Homeಮುಖಪುಟ10-15 ವರ್ಷ ಹಳೆಯ ವಾಹನಗಳಿಗೆ ಇಂಧನವಿಲ್ಲ!..ಏನಿದು ಹೊಸ ನಿಯಮ?

10-15 ವರ್ಷ ಹಳೆಯ ವಾಹನಗಳಿಗೆ ಇಂಧನವಿಲ್ಲ!..ಏನಿದು ಹೊಸ ನಿಯಮ?

- Advertisement -
- Advertisement -

ಜುಲೈ 1, 2025ರಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ‘ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ (no fuel for end-of-life vehicles) ನಿಯಮ ಜಾರಿಯಾಗಿದೆ.

ಹೊಸ ನಿಯಮದ ಪ್ರಕಾರ 15 ವರ್ಷ ಹಳೆಯ ಪೆಟ್ರೋಲ್ ವಾಹನಗಳು ಮತ್ತು 10 ವರ್ಷ ಹಳೆಯ ಡೀಸೆಲ್ ವಾಹನಗಳಿಗೆ ಇಂಧನ ಸಿಗುವುದಿಲ್ಲ. ಪರಿಸರ ಮಾಲಿನ್ಯ (ವಾಯು, ಶಬ್ದ ಇತ್ಯಾದಿ) ತಡೆಯಲು ಈ ನಿಯಮವನ್ನು ಜಾರಿಗೆ ತರಲಾಗಿದೆ ಎಂದು ಸರ್ಕಾರ ಹೇಳಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) 2014 ಆದೇಶ ಮತ್ತು ಸುಪ್ರೀಂ ಕೋರ್ಟ್‌ನ 2018ರ ತೀರ್ಪಿನ ಪ್ರಕಾರ, 15 ವರ್ಷಕ್ಕಿಂತ ಹಳೆಯದಾದ ಪೆಟ್ರೋಲ್ ವಾಹನಗಳು ಮತ್ತು 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳನ್ನು ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಓಡಿಸುವುದನ್ನು ಮತ್ತು ಪಾರ್ಕಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ.

‘ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ ನೀತಿಯನ್ನು ಮಾರ್ಚ್ 2025ರಲ್ಲಿ ಘೋಷಣೆ ಮಾಡಲಾಗಿತ್ತು. ಆದರೆ, ಜುಲೈ 1ರಿಂದ ಜಾರಿಗೆ ಬಂದಿದೆ.

ಮಾರ್ಚ್ 2025ರ ಆರಂಭದಲ್ಲಿ, ದೆಹಲಿಯ ಪರಿಸರ ಖಾತೆ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರು, 15 ವರ್ಷ ಹಳೆಯ ಪೆಟ್ರೋಲ್ ವಾಹನಗಳು ಮತ್ತು 10 ವರ್ಷ ಹಳೆಯ ಡೀಸೆಲ್ ವಾಹನಗಳಿಗೆ ಏಪ್ರಿಲ್ 1ರಿಂದ ಇಂಧನ ಕೇಂದ್ರಗಳು ಇಂಧನ ಒದಗಿಸುವುದಿಲ್ಲ ಎಂದು ಹೇಳಿದ್ದರು.

ವಾಹನಗಳ ಹೊರಸೂಸುವಿಕೆಯನ್ನು (ಇಂಗಾಲ ಡೈ ಆಕ್ಸೈಡ್) ಕಡಿಮೆ ಮಾಡುವ ವಿಶಾಲ ಕಾರ್ಯತಂತ್ರದ ಭಾಗ ಇದಾಗಿದ್ದು, ನಿಯಮವನ್ನು ಜಾರಿಗೊಳಿಸಲು ಇಂಧನ ಕೇಂದ್ರಗಳಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ಎಎನ್‌ಪಿಆರ್) ಕ್ಯಾಮರಾಗಳನ್ನು ಅಳವಡಿಸಲಾಗುವುದು ಎಂದಿದ್ದರು.

ಆದರೆ ಮಾರ್ಚ್ 2025ರ ಅಂತ್ಯದ ವೇಳೆಗೆ, ಇಂಧನ ಕೇಂದ್ರಗಳಲ್ಲಿ ಅಗತ್ಯವಿರುವ ಎನ್‌ಪಿಆರ್ ಕ್ಯಾಮರಾಗಳು ಮತ್ತು ಸಂಬಂಧಿತ ಸಾಧನಗಳ ಅಳವಡಿಕೆ ಅಪೂರ್ಣವಾಗಿದ್ದರಿಂದ ನಿಯಮ ಜಾರಿ ವಿಳಂಬವಾಗಿತ್ತು. ಮಾರ್ಚ್ 31, 2025 ರೊಳಗೆ ಎಲ್ಲಾ ಇಂಧನ ಕೇಂದ್ರಗಳು ಸಂಪೂರ್ಣವಾಗಿ ಸಜ್ಜುಗೊಂಡಿಲ್ಲದ ಕಾರಣ ನಿಯಮ ಜಾರಿಗೆ ಹೆಚ್ಚಿನ ಸಮಯದ ಅಗತ್ಯವಿದೆ ಎಂದು ಸಚಿವ ಸಿರ್ಸಾ ತಿಳಿಸಿದ್ದರು.

