Homeಮುಖಪುಟಸಂಸತ್ತಿನ ಒಳಗೆ, ಹೊರಗೆ ವಾಕ್‌ ಸ್ವಾತಂತ್ರ್ಯ ಇಲ್ಲವಾಗಿದೆ: ಖರ್ಗೆ ಟೀಕೆ

ಸಂಸತ್ತಿನ ಒಳಗೆ, ಹೊರಗೆ ವಾಕ್‌ ಸ್ವಾತಂತ್ರ್ಯ ಇಲ್ಲವಾಗಿದೆ: ಖರ್ಗೆ ಟೀಕೆ

- Advertisement -
- Advertisement -

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, “ದೇಶದಲ್ಲಿ ವಾಕ್ ಸ್ವಾತಂತ್ರ್ಯವಿಲ್ಲ” ಎಂದಿದ್ದಾರೆ.

ಜಾರ್ಖಂಡ್‌ನ ಸಾಹೇಬ್‌ಗಂಜ್ ಜಿಲ್ಲೆಯಲ್ಲಿ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, “ಸಂಸತ್ತಿನಲ್ಲಿ ಮಾಡಿದ ಭಾಷಣದ ಭಾಗಗಳನ್ನು ತೆಗೆದುಹಾಕಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಪಕ್ಷದ 60 ದಿನಗಳ ‘ಹಾಥ್ ಸೆ ಹಾಥ್ ಜೋಡೋ’ ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಕಾಂಗ್ರೆಸ್ ಅಧ್ಯಕ್ಷರು ಪಾಕೂರಿನ ಗುಮಾನಿ ಮೈದಾನದಲ್ಲಿ ಮಾತನಾಡಿದರು.

ಸಂಸತ್ತಿನ ಒಳಗೆ ಅಥವಾ ಹೊರಗೆ ವಾಕ್ ಸ್ವಾತಂತ್ರ್ಯವಿಲ್ಲ. ಯಾರಾದರೂ ಸತ್ಯವನ್ನು ಮಾತನಾಡಿದರೆ, ಅದರ ಬಗ್ಗೆ ಬರೆದರೆ, ಅದನ್ನು ತೋರಿಸಿದರೆ ಅವರು (ಬಿಜೆಪಿ) ಸತ್ಯ ಹೇಳಿದವರನ್ನು ಕಂಬಿ ಹಿಂದೆ ಕಳುಹಿಸುತ್ತಾರೆ ಎಂದು ಆರೋಪಿಸಿದರು.

“ನಾನು ಪ್ರಧಾನಿಯನ್ನು ವಿವರಿಸಲು ಯಾವುದೇ ಅಸಂಸದೀಯ ಪದ ಅಥವಾ ಭಾಷೆಯನ್ನು ಬಳಸಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್‌ ಅವರಿಗೆ ಇದೇ ರೀತಿ ಬಳಸಿದ್ದರು. ಬಿಜೆಪಿಯವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ ಅವರಿಗೆ ಇದೇ ಪದ ಬಳಸಿದ್ದರು” ಎಂದು ಖರ್ಗೆ ಹೇಳಿದರು.

ಅದಾನಿ ವಿಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

“ಪ್ರಧಾನಿ ನರೇಂದ್ರ ಮೋದಿಯವರ ಸ್ನೇಹಿತರಾಗಿರುವ ಅದಾನಿ ಈಗ 13 ಲಕ್ಷ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಅವರ ಆಸ್ತಿ 2019 ರಲ್ಲಿ 1 ಲಕ್ಷ ಕೋಟಿ ರೂಪಾಯಿಗಳಷ್ಟಿತ್ತು” ಎಂದು ಮಾಹಿತಿ ನೀಡಿದರು.

