HomeಮುಖಪುಟJNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

JNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

ಕಾಳಿತಾಗೆ ಜಾಮೀನು ಸಿಕ್ಕಿದ್ದರೂ ಕೂಡ ಮತ್ತೊಂದು ಪ್ರಕರಣದಲ್ಲಿ ಇನ್ನೂ ವಿಚಾರಣೆ ನಡೆಸುತ್ತಿರುವುದರಿಂದ ಅವರಿನ್ನೂ ಬಂಧನದಲ್ಲಿ ಉಳಿಯಬೇಕಾಗುತ್ತದೆ ಎಂದು ಆಕೆಯ ಸಲಹೆಗಾರ ತುಷಾರಿಕಾ ಮಾತೂ ತಿಳಿಸಿದ್ದಾರೆ.

- Advertisement -
- Advertisement -

ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರಣಕ್ಕೆ ದೆಹಲಿ ಪೊಲೀಸರು ಬಂಧಿಸಿರುವ ಪಿಂಜ್ರಾ ತೋಡ್ ಕಾರ್ಯಕರ್ತೆಯಾದ ದೇವಂಗನಾ ಕಾಳಿತಾ ಅವರಿಗೆ ಮಂಗಳವಾರ ದರಿಯಗಂಜ್ ಹಿಂಸಾಚಾರ ಪ್ರಕರಣದಲ್ಲಿ ಜಾಮೀನು ನೀಡಲಾಗಿದೆ.

ವಿವಾದಾತ್ಮಕ ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆಯೊಂದರಲ್ಲಿ ದರಿಯಗಂಜ್‌ನಲ್ಲಿ  2019ರ ಡಿಸೆಂಬರ್‌ನಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಅವರ ಪಾತ್ರವನ್ನು ಬೆಂಬಲಿಸಲು ಪೊಲೀಸರು ಯಾವುದೇ ದೃಢವಾದ ಸಾಕ್ಷ್ಯಗಳನ್ನು ನೀಡಿಲ್ಲ ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅಭಿನವ್ ಪಾಂಡೆ ಹೇಳಿದ್ದಾರೆ.

ಆದರೆ, ಕಾಳಿತಾಗೆ ಜಾಮೀನು ಸಿಕ್ಕಿದ್ದರೂ ಕೂಡ ಮತ್ತೊಂದು ಪ್ರಕರಣದಲ್ಲಿ ಇನ್ನೂ ವಿಚಾರಣೆ ನಡೆಸುತ್ತಿರುವುದರಿಂದ ಅವರಿನ್ನೂ ಬಂಧನದಲ್ಲಿ ಉಳಿಯಬೇಕಾಗುತ್ತದೆ ಎಂದು ಆಕೆಯ ಸಲಹೆಗಾರ ತುಷಾರಿಕಾ ಮಾತೂ ತಿಳಿಸಿದ್ದಾರೆ.


ಇದನ್ನೂ ಓದಿ: 10 ದಿನದಲ್ಲಿ 3 ಬಾರಿ ಸಿಎಎ ವಿರೋಧಿ ಹೋರಾಟಗಾರ್ತಿಯರ ಬಂಧನ: ಕಪಿಲ್‌ ಮಿಶ್ರಾ ಮೇಲೆ ಕ್ರಮ ಏಕಿಲ್ಲ? 


ಸಿಎಎ ವಿರೋಧಿ ಮಹಿಳೆಯರ ಧರಣಿ ವೇಳೆ ಜಾಫ್ರಾಬಾದ್‌ನಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳಾದ ದೇವಂಗನಾ ಕಾಳಿತಾ ಮತ್ತು ನತಾಶಾ ನರ್ವಾಲ್ ಅವರನ್ನು ಮೇ 23 ರಂದು ಬಂಧಿಸಲಾಯಿತು.

ಮ್ಯಾಜಿಸ್ಟ್ರೇಟ್ ಪಾಂಡೆ ಕಾಳಿತಾಗೆ ಜಾಮೀನು ನೀಡುವಾಗ, “ಆರೋಪಿಗಳು ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್‌ಗಳ ಆಧಾರದ ಮೇಲೆ ಎನ್‌ಆರ್‌ಸಿ ಮಸೂದೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು, ಆದರೆ ಇಲ್ಲಿಯವರೆಗೆ ತನಿಖೆಯಲ್ಲಿ ಐಪಿಸಿಯ 325/352 ಸೆಕ್ಷನ್‌ಗಳನ್ನು ಅವರ ಮೇಲೆ ಹೂಡಿರುವುದಕ್ಕೆ ಆರೋಪಿಗಳ ಮೇಲೆ ಯಾವುದೇ ನೇರ ಸಾಕ್ಷ್ಯಗಳು ಕಂಡುಬಂದಿಲ್ಲ ಎಂದಿದ್ದಾರೆ”

