HomeಮುಖಪುಟJNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

JNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

ಕಾಳಿತಾಗೆ ಜಾಮೀನು ಸಿಕ್ಕಿದ್ದರೂ ಕೂಡ ಮತ್ತೊಂದು ಪ್ರಕರಣದಲ್ಲಿ ಇನ್ನೂ ವಿಚಾರಣೆ ನಡೆಸುತ್ತಿರುವುದರಿಂದ ಅವರಿನ್ನೂ ಬಂಧನದಲ್ಲಿ ಉಳಿಯಬೇಕಾಗುತ್ತದೆ ಎಂದು ಆಕೆಯ ಸಲಹೆಗಾರ ತುಷಾರಿಕಾ ಮಾತೂ ತಿಳಿಸಿದ್ದಾರೆ.

- Advertisement -
- Advertisement -

ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರಣಕ್ಕೆ ದೆಹಲಿ ಪೊಲೀಸರು ಬಂಧಿಸಿರುವ ಪಿಂಜ್ರಾ ತೋಡ್ ಕಾರ್ಯಕರ್ತೆಯಾದ ದೇವಂಗನಾ ಕಾಳಿತಾ ಅವರಿಗೆ ಮಂಗಳವಾರ ದರಿಯಗಂಜ್ ಹಿಂಸಾಚಾರ ಪ್ರಕರಣದಲ್ಲಿ ಜಾಮೀನು ನೀಡಲಾಗಿದೆ.

ವಿವಾದಾತ್ಮಕ ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆಯೊಂದರಲ್ಲಿ ದರಿಯಗಂಜ್‌ನಲ್ಲಿ  2019ರ ಡಿಸೆಂಬರ್‌ನಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಅವರ ಪಾತ್ರವನ್ನು ಬೆಂಬಲಿಸಲು ಪೊಲೀಸರು ಯಾವುದೇ ದೃಢವಾದ ಸಾಕ್ಷ್ಯಗಳನ್ನು ನೀಡಿಲ್ಲ ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅಭಿನವ್ ಪಾಂಡೆ ಹೇಳಿದ್ದಾರೆ.

ಆದರೆ, ಕಾಳಿತಾಗೆ ಜಾಮೀನು ಸಿಕ್ಕಿದ್ದರೂ ಕೂಡ ಮತ್ತೊಂದು ಪ್ರಕರಣದಲ್ಲಿ ಇನ್ನೂ ವಿಚಾರಣೆ ನಡೆಸುತ್ತಿರುವುದರಿಂದ ಅವರಿನ್ನೂ ಬಂಧನದಲ್ಲಿ ಉಳಿಯಬೇಕಾಗುತ್ತದೆ ಎಂದು ಆಕೆಯ ಸಲಹೆಗಾರ ತುಷಾರಿಕಾ ಮಾತೂ ತಿಳಿಸಿದ್ದಾರೆ.


ಇದನ್ನೂ ಓದಿ: 10 ದಿನದಲ್ಲಿ 3 ಬಾರಿ ಸಿಎಎ ವಿರೋಧಿ ಹೋರಾಟಗಾರ್ತಿಯರ ಬಂಧನ: ಕಪಿಲ್‌ ಮಿಶ್ರಾ ಮೇಲೆ ಕ್ರಮ ಏಕಿಲ್ಲ? 


ಸಿಎಎ ವಿರೋಧಿ ಮಹಿಳೆಯರ ಧರಣಿ ವೇಳೆ ಜಾಫ್ರಾಬಾದ್‌ನಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳಾದ ದೇವಂಗನಾ ಕಾಳಿತಾ ಮತ್ತು ನತಾಶಾ ನರ್ವಾಲ್ ಅವರನ್ನು ಮೇ 23 ರಂದು ಬಂಧಿಸಲಾಯಿತು.

ಮ್ಯಾಜಿಸ್ಟ್ರೇಟ್ ಪಾಂಡೆ ಕಾಳಿತಾಗೆ ಜಾಮೀನು ನೀಡುವಾಗ, “ಆರೋಪಿಗಳು ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್‌ಗಳ ಆಧಾರದ ಮೇಲೆ ಎನ್‌ಆರ್‌ಸಿ ಮಸೂದೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು, ಆದರೆ ಇಲ್ಲಿಯವರೆಗೆ ತನಿಖೆಯಲ್ಲಿ ಐಪಿಸಿಯ 325/352 ಸೆಕ್ಷನ್‌ಗಳನ್ನು ಅವರ ಮೇಲೆ ಹೂಡಿರುವುದಕ್ಕೆ ಆರೋಪಿಗಳ ಮೇಲೆ ಯಾವುದೇ ನೇರ ಸಾಕ್ಷ್ಯಗಳು ಕಂಡುಬಂದಿಲ್ಲ ಎಂದಿದ್ದಾರೆ”

