Homeಮುಖಪುಟಸಂಸತ್ತಿನ ಒಳಗೆ, ಹೊರಗೆ ವಾಕ್‌ ಸ್ವಾತಂತ್ರ್ಯ ಇಲ್ಲವಾಗಿದೆ: ಖರ್ಗೆ ಟೀಕೆ

ಸಂಸತ್ತಿನ ಒಳಗೆ, ಹೊರಗೆ ವಾಕ್‌ ಸ್ವಾತಂತ್ರ್ಯ ಇಲ್ಲವಾಗಿದೆ: ಖರ್ಗೆ ಟೀಕೆ

- Advertisement -
- Advertisement -

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, “ದೇಶದಲ್ಲಿ ವಾಕ್ ಸ್ವಾತಂತ್ರ್ಯವಿಲ್ಲ” ಎಂದಿದ್ದಾರೆ.

ಜಾರ್ಖಂಡ್‌ನ ಸಾಹೇಬ್‌ಗಂಜ್ ಜಿಲ್ಲೆಯಲ್ಲಿ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, “ಸಂಸತ್ತಿನಲ್ಲಿ ಮಾಡಿದ ಭಾಷಣದ ಭಾಗಗಳನ್ನು ತೆಗೆದುಹಾಕಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಪಕ್ಷದ 60 ದಿನಗಳ ‘ಹಾಥ್ ಸೆ ಹಾಥ್ ಜೋಡೋ’ ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಕಾಂಗ್ರೆಸ್ ಅಧ್ಯಕ್ಷರು ಪಾಕೂರಿನ ಗುಮಾನಿ ಮೈದಾನದಲ್ಲಿ ಮಾತನಾಡಿದರು.

ಸಂಸತ್ತಿನ ಒಳಗೆ ಅಥವಾ ಹೊರಗೆ ವಾಕ್ ಸ್ವಾತಂತ್ರ್ಯವಿಲ್ಲ. ಯಾರಾದರೂ ಸತ್ಯವನ್ನು ಮಾತನಾಡಿದರೆ, ಅದರ ಬಗ್ಗೆ ಬರೆದರೆ, ಅದನ್ನು ತೋರಿಸಿದರೆ ಅವರು (ಬಿಜೆಪಿ) ಸತ್ಯ ಹೇಳಿದವರನ್ನು ಕಂಬಿ ಹಿಂದೆ ಕಳುಹಿಸುತ್ತಾರೆ ಎಂದು ಆರೋಪಿಸಿದರು.

“ನಾನು ಪ್ರಧಾನಿಯನ್ನು ವಿವರಿಸಲು ಯಾವುದೇ ಅಸಂಸದೀಯ ಪದ ಅಥವಾ ಭಾಷೆಯನ್ನು ಬಳಸಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್‌ ಅವರಿಗೆ ಇದೇ ರೀತಿ ಬಳಸಿದ್ದರು. ಬಿಜೆಪಿಯವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ ಅವರಿಗೆ ಇದೇ ಪದ ಬಳಸಿದ್ದರು” ಎಂದು ಖರ್ಗೆ ಹೇಳಿದರು.

ಅದಾನಿ ವಿಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

“ಪ್ರಧಾನಿ ನರೇಂದ್ರ ಮೋದಿಯವರ ಸ್ನೇಹಿತರಾಗಿರುವ ಅದಾನಿ ಈಗ 13 ಲಕ್ಷ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಅವರ ಆಸ್ತಿ 2019 ರಲ್ಲಿ 1 ಲಕ್ಷ ಕೋಟಿ ರೂಪಾಯಿಗಳಷ್ಟಿತ್ತು” ಎಂದು ಮಾಹಿತಿ ನೀಡಿದರು.

