Homeಮುಖಪುಟ10-15 ವರ್ಷ ಹಳೆಯ ವಾಹನಗಳಿಗೆ ಇಂಧನವಿಲ್ಲ!..ಏನಿದು ಹೊಸ ನಿಯಮ?

10-15 ವರ್ಷ ಹಳೆಯ ವಾಹನಗಳಿಗೆ ಇಂಧನವಿಲ್ಲ!..ಏನಿದು ಹೊಸ ನಿಯಮ?

- Advertisement -
- Advertisement -

ಜುಲೈ 1, 2025ರಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ‘ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ (no fuel for end-of-life vehicles) ನಿಯಮ ಜಾರಿಯಾಗಿದೆ.

ಹೊಸ ನಿಯಮದ ಪ್ರಕಾರ 15 ವರ್ಷ ಹಳೆಯ ಪೆಟ್ರೋಲ್ ವಾಹನಗಳು ಮತ್ತು 10 ವರ್ಷ ಹಳೆಯ ಡೀಸೆಲ್ ವಾಹನಗಳಿಗೆ ಇಂಧನ ಸಿಗುವುದಿಲ್ಲ. ಪರಿಸರ ಮಾಲಿನ್ಯ (ವಾಯು, ಶಬ್ದ ಇತ್ಯಾದಿ) ತಡೆಯಲು ಈ ನಿಯಮವನ್ನು ಜಾರಿಗೆ ತರಲಾಗಿದೆ ಎಂದು ಸರ್ಕಾರ ಹೇಳಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) 2014 ಆದೇಶ ಮತ್ತು ಸುಪ್ರೀಂ ಕೋರ್ಟ್‌ನ 2018ರ ತೀರ್ಪಿನ ಪ್ರಕಾರ, 15 ವರ್ಷಕ್ಕಿಂತ ಹಳೆಯದಾದ ಪೆಟ್ರೋಲ್ ವಾಹನಗಳು ಮತ್ತು 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳನ್ನು ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಓಡಿಸುವುದನ್ನು ಮತ್ತು ಪಾರ್ಕಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ.

‘ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ ನೀತಿಯನ್ನು ಮಾರ್ಚ್ 2025ರಲ್ಲಿ ಘೋಷಣೆ ಮಾಡಲಾಗಿತ್ತು. ಆದರೆ, ಜುಲೈ 1ರಿಂದ ಜಾರಿಗೆ ಬಂದಿದೆ.

ಮಾರ್ಚ್ 2025ರ ಆರಂಭದಲ್ಲಿ, ದೆಹಲಿಯ ಪರಿಸರ ಖಾತೆ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರು, 15 ವರ್ಷ ಹಳೆಯ ಪೆಟ್ರೋಲ್ ವಾಹನಗಳು ಮತ್ತು 10 ವರ್ಷ ಹಳೆಯ ಡೀಸೆಲ್ ವಾಹನಗಳಿಗೆ ಏಪ್ರಿಲ್ 1ರಿಂದ ಇಂಧನ ಕೇಂದ್ರಗಳು ಇಂಧನ ಒದಗಿಸುವುದಿಲ್ಲ ಎಂದು ಹೇಳಿದ್ದರು.

ವಾಹನಗಳ ಹೊರಸೂಸುವಿಕೆಯನ್ನು (ಇಂಗಾಲ ಡೈ ಆಕ್ಸೈಡ್) ಕಡಿಮೆ ಮಾಡುವ ವಿಶಾಲ ಕಾರ್ಯತಂತ್ರದ ಭಾಗ ಇದಾಗಿದ್ದು, ನಿಯಮವನ್ನು ಜಾರಿಗೊಳಿಸಲು ಇಂಧನ ಕೇಂದ್ರಗಳಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ಎಎನ್‌ಪಿಆರ್) ಕ್ಯಾಮರಾಗಳನ್ನು ಅಳವಡಿಸಲಾಗುವುದು ಎಂದಿದ್ದರು.

ಆದರೆ ಮಾರ್ಚ್ 2025ರ ಅಂತ್ಯದ ವೇಳೆಗೆ, ಇಂಧನ ಕೇಂದ್ರಗಳಲ್ಲಿ ಅಗತ್ಯವಿರುವ ಎನ್‌ಪಿಆರ್ ಕ್ಯಾಮರಾಗಳು ಮತ್ತು ಸಂಬಂಧಿತ ಸಾಧನಗಳ ಅಳವಡಿಕೆ ಅಪೂರ್ಣವಾಗಿದ್ದರಿಂದ ನಿಯಮ ಜಾರಿ ವಿಳಂಬವಾಗಿತ್ತು. ಮಾರ್ಚ್ 31, 2025 ರೊಳಗೆ ಎಲ್ಲಾ ಇಂಧನ ಕೇಂದ್ರಗಳು ಸಂಪೂರ್ಣವಾಗಿ ಸಜ್ಜುಗೊಂಡಿಲ್ಲದ ಕಾರಣ ನಿಯಮ ಜಾರಿಗೆ ಹೆಚ್ಚಿನ ಸಮಯದ ಅಗತ್ಯವಿದೆ ಎಂದು ಸಚಿವ ಸಿರ್ಸಾ ತಿಳಿಸಿದ್ದರು.

