Homeಮುಖಪುಟಸಂಸತ್ತಿನ ಒಳಗೆ, ಹೊರಗೆ ವಾಕ್‌ ಸ್ವಾತಂತ್ರ್ಯ ಇಲ್ಲವಾಗಿದೆ: ಖರ್ಗೆ ಟೀಕೆ

ಸಂಸತ್ತಿನ ಒಳಗೆ, ಹೊರಗೆ ವಾಕ್‌ ಸ್ವಾತಂತ್ರ್ಯ ಇಲ್ಲವಾಗಿದೆ: ಖರ್ಗೆ ಟೀಕೆ

- Advertisement -
- Advertisement -

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, “ದೇಶದಲ್ಲಿ ವಾಕ್ ಸ್ವಾತಂತ್ರ್ಯವಿಲ್ಲ” ಎಂದಿದ್ದಾರೆ.

ಜಾರ್ಖಂಡ್‌ನ ಸಾಹೇಬ್‌ಗಂಜ್ ಜಿಲ್ಲೆಯಲ್ಲಿ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, “ಸಂಸತ್ತಿನಲ್ಲಿ ಮಾಡಿದ ಭಾಷಣದ ಭಾಗಗಳನ್ನು ತೆಗೆದುಹಾಕಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಪಕ್ಷದ 60 ದಿನಗಳ ‘ಹಾಥ್ ಸೆ ಹಾಥ್ ಜೋಡೋ’ ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಕಾಂಗ್ರೆಸ್ ಅಧ್ಯಕ್ಷರು ಪಾಕೂರಿನ ಗುಮಾನಿ ಮೈದಾನದಲ್ಲಿ ಮಾತನಾಡಿದರು.

ಸಂಸತ್ತಿನ ಒಳಗೆ ಅಥವಾ ಹೊರಗೆ ವಾಕ್ ಸ್ವಾತಂತ್ರ್ಯವಿಲ್ಲ. ಯಾರಾದರೂ ಸತ್ಯವನ್ನು ಮಾತನಾಡಿದರೆ, ಅದರ ಬಗ್ಗೆ ಬರೆದರೆ, ಅದನ್ನು ತೋರಿಸಿದರೆ ಅವರು (ಬಿಜೆಪಿ) ಸತ್ಯ ಹೇಳಿದವರನ್ನು ಕಂಬಿ ಹಿಂದೆ ಕಳುಹಿಸುತ್ತಾರೆ ಎಂದು ಆರೋಪಿಸಿದರು.

“ನಾನು ಪ್ರಧಾನಿಯನ್ನು ವಿವರಿಸಲು ಯಾವುದೇ ಅಸಂಸದೀಯ ಪದ ಅಥವಾ ಭಾಷೆಯನ್ನು ಬಳಸಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್‌ ಅವರಿಗೆ ಇದೇ ರೀತಿ ಬಳಸಿದ್ದರು. ಬಿಜೆಪಿಯವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ ಅವರಿಗೆ ಇದೇ ಪದ ಬಳಸಿದ್ದರು” ಎಂದು ಖರ್ಗೆ ಹೇಳಿದರು.

ಅದಾನಿ ವಿಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

“ಪ್ರಧಾನಿ ನರೇಂದ್ರ ಮೋದಿಯವರ ಸ್ನೇಹಿತರಾಗಿರುವ ಅದಾನಿ ಈಗ 13 ಲಕ್ಷ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಅವರ ಆಸ್ತಿ 2019 ರಲ್ಲಿ 1 ಲಕ್ಷ ಕೋಟಿ ರೂಪಾಯಿಗಳಷ್ಟಿತ್ತು” ಎಂದು ಮಾಹಿತಿ ನೀಡಿದರು.

