Homeಮುಖಪುಟ10-15 ವರ್ಷ ಹಳೆಯ ವಾಹನಗಳಿಗೆ ಇಂಧನವಿಲ್ಲ!..ಏನಿದು ಹೊಸ ನಿಯಮ?

10-15 ವರ್ಷ ಹಳೆಯ ವಾಹನಗಳಿಗೆ ಇಂಧನವಿಲ್ಲ!..ಏನಿದು ಹೊಸ ನಿಯಮ?

- Advertisement -
- Advertisement -

ಜುಲೈ 1, 2025ರಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ‘ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ (no fuel for end-of-life vehicles) ನಿಯಮ ಜಾರಿಯಾಗಿದೆ.

ಹೊಸ ನಿಯಮದ ಪ್ರಕಾರ 15 ವರ್ಷ ಹಳೆಯ ಪೆಟ್ರೋಲ್ ವಾಹನಗಳು ಮತ್ತು 10 ವರ್ಷ ಹಳೆಯ ಡೀಸೆಲ್ ವಾಹನಗಳಿಗೆ ಇಂಧನ ಸಿಗುವುದಿಲ್ಲ. ಪರಿಸರ ಮಾಲಿನ್ಯ (ವಾಯು, ಶಬ್ದ ಇತ್ಯಾದಿ) ತಡೆಯಲು ಈ ನಿಯಮವನ್ನು ಜಾರಿಗೆ ತರಲಾಗಿದೆ ಎಂದು ಸರ್ಕಾರ ಹೇಳಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) 2014 ಆದೇಶ ಮತ್ತು ಸುಪ್ರೀಂ ಕೋರ್ಟ್‌ನ 2018ರ ತೀರ್ಪಿನ ಪ್ರಕಾರ, 15 ವರ್ಷಕ್ಕಿಂತ ಹಳೆಯದಾದ ಪೆಟ್ರೋಲ್ ವಾಹನಗಳು ಮತ್ತು 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳನ್ನು ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಓಡಿಸುವುದನ್ನು ಮತ್ತು ಪಾರ್ಕಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ.

‘ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ ನೀತಿಯನ್ನು ಮಾರ್ಚ್ 2025ರಲ್ಲಿ ಘೋಷಣೆ ಮಾಡಲಾಗಿತ್ತು. ಆದರೆ, ಜುಲೈ 1ರಿಂದ ಜಾರಿಗೆ ಬಂದಿದೆ.

ಮಾರ್ಚ್ 2025ರ ಆರಂಭದಲ್ಲಿ, ದೆಹಲಿಯ ಪರಿಸರ ಖಾತೆ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರು, 15 ವರ್ಷ ಹಳೆಯ ಪೆಟ್ರೋಲ್ ವಾಹನಗಳು ಮತ್ತು 10 ವರ್ಷ ಹಳೆಯ ಡೀಸೆಲ್ ವಾಹನಗಳಿಗೆ ಏಪ್ರಿಲ್ 1ರಿಂದ ಇಂಧನ ಕೇಂದ್ರಗಳು ಇಂಧನ ಒದಗಿಸುವುದಿಲ್ಲ ಎಂದು ಹೇಳಿದ್ದರು.

ವಾಹನಗಳ ಹೊರಸೂಸುವಿಕೆಯನ್ನು (ಇಂಗಾಲ ಡೈ ಆಕ್ಸೈಡ್) ಕಡಿಮೆ ಮಾಡುವ ವಿಶಾಲ ಕಾರ್ಯತಂತ್ರದ ಭಾಗ ಇದಾಗಿದ್ದು, ನಿಯಮವನ್ನು ಜಾರಿಗೊಳಿಸಲು ಇಂಧನ ಕೇಂದ್ರಗಳಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ಎಎನ್‌ಪಿಆರ್) ಕ್ಯಾಮರಾಗಳನ್ನು ಅಳವಡಿಸಲಾಗುವುದು ಎಂದಿದ್ದರು.

ಆದರೆ ಮಾರ್ಚ್ 2025ರ ಅಂತ್ಯದ ವೇಳೆಗೆ, ಇಂಧನ ಕೇಂದ್ರಗಳಲ್ಲಿ ಅಗತ್ಯವಿರುವ ಎನ್‌ಪಿಆರ್ ಕ್ಯಾಮರಾಗಳು ಮತ್ತು ಸಂಬಂಧಿತ ಸಾಧನಗಳ ಅಳವಡಿಕೆ ಅಪೂರ್ಣವಾಗಿದ್ದರಿಂದ ನಿಯಮ ಜಾರಿ ವಿಳಂಬವಾಗಿತ್ತು. ಮಾರ್ಚ್ 31, 2025 ರೊಳಗೆ ಎಲ್ಲಾ ಇಂಧನ ಕೇಂದ್ರಗಳು ಸಂಪೂರ್ಣವಾಗಿ ಸಜ್ಜುಗೊಂಡಿಲ್ಲದ ಕಾರಣ ನಿಯಮ ಜಾರಿಗೆ ಹೆಚ್ಚಿನ ಸಮಯದ ಅಗತ್ಯವಿದೆ ಎಂದು ಸಚಿವ ಸಿರ್ಸಾ ತಿಳಿಸಿದ್ದರು.

