Homeಮುಖಪುಟಉತ್ತರ ಕಾಶಿ: ಮೂರು ತಿಂಗಳಲ್ಲಿ ಒಂದೂ ಹೆಣ್ಣು ಮಗು ಜನಿಸಿಲ್ಲ!

ಉತ್ತರ ಕಾಶಿ: ಮೂರು ತಿಂಗಳಲ್ಲಿ ಒಂದೂ ಹೆಣ್ಣು ಮಗು ಜನಿಸಿಲ್ಲ!

ಉತ್ತರ ಕಾಶಿಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪಿಡುಗು ಪ್ರಚಲಿತದಲ್ಲಿ ಇರುವುದಕ್ಕೆ ಈ ಅಂಕಿಅಂಶ ಸಾಕ್ಷಿಯಾಗಿದೆ.

- Advertisement -
- Advertisement -

ಇದೊಂದು ಆಘಾತದ ಸುದ್ದಿ. ಜಿಲ್ಲೆಯೊಂದರ 132 ಗ್ರಾಮಗಳಲ್ಲಿ ಕಳೆದ ಮೂರು ತಿಂಗಳಲ್ಲಿ ಒಂದೇ ಒಂದು ಹೆಣ್ಣು ಕೂಸು ಜನಿಸಿಲ್ಲ!
ಉತ್ತರಪ್ರದೇಶದ ಉತ್ತರ ಕಾಶಿ ಜಿಲ್ಲೆಯಲ್ಲಿ ಇಂಥದ್ದೊಂದು ವಿದ್ಯಮಾನ ಬೆಳಕಿಗೆ ಬಂದಿದೆ. ಅಲ್ಲಿನ 132 ಹಳ್ಳಿಗಳಲ್ಲಿ ಕಳೆದ ಮೂರು ತಿಂಗಳಲ್ಲಿ 212 ಮಕ್ಕಳು ಜನಿಸಿದ್ದು ಎಲ್ಲವೂ ಗಂಡು ಶಿಶುಗಳೇ ಆಗಿದ್ದು, ಒಂದೇ ಒಂದು ಹೆಣ್ಣು ಶಿಶು ಇಲ್ಲದಿರುವುದು ಹೆಣ್ಣು ಭ್ರೂಣ ಹತ್ಯೆ ವ್ಯಾಪಕವಾಗಿ ಪ್ರಚಲಿತದಲ್ಲಿ ಇರುವುದಕ್ಕೆ ಸಾಕ್ಷಿಯಾಗಿದೆ.

ಈ ವರದಿ ಬಂದ ನಂತರ ಎಚ್ಚೆತ್ತುಕೊಂಡಿರುವ ಅಲ್ಲಿನ ಜಿಲ್ಲಾಡಳಿತವು ಆ 132 ಗ್ರಾಮಗಳನ್ನು ಕೆಂಪು ವಲಯ (ರೆಡ್ ಝೋನ್) ಪಟ್ಟಿಗೆ ಸೇರಿಸಿದ್ದು ಆಶಾ ಕಾರ್ಯಕರ್ತೆಯರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