ಕೊನೆಗೆ ಜುಲೈ 1ರಂದು ‘ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ ನಿಯಮವನ್ನು ಜಾರಿಗೆ ತರಲಾಗಿದೆ. ಈ ವೇಳೆ ದೆಹಲಿಯ 520 ಇಂಧನ ಕೇಂದ್ರಗಳ ಪೈಕಿ ಸುಮಾರು 500 ಕೇಂದ್ರಗಳಲ್ಲಿ ಎಎನ್‌ಪಿಆರ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಸಾರಿಗೆ ಇಲಾಖೆ, ದೆಹಲಿ ಪೊಲೀಸ್, ಸಂಚಾರ ಪೊಲೀಸ್ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಒಳಗೊಂಡ ವಿವರವಾದ ನಿಯಮ ಜಾರಿ ಕಾರ್ಯತಂತ್ರವು ಸಿದ್ದವಾಗಿದೆ ಎಂದು ಸರ್ಕಾರ ಹೇಳಿತ್ತು.

ವಾಯು ಗುಣಮಟ್ಟ ನಿರ್ವಹಣಾ ಆಯೋಗವು (ಸಿಎಕ್ಯೂಎಂ) ನಿಯಮ ಜಾರಿಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನಗಳನ್ನು ನೀಡಿತ್ತು. ಅದರಂತೆ, ಜುಲೈ 1, 2025 ರಂದು ಬೆಳಿಗ್ಗೆ 6 ಗಂಟೆಗೆ ಅಧಿಕೃತವಾಗಿ ಅವಧಿ ಮುಗಿದ ವಾಹನಗಳಿಗೆ ಇಂಧನ ಪೂರೈಸುವುದನ್ನು ಸ್ಥಗಿತಗೊಳಿಸಲಾಗಿದೆ.

ಅವಧಿ ಮುಗಿದ ವಾಹನಗಳನ್ನು ಪತ್ತೆ ಹಚ್ಚುವುದು ಹೇಗೆ?

ಇಂಧನ ಕೇಂದ್ರಗಳಲ್ಲಿ ಅಥವಾ ಪೆಟ್ರೋಲ್ ಬಂಕ್‌ಗಳಲ್ಲಿ ಎಐ ಆಧಾರಿತ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ಎಎನ್‌ಪಿಆರ್) ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇದು ವಾಹನ ಬಂಕ್‌ಗೆ ಬಂದ ತಕ್ಷಣ ಅದರ ನಂಬರ್ ಪ್ಲೇಟ್ ಸ್ಕ್ಯಾನ್ ಮಾಡಿ ‘ವಾಹನ್’ ವ್ಯವಸ್ಥೆಯ ಡೇಟಾಬೇಸ್ ಮೂಲಕ ವಾಹನದ ಅವಧಿಯನ್ನು ಪತ್ತೆ ಹಚ್ಚುತ್ತದೆ.

ವಾಹನ ಮಾಲಕರ ಗತಿಯೇನು?

ಅವಧಿ ಮೀರಿದ ವಾಹನಗಳಿಗೆ ಇಂಧನ ಪೂರೈಕೆ ಮಾಡದಿದ್ದರೆ ವಾಹನ ಮಾಲಕರು ಅವುಗಳನ್ನು ಏನು ಮಾಡುವುದು ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಸದ್ಯಕ್ಕೆ ದೆಹಲಿಯಲ್ಲಿ ಮಾತ್ರ ಇಂಧನ ಪೂರೈಕೆ ಮಾಡುತ್ತಿಲ್ಲ. ಹಾಗಾಗಿ, ವಾಹನ ಮಾಲಕರು ದೆಹಲಿ-ಎನ್‌ಸಿಆರ್ ಹೊರಗೆ ವಾಹನವನ್ನು ಮರು ನೋಂದಾಯಿಸಲು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಪಡೆಯಬಹುದು.

ಖಾಸಗಿ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲಿಸಬಹುದು (ಸಾರ್ವಜನಿಕ ಪಾರ್ಕಿಂಗ್ ನಿಷೇಧಿಸಲಾಗಿದೆ).

ನೋಂದಾಯಿತ ಸ್ಕ್ರ್ಯಾಪಿಂಗ್ ಸೌಲಭ್ಯದಲ್ಲಿ ವಾಹನವನ್ನು ಸ್ಕ್ರ್ಯಾಪ್ ಮಾಡಬಹುದು ಅಥವಾ ವಾಹವನ್ನು ಗುಜರಿಗೆ ಹಾಕಬಹುದು.