ಹಿಂಸಾಚಾರದ ಸ್ಥಳದಲ್ಲಿ ಕಾಳಿತಾ ಇದ್ದರು ಎಂದು ಎಂಎಲ್‌ಸಿ ಆಧಾರದ ಮೇಲೆ ಪೊಲೀಸರು ಆರೋಪ ಹೊರಿಸಿದ್ದಾರೆ. ಆದರೆ “ಸಿಸಿಟಿವಿ ದೃಶ್ಯಾವಳಿಗಳು ಆರೋಪಿಗಳು ಭಾಗಿಯಾಗಿರುವುದನ್ನು ಅಥವಾ ನಿರ್ದಿಷ್ಟವಾಗಿ ಯಾವುದೇ ಹಿಂಸಾತ್ಮಕ ಚಟುವಟಿಕೆ ನಡೆಸಿರುವುದನ್ನು ತೋರಿಸುತ್ತಿಲ್ಲ” ಎಂದಿದ್ದಾರೆ.

ಕೇವಲ ಎಂಎಲ್‌ಸಿ ಆಧಾರದಲ್ಲಿ ಆರೋಪಿಗಳಿಗೆ ಜಾಮೀನು ನಿರಾಕರಿಸಲು ಸಾಧ್ಯವಾಗುವುದಿಲ್ಲ. ಕಾಳಿತಾ ಅವರ ಲ್ಯಾಪ್‌ಟಾಪ್ ಮತ್ತು ಫೋನ್‌ನಲ್ಲಿ ಯಾವುದೇ ದೋಷಾರೋಪಣೆ ವಸ್ತುಗಳು ಕಂಡುಬಂದಿಲ್ಲ ಎಂದು ಪಾಂಡೆ ಹೇಳಿದರು.

ಪರಿಸ್ಥಿತಿ ಈಗಿರುವಾಗ ಕಾಳಿತಾ ಯಾವುದೇ ಹಿಂಸಾತ್ಮಕ ಚಟುವಟಿಕೆಯಲ್ಲಿ ಭಾಗವಹಿಸಿದ್ದಾರೆ ಅಥವಾ ಪ್ರಚೋದಿಸಿದ್ದಾರೆ ಎಂದು ಹೇಳುವುದು ಕಷ್ಟ. ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಉದ್ದೇಶವನ್ನು ಅವರು ಹೊಂದಿರಬಹುದು. ನಂತರ ಅದು ಹಿಂಸಾತ್ಮಕವಾಗಿರಬಹುದು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ತನಿಖೆಯಲ್ಲಿ ಸಹಕರಿಸಲು ಕಾಳಿತಾ ಅವರು ಒಪ್ಪಿದರೆ ಆಕೆಗೆ ಷರತ್ತುಗಳೊಂದಿಗೆ ಜಾಮೀನು ನೀಡಬಹುದು ಎಂದು ಮ್ಯಾಜಿಸ್ಟ್ರೇಟ್ ತಿಳಿಸಿದರು. 30,000 ರೂ. ಜಾಮೀನು ಮತ್ತು ಅವಳ ಪಾಸ್‌ಪೋರ್ಟ್‌ ಜಮಾ ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಷರತ್ತುಗಳನ್ನು ವಿಧಿಸಿದ್ದಾರೆ.

ನರ್ವಾಲ್ ಮತ್ತು ಕಾಳಿತಾ ಅವರೊಂದಿಗೆ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳಾದ ಸಫೂರಾ ಜರ್ಗರ್, ಮೀರನ್ ಹೈದರ್, ಶಿಫಾ-ಉರ್-ರೆಹಮಾನ್, ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ದೆಹಲಿ ಹಿಂಸಾಚಾರದಲ್ಲಿ ತಮ್ಮ ಪಾತ್ರದ ಆರೋಪಕ್ಕೆ ಸಂಬಂಧಿಸಿದಂತೆ ಕಠಿಣ ಯುಎಪಿಎ ಆರೋಪಗಳೊಂದಿಗೆ ಬಂಧಿಸಲಾಗಿದೆ.

ಇದನ್ನು ನಾಗರೀಕ ಸಮಾಜವು ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವೆಂದು ಕರೆದು, ಕೇಂದ್ರ ಸರ್ಕಾರದ ಮೇಲೆ ತೀವ್ರ ಟೀಕಾಪ್ರಹಾರ ನಡೆಸಿದೆ. ವಿದ್ಯಾರ್ಥಿಗಳ ಬಂಧನಗಳು ಮೋದಿ ಸರ್ಕಾರವು ತನ್ನ ವೈಫಲ್ಯಗಳನ್ನು ಮರೆಮಾಚಲು ವೈವಿಧ್ಯಮಯ ತಂತ್ರಗಳಾಗಿವೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...