“ಪ್ರಧಾನಿ ಅವರಿಗಾಗಿ (ಅದಾನಿ) ಕೆಲಸ ಮಾಡುತ್ತಾರೆಯೇ ಹೊರತು ಬಡವರಿಗಾಗಿ ಅಲ್ಲ” ಎಂದು ಆರೋಪಿಸಿದ ಖರ್ಗೆಯವರು, “ಅದಾನಿ ಗ್ರೂಪ್‌ಗೆ ಎಲ್‌ಐಸಿಯ 16,000 ಕೋಟಿ ರೂ. ಮತ್ತು ಎಸ್‌ಬಿಐನ 82,000 ಕೋಟಿ ರೂ.ಗಳನ್ನು ನೀಡಲಾಗಿದೆ” ಎಂದು ಆರೋಪಿಸಿದರು.

ರಾಹುಲ್ ಗಾಂಧಿ ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದಾಗ, ಆ ವಿಷಯವನ್ನು ಕಡತದಿಂದ ತೆಗೆದುಹಾಕಲಾಯಿತು ಎಂದು ಅವರು ಹೇಳಿದರು.

“ಇಡಿ, ಐಟಿ, ಸಿಬಿಐ ಪ್ರಕರಣಗಳನ್ನು ಎದುರಿಸುತ್ತಿರುವ ಅನೇಕ ಶಾಸಕರನ್ನು ಬಿಜೆಪಿ ಸೇರಿಸಿಕೊಂಡಿದೆ. ಮೋದಿ ಮತ್ತು ಶಾ ವಾಷಿಂಗ್ ಮೆಷಿನ್ ಖರೀದಿಸಿದ್ದಾರೆ, ಅದರಲ್ಲಿ ಅವರು ಅಂತಹ ಶಾಸಕರ ಕಲೆಗಳನ್ನು ತೊಳೆಯುತ್ತಾರೆ” ಎಂದು ವ್ಯಂಗ್ಯವಾಡಿದ್ದಾರೆ.

“ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಚುನಾಯಿತ ಸರ್ಕಾರಗಳನ್ನು ಉರುಳಿಸುವಲ್ಲಿ ನಿಪುಣರು” ಎಂದು ಆರೋಪಿಸಿದ ಖರ್ಗೆ, “ಇವರೆಲ್ಲ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಾರೆ” ಎಂದು ಕುಟುಕಿದ್ದಾರೆ.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದ ಸಂವಿಧಾನದ ಪ್ರಕಾರ ನೀವು ಏಕೆ ಆಡಳಿತ ನಡೆಸುತ್ತಿಲ್ಲ? ಹಣದುಬ್ಬರವನ್ನು ತಡೆಯುವ ಭರವಸೆಯೊಂದಿಗೆ 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತು, ಆದರೆ ಅದು ರಚನೆಯಾದಾಗಿನಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚುತ್ತಿದೆ, ಬಡತನ ಹೆಚ್ಚುತ್ತಿದೆ” ಎಂದು ವಿಷಾದಿಸಿದರು.

“ದೇಶದ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಕಾಂಗ್ರೆಸ್‌ನವರು” ಎಂದು ಖರ್ಗೆ ಬಣ್ಣಿಸಿದರು.

ಫೆಬ್ರವರಿ 27 ರಂದು ನಡೆಯಲಿರುವ ರಾಮಗಢ ಉಪಚುನಾವಣೆಗೆ ಯುಪಿಎ ಅಭ್ಯರ್ಥಿ ಬಜರಂಗ್ ಮಹತೋಗೆ ಮತ ನೀಡುವಂತೆ ಅವರು ಜನರಲ್ಲಿ ಮನವಿ ಮಾಡಿದರು.

‘ಹಾಥ್ ಸೆ ಹಾಥ್ ಜೋಡೋ’ ಕಾರ್ಯಕ್ರಮದ ಸಂದರ್ಭದಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ಮನೆ-ಮನೆಗೆ ಭೇಟಿ ನೀಡಿ ಕೇಂದ್ರದ ಜನವಿರೋಧಿ ನೀತಿಗಳ ಬಗ್ಗೆ ಅರಿವು ಮೂಡಿಸಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಮತ್ತು ರಾಜ್ಯ ಸಚಿವ ಅಲಂಗೀರ್ ಆಲಂ ಸೇರಿದಂತೆ ಇತರ ಮುಖಂಡರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...