Homeಮುಖಪುಟಉತ್ತರ ಕಾಶಿ: ಮೂರು ತಿಂಗಳಲ್ಲಿ ಒಂದೂ ಹೆಣ್ಣು ಮಗು ಜನಿಸಿಲ್ಲ!

ಉತ್ತರ ಕಾಶಿ: ಮೂರು ತಿಂಗಳಲ್ಲಿ ಒಂದೂ ಹೆಣ್ಣು ಮಗು ಜನಿಸಿಲ್ಲ!

ಉತ್ತರ ಕಾಶಿಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪಿಡುಗು ಪ್ರಚಲಿತದಲ್ಲಿ ಇರುವುದಕ್ಕೆ ಈ ಅಂಕಿಅಂಶ ಸಾಕ್ಷಿಯಾಗಿದೆ.

- Advertisement -
- Advertisement -

ಇದೊಂದು ಆಘಾತದ ಸುದ್ದಿ. ಜಿಲ್ಲೆಯೊಂದರ 132 ಗ್ರಾಮಗಳಲ್ಲಿ ಕಳೆದ ಮೂರು ತಿಂಗಳಲ್ಲಿ ಒಂದೇ ಒಂದು ಹೆಣ್ಣು ಕೂಸು ಜನಿಸಿಲ್ಲ!
ಉತ್ತರಪ್ರದೇಶದ ಉತ್ತರ ಕಾಶಿ ಜಿಲ್ಲೆಯಲ್ಲಿ ಇಂಥದ್ದೊಂದು ವಿದ್ಯಮಾನ ಬೆಳಕಿಗೆ ಬಂದಿದೆ. ಅಲ್ಲಿನ 132 ಹಳ್ಳಿಗಳಲ್ಲಿ ಕಳೆದ ಮೂರು ತಿಂಗಳಲ್ಲಿ 212 ಮಕ್ಕಳು ಜನಿಸಿದ್ದು ಎಲ್ಲವೂ ಗಂಡು ಶಿಶುಗಳೇ ಆಗಿದ್ದು, ಒಂದೇ ಒಂದು ಹೆಣ್ಣು ಶಿಶು ಇಲ್ಲದಿರುವುದು ಹೆಣ್ಣು ಭ್ರೂಣ ಹತ್ಯೆ ವ್ಯಾಪಕವಾಗಿ ಪ್ರಚಲಿತದಲ್ಲಿ ಇರುವುದಕ್ಕೆ ಸಾಕ್ಷಿಯಾಗಿದೆ.

ಈ ವರದಿ ಬಂದ ನಂತರ ಎಚ್ಚೆತ್ತುಕೊಂಡಿರುವ ಅಲ್ಲಿನ ಜಿಲ್ಲಾಡಳಿತವು ಆ 132 ಗ್ರಾಮಗಳನ್ನು ಕೆಂಪು ವಲಯ (ರೆಡ್ ಝೋನ್) ಪಟ್ಟಿಗೆ ಸೇರಿಸಿದ್ದು ಆಶಾ ಕಾರ್ಯಕರ್ತೆಯರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

