Homeಮುಖಪುಟಕದನ ವಿರಾಮ: ಒತ್ತೆಯಾಳುಗಳ ಕುಟುಂಬಸ್ಥರಿಗೆ ನಿರಾಶೆ ಉಂಟು ಮಾಡಿದ ಇಸ್ರೇಲ್‌ ಹೇಳಿಕೆ

ಕದನ ವಿರಾಮ: ಒತ್ತೆಯಾಳುಗಳ ಕುಟುಂಬಸ್ಥರಿಗೆ ನಿರಾಶೆ ಉಂಟು ಮಾಡಿದ ಇಸ್ರೇಲ್‌ ಹೇಳಿಕೆ

- Advertisement -
- Advertisement -

ಇಸ್ರೇಲ್ ಮತ್ತು ಹಮಾಸ್ ನಡುವೆ ತಾತ್ಕಾಲಿಕ ಕದನ ವಿರಾಮ ಒಪ್ಪಂದ ನಡೆದಿದ್ದರೂ ಶುಕ್ರವಾರದ ಮೊದಲು ಪ್ಯಾಲೆಸ್ತೀನ್‌ನ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಲಹೆಗಾರರು ಹೇಳಿದ್ದಾರೆ. ಈ ಹೇಳಿಕೆಯಿಂದ ಗುರುವಾರ ಒತ್ತೆಯಾಳುಗಳು ಬಿಡುಗಡೆಯಾಗಲಿದ್ದಾರೆ ಎಂಬ ನಿರೀಕ್ಷಯಿಂದಿದ್ದ ಸಂಬಂಧಿಕರಲ್ಲಿ ನಿರಾಶೆ ಉಂಟು ಮಾಡಿದೆ.

ಇಸ್ರೇಲ್ ಮತ್ತು ಹಮಾಸ್ ನಡುವೆ ಕನಿಷ್ಠ 4 ದಿನಗಳ ಕಾಲ ಕದನ ವಿರಾಮಕ್ಕೆ ಒಪ್ಪಿಗೆಯಾಗಿವೆ. ಮಾನವೀಯ ನೆರವು ಮತ್ತು ಇಸ್ರೇಲ್‌ನಲ್ಲಿ ಜೈಲಿನಲ್ಲಿರುವ ಕನಿಷ್ಠ 150 ಪ್ಯಾಲೆಸ್ತೀನಿಯಾದವರಿಗೆ ಬದಲಾಗಿ ಹಮಾಸ್‌ ಹಿಡಿದಿರುವ ಕನಿಷ್ಠ 50 ಒತ್ತೆಯಾಳುಗಳನ್ನು ಬಂಧನ ಮುಕ್ತಗೊಳಿಸುವುದಾಗಿ ಒಪ್ಪಂದವಾಗಿತ್ತು.

ಅ.7ರಂದು ಸೆರೆಯಾಗಿರಿಸಿದ ಒತ್ತೆಯಾಳುಗಳನ್ನು ಹಮಾಸ್‌ ಬಿಡುಗಡೆ ಮಾಡುವ ಸಮಯದ ಬಗ್ಗೆ ಇನ್ನೂ ಅಧಿಕೃತವಾಗಿ ಘೋಷಿಸಲ್ಪಟ್ಟಿಲ್ಲ. ಗುರುವಾರ ಮಧ್ಯವರ್ತಿಗಳು ಬಿಡುಗಡೆಗೆ ಸಮಯವನ್ನು ಕೋರಿದ್ದಾರೆ ಎಂದು ಈಜಿಪ್ಟ್ ಭದ್ರತಾ ಮೂಲ ತಿಳಿಸಿದೆ.

ನಮ್ಮ ಒತ್ತೆಯಾಳುಗಳ ಬಿಡುಗಡೆಯ ಕುರಿತಾದ ಮಾತುಕತೆಗಳು ಮುಂದುವರಿಯುತ್ತಿವೆ ಎಂದು ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಲಹೆಗಾರ ತ್ಜಾಚಿ ಹನೆಗ್ಬಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಿಡುಗಡೆಯು ದ್ವಿಪಕ್ಷಗಳ ನಡುವಿನ ಮೂಲ ಒಪ್ಪಂದದ ಮೂಲಕ ನಡೆಯುತ್ತದೆ ಮತ್ತು ಶುಕ್ರವಾರದ ಮೊದಲು ಇದು ನಡೆಯುವುದಿಲ್ಲ ಎಂದು ಹೇಳಿದ್ದಾರೆ.

ಹಮಾಸ್ ಮತ್ತು ಮಧ್ಯವರ್ತಿ ಕತಾರ್ ಒಪ್ಪಂದಕ್ಕೆ ಸಹಿ ಹಾಕದ ಕಾರಣ 24 ಗಂಟೆಗಳ ವಿಳಂಬವಾಗಿದೆ ಎಂದು ಇಸ್ರೇಲ್‌ ಅಧಿಕಾರಿಯೋರ್ವರು ಹೇಳಿರುವ ಬಗ್ಗೆ ಇಸ್ರೇಲ್‌ನ ಮಾದ್ಯಮವೊಂದು ವರದಿ ಮಾಡಿದೆ.

