Homeಮುಖಪುಟಸೆಂಗೋಲ್ ರಾಜದಂಡದ ಕುರಿತು ಬಿಜೆಪಿ ಹೇಳುತ್ತಿರುವ ಇತಿಹಾಸಕ್ಕೆ ಪುರಾವೆಗಳಿಲ್ಲ: 'WhatsApp ಇತಿಹಾಸ' ಶೀರ್ಷಿಕೆಯ ಅಂಕಣ ವೈರಲ್

ಸೆಂಗೋಲ್ ರಾಜದಂಡದ ಕುರಿತು ಬಿಜೆಪಿ ಹೇಳುತ್ತಿರುವ ಇತಿಹಾಸಕ್ಕೆ ಪುರಾವೆಗಳಿಲ್ಲ: ‘WhatsApp ಇತಿಹಾಸ’ ಶೀರ್ಷಿಕೆಯ ಅಂಕಣ ವೈರಲ್

- Advertisement -
- Advertisement -

ಬ್ರಿಟಿಷ್ ಸರ್ಕಾರ ದೇಶ ಬಿಟ್ಟು ಹೋಗುವಾಗ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ಅಧಿಕಾರ ಹಸ್ತಾಂತರದ ಸಂಕೇತವಾಗಿ ತಮಿಳುನಾಡಿನ ಐತಿಹಾಸಿಕ ರಾಜದಂಡವಾದ ಸೆಂಗೋಲ್‌ಅನ್ನು ಅರ್ಪಿಸಿದ್ದಾರೆ ಎಂದು ಬಿಜೆಪಿಯ ಹಲವಾರು ನಾಯಕರು ಗುರುವಾರ ಹೇಳಿದ್ದಾರೆ.

ನೆಹರೂ ಕುಟುಂಬಕ್ಕೆ ಸಮರ್ಪಿತವಾದ ಸೆಂಗೋಲ್‌ಅನ್ನು ಪ್ರಯಾಗ್‌ರಾಜ್‌ನಲ್ಲಿರುವ ವಸ್ತುಸಂಗ್ರಹಾಲಯವಾದ ಆನಂದ ಭವನದಲ್ಲಿ ಇರಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ಟೀಕಿಸಿತು.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಚೆನ್ನೈನಲ್ಲಿ ಪತ್ರಿಕಾಗೋಷ್ಠಿ ನಡೆಸಿ, ”ಪತ್ರಕರ್ತರಿಗೆ ಸಮರ್ಥನೆಗಾಗಿ ಸಾಕ್ಷಿಗಾಗಿ ಸಾಕ್ಷ್ಯಚಿತ್ರ ದಾಖಲೆ ನೀಡಿದ್ದಾರೆ. ಈ ಬಗ್ಗೆ ತಮಿಳು ಬರಹಗಾರ ಜಯಮೋಹನ್ ಅವರು, ಇದು ಅಪಹಾಸ್ಯದ ಸಂಗತಿ ಎಂದು “WhatsApp ಇತಿಹಾಸ” ಎಂಬ ಶೀರ್ಷಿಕೆಯ ಬ್ಲಾಗ್ ಪೋಸ್ಟ್ ಬರೆದಿದ್ದಾರೆ.

”ಸ್ವಾತಂತ್ರ್ಯದ ಸಂದರ್ಭದಲ್ಲಿ ಭಾರತದಾದ್ಯಂತ ಕಳುಹಿಸಲಾದ ಹಲವಾರು ಉಡುಗೊರೆಗಳಲ್ಲಿ ರಾಜದಂಡವು ಇರುವ ಸಾಧ್ಯತೆಯಿದೆ” ಎಂದು ಜಯಮೋಹನ್ ಅವರು ಬರೆದಿದ್ದಾರೆ.