“ಪ್ರಧಾನಿ ಅವರಿಗಾಗಿ (ಅದಾನಿ) ಕೆಲಸ ಮಾಡುತ್ತಾರೆಯೇ ಹೊರತು ಬಡವರಿಗಾಗಿ ಅಲ್ಲ” ಎಂದು ಆರೋಪಿಸಿದ ಖರ್ಗೆಯವರು, “ಅದಾನಿ ಗ್ರೂಪ್‌ಗೆ ಎಲ್‌ಐಸಿಯ 16,000 ಕೋಟಿ ರೂ. ಮತ್ತು ಎಸ್‌ಬಿಐನ 82,000 ಕೋಟಿ ರೂ.ಗಳನ್ನು ನೀಡಲಾಗಿದೆ” ಎಂದು ಆರೋಪಿಸಿದರು.

ರಾಹುಲ್ ಗಾಂಧಿ ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದಾಗ, ಆ ವಿಷಯವನ್ನು ಕಡತದಿಂದ ತೆಗೆದುಹಾಕಲಾಯಿತು ಎಂದು ಅವರು ಹೇಳಿದರು.

“ಇಡಿ, ಐಟಿ, ಸಿಬಿಐ ಪ್ರಕರಣಗಳನ್ನು ಎದುರಿಸುತ್ತಿರುವ ಅನೇಕ ಶಾಸಕರನ್ನು ಬಿಜೆಪಿ ಸೇರಿಸಿಕೊಂಡಿದೆ. ಮೋದಿ ಮತ್ತು ಶಾ ವಾಷಿಂಗ್ ಮೆಷಿನ್ ಖರೀದಿಸಿದ್ದಾರೆ, ಅದರಲ್ಲಿ ಅವರು ಅಂತಹ ಶಾಸಕರ ಕಲೆಗಳನ್ನು ತೊಳೆಯುತ್ತಾರೆ” ಎಂದು ವ್ಯಂಗ್ಯವಾಡಿದ್ದಾರೆ.

“ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಚುನಾಯಿತ ಸರ್ಕಾರಗಳನ್ನು ಉರುಳಿಸುವಲ್ಲಿ ನಿಪುಣರು” ಎಂದು ಆರೋಪಿಸಿದ ಖರ್ಗೆ, “ಇವರೆಲ್ಲ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಾರೆ” ಎಂದು ಕುಟುಕಿದ್ದಾರೆ.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದ ಸಂವಿಧಾನದ ಪ್ರಕಾರ ನೀವು ಏಕೆ ಆಡಳಿತ ನಡೆಸುತ್ತಿಲ್ಲ? ಹಣದುಬ್ಬರವನ್ನು ತಡೆಯುವ ಭರವಸೆಯೊಂದಿಗೆ 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತು, ಆದರೆ ಅದು ರಚನೆಯಾದಾಗಿನಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚುತ್ತಿದೆ, ಬಡತನ ಹೆಚ್ಚುತ್ತಿದೆ” ಎಂದು ವಿಷಾದಿಸಿದರು.

“ದೇಶದ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಕಾಂಗ್ರೆಸ್‌ನವರು” ಎಂದು ಖರ್ಗೆ ಬಣ್ಣಿಸಿದರು.

ಫೆಬ್ರವರಿ 27 ರಂದು ನಡೆಯಲಿರುವ ರಾಮಗಢ ಉಪಚುನಾವಣೆಗೆ ಯುಪಿಎ ಅಭ್ಯರ್ಥಿ ಬಜರಂಗ್ ಮಹತೋಗೆ ಮತ ನೀಡುವಂತೆ ಅವರು ಜನರಲ್ಲಿ ಮನವಿ ಮಾಡಿದರು.

‘ಹಾಥ್ ಸೆ ಹಾಥ್ ಜೋಡೋ’ ಕಾರ್ಯಕ್ರಮದ ಸಂದರ್ಭದಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ಮನೆ-ಮನೆಗೆ ಭೇಟಿ ನೀಡಿ ಕೇಂದ್ರದ ಜನವಿರೋಧಿ ನೀತಿಗಳ ಬಗ್ಗೆ ಅರಿವು ಮೂಡಿಸಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಮತ್ತು ರಾಜ್ಯ ಸಚಿವ ಅಲಂಗೀರ್ ಆಲಂ ಸೇರಿದಂತೆ ಇತರ ಮುಖಂಡರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...