Homeಮುಖಪುಟಕದನ ವಿರಾಮ: ಒತ್ತೆಯಾಳುಗಳ ಕುಟುಂಬಸ್ಥರಿಗೆ ನಿರಾಶೆ ಉಂಟು ಮಾಡಿದ ಇಸ್ರೇಲ್‌ ಹೇಳಿಕೆ

ಕದನ ವಿರಾಮ: ಒತ್ತೆಯಾಳುಗಳ ಕುಟುಂಬಸ್ಥರಿಗೆ ನಿರಾಶೆ ಉಂಟು ಮಾಡಿದ ಇಸ್ರೇಲ್‌ ಹೇಳಿಕೆ

- Advertisement -
- Advertisement -

ಇಸ್ರೇಲ್ ಮತ್ತು ಹಮಾಸ್ ನಡುವೆ ತಾತ್ಕಾಲಿಕ ಕದನ ವಿರಾಮ ಒಪ್ಪಂದ ನಡೆದಿದ್ದರೂ ಶುಕ್ರವಾರದ ಮೊದಲು ಪ್ಯಾಲೆಸ್ತೀನ್‌ನ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಲಹೆಗಾರರು ಹೇಳಿದ್ದಾರೆ. ಈ ಹೇಳಿಕೆಯಿಂದ ಗುರುವಾರ ಒತ್ತೆಯಾಳುಗಳು ಬಿಡುಗಡೆಯಾಗಲಿದ್ದಾರೆ ಎಂಬ ನಿರೀಕ್ಷಯಿಂದಿದ್ದ ಸಂಬಂಧಿಕರಲ್ಲಿ ನಿರಾಶೆ ಉಂಟು ಮಾಡಿದೆ.

ಇಸ್ರೇಲ್ ಮತ್ತು ಹಮಾಸ್ ನಡುವೆ ಕನಿಷ್ಠ 4 ದಿನಗಳ ಕಾಲ ಕದನ ವಿರಾಮಕ್ಕೆ ಒಪ್ಪಿಗೆಯಾಗಿವೆ. ಮಾನವೀಯ ನೆರವು ಮತ್ತು ಇಸ್ರೇಲ್‌ನಲ್ಲಿ ಜೈಲಿನಲ್ಲಿರುವ ಕನಿಷ್ಠ 150 ಪ್ಯಾಲೆಸ್ತೀನಿಯಾದವರಿಗೆ ಬದಲಾಗಿ ಹಮಾಸ್‌ ಹಿಡಿದಿರುವ ಕನಿಷ್ಠ 50 ಒತ್ತೆಯಾಳುಗಳನ್ನು ಬಂಧನ ಮುಕ್ತಗೊಳಿಸುವುದಾಗಿ ಒಪ್ಪಂದವಾಗಿತ್ತು.

ಅ.7ರಂದು ಸೆರೆಯಾಗಿರಿಸಿದ ಒತ್ತೆಯಾಳುಗಳನ್ನು ಹಮಾಸ್‌ ಬಿಡುಗಡೆ ಮಾಡುವ ಸಮಯದ ಬಗ್ಗೆ ಇನ್ನೂ ಅಧಿಕೃತವಾಗಿ ಘೋಷಿಸಲ್ಪಟ್ಟಿಲ್ಲ. ಗುರುವಾರ ಮಧ್ಯವರ್ತಿಗಳು ಬಿಡುಗಡೆಗೆ ಸಮಯವನ್ನು ಕೋರಿದ್ದಾರೆ ಎಂದು ಈಜಿಪ್ಟ್ ಭದ್ರತಾ ಮೂಲ ತಿಳಿಸಿದೆ.

ನಮ್ಮ ಒತ್ತೆಯಾಳುಗಳ ಬಿಡುಗಡೆಯ ಕುರಿತಾದ ಮಾತುಕತೆಗಳು ಮುಂದುವರಿಯುತ್ತಿವೆ ಎಂದು ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಲಹೆಗಾರ ತ್ಜಾಚಿ ಹನೆಗ್ಬಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಿಡುಗಡೆಯು ದ್ವಿಪಕ್ಷಗಳ ನಡುವಿನ ಮೂಲ ಒಪ್ಪಂದದ ಮೂಲಕ ನಡೆಯುತ್ತದೆ ಮತ್ತು ಶುಕ್ರವಾರದ ಮೊದಲು ಇದು ನಡೆಯುವುದಿಲ್ಲ ಎಂದು ಹೇಳಿದ್ದಾರೆ.

ಹಮಾಸ್ ಮತ್ತು ಮಧ್ಯವರ್ತಿ ಕತಾರ್ ಒಪ್ಪಂದಕ್ಕೆ ಸಹಿ ಹಾಕದ ಕಾರಣ 24 ಗಂಟೆಗಳ ವಿಳಂಬವಾಗಿದೆ ಎಂದು ಇಸ್ರೇಲ್‌ ಅಧಿಕಾರಿಯೋರ್ವರು ಹೇಳಿರುವ ಬಗ್ಗೆ ಇಸ್ರೇಲ್‌ನ ಮಾದ್ಯಮವೊಂದು ವರದಿ ಮಾಡಿದೆ.