“ಪ್ರಧಾನಿ ಅವರಿಗಾಗಿ (ಅದಾನಿ) ಕೆಲಸ ಮಾಡುತ್ತಾರೆಯೇ ಹೊರತು ಬಡವರಿಗಾಗಿ ಅಲ್ಲ” ಎಂದು ಆರೋಪಿಸಿದ ಖರ್ಗೆಯವರು, “ಅದಾನಿ ಗ್ರೂಪ್‌ಗೆ ಎಲ್‌ಐಸಿಯ 16,000 ಕೋಟಿ ರೂ. ಮತ್ತು ಎಸ್‌ಬಿಐನ 82,000 ಕೋಟಿ ರೂ.ಗಳನ್ನು ನೀಡಲಾಗಿದೆ” ಎಂದು ಆರೋಪಿಸಿದರು.

ರಾಹುಲ್ ಗಾಂಧಿ ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದಾಗ, ಆ ವಿಷಯವನ್ನು ಕಡತದಿಂದ ತೆಗೆದುಹಾಕಲಾಯಿತು ಎಂದು ಅವರು ಹೇಳಿದರು.

“ಇಡಿ, ಐಟಿ, ಸಿಬಿಐ ಪ್ರಕರಣಗಳನ್ನು ಎದುರಿಸುತ್ತಿರುವ ಅನೇಕ ಶಾಸಕರನ್ನು ಬಿಜೆಪಿ ಸೇರಿಸಿಕೊಂಡಿದೆ. ಮೋದಿ ಮತ್ತು ಶಾ ವಾಷಿಂಗ್ ಮೆಷಿನ್ ಖರೀದಿಸಿದ್ದಾರೆ, ಅದರಲ್ಲಿ ಅವರು ಅಂತಹ ಶಾಸಕರ ಕಲೆಗಳನ್ನು ತೊಳೆಯುತ್ತಾರೆ” ಎಂದು ವ್ಯಂಗ್ಯವಾಡಿದ್ದಾರೆ.

“ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಚುನಾಯಿತ ಸರ್ಕಾರಗಳನ್ನು ಉರುಳಿಸುವಲ್ಲಿ ನಿಪುಣರು” ಎಂದು ಆರೋಪಿಸಿದ ಖರ್ಗೆ, “ಇವರೆಲ್ಲ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಾರೆ” ಎಂದು ಕುಟುಕಿದ್ದಾರೆ.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದ ಸಂವಿಧಾನದ ಪ್ರಕಾರ ನೀವು ಏಕೆ ಆಡಳಿತ ನಡೆಸುತ್ತಿಲ್ಲ? ಹಣದುಬ್ಬರವನ್ನು ತಡೆಯುವ ಭರವಸೆಯೊಂದಿಗೆ 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತು, ಆದರೆ ಅದು ರಚನೆಯಾದಾಗಿನಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚುತ್ತಿದೆ, ಬಡತನ ಹೆಚ್ಚುತ್ತಿದೆ” ಎಂದು ವಿಷಾದಿಸಿದರು.

“ದೇಶದ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಕಾಂಗ್ರೆಸ್‌ನವರು” ಎಂದು ಖರ್ಗೆ ಬಣ್ಣಿಸಿದರು.

ಫೆಬ್ರವರಿ 27 ರಂದು ನಡೆಯಲಿರುವ ರಾಮಗಢ ಉಪಚುನಾವಣೆಗೆ ಯುಪಿಎ ಅಭ್ಯರ್ಥಿ ಬಜರಂಗ್ ಮಹತೋಗೆ ಮತ ನೀಡುವಂತೆ ಅವರು ಜನರಲ್ಲಿ ಮನವಿ ಮಾಡಿದರು.

‘ಹಾಥ್ ಸೆ ಹಾಥ್ ಜೋಡೋ’ ಕಾರ್ಯಕ್ರಮದ ಸಂದರ್ಭದಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ಮನೆ-ಮನೆಗೆ ಭೇಟಿ ನೀಡಿ ಕೇಂದ್ರದ ಜನವಿರೋಧಿ ನೀತಿಗಳ ಬಗ್ಗೆ ಅರಿವು ಮೂಡಿಸಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಮತ್ತು ರಾಜ್ಯ ಸಚಿವ ಅಲಂಗೀರ್ ಆಲಂ ಸೇರಿದಂತೆ ಇತರ ಮುಖಂಡರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...