Homeಮುಖಪುಟ10-15 ವರ್ಷ ಹಳೆಯ ವಾಹನಗಳಿಗೆ ಇಂಧನವಿಲ್ಲ!..ಏನಿದು ಹೊಸ ನಿಯಮ?

10-15 ವರ್ಷ ಹಳೆಯ ವಾಹನಗಳಿಗೆ ಇಂಧನವಿಲ್ಲ!..ಏನಿದು ಹೊಸ ನಿಯಮ?

- Advertisement -
- Advertisement -

ಜುಲೈ 1, 2025ರಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ‘ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ (no fuel for end-of-life vehicles) ನಿಯಮ ಜಾರಿಯಾಗಿದೆ.

ಹೊಸ ನಿಯಮದ ಪ್ರಕಾರ 15 ವರ್ಷ ಹಳೆಯ ಪೆಟ್ರೋಲ್ ವಾಹನಗಳು ಮತ್ತು 10 ವರ್ಷ ಹಳೆಯ ಡೀಸೆಲ್ ವಾಹನಗಳಿಗೆ ಇಂಧನ ಸಿಗುವುದಿಲ್ಲ. ಪರಿಸರ ಮಾಲಿನ್ಯ (ವಾಯು, ಶಬ್ದ ಇತ್ಯಾದಿ) ತಡೆಯಲು ಈ ನಿಯಮವನ್ನು ಜಾರಿಗೆ ತರಲಾಗಿದೆ ಎಂದು ಸರ್ಕಾರ ಹೇಳಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) 2014 ಆದೇಶ ಮತ್ತು ಸುಪ್ರೀಂ ಕೋರ್ಟ್‌ನ 2018ರ ತೀರ್ಪಿನ ಪ್ರಕಾರ, 15 ವರ್ಷಕ್ಕಿಂತ ಹಳೆಯದಾದ ಪೆಟ್ರೋಲ್ ವಾಹನಗಳು ಮತ್ತು 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳನ್ನು ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಓಡಿಸುವುದನ್ನು ಮತ್ತು ಪಾರ್ಕಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ.

‘ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ ನೀತಿಯನ್ನು ಮಾರ್ಚ್ 2025ರಲ್ಲಿ ಘೋಷಣೆ ಮಾಡಲಾಗಿತ್ತು. ಆದರೆ, ಜುಲೈ 1ರಿಂದ ಜಾರಿಗೆ ಬಂದಿದೆ.

ಮಾರ್ಚ್ 2025ರ ಆರಂಭದಲ್ಲಿ, ದೆಹಲಿಯ ಪರಿಸರ ಖಾತೆ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರು, 15 ವರ್ಷ ಹಳೆಯ ಪೆಟ್ರೋಲ್ ವಾಹನಗಳು ಮತ್ತು 10 ವರ್ಷ ಹಳೆಯ ಡೀಸೆಲ್ ವಾಹನಗಳಿಗೆ ಏಪ್ರಿಲ್ 1ರಿಂದ ಇಂಧನ ಕೇಂದ್ರಗಳು ಇಂಧನ ಒದಗಿಸುವುದಿಲ್ಲ ಎಂದು ಹೇಳಿದ್ದರು.

ವಾಹನಗಳ ಹೊರಸೂಸುವಿಕೆಯನ್ನು (ಇಂಗಾಲ ಡೈ ಆಕ್ಸೈಡ್) ಕಡಿಮೆ ಮಾಡುವ ವಿಶಾಲ ಕಾರ್ಯತಂತ್ರದ ಭಾಗ ಇದಾಗಿದ್ದು, ನಿಯಮವನ್ನು ಜಾರಿಗೊಳಿಸಲು ಇಂಧನ ಕೇಂದ್ರಗಳಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ಎಎನ್‌ಪಿಆರ್) ಕ್ಯಾಮರಾಗಳನ್ನು ಅಳವಡಿಸಲಾಗುವುದು ಎಂದಿದ್ದರು.

ಆದರೆ ಮಾರ್ಚ್ 2025ರ ಅಂತ್ಯದ ವೇಳೆಗೆ, ಇಂಧನ ಕೇಂದ್ರಗಳಲ್ಲಿ ಅಗತ್ಯವಿರುವ ಎನ್‌ಪಿಆರ್ ಕ್ಯಾಮರಾಗಳು ಮತ್ತು ಸಂಬಂಧಿತ ಸಾಧನಗಳ ಅಳವಡಿಕೆ ಅಪೂರ್ಣವಾಗಿದ್ದರಿಂದ ನಿಯಮ ಜಾರಿ ವಿಳಂಬವಾಗಿತ್ತು. ಮಾರ್ಚ್ 31, 2025 ರೊಳಗೆ ಎಲ್ಲಾ ಇಂಧನ ಕೇಂದ್ರಗಳು ಸಂಪೂರ್ಣವಾಗಿ ಸಜ್ಜುಗೊಂಡಿಲ್ಲದ ಕಾರಣ ನಿಯಮ ಜಾರಿಗೆ ಹೆಚ್ಚಿನ ಸಮಯದ ಅಗತ್ಯವಿದೆ ಎಂದು ಸಚಿವ ಸಿರ್ಸಾ ತಿಳಿಸಿದ್ದರು.