ಮಾದ್ಯಮವನ್ನು ಹೊರತುಪಡಿಸಿ ನಾಳೆ ಒತ್ತೆಯಾಳುಗಳ ಬಿಡುಗಡೆ ನಡೆಯುತ್ತದೆ ಎಂದು ಯಾರೂ ಹೇಳಿಲ್ಲ.  ಶುಕ್ರವಾರದ ಮೊದಲು ಯಾವುದೇ ಬಿಡುಗಡೆಗೆ ತೀರ್ಮಾನಿಸಲಾಗಿಲ್ಲ ಎಂದು ಇಸ್ರೇಲ್‌ ಪ್ರಧಾನ ಮಂತ್ರಿಯ ಕಚೇರಿಯ ಮಾಹಿತಿ ಉಲ್ಲೇಖಿಸಿ ಇಸ್ರೇಲ್‌ ಮಾದ್ಯಮಗಳು ವರದಿ ಮಾಡಿದೆ.

ಅ.7ರಂದು ಇಸ್ರೇಲ್‌ ಮೇಲೆ ಹಮಾಸ್‌ ರಾಕೆಟ್‌ ದಾಳಿ ನಡೆಸಿದ ಬಳಿಕ 1,200 ಮಂದಿ ಇಸ್ರೇಲ್‌ ಪ್ರಜೆಗಳು ಮೃತಪಟ್ಟಿದ್ದರು. 240 ಮಂದಿ ಒತ್ತೆಯಾಳುಗಳು ಇನ್ನೂ ಹಮಾಸ್‌ ಸೆರೆಯಲಿದ್ದಾರೆ. ಈ ಮೊದಲು ಹಮಾಸ್‌  ಐವರು ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು.

ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ದಾಳಿ ಆರಂಭಿಸಿದ ಬಳಿಕ ಪ್ಯಾಲೆಸ್ತೀನ್‌ನಲ್ಲಿ ಸುಮಾರು 14,000ಕ್ಕೂ ಅಧಿಕ  ನಾಗರಿಕರ ಹತ್ಯೆಯಾಗಿದ್ದು, ಅದರಲ್ಲಿ 40% ಮಕ್ಕಳು ಸೇರಿದ್ದಾರೆ ಎಂದು ಹಮಾಸ್‌ ವಕ್ತಾರರು ಮಾಹಿತಿ ನೀಡಿದ್ದಾರೆ.

ಬುಧವಾರ ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಒಪ್ಪಂದದ ಅನುಷ್ಠಾನದಲ್ಲಿ ಸಂಭಾವ್ಯ ವಿಳಂಬದ ಬಗ್ಗೆ ನೆತನ್ಯಾಹು ಯಾವುದೇ ಪ್ರಸ್ತಾಪವನ್ನು ಮಾಡಲಿಲ್ಲ. ರೆಡ್ ಕ್ರಾಸ್‌ ಗಾಝಾದಲ್ಲಿ ಉಳಿದಿರುವ  ಒತ್ತೆಯಾಳುಗಳನ್ನು ಭೇಟಿ ಮಾಡಲಿದೆ. ಒತ್ತೆಯಾಳುಗಳು ಜೀವಂತವಾಗಿದ್ದಾರೆಯೇ ಎಂದು ನಾವು ತಿಳಿದುಕೊಳ್ಳಬೇಕು ಎಂದು ಗಿಲಾಡ್ ಕೊರ್ನ್ಗೋಲ್ಡ್ ಹೇಳಿದ್ದಾರೆ. ಅವರ 3 ವರ್ಷದ ಮೊಮ್ಮಗಳು ಸೇರಿದಂತೆ ಅವರ ಕುಟುಂಬದ 7 ಸದಸ್ಯರನ್ನು ಹಮಾಸ್‌ ಒತ್ತೆಯಾಳಾಗಿಟ್ಟುಕೊಂಡಿದೆ.

ಯುದ್ಧ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಿದ ಅಮೆರಿಕ, ಎಲ್ಲರೂ ವಾಪಾಸ್ಸು ಬರಬೇಕೆಂದು ನಾವು ಆಶಿಸುತ್ತೇವೆ. ತುಂಬಾ ಕಠಿಣ ನಿರ್ಧಾರ. ಆದರೆ ಮಕ್ಕಳು ಮತ್ತು ಮಹಿಳೆಯರ ಬಿಡುಗಡೆಯಾಗಬೇಕು. ಅವರು ಅತ್ಯಂತ ದುರ್ಬಲರಾಗಿದ್ದಾರೆ. ಇದಾದರೆ ಹೆಚ್ಚಿನ ಸಂಖ್ಯೆಯಲ್ಲಿ ಮಾನವೀಯ ನೆರವನ್ನು ಗಾಝಾಗೆ ತಲುಪಿಸಲಾಗುವುದು ಎಂದು ಅಮೆರಿಕ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...