Homeಕರ್ನಾಟಕ13 ತಿಂಗಳಿಂದ ಫೆಲೋಶಿಪ್ ಇಲ್ಲ: ಸಿಎಂ ಗೆ ಪತ್ರ ಬರೆದ ರಾಜ್ಯದ PhD ಸಂಶೋಧನಾರ್ಥಿಗಳು

13 ತಿಂಗಳಿಂದ ಫೆಲೋಶಿಪ್ ಇಲ್ಲ: ಸಿಎಂ ಗೆ ಪತ್ರ ಬರೆದ ರಾಜ್ಯದ PhD ಸಂಶೋಧನಾರ್ಥಿಗಳು

- Advertisement -
- Advertisement -

ಕಳೆದ 13 ತಿಂಗಳುಗಳಿಂದ ಬಿಡುಗಡೆಯಾಗದಿರುವ ಪಿಹೆಚ್.ಡಿ. ಸಂಶೋಧನಾ ಫೆಲೋಶಿಪ್ ಬಿಡುಗಡೆ ಮಾಡಲು ಕೋರಿ ರಾಜ್ಯದ ವಿವಿಧ ವಿವಿಗಳ ಸಂಶೋಧನಾರ್ಥಿಗಳು ಬೆಂಗಳೂರಿನ ಹಿಂದುಳಿದ ವರ್ಗಗಳ ಇಲಾಖೆಗೆ ಪತ್ರ ಅಭಿಯಾನ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕರಿಗೆ ಮನವಿ ಪತ್ರಗಳನ್ನು ಬರೆದಿದ್ದಾರೆ.

ರಾಜ್ಯದ 11 ವಿವಿಗಳು ಮತ್ತು 4 ಕೃಷಿ ವಿಶ್ವವಿದ್ಯಾಲಯಗಳಲ್ಲಿ ಪಿಹೆಚ್.ಡಿ. ಅಧ್ಯಯನ ಕೈಗೊಂಡಿರುವ 700 ಕ್ಕೂ ಅಧಿಕ OBC (ಇತರೆ ಹಿಂದುಳಿದ ವರ್ಗಗಳ) ವಿದ್ಯಾರ್ಥಿಗಳಿಗೆ ಕಳೆದ 13 ತಿಂಗಳುಗಳಿಂದ ಮಾಸಿಕ ಶಿಷ್ಯವೇತನ ದೊರೆಯದಿರುವುದನ್ನು ಪ್ರತಿಭಟಿಸಿ ಪತ್ರ ಅಭಿಯಾನ ಆರಂಭಿಸಲಾಗಿದೆ.

ಇದನ್ನೂ ಓದಿ: ನಾವು ರೈತರನ್ನು ಬೆಂಬಲಿಸಬೇಕು, ಏಕೆಂದರೆ… – ನಿರ್ದೇಶಕ ಪ. ರಂಜಿತ್ ಟ್ವೀಟ್

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ , ಹಿಂದುಳಿಗ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಇಲಾಖೆಯ ಆಯುಕ್ತರಿಗೆ ಶಿಷ್ಯವೇತನ ಬಿಡುಗಡೆಗೆ ಕೋರಿ ಪ್ರತಿಯೊಬ್ಬರಿಗೂ 200 ಕ್ಕೂ ಅಧಿಕ ಮನವಿ ಪತ್ರಗಳನ್ನು ಗುರುವಾರ ಪೋಸ್ಟ್‌ಮಾಡಿದ್ದಾರೆ.

“ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪಿಹೆಚ್.ಡಿ. ಅಧ್ಯಯನ ಕೈಗೊಳ್ಳುವ ಬಡ OBC ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ 2015-16 ನೇ ಸಾಲಿನಿಂದ ಮಾಸಿಕ ರೂ. 5000/- ವ್ಯಾಸಂಗ ವೇತನವನ್ನು (3 ವರ್ಷಗಳ ಅವಧಿಗೆ) ನೀಡಲು ಆರಂಭಿಸಿತ್ತು. 2018 ನೇ ಸಾಲಿನಲ್ಲಿ ಈ ಮೊತ್ತವನ್ನು 10,000/- ರೂಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳಿಗೆ 2019 ರ ಡಿಸೆಂಬರ್ ತಿಂಗಳಿನಿಂದ ಶಿಷ್ಯವೇತನ ದೊರೆತಿರುವುದಿಲ್ಲ ಹಾಗೂ 2020-21 ನೇ ಶೈಕ್ಷಣಿಕ ವರ್ಷದಲ್ಲಿ ಶಿಷ್ಯವೇತನಕ್ಕೆ ಅರ್ಜಿಹಾಕಲು ಮತ್ತು ಹಳೇ ವಿದ್ಯಾರ್ಥಿಗಳು ನವೀಕರಣ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ ಒಟ್ಟು 13 ತಿಂಗಳಿನಿಂದ ಒಂದು ಲಕ್ಷಕ್ಕೂ ಅಧಿಕ ಶಿಷ್ಯವೇತನವನ್ನೇ ವಿದ್ಯಾರ್ಥಿಗಳಿಗೆ ಒದಗಿಸಿಲ್ಲ. ಆರ್ಥಿಕ ಮುಗ್ಗಟ್ಟಿನಿಂದಾಗಿ ಬಡವರು ಮತ್ತು ಕೃಷಿಕುಟುಂಬದಿಂದ ಬಂದಂತಹ ವಿದ್ಯಾರ್ಥಿಗಳಿಗೆ ಭಾರೀ ತೊಂದರೆಯಾಗುತ್ತಿದೆ” ಎಂದು ಸಂಶೋಧನಾರ್ಥಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಲಸಿಕೆಯ ತುರ್ತು ಬಳಕೆಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆಯಲು ನಿರ್ಧಾರ- ಫೈಜರ್ ಫಾರ್ಮಾ

ಫೆಲೋಷಿಪ್ ಹಣವಿಲ್ಲದೆ ಪ್ರತೀ ತಿಂಗಳು ಹಾಸ್ಟೆಲ್‌ನ ಮೆಸ್‌ ಬಿಲ್, ಕೊಠಡಿ ಬಾಡಿಗೆ, ಅರ್ಧವಾರ್ಷಿಕ ವರದಿಗಳ ಶುಲ್ಕ ಪಾವತಿ, ಸಂಶೋಧನಾ ಸಂಬಂಧ ಕ್ಷೇತ್ರಕಾರ್ಯ ನಡೆಸಲು, ಪ್ರಯೋಗಾಲಯದ ಪರಿಕರಗಳು – ರಾಸಾಯನಿಕಗಳನ್ನು ಕೊಳ್ಳಲು ಪರದಾಡುವಂತಾಗಿದೆ. ಇದು ಒಟ್ಟಾರೆ ಸಂಶೋಧನಾ ಗುಣಮಟ್ಟ ಮತ್ತು ಪ್ರಗತಿ ಮೇಲೆ ಭಾರೀ ಪರಿಣಾಮ ಬೀರುತ್ತಿದೆ ಎಂದು ವಿದ್ಯಾರ್ಥಿಗಳು ಮನವಿ ಪತ್ರಗಳಲ್ಲಿ ತಿಳಿಸಿದ್ದಾರೆ.

ಇಂತಹ ಅನೇಕ ಸಮಸ್ಯೆಗಳಿಂದ 2017, 2018, 2019, 2020 ರ ಬ್ಯಾಚ್‌ನ ವಿದ್ಯಾರ್ಥಿಗಳು ತೀವ್ರವಾಗಿ ತೊಂದರೆಗೀಡಾಗಿದ್ದಾರೆ, ಈ ಸಲುವಾಗಿ ಧಾರವಾಡದ ಕೃಷಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯ, ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ, ಬಳ್ಳಾರಿಯ ವಿ.ಎಸ್.ಕೆ. ವಿವಿ, ತುಮಕೂರು ಮತ್ತು ದಾವಣಗೆರೆ ವಿವಿಗಳ 200 ಕ್ಕೂ ಅಧಿಕ ವಿದ್ಯಾರ್ಥಿಗಳು ಪತ್ರ ಬರೆದು ತುರ್ತಾಗಿ ಶಿಷ್ಯವೇತನ ಬಿಡುಗಡೆ ಮಾಡಬೇಕೆಂದು ಕೋರಿಕೊಂಡಿದ್ದಾರೆ. ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದಿದ್ದಲ್ಲಿ ಮುಂದಿನ ಹೋರಾಟವನ್ನು ಬೆಂಗಳೂರಿನಲ್ಲಿ ಕೈಗೊಳ್ಳಲು ಯೋಜಿಸುತ್ತಿರುವುದಾಗಿಯೂ ತಿಳಿಸಿದ್ದಾರೆ.


ಇದನ್ನೂ ಓದಿ: ಮುಂದಿನ ರಿಹಾನ್ನಾ ವಿಡಿಯೋದಲ್ಲಿ ನೀವಿರುತ್ತೀರಿ: ಸ್ವರ, ತಾಪ್ಸಿ ಶ್ಲಾಘಿಸಿದ ಅಭಯ್ ಡಿಯೋಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...