ಕೊನೆಗೆ ಜುಲೈ 1ರಂದು ‘ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ ನಿಯಮವನ್ನು ಜಾರಿಗೆ ತರಲಾಗಿದೆ. ಈ ವೇಳೆ ದೆಹಲಿಯ 520 ಇಂಧನ ಕೇಂದ್ರಗಳ ಪೈಕಿ ಸುಮಾರು 500 ಕೇಂದ್ರಗಳಲ್ಲಿ ಎಎನ್‌ಪಿಆರ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಸಾರಿಗೆ ಇಲಾಖೆ, ದೆಹಲಿ ಪೊಲೀಸ್, ಸಂಚಾರ ಪೊಲೀಸ್ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಒಳಗೊಂಡ ವಿವರವಾದ ನಿಯಮ ಜಾರಿ ಕಾರ್ಯತಂತ್ರವು ಸಿದ್ದವಾಗಿದೆ ಎಂದು ಸರ್ಕಾರ ಹೇಳಿತ್ತು.

ವಾಯು ಗುಣಮಟ್ಟ ನಿರ್ವಹಣಾ ಆಯೋಗವು (ಸಿಎಕ್ಯೂಎಂ) ನಿಯಮ ಜಾರಿಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನಗಳನ್ನು ನೀಡಿತ್ತು. ಅದರಂತೆ, ಜುಲೈ 1, 2025 ರಂದು ಬೆಳಿಗ್ಗೆ 6 ಗಂಟೆಗೆ ಅಧಿಕೃತವಾಗಿ ಅವಧಿ ಮುಗಿದ ವಾಹನಗಳಿಗೆ ಇಂಧನ ಪೂರೈಸುವುದನ್ನು ಸ್ಥಗಿತಗೊಳಿಸಲಾಗಿದೆ.

ಅವಧಿ ಮುಗಿದ ವಾಹನಗಳನ್ನು ಪತ್ತೆ ಹಚ್ಚುವುದು ಹೇಗೆ?

ಇಂಧನ ಕೇಂದ್ರಗಳಲ್ಲಿ ಅಥವಾ ಪೆಟ್ರೋಲ್ ಬಂಕ್‌ಗಳಲ್ಲಿ ಎಐ ಆಧಾರಿತ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ಎಎನ್‌ಪಿಆರ್) ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇದು ವಾಹನ ಬಂಕ್‌ಗೆ ಬಂದ ತಕ್ಷಣ ಅದರ ನಂಬರ್ ಪ್ಲೇಟ್ ಸ್ಕ್ಯಾನ್ ಮಾಡಿ ‘ವಾಹನ್’ ವ್ಯವಸ್ಥೆಯ ಡೇಟಾಬೇಸ್ ಮೂಲಕ ವಾಹನದ ಅವಧಿಯನ್ನು ಪತ್ತೆ ಹಚ್ಚುತ್ತದೆ.

ವಾಹನ ಮಾಲಕರ ಗತಿಯೇನು?

ಅವಧಿ ಮೀರಿದ ವಾಹನಗಳಿಗೆ ಇಂಧನ ಪೂರೈಕೆ ಮಾಡದಿದ್ದರೆ ವಾಹನ ಮಾಲಕರು ಅವುಗಳನ್ನು ಏನು ಮಾಡುವುದು ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಸದ್ಯಕ್ಕೆ ದೆಹಲಿಯಲ್ಲಿ ಮಾತ್ರ ಇಂಧನ ಪೂರೈಕೆ ಮಾಡುತ್ತಿಲ್ಲ. ಹಾಗಾಗಿ, ವಾಹನ ಮಾಲಕರು ದೆಹಲಿ-ಎನ್‌ಸಿಆರ್ ಹೊರಗೆ ವಾಹನವನ್ನು ಮರು ನೋಂದಾಯಿಸಲು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಪಡೆಯಬಹುದು.

ಖಾಸಗಿ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲಿಸಬಹುದು (ಸಾರ್ವಜನಿಕ ಪಾರ್ಕಿಂಗ್ ನಿಷೇಧಿಸಲಾಗಿದೆ).

ನೋಂದಾಯಿತ ಸ್ಕ್ರ್ಯಾಪಿಂಗ್ ಸೌಲಭ್ಯದಲ್ಲಿ ವಾಹನವನ್ನು ಸ್ಕ್ರ್ಯಾಪ್ ಮಾಡಬಹುದು ಅಥವಾ ವಾಹವನ್ನು ಗುಜರಿಗೆ ಹಾಕಬಹುದು.

