Homeಮುಖಪುಟಉತ್ತರ ಕಾಶಿ: ಮೂರು ತಿಂಗಳಲ್ಲಿ ಒಂದೂ ಹೆಣ್ಣು ಮಗು ಜನಿಸಿಲ್ಲ!

ಉತ್ತರ ಕಾಶಿ: ಮೂರು ತಿಂಗಳಲ್ಲಿ ಒಂದೂ ಹೆಣ್ಣು ಮಗು ಜನಿಸಿಲ್ಲ!

ಉತ್ತರ ಕಾಶಿಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪಿಡುಗು ಪ್ರಚಲಿತದಲ್ಲಿ ಇರುವುದಕ್ಕೆ ಈ ಅಂಕಿಅಂಶ ಸಾಕ್ಷಿಯಾಗಿದೆ.

- Advertisement -
- Advertisement -

ಇದೊಂದು ಆಘಾತದ ಸುದ್ದಿ. ಜಿಲ್ಲೆಯೊಂದರ 132 ಗ್ರಾಮಗಳಲ್ಲಿ ಕಳೆದ ಮೂರು ತಿಂಗಳಲ್ಲಿ ಒಂದೇ ಒಂದು ಹೆಣ್ಣು ಕೂಸು ಜನಿಸಿಲ್ಲ!
ಉತ್ತರಪ್ರದೇಶದ ಉತ್ತರ ಕಾಶಿ ಜಿಲ್ಲೆಯಲ್ಲಿ ಇಂಥದ್ದೊಂದು ವಿದ್ಯಮಾನ ಬೆಳಕಿಗೆ ಬಂದಿದೆ. ಅಲ್ಲಿನ 132 ಹಳ್ಳಿಗಳಲ್ಲಿ ಕಳೆದ ಮೂರು ತಿಂಗಳಲ್ಲಿ 212 ಮಕ್ಕಳು ಜನಿಸಿದ್ದು ಎಲ್ಲವೂ ಗಂಡು ಶಿಶುಗಳೇ ಆಗಿದ್ದು, ಒಂದೇ ಒಂದು ಹೆಣ್ಣು ಶಿಶು ಇಲ್ಲದಿರುವುದು ಹೆಣ್ಣು ಭ್ರೂಣ ಹತ್ಯೆ ವ್ಯಾಪಕವಾಗಿ ಪ್ರಚಲಿತದಲ್ಲಿ ಇರುವುದಕ್ಕೆ ಸಾಕ್ಷಿಯಾಗಿದೆ.

ಈ ವರದಿ ಬಂದ ನಂತರ ಎಚ್ಚೆತ್ತುಕೊಂಡಿರುವ ಅಲ್ಲಿನ ಜಿಲ್ಲಾಡಳಿತವು ಆ 132 ಗ್ರಾಮಗಳನ್ನು ಕೆಂಪು ವಲಯ (ರೆಡ್ ಝೋನ್) ಪಟ್ಟಿಗೆ ಸೇರಿಸಿದ್ದು ಆಶಾ ಕಾರ್ಯಕರ್ತೆಯರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

