Homeಕರ್ನಾಟಕ13 ತಿಂಗಳಿಂದ ಫೆಲೋಶಿಪ್ ಇಲ್ಲ: ಸಿಎಂ ಗೆ ಪತ್ರ ಬರೆದ ರಾಜ್ಯದ PhD ಸಂಶೋಧನಾರ್ಥಿಗಳು

13 ತಿಂಗಳಿಂದ ಫೆಲೋಶಿಪ್ ಇಲ್ಲ: ಸಿಎಂ ಗೆ ಪತ್ರ ಬರೆದ ರಾಜ್ಯದ PhD ಸಂಶೋಧನಾರ್ಥಿಗಳು

- Advertisement -
- Advertisement -

ಕಳೆದ 13 ತಿಂಗಳುಗಳಿಂದ ಬಿಡುಗಡೆಯಾಗದಿರುವ ಪಿಹೆಚ್.ಡಿ. ಸಂಶೋಧನಾ ಫೆಲೋಶಿಪ್ ಬಿಡುಗಡೆ ಮಾಡಲು ಕೋರಿ ರಾಜ್ಯದ ವಿವಿಧ ವಿವಿಗಳ ಸಂಶೋಧನಾರ್ಥಿಗಳು ಬೆಂಗಳೂರಿನ ಹಿಂದುಳಿದ ವರ್ಗಗಳ ಇಲಾಖೆಗೆ ಪತ್ರ ಅಭಿಯಾನ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕರಿಗೆ ಮನವಿ ಪತ್ರಗಳನ್ನು ಬರೆದಿದ್ದಾರೆ.

ರಾಜ್ಯದ 11 ವಿವಿಗಳು ಮತ್ತು 4 ಕೃಷಿ ವಿಶ್ವವಿದ್ಯಾಲಯಗಳಲ್ಲಿ ಪಿಹೆಚ್.ಡಿ. ಅಧ್ಯಯನ ಕೈಗೊಂಡಿರುವ 700 ಕ್ಕೂ ಅಧಿಕ OBC (ಇತರೆ ಹಿಂದುಳಿದ ವರ್ಗಗಳ) ವಿದ್ಯಾರ್ಥಿಗಳಿಗೆ ಕಳೆದ 13 ತಿಂಗಳುಗಳಿಂದ ಮಾಸಿಕ ಶಿಷ್ಯವೇತನ ದೊರೆಯದಿರುವುದನ್ನು ಪ್ರತಿಭಟಿಸಿ ಪತ್ರ ಅಭಿಯಾನ ಆರಂಭಿಸಲಾಗಿದೆ.

ಇದನ್ನೂ ಓದಿ: ನಾವು ರೈತರನ್ನು ಬೆಂಬಲಿಸಬೇಕು, ಏಕೆಂದರೆ… – ನಿರ್ದೇಶಕ ಪ. ರಂಜಿತ್ ಟ್ವೀಟ್

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ , ಹಿಂದುಳಿಗ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಇಲಾಖೆಯ ಆಯುಕ್ತರಿಗೆ ಶಿಷ್ಯವೇತನ ಬಿಡುಗಡೆಗೆ ಕೋರಿ ಪ್ರತಿಯೊಬ್ಬರಿಗೂ 200 ಕ್ಕೂ ಅಧಿಕ ಮನವಿ ಪತ್ರಗಳನ್ನು ಗುರುವಾರ ಪೋಸ್ಟ್‌ಮಾಡಿದ್ದಾರೆ.

“ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪಿಹೆಚ್.ಡಿ. ಅಧ್ಯಯನ ಕೈಗೊಳ್ಳುವ ಬಡ OBC ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ 2015-16 ನೇ ಸಾಲಿನಿಂದ ಮಾಸಿಕ ರೂ. 5000/- ವ್ಯಾಸಂಗ ವೇತನವನ್ನು (3 ವರ್ಷಗಳ ಅವಧಿಗೆ) ನೀಡಲು ಆರಂಭಿಸಿತ್ತು. 2018 ನೇ ಸಾಲಿನಲ್ಲಿ ಈ ಮೊತ್ತವನ್ನು 10,000/- ರೂಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳಿಗೆ 2019 ರ ಡಿಸೆಂಬರ್ ತಿಂಗಳಿನಿಂದ ಶಿಷ್ಯವೇತನ ದೊರೆತಿರುವುದಿಲ್ಲ ಹಾಗೂ 2020-21 ನೇ ಶೈಕ್ಷಣಿಕ ವರ್ಷದಲ್ಲಿ ಶಿಷ್ಯವೇತನಕ್ಕೆ ಅರ್ಜಿಹಾಕಲು ಮತ್ತು ಹಳೇ ವಿದ್ಯಾರ್ಥಿಗಳು ನವೀಕರಣ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ ಒಟ್ಟು 13 ತಿಂಗಳಿನಿಂದ ಒಂದು ಲಕ್ಷಕ್ಕೂ ಅಧಿಕ ಶಿಷ್ಯವೇತನವನ್ನೇ ವಿದ್ಯಾರ್ಥಿಗಳಿಗೆ ಒದಗಿಸಿಲ್ಲ. ಆರ್ಥಿಕ ಮುಗ್ಗಟ್ಟಿನಿಂದಾಗಿ ಬಡವರು ಮತ್ತು ಕೃಷಿಕುಟುಂಬದಿಂದ ಬಂದಂತಹ ವಿದ್ಯಾರ್ಥಿಗಳಿಗೆ ಭಾರೀ ತೊಂದರೆಯಾಗುತ್ತಿದೆ” ಎಂದು ಸಂಶೋಧನಾರ್ಥಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಲಸಿಕೆಯ ತುರ್ತು ಬಳಕೆಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆಯಲು ನಿರ್ಧಾರ- ಫೈಜರ್ ಫಾರ್ಮಾ

ಫೆಲೋಷಿಪ್ ಹಣವಿಲ್ಲದೆ ಪ್ರತೀ ತಿಂಗಳು ಹಾಸ್ಟೆಲ್‌ನ ಮೆಸ್‌ ಬಿಲ್, ಕೊಠಡಿ ಬಾಡಿಗೆ, ಅರ್ಧವಾರ್ಷಿಕ ವರದಿಗಳ ಶುಲ್ಕ ಪಾವತಿ, ಸಂಶೋಧನಾ ಸಂಬಂಧ ಕ್ಷೇತ್ರಕಾರ್ಯ ನಡೆಸಲು, ಪ್ರಯೋಗಾಲಯದ ಪರಿಕರಗಳು – ರಾಸಾಯನಿಕಗಳನ್ನು ಕೊಳ್ಳಲು ಪರದಾಡುವಂತಾಗಿದೆ. ಇದು ಒಟ್ಟಾರೆ ಸಂಶೋಧನಾ ಗುಣಮಟ್ಟ ಮತ್ತು ಪ್ರಗತಿ ಮೇಲೆ ಭಾರೀ ಪರಿಣಾಮ ಬೀರುತ್ತಿದೆ ಎಂದು ವಿದ್ಯಾರ್ಥಿಗಳು ಮನವಿ ಪತ್ರಗಳಲ್ಲಿ ತಿಳಿಸಿದ್ದಾರೆ.

ಇಂತಹ ಅನೇಕ ಸಮಸ್ಯೆಗಳಿಂದ 2017, 2018, 2019, 2020 ರ ಬ್ಯಾಚ್‌ನ ವಿದ್ಯಾರ್ಥಿಗಳು ತೀವ್ರವಾಗಿ ತೊಂದರೆಗೀಡಾಗಿದ್ದಾರೆ, ಈ ಸಲುವಾಗಿ ಧಾರವಾಡದ ಕೃಷಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯ, ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ, ಬಳ್ಳಾರಿಯ ವಿ.ಎಸ್.ಕೆ. ವಿವಿ, ತುಮಕೂರು ಮತ್ತು ದಾವಣಗೆರೆ ವಿವಿಗಳ 200 ಕ್ಕೂ ಅಧಿಕ ವಿದ್ಯಾರ್ಥಿಗಳು ಪತ್ರ ಬರೆದು ತುರ್ತಾಗಿ ಶಿಷ್ಯವೇತನ ಬಿಡುಗಡೆ ಮಾಡಬೇಕೆಂದು ಕೋರಿಕೊಂಡಿದ್ದಾರೆ. ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದಿದ್ದಲ್ಲಿ ಮುಂದಿನ ಹೋರಾಟವನ್ನು ಬೆಂಗಳೂರಿನಲ್ಲಿ ಕೈಗೊಳ್ಳಲು ಯೋಜಿಸುತ್ತಿರುವುದಾಗಿಯೂ ತಿಳಿಸಿದ್ದಾರೆ.


ಇದನ್ನೂ ಓದಿ: ಮುಂದಿನ ರಿಹಾನ್ನಾ ವಿಡಿಯೋದಲ್ಲಿ ನೀವಿರುತ್ತೀರಿ: ಸ್ವರ, ತಾಪ್ಸಿ ಶ್ಲಾಘಿಸಿದ ಅಭಯ್ ಡಿಯೋಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...