ಬಿಜೆಪಿಯವರು, ಬಿಆರ್ ಅಂಬೇಡ್ಕರ್ ಅವರ ಭಾಷಾ ರಾಜ್ಯಗಳ ಚಿಂತನೆಗಳು, ಪೆರ್ರಿ ಆಂಡರ್ಸನ್ ಅವರ ದಿ ಇಂಡಿಯನ್ ಐಡಿಯಾಲಜಿ ಪುಸ್ತಕ ಮತ್ತು ಯಾಸ್ಮಿನ್ ಖಾನ್ ಅವರ ಗ್ರೇಟ್ ಪಾರ್ಟಿಷನ್: ದಿ ಮೇಕಿಂಗ್ ಆಫ್ ಇಂಡಿಯಾ ಅಂಡ್ ಪಾಕಿಸ್ತಾನದ ಸಾರಗಳನ್ನು ಉಲ್ಲೇಖಿಸಿದ್ದಾರೆ. ಆದರೆ ರಾಜದಂಡವು ಅಧಿಕಾರದ ವರ್ಗಾವಣೆಯನ್ನು ಸಂಕೇತಿಸುತ್ತದೆ ಎಂದು ಅವರಲ್ಲಿ ಯಾರೂ ಹೇಳಲಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ರಾಜದಂಡ ಸಿದ್ಧಪಡಿಸಿದವರನ್ನು ವಿಶೇಷ ವಿಮಾನದಲ್ಲಿ ದೆಹಲಿಗೆ ಕರೆದೊಯ್ಯಲಾಗಿದೆ ಎಂದೂ ಸರ್ಕಾರ ಹೇಳಿಕೊಂಡಿದೆ. ಅದೇನೇ ಇದ್ದರೂ, ಅಧಿಕಾರದ ಹಸ್ತಾಂತರದ ಬಗ್ಗೆ ನಿರ್ದಿಷ್ಟವಾದ ಹೇಳಿಕೆಗೆ ಪುರಾವೆಗಳ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸೀತಾರಾಮನ್, ”ನಿಮಗೆ ಬೇಕಾದಷ್ಟು ಸಾಕ್ಷ್ಯಚಿತ್ರಗಳು [ಪುರಾವೆಗಳು] ಇವೆ” ಎಂದು ಹೇಳಿದರು.

ಇದನ್ನೂ ಓದಿ: ಒಬ್ಬ ವ್ಯಕ್ತಿಯ ‘ಅಹಂ’ನಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹಕ್ಕಿಗೆ ವಂಚನೆ: ಕಾಂಗ್ರೆಸ್ ಟೀಕೆ

”ನಾವು ಇಂದು ಹೇಳುತ್ತಿರುವುದು ಎಲ್ಲ ವಿಚಾರಗಳು ಸಂಶೋಧನಾ ಮೂಲಗಳಿಂದ ಪಡೆಯಲಾಗಿದೆ ಮತ್ತು ನೀವು ಅನುಬಂಧದಲ್ಲಿ ನೋಡುತ್ತೀರಿ” ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಬಿಜೆಪಿಯ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಕೂಡ ಟ್ವಿಟರ್‌ನಲ್ಲಿ ”ಬ್ರಿಟಿಷರು ಭಾರತಕ್ಕೆ ಅಧಿಕಾರ ಹಸ್ತಾಂತರಿಸುವ ಸಂಕೇತವಾಗಿ ಪ್ರಧಾನಿ ನೆಹರು ಅವರಿಗೆ ಚಿನ್ನದ ಕೋಲನ್ನು ನೀಡಿದ್ದಾರೆ. ಕಾಂಗ್ರೆಸ್‌ಗೆ ಅದರ ಬಗ್ಗೆ ಹೆಮ್ಮೆ ಇರಬೇಕಿತ್ತು ಆದರೆ ಅದನ್ನು ಆನಂದ ಭವನದಲ್ಲಿ ಕೂಡಿಹಾಕಲಾಯಿತು ಮತ್ತು ಚಿನ್ನದ ಕೋಲನ್ನು ನೆಹರೂಗೆ ‘ಉಡುಗೊರೆ’ ಎಂದು ಕರೆಯಲಾಯಿತು. ಕಾಂಗ್ರೆಸ್‌ನಲ್ಲಿ ಹಿಂದೂ ಆಚರಣೆಗಳ ಬಗ್ಗೆ ತಿರಸ್ಕಾರವಿದೆ” ಎಂದು ಅವರು ಬರೆದಿದ್ದಾರೆ.