ಕೊನೆಗೆ ಜುಲೈ 1ರಂದು ‘ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ ನಿಯಮವನ್ನು ಜಾರಿಗೆ ತರಲಾಗಿದೆ. ಈ ವೇಳೆ ದೆಹಲಿಯ 520 ಇಂಧನ ಕೇಂದ್ರಗಳ ಪೈಕಿ ಸುಮಾರು 500 ಕೇಂದ್ರಗಳಲ್ಲಿ ಎಎನ್‌ಪಿಆರ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಸಾರಿಗೆ ಇಲಾಖೆ, ದೆಹಲಿ ಪೊಲೀಸ್, ಸಂಚಾರ ಪೊಲೀಸ್ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಒಳಗೊಂಡ ವಿವರವಾದ ನಿಯಮ ಜಾರಿ ಕಾರ್ಯತಂತ್ರವು ಸಿದ್ದವಾಗಿದೆ ಎಂದು ಸರ್ಕಾರ ಹೇಳಿತ್ತು.

ವಾಯು ಗುಣಮಟ್ಟ ನಿರ್ವಹಣಾ ಆಯೋಗವು (ಸಿಎಕ್ಯೂಎಂ) ನಿಯಮ ಜಾರಿಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನಗಳನ್ನು ನೀಡಿತ್ತು. ಅದರಂತೆ, ಜುಲೈ 1, 2025 ರಂದು ಬೆಳಿಗ್ಗೆ 6 ಗಂಟೆಗೆ ಅಧಿಕೃತವಾಗಿ ಅವಧಿ ಮುಗಿದ ವಾಹನಗಳಿಗೆ ಇಂಧನ ಪೂರೈಸುವುದನ್ನು ಸ್ಥಗಿತಗೊಳಿಸಲಾಗಿದೆ.

ಅವಧಿ ಮುಗಿದ ವಾಹನಗಳನ್ನು ಪತ್ತೆ ಹಚ್ಚುವುದು ಹೇಗೆ?

ಇಂಧನ ಕೇಂದ್ರಗಳಲ್ಲಿ ಅಥವಾ ಪೆಟ್ರೋಲ್ ಬಂಕ್‌ಗಳಲ್ಲಿ ಎಐ ಆಧಾರಿತ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ಎಎನ್‌ಪಿಆರ್) ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇದು ವಾಹನ ಬಂಕ್‌ಗೆ ಬಂದ ತಕ್ಷಣ ಅದರ ನಂಬರ್ ಪ್ಲೇಟ್ ಸ್ಕ್ಯಾನ್ ಮಾಡಿ ‘ವಾಹನ್’ ವ್ಯವಸ್ಥೆಯ ಡೇಟಾಬೇಸ್ ಮೂಲಕ ವಾಹನದ ಅವಧಿಯನ್ನು ಪತ್ತೆ ಹಚ್ಚುತ್ತದೆ.

ವಾಹನ ಮಾಲಕರ ಗತಿಯೇನು?

ಅವಧಿ ಮೀರಿದ ವಾಹನಗಳಿಗೆ ಇಂಧನ ಪೂರೈಕೆ ಮಾಡದಿದ್ದರೆ ವಾಹನ ಮಾಲಕರು ಅವುಗಳನ್ನು ಏನು ಮಾಡುವುದು ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಸದ್ಯಕ್ಕೆ ದೆಹಲಿಯಲ್ಲಿ ಮಾತ್ರ ಇಂಧನ ಪೂರೈಕೆ ಮಾಡುತ್ತಿಲ್ಲ. ಹಾಗಾಗಿ, ವಾಹನ ಮಾಲಕರು ದೆಹಲಿ-ಎನ್‌ಸಿಆರ್ ಹೊರಗೆ ವಾಹನವನ್ನು ಮರು ನೋಂದಾಯಿಸಲು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಪಡೆಯಬಹುದು.

ಖಾಸಗಿ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲಿಸಬಹುದು (ಸಾರ್ವಜನಿಕ ಪಾರ್ಕಿಂಗ್ ನಿಷೇಧಿಸಲಾಗಿದೆ).

ನೋಂದಾಯಿತ ಸ್ಕ್ರ್ಯಾಪಿಂಗ್ ಸೌಲಭ್ಯದಲ್ಲಿ ವಾಹನವನ್ನು ಸ್ಕ್ರ್ಯಾಪ್ ಮಾಡಬಹುದು ಅಥವಾ ವಾಹವನ್ನು ಗುಜರಿಗೆ ಹಾಕಬಹುದು.