2011ರ ಜನಗಣತಿಯ ಪ್ರಕಾರ ಉತ್ತರ ಕಾಶಿ ಜಿಲ್ಲೆಯಲ್ಲಿ 1,61,489 ಮಹಿಳೆಯರು ಮತ್ತು 1,68,597 ಪುರುಷರಿದ್ದರು. ಕಳವಳ ಮೂಡಿಸಿದ ಈ ಲಿಂಗಾನುಪಾತದ ಪರಿಣಾಮವಾಗಿ ಅಲ್ಲಿ ಲಿಂಗಾನುಪಾತ ಸುಧಾರಿಸಲು ವ್ಯಾಪಕ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ರಾಜ್ಯ ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ, ಕಳೆದ ಮೂರು ತಿಂಗಳಲ್ಲಿ ಉತ್ತರ ಕಾಶಿ ಜಿಲ್ಲೆಯ ದುಂಡಾ ಬ್ಲಾಕಿನ 27 ಹಳ್ಳಿಗಳಲ್ಲಿ 51 ಮಕ್ಕಳ ಜನನವಾಗಿದ್ದು ಒಂದೂ ಹೆಣ್ಣು ಶಿಶುವಿನ ಜನನವಾಗಿಲ್ಲ. ಭತ್ವಾರಿ ಬ್ಲಾಕ್ (27 ಗ್ರಾಮಗಳಲ್ಲಿ 49 ಜನನ), ನೌಗೌನ್ ಬ್ಲಾಕ್ (28 ಗ್ರಾಮಗಳಲ್ಲಿ 47 ಜನನ), ಮೋರಿ ಬ್ಲಾಕ್ (20 ಗ್ರಾಮಗಳಲ್ಲಿ 29 ಜನನ), ಚಿನ್ಯಾಲಿಪೌರ್ ಬ್ಲಾಕ್( 16 ಗ್ರಾಮಗಳಲ್ಲಿ 23 ಜನನ) ಮತ್ತು ಪುರೋಲಾ ಬ್ಲಾಕಿನಲ್ಲಿ 14 ಗ್ರಾಮಗಳಲ್ಲಿ 17 ಜನನಗಳಾಗಿದ್ದು ಒಂದೇ ಒಂದು ಹೆಣ್ಣು ಶಿಶು ಜನಿಸದಿರುವುದು ಆರೋಗ್ಯ ಇಲಾಖೆಯನ್ನು ಕಳವಳಕ್ಕೆ ದೂಡಿದೆ.

ಸದ್ಯ ಈ 132 ಗ್ರಾಮಗಳಲ್ಲಿನ ಚಟುವಟುಕೆಗಳ ಮೇಲೆ ನಿಗಾ ಇಡಲಾಗಿದ್ದು ಮುಂದಿನ ಆರು ತಿಂಗಳ ಬೆಳವಣಿಗೆಗಳ ಮೇಲೆ ಜಿಲ್ಲಾಡಳಿತ ಗಮನ ಹರಿಸಿದೆ. ಜನನ ಲಿಂಗಾನುಪಾತದಲ್ಲಿ ಸುಧಾರಣೆ ಆಗದಿದ್ದರೆ ಆಶಾ ಕಾರ್ಯಕರ್ತರನ್ನು ಹೊಣೆ ಮಾಡಲಾಗುವುದು ಎಂದು ಎಚ್ಚರಿಸಲಾಗಿದೆ.

ಇದು ಕಾಕತಾಳೀಯ ಇರಬಹುದು ಎಂದು ನಿರ್ಲಕ್ಷಿಸುವಂತಿಲ್ಲ ಎಂದಿರುವ ಜಿಲ್ಲಾಧಿಕಾರಿ ಅತೀಶ್ ಚೌಹಾಣ್, ಹೆಣ್ಣು ಭ್ರೂಣ ಹತ್ಯೆಗಳು ಜರುಗುತ್ತಿರವ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

2015-17ರ ಅವಧಿಯಲ್ಲಿ ದೇಶದ ಜನನ ಲಿಂಗಾನುಪಾತ (ಪ್ರತಿ ಸಾವಿರ ಗಂಡು ಶಿಶುಗಳಿಗೆ ಹೆಣ್ಣು ಶಿಶುಗಳ ಸಂಖ್ಯೆ) ತೀವ್ರ ಕುಸಿತ ಕಂಡಿದ್ದು, ಈ ಅವಧಿಯಲ್ಲಿ ಅದು 897 ಇದೆ. ಇಷ್ಟು ಕಡಿಮೆ ಪ್ರಮಾಣದ ಜನನ ಲಿಂಗಾನುಪಾತ ಹಿಂದೆಂದೂ ಕಂಡುಬಂದಿರಲಿಲ್ಲ.

ಉತ್ತರಪ್ರದೇಶ, ರಾಜಸ್ಥಾನ್, ಬಿಹಾರ್, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ 2015-17ರಲ್ಲಿ ಜನನ ಲಿಂಗಾನುಪಾತದಲ್ಲಿ ತೀವ್ರ ಕುಸಿತ ಕಂಡು ಬಂದಿರುವುದನ್ನು ಇಲ್ಲಿ ಗಮನಿಸಬೇಕು.
(ಕೃಪೆ: ಟೈಮ್ಸ್ ಆಫ್ ಇಂಡಿಯಾ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...