ಕೊನೆಗೆ ಜುಲೈ 1ರಂದು ‘ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ ನಿಯಮವನ್ನು ಜಾರಿಗೆ ತರಲಾಗಿದೆ. ಈ ವೇಳೆ ದೆಹಲಿಯ 520 ಇಂಧನ ಕೇಂದ್ರಗಳ ಪೈಕಿ ಸುಮಾರು 500 ಕೇಂದ್ರಗಳಲ್ಲಿ ಎಎನ್‌ಪಿಆರ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಸಾರಿಗೆ ಇಲಾಖೆ, ದೆಹಲಿ ಪೊಲೀಸ್, ಸಂಚಾರ ಪೊಲೀಸ್ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಒಳಗೊಂಡ ವಿವರವಾದ ನಿಯಮ ಜಾರಿ ಕಾರ್ಯತಂತ್ರವು ಸಿದ್ದವಾಗಿದೆ ಎಂದು ಸರ್ಕಾರ ಹೇಳಿತ್ತು.

ವಾಯು ಗುಣಮಟ್ಟ ನಿರ್ವಹಣಾ ಆಯೋಗವು (ಸಿಎಕ್ಯೂಎಂ) ನಿಯಮ ಜಾರಿಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನಗಳನ್ನು ನೀಡಿತ್ತು. ಅದರಂತೆ, ಜುಲೈ 1, 2025 ರಂದು ಬೆಳಿಗ್ಗೆ 6 ಗಂಟೆಗೆ ಅಧಿಕೃತವಾಗಿ ಅವಧಿ ಮುಗಿದ ವಾಹನಗಳಿಗೆ ಇಂಧನ ಪೂರೈಸುವುದನ್ನು ಸ್ಥಗಿತಗೊಳಿಸಲಾಗಿದೆ.

ಅವಧಿ ಮುಗಿದ ವಾಹನಗಳನ್ನು ಪತ್ತೆ ಹಚ್ಚುವುದು ಹೇಗೆ?

ಇಂಧನ ಕೇಂದ್ರಗಳಲ್ಲಿ ಅಥವಾ ಪೆಟ್ರೋಲ್ ಬಂಕ್‌ಗಳಲ್ಲಿ ಎಐ ಆಧಾರಿತ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ಎಎನ್‌ಪಿಆರ್) ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇದು ವಾಹನ ಬಂಕ್‌ಗೆ ಬಂದ ತಕ್ಷಣ ಅದರ ನಂಬರ್ ಪ್ಲೇಟ್ ಸ್ಕ್ಯಾನ್ ಮಾಡಿ ‘ವಾಹನ್’ ವ್ಯವಸ್ಥೆಯ ಡೇಟಾಬೇಸ್ ಮೂಲಕ ವಾಹನದ ಅವಧಿಯನ್ನು ಪತ್ತೆ ಹಚ್ಚುತ್ತದೆ.

ವಾಹನ ಮಾಲಕರ ಗತಿಯೇನು?

ಅವಧಿ ಮೀರಿದ ವಾಹನಗಳಿಗೆ ಇಂಧನ ಪೂರೈಕೆ ಮಾಡದಿದ್ದರೆ ವಾಹನ ಮಾಲಕರು ಅವುಗಳನ್ನು ಏನು ಮಾಡುವುದು ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಸದ್ಯಕ್ಕೆ ದೆಹಲಿಯಲ್ಲಿ ಮಾತ್ರ ಇಂಧನ ಪೂರೈಕೆ ಮಾಡುತ್ತಿಲ್ಲ. ಹಾಗಾಗಿ, ವಾಹನ ಮಾಲಕರು ದೆಹಲಿ-ಎನ್‌ಸಿಆರ್ ಹೊರಗೆ ವಾಹನವನ್ನು ಮರು ನೋಂದಾಯಿಸಲು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಪಡೆಯಬಹುದು.

ಖಾಸಗಿ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲಿಸಬಹುದು (ಸಾರ್ವಜನಿಕ ಪಾರ್ಕಿಂಗ್ ನಿಷೇಧಿಸಲಾಗಿದೆ).

ನೋಂದಾಯಿತ ಸ್ಕ್ರ್ಯಾಪಿಂಗ್ ಸೌಲಭ್ಯದಲ್ಲಿ ವಾಹನವನ್ನು ಸ್ಕ್ರ್ಯಾಪ್ ಮಾಡಬಹುದು ಅಥವಾ ವಾಹವನ್ನು ಗುಜರಿಗೆ ಹಾಕಬಹುದು.