ನಿಯಮ ಉಲ್ಲಂಘಿಸಿದರೆ ಏನಾಗುತ್ತದೆ?

ನಿಯಮ ಉಲ್ಲಂಘಿಸಿದರೆ ಕಾರುಗಳಿಗೆ 10,000 ರೂಪಾಯಿ ಮತ್ತು ದ್ವಿಚಕ್ರ ವಾಹನಗಳಿಗೆ 5,000 ರೂಪಾಯಿ ಜೊತೆಗೆ ಟೋವಿಂಗ್ ಶುಲ್ಕಗಳನ್ನು ವಿಧಿಸಲಾಗುತ್ತದೆ. ಪದೇ ಪದೇ ನಿಯಮ ಉಲ್ಲಂಘಿಸಿದರೆ ಸಂಬಂಧಿತ ಅಧಿಕಾರಿಗಳೇ ವಾಹನವನ್ನು ಮುಟ್ಟುಗೋಲು ಹಾಕಿಕೊಂಡು ಸ್ಕ್ರ್ಯಾಪ್ ಮಾಡುತ್ತಾರೆ.

ಹೊಸ ನಿಯಮದಲ್ಲಿ ಅಂಗವಿಕಲರು ಅಥವಾ ಇತರ ಗುಂಪುಗಳಿಗೆ ಯಾವುದೇ ನಿರ್ದಿಷ್ಟ ವಿನಾಯಿತಿಗಳನ್ನು ನೀಡಲಾಗಿಲ್ಲ. ಅಂದರೆ, ಎಲ್ಲಾ ವಾಹನಗಳು, ಮಾಲೀಕತ್ವವನ್ನು ಲೆಕ್ಕಿಸದೆ, ನಿಯಮಗಳನ್ನು ಪಾಲಿಸಬೇಕಿದೆ.

ಇಂಧನ ತಡೆ ಹಿಡಿಯುವ ನೀತಿಯು, ಆಗಸ್ಟ್ 15, 2026 ರಿಂದ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ದ್ವಿಚಕ್ರ ವಾಹನಗಳ ಹೊಸ ನೋಂದಣಿಗಳನ್ನು ಮತ್ತು ಆಗಸ್ಟ್ 15,2025 ರಿಂದ ಸಿಎನ್‌ಜಿ ಆಟೋರಿಕ್ಷಾಗಳನ್ನು ನಿಷೇಧಿಸುವ ಮುಂಬರುವ ದೆಹಲಿಯ ಇವಿ ನೀತಿ 2.0 ಮತ್ತು
ದೆಹಲಿಯ ಶುದ್ಧ ಗಾಳಿಯನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ತರಲಾಗಿದೆ.

ದಂಡವನ್ನು ತಪ್ಪಿಸಲು ಜೀವಿತಾವಧಿ ಮುಗಿದ ವಾಹನಗಳ ಮಾಲೀಕರು ಹೊಸ, ತಂತ್ರಜ್ಞಾನಗಳು ಹೊಂದಿರುವ ವಾಹನಗಳು ಅಥವಾ ವಿದ್ಯುತ್ ವಾಹನಗಳಿಗೆ (ಇವಿ) ಬದಲಾಯಿಸಲು ಪ್ರೋತ್ಸಾಹಿಸಲಾಗುತ್ತದೆ.

ದೆಹಲಿ ಇವಿ ನೀತಿ 2.0 (ಭವಿಷ್ಯದ ಪರಿಣಾಮ)

ಆಗಸ್ಟ್ 15,2026 ರಿಂದ ದೆಹಲಿಯಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ದ್ವಿಚಕ್ರ ವಾಹನಗಳ ಹೊಸ ನೋಂದಣಿಗಳನ್ನು ನಿಷೇಧಿಸಲು ಯೋಜಿಸಲಾಗಿದೆ. ಇದರಿಂದಾಗಿ ವಿದ್ಯುತ್ ಚಾಲಿತ ವಾಹನಗಳಿಗೆ (ಇವಿ) ಬೇಡಿಕೆ ಹೆಚ್ಚಾಗಲಿದೆ. ಆಗಸ್ಟ್ 15,2025 ರಿಂದ ಸಿಎನ್‌ಜಿ ಆಟೋರಿಕ್ಷಾಗಳು ಸಹ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ.

ಬೈಕ್ ಟ್ಯಾಕ್ಸಿಯನ್ನು ಬೆಂಬಲಿಸಿದ ಕೇಂದ್ರದ ಮಾರ್ಗಸೂಚಿ: ರಾಜ್ಯದಲ್ಲಿ ಹೊಸ ನಿರೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...