ನಿಯಮ ಉಲ್ಲಂಘಿಸಿದರೆ ಏನಾಗುತ್ತದೆ?

ನಿಯಮ ಉಲ್ಲಂಘಿಸಿದರೆ ಕಾರುಗಳಿಗೆ 10,000 ರೂಪಾಯಿ ಮತ್ತು ದ್ವಿಚಕ್ರ ವಾಹನಗಳಿಗೆ 5,000 ರೂಪಾಯಿ ಜೊತೆಗೆ ಟೋವಿಂಗ್ ಶುಲ್ಕಗಳನ್ನು ವಿಧಿಸಲಾಗುತ್ತದೆ. ಪದೇ ಪದೇ ನಿಯಮ ಉಲ್ಲಂಘಿಸಿದರೆ ಸಂಬಂಧಿತ ಅಧಿಕಾರಿಗಳೇ ವಾಹನವನ್ನು ಮುಟ್ಟುಗೋಲು ಹಾಕಿಕೊಂಡು ಸ್ಕ್ರ್ಯಾಪ್ ಮಾಡುತ್ತಾರೆ.

ಹೊಸ ನಿಯಮದಲ್ಲಿ ಅಂಗವಿಕಲರು ಅಥವಾ ಇತರ ಗುಂಪುಗಳಿಗೆ ಯಾವುದೇ ನಿರ್ದಿಷ್ಟ ವಿನಾಯಿತಿಗಳನ್ನು ನೀಡಲಾಗಿಲ್ಲ. ಅಂದರೆ, ಎಲ್ಲಾ ವಾಹನಗಳು, ಮಾಲೀಕತ್ವವನ್ನು ಲೆಕ್ಕಿಸದೆ, ನಿಯಮಗಳನ್ನು ಪಾಲಿಸಬೇಕಿದೆ.

ಇಂಧನ ತಡೆ ಹಿಡಿಯುವ ನೀತಿಯು, ಆಗಸ್ಟ್ 15, 2026 ರಿಂದ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ದ್ವಿಚಕ್ರ ವಾಹನಗಳ ಹೊಸ ನೋಂದಣಿಗಳನ್ನು ಮತ್ತು ಆಗಸ್ಟ್ 15,2025 ರಿಂದ ಸಿಎನ್‌ಜಿ ಆಟೋರಿಕ್ಷಾಗಳನ್ನು ನಿಷೇಧಿಸುವ ಮುಂಬರುವ ದೆಹಲಿಯ ಇವಿ ನೀತಿ 2.0 ಮತ್ತು
ದೆಹಲಿಯ ಶುದ್ಧ ಗಾಳಿಯನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ತರಲಾಗಿದೆ.

ದಂಡವನ್ನು ತಪ್ಪಿಸಲು ಜೀವಿತಾವಧಿ ಮುಗಿದ ವಾಹನಗಳ ಮಾಲೀಕರು ಹೊಸ, ತಂತ್ರಜ್ಞಾನಗಳು ಹೊಂದಿರುವ ವಾಹನಗಳು ಅಥವಾ ವಿದ್ಯುತ್ ವಾಹನಗಳಿಗೆ (ಇವಿ) ಬದಲಾಯಿಸಲು ಪ್ರೋತ್ಸಾಹಿಸಲಾಗುತ್ತದೆ.

ದೆಹಲಿ ಇವಿ ನೀತಿ 2.0 (ಭವಿಷ್ಯದ ಪರಿಣಾಮ)

ಆಗಸ್ಟ್ 15,2026 ರಿಂದ ದೆಹಲಿಯಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ದ್ವಿಚಕ್ರ ವಾಹನಗಳ ಹೊಸ ನೋಂದಣಿಗಳನ್ನು ನಿಷೇಧಿಸಲು ಯೋಜಿಸಲಾಗಿದೆ. ಇದರಿಂದಾಗಿ ವಿದ್ಯುತ್ ಚಾಲಿತ ವಾಹನಗಳಿಗೆ (ಇವಿ) ಬೇಡಿಕೆ ಹೆಚ್ಚಾಗಲಿದೆ. ಆಗಸ್ಟ್ 15,2025 ರಿಂದ ಸಿಎನ್‌ಜಿ ಆಟೋರಿಕ್ಷಾಗಳು ಸಹ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ.

ಬೈಕ್ ಟ್ಯಾಕ್ಸಿಯನ್ನು ಬೆಂಬಲಿಸಿದ ಕೇಂದ್ರದ ಮಾರ್ಗಸೂಚಿ: ರಾಜ್ಯದಲ್ಲಿ ಹೊಸ ನಿರೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...