Homeಕರೋನಾ ತಲ್ಲಣಡೆಲ್ಟಾ ಪ್ಲಸ್ 3ನೇ ಅಲೆ ಸೃಷ್ಟಿಸುತ್ತೆ ಎನ್ನಲು ಆಧಾರವಿಲ್ಲ- ಐಜಿಐಬಿ ನಿರ್ದೇಶಕ

ಡೆಲ್ಟಾ ಪ್ಲಸ್ 3ನೇ ಅಲೆ ಸೃಷ್ಟಿಸುತ್ತೆ ಎನ್ನಲು ಆಧಾರವಿಲ್ಲ- ಐಜಿಐಬಿ ನಿರ್ದೇಶಕ

- Advertisement -
- Advertisement -

ದೇಶದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್‌ ಆತಂಕವನ್ನೇ ಸೃಷ್ಟಿ ಮಾಡಿದೆ. ಪ್ರಸ್ತುತ 40ಕ್ಕೂ ಹೆಚ್ಚು ಪ್ರಕರಣಗಳು ಇದ್ದು, ಕೊರೊನಾ ಮೂರನೇ ಅಲೆ ತೀವ್ರತೆಗೆ ಕಾರಣವಾಗಬಹುದು ಎನ್ನಲಾಗಿತ್ತು. ಆದರೆ, ಈ ಎಲ್ಲಾ ಸಂಭವವನ್ನು ತಳ್ಳಿರುವ ದೇಶದ ತಜ್ಞ ವೈದ್ಯರು, ಜಿನೋಮ್ ತಜ್ಮರು ಡೆಲ್ಟಾ ಪ್ಲಸ್ ರೂಪಾಂತರಿ ಮೂರನೇ ಅಲೆಗೆ ಕಾರಣವಾಗಬಹುದು ಎಂಬುದಕ್ಕೆ ಯಾವುದೇ ಸಾಕ್ಷಿ, ಆಧಾರವಿಲ್ಲ ಎಂದಿದಾರೆ.

Institute of Genomics and Integrative Biology (ಐಜಿಐಬಿ) ನಿರ್ದೇಶಕ ಡಾ.ಅನುರಾಗ್ ಅಗರ್ವಾಲ್, ’ಈಗ ಕಾಣಿಸಿಕೊಂಡಿರುವುದರಿಂದ, ಮೂರನೇ ಅಲೆಯೊಂದಿಗೆ ಯಾವುದೇ ಸಂಬಂಧವಿಲ್ಲ. 3ನೇ ಅಲೆಯ ತೀವ್ರತೆಗೆ ಕಾರಣವಾಗುತ್ತದೆ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ’ ಎಂದಿದ್ದಾರೆ. ಜೊತೆಗೆ ಕೊರೊನಾ ಎರಡನೇ ಅಲೆಯಲ್ಲಿ ಎಚ್ಚರಿಕೆ ತೆಗೆದುಕೊಳ್ಳುವುದನ್ನು ನಿಲ್ಲಿಸದಂತೆ ಸಲಹೆ ನೀಡಿದ್ದಾರೆ.

“ನಮ್ಮ ಸಂಸ್ಥೆ ಜೂನ್ ತಿಂಗಳಲ್ಲಿ ಮಹಾರಾಷ್ಟ್ರದಿಂದ 3,500 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷೆ ನಡೆಸಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಈ ಮಾದರಿಗಳನ್ನು ಕಲೆಕ್ಟ್ ಮಾಡಲಾಗಿತ್ತು. ಈ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೂ, ಇವುಗಳ ಸಂಖ್ಯೆ ಶೇಕಡಾಕ್ಕಿಂತ ಒಂದಕ್ಕಿಂತ ಕಡಿಮೆ ಇರುತ್ತವೆ” ಎಂದು ಡಾ.ಅನುರಾಗ್ ಅಗರ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪತ್ತೆ: ಸಚಿವ ಸುಧಾಕರ್ ಮಾಹಿತಿ

ಈ ರೂಪಾಂತರಿ ಪ್ರಕರಣಗಳು ಹೆಚ್ಚಿರುವ ಕಡೆಗಳಲ್ಲಿಯೂ ಅವುಗಳು “ಹೆಚ್ಚು” ಎಂದು ಹೇಳಲು ಸಾಧ್ಯವಿಲ್ಲ. ದೇಶದಲ್ಲಿ ಪದೆಸ್ತುತ ಪರಿಸ್ಥಿತಿ ಸ್ಥಿರವಾಗಿ ಕಾಣುತ್ತಿವೆ ಎಂದು ಡಾ ಅಗರ್ವಾಲ್ ಭರವಸೆ ವ್ಯಕ್ತಪಡಿಸಿದ್ದಾರೆ.

“ಸದ್ಯ 40ಕ್ಕೂ ಹೆಚ್ಚು ಪ್ರಕರಣಗಳು ಭಾರತದಲ್ಲಿ ಕಂಡುಬಂದಿದೆ. ಆದರೆ, ಸದ್ಯಕ್ಕೆ ನಾವು ಡೆಲ್ಟಾ ಪ್ಲಸ್, ಮೂರನೇ  ಅಲೆ ಬಗ್ಗೆ ಚಿಂತೆ ಮಾಡುವ ಮೊದಲು, ಎರಡನೇ ಅಲೆಯನ್ನು ಕೊನೆಗಿಳಿಸುವ ಕುರಿತು ಗಮನ ಹರಿಸಬೇಕು” ಎಂದು ಹೇಳಿದ್ದಾರೆ.

ದೇಶದಲ್ಲಿ ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು​ ಪತ್ತೆಯಾಗಿದ್ದವು.  ಮೈಸೂರಿನಲ್ಲಿ ಮತ್ತು ಬೆಂಗಳೂರಿನಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪ್ರಕರಣ ಪತ್ತೆಯಾಗಿವೆ ಎಂದು ಬುಧವಾರ ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

’ಡೆಲ್ಟಾ ಪ್ಲಸ್ ಕೇಸ್ ಬಗ್ಗೆ ಸೂಕ್ಷ್ಮವಾಗಿ ಗಮನ ಹರಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಜಿನೋಮ್ ಲ್ಯಾಬ್ ಗಳನ್ನು ಕೂಡಾ ಸೆಟಪ್ ಮಾಡಲಾಗುತ್ತಿದೆ. ರಾಜ್ಯದಲ್ಲಿ 6 ಜಿನೋಮ್ ಲ್ಯಾಬ್ ಮಾಡಲು ನಿರ್ಧಾರ ಮಾಡಿದ್ದೇವೆ. ಡೆಲ್ಟಾ ಪ್ಲಸ್ ಬಗ್ಗೆ ನಿರಂತರವಾಗಿ ಗಮನಹರಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ಧ ವ್ಯಾಕ್ಸಿನ್‌ಗಳು ಪರಿಣಾಮ ಕಳೆದುಕೊಳ್ಳುತ್ತಿವೆ: WHO

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...