ಮಾದ್ಯಮವನ್ನು ಹೊರತುಪಡಿಸಿ ನಾಳೆ ಒತ್ತೆಯಾಳುಗಳ ಬಿಡುಗಡೆ ನಡೆಯುತ್ತದೆ ಎಂದು ಯಾರೂ ಹೇಳಿಲ್ಲ.  ಶುಕ್ರವಾರದ ಮೊದಲು ಯಾವುದೇ ಬಿಡುಗಡೆಗೆ ತೀರ್ಮಾನಿಸಲಾಗಿಲ್ಲ ಎಂದು ಇಸ್ರೇಲ್‌ ಪ್ರಧಾನ ಮಂತ್ರಿಯ ಕಚೇರಿಯ ಮಾಹಿತಿ ಉಲ್ಲೇಖಿಸಿ ಇಸ್ರೇಲ್‌ ಮಾದ್ಯಮಗಳು ವರದಿ ಮಾಡಿದೆ.

ಅ.7ರಂದು ಇಸ್ರೇಲ್‌ ಮೇಲೆ ಹಮಾಸ್‌ ರಾಕೆಟ್‌ ದಾಳಿ ನಡೆಸಿದ ಬಳಿಕ 1,200 ಮಂದಿ ಇಸ್ರೇಲ್‌ ಪ್ರಜೆಗಳು ಮೃತಪಟ್ಟಿದ್ದರು. 240 ಮಂದಿ ಒತ್ತೆಯಾಳುಗಳು ಇನ್ನೂ ಹಮಾಸ್‌ ಸೆರೆಯಲಿದ್ದಾರೆ. ಈ ಮೊದಲು ಹಮಾಸ್‌  ಐವರು ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು.

ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ದಾಳಿ ಆರಂಭಿಸಿದ ಬಳಿಕ ಪ್ಯಾಲೆಸ್ತೀನ್‌ನಲ್ಲಿ ಸುಮಾರು 14,000ಕ್ಕೂ ಅಧಿಕ  ನಾಗರಿಕರ ಹತ್ಯೆಯಾಗಿದ್ದು, ಅದರಲ್ಲಿ 40% ಮಕ್ಕಳು ಸೇರಿದ್ದಾರೆ ಎಂದು ಹಮಾಸ್‌ ವಕ್ತಾರರು ಮಾಹಿತಿ ನೀಡಿದ್ದಾರೆ.

ಬುಧವಾರ ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಒಪ್ಪಂದದ ಅನುಷ್ಠಾನದಲ್ಲಿ ಸಂಭಾವ್ಯ ವಿಳಂಬದ ಬಗ್ಗೆ ನೆತನ್ಯಾಹು ಯಾವುದೇ ಪ್ರಸ್ತಾಪವನ್ನು ಮಾಡಲಿಲ್ಲ. ರೆಡ್ ಕ್ರಾಸ್‌ ಗಾಝಾದಲ್ಲಿ ಉಳಿದಿರುವ  ಒತ್ತೆಯಾಳುಗಳನ್ನು ಭೇಟಿ ಮಾಡಲಿದೆ. ಒತ್ತೆಯಾಳುಗಳು ಜೀವಂತವಾಗಿದ್ದಾರೆಯೇ ಎಂದು ನಾವು ತಿಳಿದುಕೊಳ್ಳಬೇಕು ಎಂದು ಗಿಲಾಡ್ ಕೊರ್ನ್ಗೋಲ್ಡ್ ಹೇಳಿದ್ದಾರೆ. ಅವರ 3 ವರ್ಷದ ಮೊಮ್ಮಗಳು ಸೇರಿದಂತೆ ಅವರ ಕುಟುಂಬದ 7 ಸದಸ್ಯರನ್ನು ಹಮಾಸ್‌ ಒತ್ತೆಯಾಳಾಗಿಟ್ಟುಕೊಂಡಿದೆ.

ಯುದ್ಧ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಿದ ಅಮೆರಿಕ, ಎಲ್ಲರೂ ವಾಪಾಸ್ಸು ಬರಬೇಕೆಂದು ನಾವು ಆಶಿಸುತ್ತೇವೆ. ತುಂಬಾ ಕಠಿಣ ನಿರ್ಧಾರ. ಆದರೆ ಮಕ್ಕಳು ಮತ್ತು ಮಹಿಳೆಯರ ಬಿಡುಗಡೆಯಾಗಬೇಕು. ಅವರು ಅತ್ಯಂತ ದುರ್ಬಲರಾಗಿದ್ದಾರೆ. ಇದಾದರೆ ಹೆಚ್ಚಿನ ಸಂಖ್ಯೆಯಲ್ಲಿ ಮಾನವೀಯ ನೆರವನ್ನು ಗಾಝಾಗೆ ತಲುಪಿಸಲಾಗುವುದು ಎಂದು ಅಮೆರಿಕ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...