ಹಿಂಸಾಚಾರದ ಸ್ಥಳದಲ್ಲಿ ಕಾಳಿತಾ ಇದ್ದರು ಎಂದು ಎಂಎಲ್‌ಸಿ ಆಧಾರದ ಮೇಲೆ ಪೊಲೀಸರು ಆರೋಪ ಹೊರಿಸಿದ್ದಾರೆ. ಆದರೆ “ಸಿಸಿಟಿವಿ ದೃಶ್ಯಾವಳಿಗಳು ಆರೋಪಿಗಳು ಭಾಗಿಯಾಗಿರುವುದನ್ನು ಅಥವಾ ನಿರ್ದಿಷ್ಟವಾಗಿ ಯಾವುದೇ ಹಿಂಸಾತ್ಮಕ ಚಟುವಟಿಕೆ ನಡೆಸಿರುವುದನ್ನು ತೋರಿಸುತ್ತಿಲ್ಲ” ಎಂದಿದ್ದಾರೆ.

ಕೇವಲ ಎಂಎಲ್‌ಸಿ ಆಧಾರದಲ್ಲಿ ಆರೋಪಿಗಳಿಗೆ ಜಾಮೀನು ನಿರಾಕರಿಸಲು ಸಾಧ್ಯವಾಗುವುದಿಲ್ಲ. ಕಾಳಿತಾ ಅವರ ಲ್ಯಾಪ್‌ಟಾಪ್ ಮತ್ತು ಫೋನ್‌ನಲ್ಲಿ ಯಾವುದೇ ದೋಷಾರೋಪಣೆ ವಸ್ತುಗಳು ಕಂಡುಬಂದಿಲ್ಲ ಎಂದು ಪಾಂಡೆ ಹೇಳಿದರು.

ಪರಿಸ್ಥಿತಿ ಈಗಿರುವಾಗ ಕಾಳಿತಾ ಯಾವುದೇ ಹಿಂಸಾತ್ಮಕ ಚಟುವಟಿಕೆಯಲ್ಲಿ ಭಾಗವಹಿಸಿದ್ದಾರೆ ಅಥವಾ ಪ್ರಚೋದಿಸಿದ್ದಾರೆ ಎಂದು ಹೇಳುವುದು ಕಷ್ಟ. ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಉದ್ದೇಶವನ್ನು ಅವರು ಹೊಂದಿರಬಹುದು. ನಂತರ ಅದು ಹಿಂಸಾತ್ಮಕವಾಗಿರಬಹುದು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ತನಿಖೆಯಲ್ಲಿ ಸಹಕರಿಸಲು ಕಾಳಿತಾ ಅವರು ಒಪ್ಪಿದರೆ ಆಕೆಗೆ ಷರತ್ತುಗಳೊಂದಿಗೆ ಜಾಮೀನು ನೀಡಬಹುದು ಎಂದು ಮ್ಯಾಜಿಸ್ಟ್ರೇಟ್ ತಿಳಿಸಿದರು. 30,000 ರೂ. ಜಾಮೀನು ಮತ್ತು ಅವಳ ಪಾಸ್‌ಪೋರ್ಟ್‌ ಜಮಾ ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಷರತ್ತುಗಳನ್ನು ವಿಧಿಸಿದ್ದಾರೆ.

ನರ್ವಾಲ್ ಮತ್ತು ಕಾಳಿತಾ ಅವರೊಂದಿಗೆ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳಾದ ಸಫೂರಾ ಜರ್ಗರ್, ಮೀರನ್ ಹೈದರ್, ಶಿಫಾ-ಉರ್-ರೆಹಮಾನ್, ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ದೆಹಲಿ ಹಿಂಸಾಚಾರದಲ್ಲಿ ತಮ್ಮ ಪಾತ್ರದ ಆರೋಪಕ್ಕೆ ಸಂಬಂಧಿಸಿದಂತೆ ಕಠಿಣ ಯುಎಪಿಎ ಆರೋಪಗಳೊಂದಿಗೆ ಬಂಧಿಸಲಾಗಿದೆ.

ಇದನ್ನು ನಾಗರೀಕ ಸಮಾಜವು ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವೆಂದು ಕರೆದು, ಕೇಂದ್ರ ಸರ್ಕಾರದ ಮೇಲೆ ತೀವ್ರ ಟೀಕಾಪ್ರಹಾರ ನಡೆಸಿದೆ. ವಿದ್ಯಾರ್ಥಿಗಳ ಬಂಧನಗಳು ಮೋದಿ ಸರ್ಕಾರವು ತನ್ನ ವೈಫಲ್ಯಗಳನ್ನು ಮರೆಮಾಚಲು ವೈವಿಧ್ಯಮಯ ತಂತ್ರಗಳಾಗಿವೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...