಿಕಿರಿ ಉಂಟುಮಾಡುತ್ತದೆ. ದ್ವಿಚಕ್ರವಾಹನ, ಆಟೋಗಳಲ್ಲಿ ಹೋಗುವವರು ಅಧಿಕಾರಿಗಳು ಮತ್ತು ರಾಜಕಾರಣಿಗಳನ್ನು ಬಾಯಿಗೆ ಬಂದಂತೆ ಶಪಿಸುತ್ತಲೇ ಹೋಗುವುದು ಸಾಮಾನ್ಯ ವಾಗಿದೆ.

ಪಾವಗಡ ತಾಲೂಕಿನಲ್ಲಿ ನಾಲ್ಕು ಹೋಬಳಿಗಳಿದ್ದು ಕೆಲವು ಕಡೆ ಮಾತ್ರ ರಸ್ತೆಗಳು ಟಾರನ್ನು ಕಂಡಿವೆ. ಉಳಿದ ಕಡೆ ಸಾಕಷ್ಟು ಸಮಸ್ಯೆಗಳಿದ್ದರೂ ಅಧಿಕಾರಿಗಳು ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಬೇಜವಾಬ್ದಾರಿತನದ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ತಾಲೂಕಿನ ರಸ್ತೆಗಳನ್ನು ಅಬಿವೃದ್ಧಿಪಡಿಸಬೇಕು. ಶುದ್ದ ಕುಡಿಯುವ ನೀರನ್ನು ಎಲ್ಲಾ ಗ್ರಾಮಗಳಿಗೂ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...