2011ರ ಜನಗಣತಿಯ ಪ್ರಕಾರ ಉತ್ತರ ಕಾಶಿ ಜಿಲ್ಲೆಯಲ್ಲಿ 1,61,489 ಮಹಿಳೆಯರು ಮತ್ತು 1,68,597 ಪುರುಷರಿದ್ದರು. ಕಳವಳ ಮೂಡಿಸಿದ ಈ ಲಿಂಗಾನುಪಾತದ ಪರಿಣಾಮವಾಗಿ ಅಲ್ಲಿ ಲಿಂಗಾನುಪಾತ ಸುಧಾರಿಸಲು ವ್ಯಾಪಕ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ರಾಜ್ಯ ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ, ಕಳೆದ ಮೂರು ತಿಂಗಳಲ್ಲಿ ಉತ್ತರ ಕಾಶಿ ಜಿಲ್ಲೆಯ ದುಂಡಾ ಬ್ಲಾಕಿನ 27 ಹಳ್ಳಿಗಳಲ್ಲಿ 51 ಮಕ್ಕಳ ಜನನವಾಗಿದ್ದು ಒಂದೂ ಹೆಣ್ಣು ಶಿಶುವಿನ ಜನನವಾಗಿಲ್ಲ. ಭತ್ವಾರಿ ಬ್ಲಾಕ್ (27 ಗ್ರಾಮಗಳಲ್ಲಿ 49 ಜನನ), ನೌಗೌನ್ ಬ್ಲಾಕ್ (28 ಗ್ರಾಮಗಳಲ್ಲಿ 47 ಜನನ), ಮೋರಿ ಬ್ಲಾಕ್ (20 ಗ್ರಾಮಗಳಲ್ಲಿ 29 ಜನನ), ಚಿನ್ಯಾಲಿಪೌರ್ ಬ್ಲಾಕ್( 16 ಗ್ರಾಮಗಳಲ್ಲಿ 23 ಜನನ) ಮತ್ತು ಪುರೋಲಾ ಬ್ಲಾಕಿನಲ್ಲಿ 14 ಗ್ರಾಮಗಳಲ್ಲಿ 17 ಜನನಗಳಾಗಿದ್ದು ಒಂದೇ ಒಂದು ಹೆಣ್ಣು ಶಿಶು ಜನಿಸದಿರುವುದು ಆರೋಗ್ಯ ಇಲಾಖೆಯನ್ನು ಕಳವಳಕ್ಕೆ ದೂಡಿದೆ.

ಸದ್ಯ ಈ 132 ಗ್ರಾಮಗಳಲ್ಲಿನ ಚಟುವಟುಕೆಗಳ ಮೇಲೆ ನಿಗಾ ಇಡಲಾಗಿದ್ದು ಮುಂದಿನ ಆರು ತಿಂಗಳ ಬೆಳವಣಿಗೆಗಳ ಮೇಲೆ ಜಿಲ್ಲಾಡಳಿತ ಗಮನ ಹರಿಸಿದೆ. ಜನನ ಲಿಂಗಾನುಪಾತದಲ್ಲಿ ಸುಧಾರಣೆ ಆಗದಿದ್ದರೆ ಆಶಾ ಕಾರ್ಯಕರ್ತರನ್ನು ಹೊಣೆ ಮಾಡಲಾಗುವುದು ಎಂದು ಎಚ್ಚರಿಸಲಾಗಿದೆ.

ಇದು ಕಾಕತಾಳೀಯ ಇರಬಹುದು ಎಂದು ನಿರ್ಲಕ್ಷಿಸುವಂತಿಲ್ಲ ಎಂದಿರುವ ಜಿಲ್ಲಾಧಿಕಾರಿ ಅತೀಶ್ ಚೌಹಾಣ್, ಹೆಣ್ಣು ಭ್ರೂಣ ಹತ್ಯೆಗಳು ಜರುಗುತ್ತಿರವ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

2015-17ರ ಅವಧಿಯಲ್ಲಿ ದೇಶದ ಜನನ ಲಿಂಗಾನುಪಾತ (ಪ್ರತಿ ಸಾವಿರ ಗಂಡು ಶಿಶುಗಳಿಗೆ ಹೆಣ್ಣು ಶಿಶುಗಳ ಸಂಖ್ಯೆ) ತೀವ್ರ ಕುಸಿತ ಕಂಡಿದ್ದು, ಈ ಅವಧಿಯಲ್ಲಿ ಅದು 897 ಇದೆ. ಇಷ್ಟು ಕಡಿಮೆ ಪ್ರಮಾಣದ ಜನನ ಲಿಂಗಾನುಪಾತ ಹಿಂದೆಂದೂ ಕಂಡುಬಂದಿರಲಿಲ್ಲ.

ಉತ್ತರಪ್ರದೇಶ, ರಾಜಸ್ಥಾನ್, ಬಿಹಾರ್, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ 2015-17ರಲ್ಲಿ ಜನನ ಲಿಂಗಾನುಪಾತದಲ್ಲಿ ತೀವ್ರ ಕುಸಿತ ಕಂಡು ಬಂದಿರುವುದನ್ನು ಇಲ್ಲಿ ಗಮನಿಸಬೇಕು.
(ಕೃಪೆ: ಟೈಮ್ಸ್ ಆಫ್ ಇಂಡಿಯಾ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...