2011ರ ಜನಗಣತಿಯ ಪ್ರಕಾರ ಉತ್ತರ ಕಾಶಿ ಜಿಲ್ಲೆಯಲ್ಲಿ 1,61,489 ಮಹಿಳೆಯರು ಮತ್ತು 1,68,597 ಪುರುಷರಿದ್ದರು. ಕಳವಳ ಮೂಡಿಸಿದ ಈ ಲಿಂಗಾನುಪಾತದ ಪರಿಣಾಮವಾಗಿ ಅಲ್ಲಿ ಲಿಂಗಾನುಪಾತ ಸುಧಾರಿಸಲು ವ್ಯಾಪಕ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ರಾಜ್ಯ ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ, ಕಳೆದ ಮೂರು ತಿಂಗಳಲ್ಲಿ ಉತ್ತರ ಕಾಶಿ ಜಿಲ್ಲೆಯ ದುಂಡಾ ಬ್ಲಾಕಿನ 27 ಹಳ್ಳಿಗಳಲ್ಲಿ 51 ಮಕ್ಕಳ ಜನನವಾಗಿದ್ದು ಒಂದೂ ಹೆಣ್ಣು ಶಿಶುವಿನ ಜನನವಾಗಿಲ್ಲ. ಭತ್ವಾರಿ ಬ್ಲಾಕ್ (27 ಗ್ರಾಮಗಳಲ್ಲಿ 49 ಜನನ), ನೌಗೌನ್ ಬ್ಲಾಕ್ (28 ಗ್ರಾಮಗಳಲ್ಲಿ 47 ಜನನ), ಮೋರಿ ಬ್ಲಾಕ್ (20 ಗ್ರಾಮಗಳಲ್ಲಿ 29 ಜನನ), ಚಿನ್ಯಾಲಿಪೌರ್ ಬ್ಲಾಕ್( 16 ಗ್ರಾಮಗಳಲ್ಲಿ 23 ಜನನ) ಮತ್ತು ಪುರೋಲಾ ಬ್ಲಾಕಿನಲ್ಲಿ 14 ಗ್ರಾಮಗಳಲ್ಲಿ 17 ಜನನಗಳಾಗಿದ್ದು ಒಂದೇ ಒಂದು ಹೆಣ್ಣು ಶಿಶು ಜನಿಸದಿರುವುದು ಆರೋಗ್ಯ ಇಲಾಖೆಯನ್ನು ಕಳವಳಕ್ಕೆ ದೂಡಿದೆ.

ಸದ್ಯ ಈ 132 ಗ್ರಾಮಗಳಲ್ಲಿನ ಚಟುವಟುಕೆಗಳ ಮೇಲೆ ನಿಗಾ ಇಡಲಾಗಿದ್ದು ಮುಂದಿನ ಆರು ತಿಂಗಳ ಬೆಳವಣಿಗೆಗಳ ಮೇಲೆ ಜಿಲ್ಲಾಡಳಿತ ಗಮನ ಹರಿಸಿದೆ. ಜನನ ಲಿಂಗಾನುಪಾತದಲ್ಲಿ ಸುಧಾರಣೆ ಆಗದಿದ್ದರೆ ಆಶಾ ಕಾರ್ಯಕರ್ತರನ್ನು ಹೊಣೆ ಮಾಡಲಾಗುವುದು ಎಂದು ಎಚ್ಚರಿಸಲಾಗಿದೆ.

ಇದು ಕಾಕತಾಳೀಯ ಇರಬಹುದು ಎಂದು ನಿರ್ಲಕ್ಷಿಸುವಂತಿಲ್ಲ ಎಂದಿರುವ ಜಿಲ್ಲಾಧಿಕಾರಿ ಅತೀಶ್ ಚೌಹಾಣ್, ಹೆಣ್ಣು ಭ್ರೂಣ ಹತ್ಯೆಗಳು ಜರುಗುತ್ತಿರವ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

2015-17ರ ಅವಧಿಯಲ್ಲಿ ದೇಶದ ಜನನ ಲಿಂಗಾನುಪಾತ (ಪ್ರತಿ ಸಾವಿರ ಗಂಡು ಶಿಶುಗಳಿಗೆ ಹೆಣ್ಣು ಶಿಶುಗಳ ಸಂಖ್ಯೆ) ತೀವ್ರ ಕುಸಿತ ಕಂಡಿದ್ದು, ಈ ಅವಧಿಯಲ್ಲಿ ಅದು 897 ಇದೆ. ಇಷ್ಟು ಕಡಿಮೆ ಪ್ರಮಾಣದ ಜನನ ಲಿಂಗಾನುಪಾತ ಹಿಂದೆಂದೂ ಕಂಡುಬಂದಿರಲಿಲ್ಲ.

ಉತ್ತರಪ್ರದೇಶ, ರಾಜಸ್ಥಾನ್, ಬಿಹಾರ್, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ 2015-17ರಲ್ಲಿ ಜನನ ಲಿಂಗಾನುಪಾತದಲ್ಲಿ ತೀವ್ರ ಕುಸಿತ ಕಂಡು ಬಂದಿರುವುದನ್ನು ಇಲ್ಲಿ ಗಮನಿಸಬೇಕು.
(ಕೃಪೆ: ಟೈಮ್ಸ್ ಆಫ್ ಇಂಡಿಯಾ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...