Homeಕರೋನಾ ತಲ್ಲಣಡೆಲ್ಟಾ ಪ್ಲಸ್ 3ನೇ ಅಲೆ ಸೃಷ್ಟಿಸುತ್ತೆ ಎನ್ನಲು ಆಧಾರವಿಲ್ಲ- ಐಜಿಐಬಿ ನಿರ್ದೇಶಕ

ಡೆಲ್ಟಾ ಪ್ಲಸ್ 3ನೇ ಅಲೆ ಸೃಷ್ಟಿಸುತ್ತೆ ಎನ್ನಲು ಆಧಾರವಿಲ್ಲ- ಐಜಿಐಬಿ ನಿರ್ದೇಶಕ

- Advertisement -
- Advertisement -

ದೇಶದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್‌ ಆತಂಕವನ್ನೇ ಸೃಷ್ಟಿ ಮಾಡಿದೆ. ಪ್ರಸ್ತುತ 40ಕ್ಕೂ ಹೆಚ್ಚು ಪ್ರಕರಣಗಳು ಇದ್ದು, ಕೊರೊನಾ ಮೂರನೇ ಅಲೆ ತೀವ್ರತೆಗೆ ಕಾರಣವಾಗಬಹುದು ಎನ್ನಲಾಗಿತ್ತು. ಆದರೆ, ಈ ಎಲ್ಲಾ ಸಂಭವವನ್ನು ತಳ್ಳಿರುವ ದೇಶದ ತಜ್ಞ ವೈದ್ಯರು, ಜಿನೋಮ್ ತಜ್ಮರು ಡೆಲ್ಟಾ ಪ್ಲಸ್ ರೂಪಾಂತರಿ ಮೂರನೇ ಅಲೆಗೆ ಕಾರಣವಾಗಬಹುದು ಎಂಬುದಕ್ಕೆ ಯಾವುದೇ ಸಾಕ್ಷಿ, ಆಧಾರವಿಲ್ಲ ಎಂದಿದಾರೆ.

Institute of Genomics and Integrative Biology (ಐಜಿಐಬಿ) ನಿರ್ದೇಶಕ ಡಾ.ಅನುರಾಗ್ ಅಗರ್ವಾಲ್, ’ಈಗ ಕಾಣಿಸಿಕೊಂಡಿರುವುದರಿಂದ, ಮೂರನೇ ಅಲೆಯೊಂದಿಗೆ ಯಾವುದೇ ಸಂಬಂಧವಿಲ್ಲ. 3ನೇ ಅಲೆಯ ತೀವ್ರತೆಗೆ ಕಾರಣವಾಗುತ್ತದೆ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ’ ಎಂದಿದ್ದಾರೆ. ಜೊತೆಗೆ ಕೊರೊನಾ ಎರಡನೇ ಅಲೆಯಲ್ಲಿ ಎಚ್ಚರಿಕೆ ತೆಗೆದುಕೊಳ್ಳುವುದನ್ನು ನಿಲ್ಲಿಸದಂತೆ ಸಲಹೆ ನೀಡಿದ್ದಾರೆ.

“ನಮ್ಮ ಸಂಸ್ಥೆ ಜೂನ್ ತಿಂಗಳಲ್ಲಿ ಮಹಾರಾಷ್ಟ್ರದಿಂದ 3,500 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷೆ ನಡೆಸಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಈ ಮಾದರಿಗಳನ್ನು ಕಲೆಕ್ಟ್ ಮಾಡಲಾಗಿತ್ತು. ಈ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೂ, ಇವುಗಳ ಸಂಖ್ಯೆ ಶೇಕಡಾಕ್ಕಿಂತ ಒಂದಕ್ಕಿಂತ ಕಡಿಮೆ ಇರುತ್ತವೆ” ಎಂದು ಡಾ.ಅನುರಾಗ್ ಅಗರ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪತ್ತೆ: ಸಚಿವ ಸುಧಾಕರ್ ಮಾಹಿತಿ

ಈ ರೂಪಾಂತರಿ ಪ್ರಕರಣಗಳು ಹೆಚ್ಚಿರುವ ಕಡೆಗಳಲ್ಲಿಯೂ ಅವುಗಳು “ಹೆಚ್ಚು” ಎಂದು ಹೇಳಲು ಸಾಧ್ಯವಿಲ್ಲ. ದೇಶದಲ್ಲಿ ಪದೆಸ್ತುತ ಪರಿಸ್ಥಿತಿ ಸ್ಥಿರವಾಗಿ ಕಾಣುತ್ತಿವೆ ಎಂದು ಡಾ ಅಗರ್ವಾಲ್ ಭರವಸೆ ವ್ಯಕ್ತಪಡಿಸಿದ್ದಾರೆ.

“ಸದ್ಯ 40ಕ್ಕೂ ಹೆಚ್ಚು ಪ್ರಕರಣಗಳು ಭಾರತದಲ್ಲಿ ಕಂಡುಬಂದಿದೆ. ಆದರೆ, ಸದ್ಯಕ್ಕೆ ನಾವು ಡೆಲ್ಟಾ ಪ್ಲಸ್, ಮೂರನೇ  ಅಲೆ ಬಗ್ಗೆ ಚಿಂತೆ ಮಾಡುವ ಮೊದಲು, ಎರಡನೇ ಅಲೆಯನ್ನು ಕೊನೆಗಿಳಿಸುವ ಕುರಿತು ಗಮನ ಹರಿಸಬೇಕು” ಎಂದು ಹೇಳಿದ್ದಾರೆ.

ದೇಶದಲ್ಲಿ ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು​ ಪತ್ತೆಯಾಗಿದ್ದವು.  ಮೈಸೂರಿನಲ್ಲಿ ಮತ್ತು ಬೆಂಗಳೂರಿನಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪ್ರಕರಣ ಪತ್ತೆಯಾಗಿವೆ ಎಂದು ಬುಧವಾರ ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

’ಡೆಲ್ಟಾ ಪ್ಲಸ್ ಕೇಸ್ ಬಗ್ಗೆ ಸೂಕ್ಷ್ಮವಾಗಿ ಗಮನ ಹರಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಜಿನೋಮ್ ಲ್ಯಾಬ್ ಗಳನ್ನು ಕೂಡಾ ಸೆಟಪ್ ಮಾಡಲಾಗುತ್ತಿದೆ. ರಾಜ್ಯದಲ್ಲಿ 6 ಜಿನೋಮ್ ಲ್ಯಾಬ್ ಮಾಡಲು ನಿರ್ಧಾರ ಮಾಡಿದ್ದೇವೆ. ಡೆಲ್ಟಾ ಪ್ಲಸ್ ಬಗ್ಗೆ ನಿರಂತರವಾಗಿ ಗಮನಹರಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ಧ ವ್ಯಾಕ್ಸಿನ್‌ಗಳು ಪರಿಣಾಮ ಕಳೆದುಕೊಳ್ಳುತ್ತಿವೆ: WHO

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...