ನಿಯಮ ಉಲ್ಲಂಘಿಸಿದರೆ ಏನಾಗುತ್ತದೆ?

ನಿಯಮ ಉಲ್ಲಂಘಿಸಿದರೆ ಕಾರುಗಳಿಗೆ 10,000 ರೂಪಾಯಿ ಮತ್ತು ದ್ವಿಚಕ್ರ ವಾಹನಗಳಿಗೆ 5,000 ರೂಪಾಯಿ ಜೊತೆಗೆ ಟೋವಿಂಗ್ ಶುಲ್ಕಗಳನ್ನು ವಿಧಿಸಲಾಗುತ್ತದೆ. ಪದೇ ಪದೇ ನಿಯಮ ಉಲ್ಲಂಘಿಸಿದರೆ ಸಂಬಂಧಿತ ಅಧಿಕಾರಿಗಳೇ ವಾಹನವನ್ನು ಮುಟ್ಟುಗೋಲು ಹಾಕಿಕೊಂಡು ಸ್ಕ್ರ್ಯಾಪ್ ಮಾಡುತ್ತಾರೆ.

ಹೊಸ ನಿಯಮದಲ್ಲಿ ಅಂಗವಿಕಲರು ಅಥವಾ ಇತರ ಗುಂಪುಗಳಿಗೆ ಯಾವುದೇ ನಿರ್ದಿಷ್ಟ ವಿನಾಯಿತಿಗಳನ್ನು ನೀಡಲಾಗಿಲ್ಲ. ಅಂದರೆ, ಎಲ್ಲಾ ವಾಹನಗಳು, ಮಾಲೀಕತ್ವವನ್ನು ಲೆಕ್ಕಿಸದೆ, ನಿಯಮಗಳನ್ನು ಪಾಲಿಸಬೇಕಿದೆ.

ಇಂಧನ ತಡೆ ಹಿಡಿಯುವ ನೀತಿಯು, ಆಗಸ್ಟ್ 15, 2026 ರಿಂದ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ದ್ವಿಚಕ್ರ ವಾಹನಗಳ ಹೊಸ ನೋಂದಣಿಗಳನ್ನು ಮತ್ತು ಆಗಸ್ಟ್ 15,2025 ರಿಂದ ಸಿಎನ್‌ಜಿ ಆಟೋರಿಕ್ಷಾಗಳನ್ನು ನಿಷೇಧಿಸುವ ಮುಂಬರುವ ದೆಹಲಿಯ ಇವಿ ನೀತಿ 2.0 ಮತ್ತು
ದೆಹಲಿಯ ಶುದ್ಧ ಗಾಳಿಯನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ತರಲಾಗಿದೆ.

ದಂಡವನ್ನು ತಪ್ಪಿಸಲು ಜೀವಿತಾವಧಿ ಮುಗಿದ ವಾಹನಗಳ ಮಾಲೀಕರು ಹೊಸ, ತಂತ್ರಜ್ಞಾನಗಳು ಹೊಂದಿರುವ ವಾಹನಗಳು ಅಥವಾ ವಿದ್ಯುತ್ ವಾಹನಗಳಿಗೆ (ಇವಿ) ಬದಲಾಯಿಸಲು ಪ್ರೋತ್ಸಾಹಿಸಲಾಗುತ್ತದೆ.

ದೆಹಲಿ ಇವಿ ನೀತಿ 2.0 (ಭವಿಷ್ಯದ ಪರಿಣಾಮ)

ಆಗಸ್ಟ್ 15,2026 ರಿಂದ ದೆಹಲಿಯಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ದ್ವಿಚಕ್ರ ವಾಹನಗಳ ಹೊಸ ನೋಂದಣಿಗಳನ್ನು ನಿಷೇಧಿಸಲು ಯೋಜಿಸಲಾಗಿದೆ. ಇದರಿಂದಾಗಿ ವಿದ್ಯುತ್ ಚಾಲಿತ ವಾಹನಗಳಿಗೆ (ಇವಿ) ಬೇಡಿಕೆ ಹೆಚ್ಚಾಗಲಿದೆ. ಆಗಸ್ಟ್ 15,2025 ರಿಂದ ಸಿಎನ್‌ಜಿ ಆಟೋರಿಕ್ಷಾಗಳು ಸಹ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ.

ಬೈಕ್ ಟ್ಯಾಕ್ಸಿಯನ್ನು ಬೆಂಬಲಿಸಿದ ಕೇಂದ್ರದ ಮಾರ್ಗಸೂಚಿ: ರಾಜ್ಯದಲ್ಲಿ ಹೊಸ ನಿರೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...