ನಿಯಮ ಉಲ್ಲಂಘಿಸಿದರೆ ಏನಾಗುತ್ತದೆ?

ನಿಯಮ ಉಲ್ಲಂಘಿಸಿದರೆ ಕಾರುಗಳಿಗೆ 10,000 ರೂಪಾಯಿ ಮತ್ತು ದ್ವಿಚಕ್ರ ವಾಹನಗಳಿಗೆ 5,000 ರೂಪಾಯಿ ಜೊತೆಗೆ ಟೋವಿಂಗ್ ಶುಲ್ಕಗಳನ್ನು ವಿಧಿಸಲಾಗುತ್ತದೆ. ಪದೇ ಪದೇ ನಿಯಮ ಉಲ್ಲಂಘಿಸಿದರೆ ಸಂಬಂಧಿತ ಅಧಿಕಾರಿಗಳೇ ವಾಹನವನ್ನು ಮುಟ್ಟುಗೋಲು ಹಾಕಿಕೊಂಡು ಸ್ಕ್ರ್ಯಾಪ್ ಮಾಡುತ್ತಾರೆ.

ಹೊಸ ನಿಯಮದಲ್ಲಿ ಅಂಗವಿಕಲರು ಅಥವಾ ಇತರ ಗುಂಪುಗಳಿಗೆ ಯಾವುದೇ ನಿರ್ದಿಷ್ಟ ವಿನಾಯಿತಿಗಳನ್ನು ನೀಡಲಾಗಿಲ್ಲ. ಅಂದರೆ, ಎಲ್ಲಾ ವಾಹನಗಳು, ಮಾಲೀಕತ್ವವನ್ನು ಲೆಕ್ಕಿಸದೆ, ನಿಯಮಗಳನ್ನು ಪಾಲಿಸಬೇಕಿದೆ.

ಇಂಧನ ತಡೆ ಹಿಡಿಯುವ ನೀತಿಯು, ಆಗಸ್ಟ್ 15, 2026 ರಿಂದ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ದ್ವಿಚಕ್ರ ವಾಹನಗಳ ಹೊಸ ನೋಂದಣಿಗಳನ್ನು ಮತ್ತು ಆಗಸ್ಟ್ 15,2025 ರಿಂದ ಸಿಎನ್‌ಜಿ ಆಟೋರಿಕ್ಷಾಗಳನ್ನು ನಿಷೇಧಿಸುವ ಮುಂಬರುವ ದೆಹಲಿಯ ಇವಿ ನೀತಿ 2.0 ಮತ್ತು
ದೆಹಲಿಯ ಶುದ್ಧ ಗಾಳಿಯನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ತರಲಾಗಿದೆ.

ದಂಡವನ್ನು ತಪ್ಪಿಸಲು ಜೀವಿತಾವಧಿ ಮುಗಿದ ವಾಹನಗಳ ಮಾಲೀಕರು ಹೊಸ, ತಂತ್ರಜ್ಞಾನಗಳು ಹೊಂದಿರುವ ವಾಹನಗಳು ಅಥವಾ ವಿದ್ಯುತ್ ವಾಹನಗಳಿಗೆ (ಇವಿ) ಬದಲಾಯಿಸಲು ಪ್ರೋತ್ಸಾಹಿಸಲಾಗುತ್ತದೆ.

ದೆಹಲಿ ಇವಿ ನೀತಿ 2.0 (ಭವಿಷ್ಯದ ಪರಿಣಾಮ)

ಆಗಸ್ಟ್ 15,2026 ರಿಂದ ದೆಹಲಿಯಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ದ್ವಿಚಕ್ರ ವಾಹನಗಳ ಹೊಸ ನೋಂದಣಿಗಳನ್ನು ನಿಷೇಧಿಸಲು ಯೋಜಿಸಲಾಗಿದೆ. ಇದರಿಂದಾಗಿ ವಿದ್ಯುತ್ ಚಾಲಿತ ವಾಹನಗಳಿಗೆ (ಇವಿ) ಬೇಡಿಕೆ ಹೆಚ್ಚಾಗಲಿದೆ. ಆಗಸ್ಟ್ 15,2025 ರಿಂದ ಸಿಎನ್‌ಜಿ ಆಟೋರಿಕ್ಷಾಗಳು ಸಹ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ.

ಬೈಕ್ ಟ್ಯಾಕ್ಸಿಯನ್ನು ಬೆಂಬಲಿಸಿದ ಕೇಂದ್ರದ ಮಾರ್ಗಸೂಚಿ: ರಾಜ್ಯದಲ್ಲಿ ಹೊಸ ನಿರೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...