ಇನ್ನು ಈ ಬಗ್ಗೆ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು ಟ್ವಿಟ್ ಮಾಡಿದ್ದು, ”ವಾಟ್ಸಾಪ್ ವಿಶ್ವವಿದ್ಯಾನಿಲಯದಿಂದ ವಿಶಿಷ್ಟವಾಗಿ ಸುಳ್ಳಿನೊಂದಿಗೆ ಹೊಸ ಸಂಸತ್ತು ಉದ್ಘಾಟನೆಯಾಗುತ್ತಿರುವುದು ಆಶ್ಚರ್ಯವೇ? ಬಿಜೆಪಿ/ಆರ್‌ಎಸ್‌ಎಸ್ ಸಂಶೋದಕರು ಗರಿಷ್ಠ ಹಕ್ಕುಗಳು, ಕನಿಷ್ಠ ಸಾಕ್ಷ್ಯಗಳೊಂದಿಗೆ ಮತ್ತೊಮ್ಮೆ ಬಹಿರಂಗಗೊಂಡಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

1. ಆಗಿನ ಮದ್ರಾಸ್ ಪ್ರಾಂತ್ಯದ ಧಾರ್ಮಿಕ ಸಂಸ್ಥೆಯಿಂದ ಕಲ್ಪಿಸಲ್ಪಟ್ಟ ಮತ್ತು ಮದ್ರಾಸ್ ನಗರದಲ್ಲಿ ರಚಿಸಲಾದ ಭವ್ಯವಾದ ರಾಜದಂಡವನ್ನು ಆಗಸ್ಟ್ 1947 ರಲ್ಲಿ ನೆಹರೂಗೆ ನೀಡಲಾಯಿತು.

2. ಮೌಂಟ್‌ಬ್ಯಾಟನ್, ರಾಜಾಜಿ ಮತ್ತು ನೆಹರು ಈ ರಾಜದಂಡವನ್ನು ಭಾರತಕ್ಕೆ ಬ್ರಿಟಿಷ್ ಅಧಿಕಾರದ ವರ್ಗಾವಣೆಯ ಸಂಕೇತವೆಂದು ವಿವರಿಸುವ ಯಾವುದೇ ದಾಖಲಿತ ಪುರಾವೆಗಳಿಲ್ಲ. ಆದರೆ ವಾಟ್ಸಪ್ ಯುನಿವರ್ಸಿಟಿಯ ಈ ಸುಳ್ಳು ಸುದ್ದಿಯೊಂದಿಗೆ ಈಗ ಮಾಧ್ಯಮಗಳು ಡೋಲು ಬಾರಿಸುತ್ತಿವೆ.

3. ರಾಜದಂಡವನ್ನು ನಂತರ ಅಲಹಾಬಾದ್ ಮ್ಯೂಸಿಯಂನಲ್ಲಿ ಪ್ರದರ್ಶನಕ್ಕೆ ಇಡಲಾಯಿತು. ಡಿಸೆಂಬರ್ 14, 1947 ರಂದು ನೆಹರೂ ಅಲ್ಲಿ ಹೇಳಿದ್ದು ಸಾರ್ವಜನಿಕ ದಾಖಲೆಯ ವಿಷಯವಾಗಿದೆ ಎಂದಿದ್ದರು.

4. ರಾಜದಂಡವನ್ನು ಈಗ ತಮಿಳುನಾಡಿನಲ್ಲಿ ತಮ್ಮ ರಾಜಕೀಯ ಉದ್ದೇಶಗಳಿಗಾಗಿ ಪ್ರಧಾನಿ ಮತ್ತು ಅವರ ಡೋಲು ಬಾರಿಸುವವರು ಬಳಸುತ್ತಿದ್ದಾರೆ. ಸುಳ್ಳನ್ನು ಸತ್ಯ ಮಾಡುವ ಈ ಬ್ರಿಗೇಡ್‌ನ ಉದ್ದೇಶವಾಗಿದೆ. ಉದ್ದೇಶಗಳಿಗೆ ಸರಿಹೊಂದುವಂತೆ ಸತ್ಯಗಳನ್ನು ಕಸೂತಿ ಮಾಡುವ ಈ ಬ್ರಿಗೇಡ್‌ನ ವಿಶಿಷ್ಟವಾಗಿದೆ.

ಈಗ ನಮ್ಮ ಮುಂದಿರುವ ನಿಜವಾದ ಪ್ರಶ್ನೆ ಎಂದರೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಹೊಸ ಸಂಸತ್ತನ್ನು ಉದ್ಘಾಟಿಸಲು ಏಕೆ ಅವಕಾಶ ನೀಡುತ್ತಿಲ್ಲ? ಎಂಬುದಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. It’s one more SANATANA HINDU startegy to propagate the twisted narratives and their passion to observe the ritual of Untouchability by not inviting the President to inagurate the new parliament house…

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....